ದಿನದ ಅಪರಾಧಗಳ ಪಕ್ಷಿನೋಟ ೨೧ ನೇ ನವಂಬರ್ ೨೦೦೯

November 21, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೧-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೧೧-೨೦೦೯ ರಂದು ರಾತ್ರಿ ಕೋಲಾರ ತಾಲೂಕು ಕೋಮುಲ್ ಡೈರಿಯ ದಾಸ್ತಾನಿನ ಕೊಠಡಿಯ ಬಾಗಿಲನ್ನು ಮುರಿದು ಓಳಗೆ ಪ್ರವೇಶ ಮಾಡಿ ರೂ. ೫೨, ೪೩೯/ ಬೆಲೆ ಬಾಳುವ ಸುಹಾಸಿತ ಹಾಲು ಬಾಟಲ್‌ಗಳು ಮತ್ತು ಅದರ ಉತ್ಪನ್ನಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಕೋಮುಲ್ ಡೈರಿ ವ್ಯವಸ್ಥಾಪಕರಾದ ಸುರೇಶ್ ಕುಲಕರ್ಣಿ ರವರು ದೂರು ನೀಡಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬೆಂಗಳೂರು ನಗರದ ವಾಸಿ ಬಿ.ಎಂ.ಸುಬ್ರಮಣಿ ಎಂಬುವರ ಕೆಎ-೫೦-ಜೆ-೩೯೫೩ ಸಂಖ್ಯೆಯ ಯಮಹಾ ಎಸ್.ಜಡ್.ಎಸ್ ದ್ವಿಚಕ್ರವಾಹನ ಕಳುವಾಗಿರುತ್ತದೆ. ದಿನಾಂಕ ೧೭-೧೧-೨೦೦೯ ರಂದು ರಾತ್ರಿ ಬಿ.ಎಂ.ಸುಬ್ರಮಣಿ ಎಂಬುವರು ತಮ್ಮ ದ್ವಿಚಕ್ರವಾಹನವನ್ನು ಕೋಲಾರ ಕಾರಂಜಿಕಟ್ಟೆಯ ಸ್ಪಂದನಾ ಡಿಜಿಟಲ್ ಫ್ಲೆಕ್ಸ್ ಪ್ರಿಂಟ್ ಬಳಲಿ ನಿಲ್ಲಿಸಿದ್ದಾಗ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಆಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೧೧-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೇತಮಂಗಲ ಗ್ರಾಮದ ವಾಸಿಗಳಾದ ಜೈಬೂನ್ನೀಸಾ, ಗುಲ್‌ಷಾನ್ ಮತ್ತು ಷೇಕ್ ಮುರಾದ್ ಎಂಬುವರು ಬಸ್ಸಿಗಾಗಿ ಕಾಯುತ್ತಾ ಮುಳಬಾಗಿಲು ತಾಲೂಕು ಸೀಗೇಹಳ್ಳಿ ಗೇಟ್ ಬಳಿ ನಿಂತಿದ್ದರು. ಆ ಸಮಯದಲ್ಲಿ ಬಂದ ಯಾವುದೋ ಅಪರಿಚಿತ ವಾಹನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಜೈಬೂನ್ನೀಸಾ ರವರಿಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ತಲೆಗೆ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾನೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೯-೧೧-೨೦೦೯ ರಂದು ೨೦೩೦ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ ಅಂಬೇಡ್ಕರ್‌ನಗರದ ವಾಸಿ ಕಾಶಿನಾಥ ಎಂಬುವರು ತಮ್ಮ ಮನೆಯಲ್ಲಿ ಇದ್ದರು. ಆ ಸಮಯದಲ್ಲಿ ಸುಬ್ರಮಣಿ ಮತ್ತು ಇತರೆ ೪ ಜನರು (ಎಲ್ಲರೂ ಅಂಬೇಡ್ಕರ್‌ನಗರದ ವಾಸಿಗಳು) ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಾಶಿನಾಥ ರವರ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಹೊಡೆದು ಗಾಯ ಪಡಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ದೌರ್ಜನ್ಯತಡೆ) ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಈಕಂಬಳ್ಳಿ ಕೆರೆಯಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೮-೧೧-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಬಸವನತ್ತ ಗ್ರಾಮದ ವಾಸಿ ಎ.ವೆಂಕಟೇಶಪ್ಪ ಎಂಬುವರ ಮೇಲೆ ಜಗಳ ತೆಗೆದ ಈಕಂಬಳ್ಳಿ ಗ್ರಾಮದ ವಾಸಿ ಸೊಣ್ಣೇಗೌಡ ಮತ್ತು ದೊಡ್ಡಹಸಾಳ ಗ್ರಾಮದ ವಾಸಿಗಳಾದ ಗೋಪಾಲ್ ಮತ್ತು ಉಮೇಶ್ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿ ದೊಣ್ಣೆ ಮತ್ತು ಕೈಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ. ಕೆರೆಯಲ್ಲಿ ಮಣ್ಣು ತೆಗೆಯುವ ವಿಚಾರದ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೦ ನೇ ನವಂಬರ್ ೨೦೦೯

November 19, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೦-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ  ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು  ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೦೮-೧೧-೨೦೦೯ ರಂದು ಶ್ರೀನಿವಾಸಪುರ ತಾಲ್ಲೂಕು ತಾಡಗಲ್ ವಾಸಿಯಾದ ನರಸಿಂಹಪ್ಪ ಎಂಬುವರು ತಮ್ಮ ಗ್ರಾಮದಿಂದ ಕೆ.ಎಸ್.ಅರ್‍.ಟಿ.ಸಿ. ಬಸ್ ಸಂ. ಕೆಎ-೦೭-ಎಫ್-೮೮೨ ರಲ್ಲಿ ಸೀಗಲಪಲ್ಲಿ ಗ್ರಾಮದ ಬಳಿ ಹೋಗುತ್ತಿದ್ದರು.  ಅ ಸಮಯದಲ್ಲಿ ಸದರಿ ಬಸ್ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕೆತೆಯಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆ ಯಲ್ಲಿ ನಿಂತಿದ್ದ ಲಾರಿ ಸಂ. ಕೆಎ-೦೨-ಎಎ-೫೪೬೬ ಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮವಾಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದು ೪ ಜನ ಪ್ರಯಾಣಿಕರಿಗೆ ಗಾಯಗಳಾಗಿರುತ್ತವೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ:  ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ : ೧೭-೧೧-೨೦೦೯ ರಂದು ೨೦೪೫ ಗಂಟೆ ಸಮಯದಲ್ಲಿ ಕೋಲಾರ ತಾಲ್ಲೂಕು ರಾಮಸಂದ್ರ ಗ್ರಾಮದ ವಾಸಿಯಾದ ಭಾಗ್ಯಮ್ಮ ಎಂಬುವರು ತಮ್ಮ ಮನೆಯ ಬಳಿ ಇದ್ದರು.  ಅ ಸಮಯದಲ್ಲಿ ಅದೇ ಗ್ರಾಮದ ವಾಸಿಯಾದ ರಾಘವೇಂದ್ರ ಎಂಬುವರು ಜಮೀನಿನ ವಿಚಾರದಲ್ಲಿ ಜಗಳ ಮಾಡಿ ಭಾಗ್ಯಮ್ಮ ರವರಿಗೆ ಕೈಗಳಿಂದ ಹೊಡೆದೆ ಗಾಯಪಡಿಸಿರುತ್ತಾನೆ.  ಈ ಬಗ್ಗೆ ಭಾಗ್ಯಮ್ಮ ರವರ ಅಕ್ಕ ಸುಕನ್ಯ ರವರು ದೂರು ದಾಖಲು ಮಾಡಿರುತ್ತಾರೆ.

ಇತರೆ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ನಿವೇಶನಕ್ಕೆ ಅತಿಕ್ರಮ ಪ್ರವೇಶದ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೧೮-೧೧-೨೦೦೯ ರಂದು ೧೪೩೦ ಗಂಟೆ ಸಮಯದಲ್ಲಿ ಚಲ್ಡಿಗಾನಹಳ್ಳಿ ಗ್ರಾಮದ ವಾಸಿಗಳಾದ ಬೈರಶೆಟ್ಟಿ ಮತ್ತು ಇತರೆ ೩ ಜನರು ಅದೇ ಗ್ರಾಮದ ವಾಸಿಯಾದ ವೆಂಕಟಾಚಲಯ್ಯ ರವರ ನಿವೇಶನಕ್ಕೆ ಅತಿಕ್ರಮ ಪ್ರವೇಶ ಮಾಡಿ ಅಲ್ಲಿದ್ದ ಕಲ್ಲು ಚಪ್ಪಡಿಗಳನ್ನು ಹೊಡೆದು ಹಾಕಿ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೧೯-೧೧-೨೦೦೯ ರಂದು ಕೋಲಾರ ತಾಲ್ಲೂಕು ಜಂಗಮಬಸಾಪುರ ಗ್ರಾಮದ ಬಳಿ ತಾಲ್ಲೂಕು ತಹಸೀಲ್ದಾರ್‍  ಮತ್ತು ಇತರೆ ಅಧಿಕಾರಿಗಳು ರಸ್ತೆ ಮಾಡುತ್ತಿದ್ದಾಗ ಅದೇ ಗ್ರಾ,ಮದ ವಾಸಿಯಾದ ಪ್ರಸಾದ್ ಎಂಬುವರು ಇಲ್ಲಿ ರಸ್ತೆ ಮಾಡಬಾರದೆಂದೆ ಅಕ್ಷೇಪಿಸಿ ತಮ್ಮ ಮನೆಯ ಒಳಗೆ ಹೋಗಿ ಸೀಮೆ ಎಣ್ಣೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯ ಮಾಡಿಕೊಳ್ಳಲು ಪ್ರಯತ್ನಿಸಿರುತ್ತಾನೆ. ಈ ಬಗ್ಗೆ ಎಸ್.ಎನ್.ಆರ್‍.ಆಸ್ಪತ್ರೆಯ ವ್ಯಧ್ಯಾಧಿಕಾರಿಗಳಾದ  ಡಾ.ರಶ್ಮಿ ಎಂಬುವರು ದೂರು ದಾಖಲು ಮಾಡಿರುತ್ತಾರೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಾಣ ಹಿಂಸೆ ನಿಷೇದ ಕಾಯಿದೆಗೆ ಸಂಬಂದಿಸಿದಂತೆ ಅಪರಾದ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೦-೧೧-೨೦೦೯ ರಂದು ೧೧೩೦ ಗಂಟೆ ಸಮಯದಲ್ಲಿ ಚಿಂತಾಮಣಿ ನಗರದ ವಾಸಿಗಳಾದ ಸೈಯದ್ ಬಾಬು ಮತ್ತು ಯಾರಾದ್ ಎಂಬುವರು ಟಾಟ ಏಸ್  ವಾಹನ ಸಂ. ಕೆಎ-೪೦-೩೪೪೨ ರಲ್ಲಿ ನರಸಾಪುರ ಬಳಿ ೨೫ ಸೀಮೆ ಕರುಗಳು ಮತ್ತು ಹಸುವನ್ನು ಸಾಗಿಸುತ್ತಿದ್ದರು.  ಅ ಸಮಯದಲ್ಲಿ ಕೋಲಾರ ನಗರದ ಕಾರಂಜಿಕಟ್ಟ ವಾಸಿಯಾದ ಶಿವಕುಮಾರ್‍ ರವರು ವಾಹನವನ್ನು ನಿಲ್ಲಿಸಿ ಅದರಲ್ಲಿದ್ದ ಕರುಗಳನ್ನು ನೋಡಿ ಇವುಗಳನ್ನು ಕಸಾಯಿಖಾನೆ ಸಾಗಿಸುತ್ತಿರುವುದಾಗಿ ಧನಕರುಗಳು. ವಾಹನ ಹಾಗೂ ಆರೋಪಿಗಳೊಂದಿಗೆ ಠಾಣೆಗೆ ಹಾಜರಾಗಿ ದೂರು ನೀಡಿರುತ್ತಾರೆ.  ಬಂಧಿಸಲ್ಪಟ್ಟ ಇಬ್ಬರು ಅಸಾಮಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.  

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :  5

-ಸ್ಥಳ ದಂಡ ಮೊತ್ತ : ರೂ.500/-   

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.  


ದಿನದ ಅಪರಾಧಗಳ ಪಕ್ಷಿನೋಟ ೧೯ ನೇ ನವಂಬರ್ ೨೦೦೯

November 18, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೧೯-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ೦೧

-ಮಾರಣಾಂತಿಕ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೮-೧೧-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಕಾಡುಮುತ್ಸಂದ್ರ ಗ್ರಾಮದ ವಾಸಿ  ನಾಗಪ್ಪ(೪೮) ಎಂಬುವರು ಚಿಕ್ಕತಿರುಪತಿ ಯಿಂದ ತನ್ನ ಗ್ರಾಮಕ್ಕೆ ಬರುವ ಸಲುವಾಗಿ ದ್ವಿಚಕ್ರ ವಾಹನ ಸಂಖ್ಯೆ        ಕೆಎ-೦೮-ಜೆ-೩೦೬೪ ರಲ್ಲಿ    ಅಂಚೆಮುಸ್ಕೂರು ಗ್ರಾಮದ ಆನಂದರೆಡ್ಡಿ ಎಂಬುವರ ಜಮೀನಿನ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಬಂದ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೮-ಕೆ-೯೩೪೯ರ  ವಾಹನದ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ  ಪರಿಣಾಮ ನಾಗಪ್ಪ ರವರ ತಲೆಗೆ ಮತ್ತು ಮುಖಕ್ಕೆ ತೀವ್ರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೨

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಟಮಕ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ  ೧೭-೧೧-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಟಮಕ ಗ್ರಾಮದ ವಾಸಿ ನಾರಾಯಣಪ್ಪ ಎಂಬುವರ  ಮೇಲೆ ಅದೇ ಗ್ರಾಮದ ವಾಸಿಗಳಾದ ಗೋವಿಂದಪ್ಪ ಮತ್ತಿತರೇ ೫ ಜನರು ಮನೆ ಮುಂದೆ ಮಣ್ಣು ಎತ್ತುವ ವಿಚಾರದಲ್ಲಿ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದಯ ಗಾಯಪಡಿಸಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಹೊಸಮಟ್ನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ  ೧೮-೧೧-೨೦೦೯ ರಂದು ೧೫೦೦ ಗಂಟೆ ಸಮಯದಲ್ಲಿ ಹೊಸಮಟ್ನಹಳ್ಳಿ ಗ್ರಾಮದ ವಾಸಿ ಲಕ್ಷ್ಮಮ್ಮ ಮತ್ತು ನಂಜುಂಡಗೌಡ ಎಂಬುವರ ನಡುವೆ ಜಮೀನು ತಕರಾರು ಇದ್ದು, ನಂಜುಂಡಗೌಡ ಮತ್ತು ಇತರರು ಲಕ್ಷ್ಮಮ್ಮ ರವರ ಜಮೀನಿನಲ್ಲಿ ಜೆ.ಸಿ.ಬಿ.ಯಿಂದ ಕೆಲಸ ಮಾಡಿಸುತ್ತಿದ್ದನ್ನು ಕೇಳಿದ ಲಕ್ಷ್ಮಮ್ಮ ರವರಿಗೆ ನಂಜುಂಡಗೌಡ ಮತ್ತು ಇತರರು ಅಕ್ರಮ ಗುಂಪು ಕಟ್ಟಿಕೊಂಡು ಬಂದು  ಅವಾಚ್ಚಶಬ್ದಗಳಿಂದ ಬೈದು ರಾಡಿನಿಂದ ಲಕ್ಷ್ಮಮ್ಮ ರವರ ಮಗ ಮತ್ತು ಸೊಸೆಗೆ ಹೊಡೆದು  ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಅಪರಾದ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೫-೧೦-೨೦೦೯ ರಂದು ಕೋಲಾರ ತಾಲೂಕು ಯಲವಾರ ಗ್ರಾಮದ ವಾಸಿ ಜಿ.ವೆಂಕಟೇಶ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಸೊಣ್ಣೇಗೌಡ ಮತ್ತು ಇತರೆ ಒಬ್ಬರು ಜಗಳ ತೆಗೆದು ಕೈಗಳಿಂದ ಹೊಡೆದು ಗಾಯ ಪಡಿಸಿರುತ್ತಾರೆ.

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ದಿನ್ನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೭-೧೧-೨೦೦೯ ರಂದು ೦೭೦೦ ಗಂಟೆ ಸಮಯದಲ್ಲಿ ದಿನ್ನಹಳ್ಳಿ ಗ್ರಾಮದ ವಾಸಿ ತಿಮ್ಮರಾಯಪ್ಪ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿ ರಾಮಪ್ಪ ಎಂಬುವನು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾನೆ.

ಇತರೆ: ೦೧

ವೈಧ್ಯಾಧಿಕಾರಿಗಳ ನಿರ್ಲಕ್ಷತೆಯಿಂದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಮಾಲೂರು ಪಟ್ಟಣದ ಕಾರಂಜಿ ಬಡಾವಣೆಯ ಪ್ರಕಾಶ್ ಕ್ಲಿನಿಕ್‌ನಲ್ಲಿ  ಸಂಭವಿಸಿರುತ್ತದೆ. ದಿನಾಂಕ ೧೮-೧೧-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಹೊಸೂರು ತಾಲೂಕು ಆಲೂರು ಗ್ರಾಮದ  ವಾಸಿಯಾದ ರಾಮಕೃಷ್ಣಪ್ಪ ಎಂಬುವರ ೧೫ ವರ್ಷದ ಮಗನಾದ ಮೋಹನ್ ರವರಿಗೆ ಬೇದಿ ಮತ್ತು ಜ್ವರ ಬರುತ್ತಿದ್ದ ಕಾರಣ ಚಿಕಿತ್ಸೆಗೆಂದು ಪ್ರಕಾಶ್ ಕ್ಲಿನಿಕ್‌ಗೆ ಚುಚ್ಚು ಮದ್ದು ನೀಡಿದ್ದು, ಚಿಕಿತ್ಸೆ ನೀಡಿದ ಕೂಡಲೇ ಮೋಹನ್ ಮೃತಪಟ್ಟಿರುತಾನೆ. ಈ ಘಟನೆಗೆ ವೈಧ್ಯರಾದ ಜಿ.ಪ್ರಕಾಶ್ ರವರ  ನಿರ್ಲಕ್ಷತನ ಮತ್ತು ಬೇಜವಾಬ್ದಾರಿಯೇ ಕಾರಣವಾಗಿರುವುದಾಗಿ ರಾಮಕೃಷ್ಣಪ್ಪ ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ. ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲಿಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕಾಲುವೆಯ ವಿಷಮಿಶ್ರಿತ ನೀರನ್ನು ಕುಡಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೋಲಾರ ತಾಲೂಕು ತಿಪ್ಪಸಂದ್ರ ಗ್ರಾಮದಲ್ಲಿ ಸಂಭವಿಸಿರುತ್ತದೆ. ಕೋಲಾರ ತಾಲೂಕು ಬ್ಯಾಲಹಳ್ಳಿ ಗ್ರಾಮದ ವಾಸಿ ತ್ಯಾಗರಾಜ ಎಂಬುವರು ಮೃತಪಟ್ಟವರು. ದಿನಾಂಕ ೧೬-೧೧-೨೦೦೯ ರಂದು ೧೫೦೦ ಗಂಟೆ ಸಮಯದಲ್ಲಿ ತಮ್ಮ ಜಮೀನಿನಲ್ಲಿದ್ದ ಟೊಮ್ಯಾಟೋ ಗಿಡಗಳಿಗೆ ಔಷಧಿ ಸಿಂಪಡಿಸುತ್ತಿದ್ದರು. ಆ ಸಮಯದಲ್ಲಿ ನೀರ ದಾಹವಾಗಿ ಇವರು ಆತುರದಲ್ಲಿ ವಿಷಪೂರಿನ ಕಾಲುವೆ ನೀರನ್ನು ಕುಡಿದಿರುತ್ತಾರೆ. ಇದರಿಂದ ಅಸ್ವಸ್ಥರಾದ ಇವರನ್ನು ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ ೧೮-೧೧-೨೦೦೯ ರಂದು ಮೃತಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೮ ನೇ ನವಂಬರ್ ೨೦೦೯

November 18, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೧೮-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ೦೨

-ಮಾರಣಾಂತಿಕ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೧೦-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ದೊಡ್ಡತಮ್ಮನಹಳ್ಳಿ ಗ್ರಾಮದ ವಾಸಿ ಡಿ.ಆರ್‍.ಬಾಬು ಎಂಬುವರು ತನ್ನ ಗ್ರಾಮದಿಂದ ಕೊತ್ತೂರು ಗ್ರಾಮಕ್ಕೆ ಹೋಗುವ ಸಲುವಾಗಿ ಕೆಎ-೦೭-ಕ್ಯೂ-೯೬೩೬ ಸಂಖ್ಯೆಯ ಹೀರೋಹೋಂಡಾ ದ್ವಿಚಕ್ರವಾಹನದಲ್ಲಿ ಬೈಪಲ್ಲಿ ಮಾರ್ಗದ ರಸ್ತೆಯಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಯಾವುದೋ ಒಂದು ಅಪರಿಚಿತ ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಿಂದ ಹೊರಟು ಹೋಗಿರುತ್ತಾನೆ. ಇದರ ಪರಿಣಾಮ ಡಿ.ಆರ್‍.ಬಾಬು ರವರಿಗೆ ತೀವ್ರವಾದ ಗಾಯಗಳಾಗಿದ್ದು ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಈ ದಿನ ಮೃತಪಟ್ಟಿರುತ್ತಾರೆ.

-ಸಾಧಾರಣ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೬-೧೧-೨೦೦೯ ರಂದು ೧೬೩೦ ಗಂಟೆ ಸಮಯದಲ್ಲಿ ಮಾಲೂರು ಟೌನ್ ಆದರ್ಶ ನಗರದ ವಾಸಿ ಮೋಹನ್ ರಾಜು ಎಂಬುವರು ತನ್ನ ಮಕ್ಕಳಾದ ಕೇಶವ ಮತ್ತು ತೇಜಸ್ವಿನಿ ಎಂಬುವರೊಂದಿಗೆ ಅರ್ಮಡಾ ಸಂಖ್ಯೆ ಕೆಎ-೦೭-ಎನ್-೪೫೪೫ ರಲ್ಲಿ ಅಗ್ರಹಾರ ಗ್ರಾಮದ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಕೆಎ-೦೭-ಎಫ್-೯೩೭ ಕೆ.ಎಸ್.ಆರ್‍.ಟಿ.ಸಿ ಬಸ್ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಅರ್ಮಡಾ ವಾಹನ ಜಖಂಗೊಂಡು ಅದರಲ್ಲಿದ್ದವರಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿ ಮತ್ತು ಕೊಲೆಗೆ ಪ್ರಯತ್ನ ಮಾಡಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಮಂಗಸಂದ್ರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೬-೧೧-೨೦೦೯ ರಂದು ೦೭೦೦ ಗಂಟೆ ಸಮಯದಲ್ಲಿ ಮಂಗಸಂದ್ರ ಗ್ರಾಮದ ವಾಸಿ ಕೆ.ಎನ್.ಸವಿತ ಎಂಬುವರ ಮೇಲೆ ಅಕ್ರಮಗುಂಪು ಕಟ್ಟಿಕೊಂಡು ಜಗಳ ಮಾಡಿದ ಅದೇ ಗ್ರಾಮದ ವಾಸಿ ತಿಮ್ಮಪ್ಪ ಮತ್ತಿತರೇ ಏಳು ಜನರು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಮತ್ತು ಕಾಲಿನಿಂದ ಒದ್ದು ಗಾಯಪಡಿಸಿ ಮಚ್ಚಿನಿಂದ ಕೊಲೆ ಮಾಡಲು ಪ್ರಯತ್ನಿಸಿರುತ್ತಾರೆ. ಜಮೀನಿನ ವಿವಾದ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ದೊಂಬಿ: ೦೧

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಟಮಕ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ  ೧೭-೧೧-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಟಮಕ ಗ್ರಾಮದ ವಾಸಿ ಗೋವಿಂದಪ್ಪ ಎಂಬುವರ  ಮೇಲೆ ಅದೇ ಗ್ರಾಮದ ವಾಸಿಗಳಾದ ಮಂಜುನಾಥ ಮತ್ತಿತರೇ ೫ ಜನರು ಮನೆ ಮುಂದೆ ಮಣ್ಣು ಎತ್ತುವ ವಿಚಾರದಲ್ಲಿ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದಯ ಗಾಯಪಡಿಸಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ೦೧

ವಿದ್ಯುತ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಬಾಲಕನೊಬ್ಬ ಗಾಯಗೊಂಡ ಘಟನೆ ಕೋಲಾರ ಬ್ರಾಹ್ಮಣರ  ಬೀದಿಯ ಶಂಕರಪ್ಪ ಕಾಂಪ್ಲೆಕ್ಸ್‌ನಲ್ಲಿ ಸಂಭವಿಸಿರುತ್ತದೆ. ದಿನಾಂಕ ೧೭-೧೧-೨೦೦೯ ರಂದು ೦೬೦೦ ಗಂಟೆ ಸಮಯದಲ್ಲಿ ಕೋಲಾರ ಬ್ರಾಹ್ಮಣರ ಬೀದಿಯಲ್ಲಿ ವಾಸವಾಗಿರುವ ಶಂಕರಪ್ಪ ಎಂಬುವರ ೧೦ ವರ್ಷದ ಮಗನಾದ ಮೋಹನ್ ಬಾಬು ತನ್ನ ಮನೆಯ ಮುಂದೆ ಹೋದಾಗ ಮುಂಭಾಗ ಹಾದುಹೋಗಿರುವ ೪೪೦ ಕೆ.ವಿ ವಿದ್ಯುತ್ ತಂತಿ ತಾಕಿರುತ್ತದೆ. ಇದರಿಂದ ಶಾಕ್ ಹೊಡೆದ ಪರಿಣಾಮ ಬಾಲಕನ ಬಲಗೈ ಹಾಗೂ ಎರಡೂ ತೊಡೆಗಳು, ಮರ್ಮಾಂಗ ಸಂಪೂರ್ಣ ಸುಟ್ಟು ಹೋಗಿರುತ್ತದೆ. ಸಡಿಲವಾಗಿದ್ದ ಈ ವಿದ್ಯುತ್ ವೈರ್‍ಗಳನ್ನು ಸಕಾಲಕ್ಕೆ ಬಿಗಿಗೊಳಸದೇ ಇದ್ದು ಇದಕ್ಕೆ ಬೆಸ್ಕಾಂ ಇಲಾಖೆಯವರ ನಿರ್ಲಕ್ಷವೇ ಕಾರಣವಾಗಿರುವುದಾಗಿ ಶಂಕರಪ್ಪ ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ. ಈ ಬಗ್ಗೆ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ದೌರ್ಜನ್ಯತಡೆ) ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಮಂಗಸಂದ್ರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೬-೧೧-೨೦೦೯ ರಂದು ೦೭೦೦ ಗಂಟೆ ಸಮಯದಲ್ಲಿ ಮಂಗಸಂದ್ರ ಗ್ರಾಮದ ವಾಸಿ ಶ್ರೀಮತಿ ರಾಧ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಕೆಂಚಪ್ಪ, ಮೂರ್ತಿ, ಶ್ಯಾಮಲಾ, ಅನಿತಾ ಮತ್ತು ಸುಬ್ಬರಾಯಪ್ಪ ಎಂಬುವರು ಅಕ್ರಮಗುಂಪು ಕಟ್ಟಿಕೊಂಡು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿನಿಂದನೆ ಮಾಡಿ ಕೈಗಳಿಂದ ಹೊಡೆದು ಸೀರೆ ಹಿಡಿದು ಎಳೆದಾಡಿ ಗಾಯಪಡಿಸಿರುತ್ತಾರೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೭ ನೇ ನವಂಬರ್ ೨೦೦೯

November 16, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೧೭-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೩-೧೧-೨೦೦೯ ರಂದು ೧೩೪೫ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಬ್ಯಾಲಹಳ್ಳಿ ಗ್ರಾಮದ ವಾಸಿ ತೋಟಪ್ಪ ಎಂಬುವರ ಮಗನಾದ ಜಿ.ಟಿ.ಭಾಸ್ಕರ್‍ ಎಂಬುವರು ಮಾಲೂರಿನಿಂದ ತಮ್ಮ ಗ್ರಾಮಕ್ಕೆ ಹೋಗುವ ಸಲುವಾಗಿ ಮಾಲೂರು ನಗರ ಹೊಸೂರು ರಸ್ತೆಯ ರೈಲ್ವೆ ಸೇತುವೆ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಸ್ಕಾರ್‍ಪಿಯೋ ಸಂಖ್ಯೆ ಕೆಎ-೦೩-ಎಂಜಿ-೯೨೬೯ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಭಾಸ್ಕರ್‍ ರವರ ಬಲಗಾಲಿನ ಮೂಳೆ ಮುರಿದಿದ್ದು ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಕಲ್ಲಂಡೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೩-೧೧-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಕಲ್ಲಂಡೂರು ಗ್ರಾಮದ ವಾಸಿ ಮುನಿಲಕ್ಷ್ಮಮ್ಮ ಎಂಬುವರಿಗೆ ಸೇರಿದ ಜಮೀನಿನೊಳಗೆ ಅಕ್ರಮಪ್ರವೇಶ ಮಾಡಿದ ಅದೇ ಗ್ರಾಮದ ವಾಸಿಗಳಾದ ಮಂಜುನಾತ ಮತ್ತಿತರೇ ೫ ಜನರು ಇವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದು ಸೀರಿ ಎಳದೆ ಮಾನಭಂಗ ಮಾಡಲು ಪ್ರಯತ್ನಿಸಿರುವುದಾಗು ಮುನಿಲಕ್ಷ್ಮಮ್ಮ ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೬ ನೇ ನವಂಬರ್ ೨೦೦೯

November 16, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೧೬-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಗ್ಯಾಸ್ ಸಿಲಿಂಡರ್‍ ಕಳುವಾಗಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ತ್ವರಲಕ್ಕಿ ಗ್ರಾಮದ ಸರ್ಕಾರಿ ಪ್ರಾಥಮಿಕಶಾಲೆಯಲ್ಲಿ ಕಳವು ಕೃತ್ಯ ಸಂಬವಿಸಿರುತ್ತದೆ. ದಿನಾಂಕ ೧೪-೧೧-೨೦೦೯ ರಂದು ರಾತ್ರಿ ಶಾಲೆಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿದ ಯಾರೋ ಕಳ್ಳರು ಶಾಲೆಯಲ್ಲಿದ್ದ ಮೂರು ಸಿಲಿಂಡರುಗಳನ್ನು ಕಳವು ಮಾಡಿಕೊಂಡು ಹೊಗಿರುತ್ತಾರೆ. ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರಾದ ಮುನೇಗೌಡ ರವರು ದೂರುನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೫-೧೧-೨೦೦೯ ರಂದು ೧೨೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಗಾಂಧಿಪುರ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರ ೩ ವರ್ಷದ ಮಗಳಾದ ಶ್ರೀಲೇಖ ಎಂಬ ಹುಡುಗಿ ಅಂಗಡಿಯಿಂದ ಮನೆಗೆ ಹೋಗುವ ಸಲುವಾಗಿ ರಸ್ತೆ ದಾಟುತ್ತಿದ್ದಳು. ಆ ಸಮಯದಲ್ಲಿ ಕೆ.ಜಿ.ಎಫ್ ಕಡೆಯಿಂದ ಬಂದ ಕೆಎ-೦೭-ಟಿ-೨೨೭೪ ಸಂಖ್ಯೆಯ ಟ್ರಾಕ್ಟರ್‍ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಶ್ರೀಲೇಖಳ ತಲೆ ಮತ್ತು ಕೈ ಕಾಲುಗಳಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೫ ನೇ ನವಂಬರ್ ೨೦೦೯

November 14, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೧೫-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ೧೩-೧೧-೨೦೦೯ ರಂದು ೦೭೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಶ್ರೀರಾಮಪುರ ಗ್ರಾಮದ ವಾಸಿ ವಿಜಯಮ್ಮ ಎಂಬುವರು ತಮ್ಮ ಮನೆಯ ಮುಂದೆ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ರಾಮಕೃಷ್ಣಪ್ಪ ಮತ್ತು ಇತರೆ ೩ ಜನರು ಜಮೀನಿ ವಿಚಾರದಲ್ಲಿ ಜಗಳ ತೆಗೆದು ಅವಾಚ್ಚಶಬ್ದಗಳಿಂದ ಬೈದು, ಪ್ರಾಣ ಬೆದರಿಕೆ ಹಾಕಿ ಸೀರೆಯನ್ನು ಹಿಡಿದು ಎಳೆದಾಡಿ ಮಾನಭಂಗ ಮಾಡಲು ಪ್ರಯತ್ನಪಟ್ಟಿರುತ್ತಾರೆ.

ರಸ್ತೆ ಅಪಘಾತಗಳು ೦೨

-ಮಾರಣಾಂತಿಕ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೪-೧೧-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ಕೋಲಾರ – ಬಂಗಾರಪೇಟೆ ರಸ್ತೆಯ ಅರಣ್ಯ ಇಲಾಖೆಯ ವಸತಿ ಗೃಹಗಳ ಮುಂದೆ ಸುಮಾರು ೩೫ ರಿಂದ ೪೦ ವರ್ಷ ವಯಸ್ಸಿನ ಅಪರಚಿತ ಗಂಡಸಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾನೆ. ಶವವನ್ನು ಕೋಲಾರದ ಎಸ್‌.ಎನ್.ಆರ್‍. ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

-ಸಾಧಾರಣ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೪-೧೧-೨೦೦೯ ರಂದು ೦೪೦೦ ಗಂಟೆ ಸಮಯದಲ್ಲಿ ತಮಿಳುನಾಡಿನ ವಾಸಿ ಸುಂದರೇಶ್ ಎಂಬುವರು ತನ್ನ ಟೆಂಪೋವನ್ನು ಚಾಲನೆ ಮಾಡಿಕೊಂಡು ರಾಷ್ಟ್ರೀಯ ಹೆದ್ದಾರಿ-೪ರ ನಂಗಲಿ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಬಂದ ಲಾರಿ ಸಂಖ್ಯೆ ಎಪಿ-೦೭-ಟಿಡಬ್ಲೂ-೭೮೮ ರ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಟೆಂಪೋಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಟೆಂಪೋನಲ್ಲಿದ್ದ ೩ ಜನರಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೩-೧೧-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ತಿಮ್ಮಾಪುರ ಗ್ರಾಮದ ವಾಸಿ  ಶ್ರೀನಿವಾಸ ಎಂಬುವರ ಮೇಲೆ ಜಮೀನು ವಿಚಾರದಲ್ಲಿ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಕೃಷ್ಣಪ್ಪ ಮತ್ತು ಇತರೆ ೫ ಜನರು ಅಕ್ರಮ ಗುಂಪು ಕಟ್ಟಿಕೊಂಡು ಕೈಗಳಲ್ಲಿ ದೊಣ್ಣೆಗಳನ್ನು ಹಿಡಿದು ಕೊಂಡು ಬಂದು ಹೊಡೆದು ಗಾಯ ಪಡಿಸಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೪ ನೇ ನವಂಬರ್ ೨೦೦೯

November 13, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೧೪-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೦೫-೧೧-೨೦೦೯ ರಂದು ೦೭೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಎನ್.ಚೌಡದೇನಹಳ್ಳಿ ಗ್ರಾಮದ ವಾಸಿ ರಮಣರೆಡ್ಡಿ ಎಂಬುವರ ಮೇಲೆ ಜಮೀನು ವಿಚಾರದಲ್ಲಿ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ವೆಂಕಟರಾಮಪ್ಪ ಮತ್ತು ಇತರೆ ೭ ಜನರು ಅಕ್ರಮ ಗುಂಪು ಕಟ್ಟಿಕೊಂಡು ಕೈಗಳಲ್ಲಿ ದೊಣ್ಣೆಗಳನ್ನು ಹಿಡಿದು ಕೊಂಡು ಬಂದು ಹೊಡೆದು ಗಾಯ ಪಡಿಸಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ನಗರ ಮುತ್ಯಾಲಪೇಟೆ ವಾಸಿ ನಾರಾಯಣಸ್ವಾಮಿ (೩೫) ಎಂಬುವರು ವಿಷಸೇವನೆ ಮಾಡಿ ಮೃತಪಟ್ಟಿರುತ್ತಾರೆ. ಇವರಿಗೆ ಸಕ್ಕರೆ ಕಾಯಿಲೆ ಇದ್ದು ಇವರ ಮಗನಿಗೆ ಅಪಘಾತದ ಕಾರಣ ಬೆನ್ನು ಮೂಳೆ ಮುರಿದಿದ್ದು ಇವುಗಳಿಂದ ಮನನೊಂದಿದ್ದ ಇವರು ದಿನಾಂಕ ೧೩-೧೧-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ವಿಷಸೇವನೆ ಮಾಡಿ ಮೃಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹುಡುಗ ಕಾಣೆಯಾಗಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಹೊಲ್ಲಂಬಳ್ಳಿ ಗ್ರಾಮದ ವಾಸಿ ವಿ.ಮುನಿರಾಜು (೨೬) ಎಂಬ ವ್ಯಕ್ತಿ ಕಾಣೆಯಾಗಿರುತ್ತಾನೆ. ದಿನಾಂಕ ೦೭-೧೧-೨೦೦೯ ರಂದು ಕೆಲಸಕ್ಕಾಗಿ ಮನೆಯಿಂದ ಹೊರಟ ಇವರು ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾರೆ. ಈ ಬಗ್ಗೆ ಇವರ ತಂದೆ ಹೆಚ್.ವೆಂಕಟೇಶಪ್ಪ ಎಂಬುವರು ದೂರು ನೀಡಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೩ ನೇ ನವಂಬರ್ ೨೦೦೯

November 12, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೧೩-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೨-೧೧-೨೦೦೯ ರಂದು ೧೮೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ದೊಡ್ಡಕಡತೂರು ಗ್ರಾಮದ ವಾಸಿ ವಿಜಯಕುಮಾರ್‍ ಎಂಬುವರು ಮಾಲೂರು ಪಟ್ಟಣದ ಹನುಮಂತನಗರದಲ್ಲಿ ಕಟ್ಟಿಸುತ್ತಿದ್ದ ಮನೆಯ ಬಳಿ ಇದ್ದರು. ಆ ಸಮಯದಲ್ಲಿ ಬಂದ ೩ ಜನ ಅಪರಿಚಿತರು ವಿಜಯಕುಮಾರ್‍ ರವರನ್ನು ಲಾಂಗ್ ಮತ್ತು ದೊಣ್ಣೆಯಿಂದ ಹೊಡೆದು  ಕೊಲೆ ಮಾಡಿರುತ್ತಾರೆ. ಕೊಲೆಗೆ ಕಾರಣ ತಿಳಿದು ಬಂದಿರುವುದಿಲ್ಲ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಕೋಳಿ ಆಹಾರ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೦೩-೧೧-೨೦೦೯ ರಂದು ರಾತ್ರಿ ಅರುಣ್ ರಾಜ್ ಮತ್ತು ಇತರೆ ಇಬ್ಬರು ಕೋಲಾರ ತಾಲೂಕು ಮುದುವಾಡಿ ಬಳಿ ಇರುವ ಶ್ರೀ ವೆಂಕಟೇಶ್ವರ ಪೌಲ್ಟ್ರಿ ಫಾರಂ ನಲ್ಲಿದ್ದ ರೂ. ೨೪,೦೦೦/- ಬೆಲೆ ಬಾಳುವ ೨೪ ಮೂಟೆ ಕೋಳಿ ಆಹಾರವನ್ನು ಕಳ್ಳತನಮಾಡಿಕೊಂಡು ಹೋಗಿದ್ದು, ದಿನಾಂಕ ೧೨-೧೧-೨೦೦೯ ರಂದು ೧೫೩೦  ಗಂಟೆ ಸಮಯದಲ್ಲಿ ಗೂಡ್ಸ್ ಆಟೋನಲ್ಲಿ ಸಾಗಿಸುತ್ತಿದ್ದ ಸಮಯದಲ್ಲಿ ಸಿಕ್ಕಿಬಿದ್ದಿರುತ್ತಾರೆ.   ಈ ಬಗ್ಗೆ ಡಾ// ಕೃಷ್ಣಪ್ಪ, ಮ್ಯಾನೇಜರ್‍, ಶ್ರೀ ವೆಂಕಟೇಶ್ವರ ಪೌಲ್ಟ್ರಿ ಫಾರಂ ರವರು ದೂರನ್ನು ದಾಖಲಿಸಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಕೋಲಾರ ಗ್ರಾಮಾಂತರ ಪೊಲಿಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೧-೧೧-೨೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಮಂಗಸಂದ್ರ ಗ್ರಾಮದ ವಾಸಿ ಸಿ.ನಾರಾಯಣಸ್ವಾಮಿ ಎಂಬುವರು ತನ್ನ ಮಗಳೊಂದಿಗೆ ನಡೆದುಕೊಂಡು ಮಾದವ ಗುರ್ಜೇನಹಳ್ಳಿ ಕಡೆ ಹೋಗುತ್ತಿದ್ದರು. ಆ ಸಮಯದಲ್ಲಿ ಮಾಧವ ಗುರ್ಜೇನಹಳ್ಳಿ  ಕಡೆಯಿಂದ ಬಂದ  ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೩-ಇಜೆ-೯೮೭ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮ ಸಿ,.ನಾರಾಯಣಸ್ವಾಮಿ ಮತ್ತು ಅವರ ಮಗಳಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೧೨-೧೧-೨೦೦೯ ರಂದು ೦೯೪೫ ಗಂಟೆ ಸಮಯದಲ್ಲಿ ಬಿ,ಎ,ಕೃಷ್ಣಪ್ಪ, ಮ್ಯಾನೇಜರ್‍, ಪ್ರಗತಿ ಗ್ರಾಮೀಣ ಬ್ಯಾಂಕ್, ಹರಟಿ ಶಾಖೆ, ಕೋಲಾರ ತಾಲೂಕು ರವರು ದ್ವಿಚಕ್ರ ವಾಹನದಲ್ಲಿ ಹರಟಿ – ಹರಳಕುಂಟೆ ಮದ್ಯ ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದ ಮೂರು ಜನ ಅಪರಿಚಿತರು ಹಲ್ಲೆ ಮಾಡಿ ಪರಾರಿಯಾಗಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ೨೧

-ಸ್ಥಳ ದಂಡ ಮೊತ್ತ : ರೂ. ೩,೬೦೦/

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧೨ ನೇ ನವಂಬರ್ ೨೦೦೯

November 12, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೧೨-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಕಿಲಾಯಿಪೇಟೆಯ ಆಸ್ಟರ್‍ ಕಂಪ್ಯೂಟರ್‍ ಸೇಲ್ಸ್ ಅಂಡ್ ಸರ್ವಿಸಸ್ ಅಂಗಡಿಯಲ್ಲಿ ಕಳವು ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೦-೧೧-೨೦೦೯ ರಂದು ರಾತ್ರಿ ಅಂಗಡಿಯ ಮೇಲ್ಚಾವಣಿಯನ್ನು ಮುರಿದು ಒಳಪ್ರವೇಶಿಸಿದ ಯಾರೋ ಕಳ್ಳರು ಅಂಗಡಿಯಲ್ಲಿದ್ದ ಕಂಪ್ಯೂಟರ್‍ ಪರಿಕರಗಳು ಇನ್ನಿತರ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಸ್ತುಗಳ ಬೆಲೆ ತಿಳಿಯಬೇಕಾಗಿರುತ್ತದೆ.

ಸಾಧಾರಣ ಕಳ್ಳತನ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಅಲ್ಯೂಮಿನಿಯಂ ತಂತಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಈಗ್ಗೆ ೫ ತಿಂಗಳ ಹಿಂದೆ ಮಾಲೂರು ತಾಲೂಕು ಪುರ, ಜಗದೇನಹಳ್ಳಿ, ತಾಳಕುಂಟೆ ಮತ್ತು ರಾಮಪುರ ಗ್ರಾಮಗಳಲ್ಲಿ ಅಳವಡಿಸಿದ್ದ ಸುಮಾರು ೧ ಸಾವಿರ ಕೆ.ಜಿ. ಅಲ್ಯೂಮಿನಿಯಂ ತಂತಿಯನ್ನು ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಎಂ.ಕೃಷ್ಣಮೂರ್ತಿ, ಕಿರಿಯ ಅಭಿಯಂತರರು, ಬೆಸ್ಕಾಂ, ಲಕ್ಕೂರು ಶಾಖೆ, ಮಾಲೂರು ತಾಲೂಕು ರವರು ದೂರನ್ನು ದಾಖಲಿಸಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ಕೋಲಾರ ಗ್ರಾಮಾಂತರ ಪೊಲಿಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೧೧-೨೦೦೯ ರಂದು ೧೮೨೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಮಂಗಸಂದ್ರ ಗ್ರಾಮದ ವಾಸಿ ಸಿ.ನಾರಾಯಣಸ್ವಾಮಿ ಎಂಬುವರು ತನ್ನ ದ್ವಿಚಕ್ರವಾಹನ ಸಂಖ್ಯೆ ಕೆಎ-೦೩-ಎಲ್-೯೫೨೩ ರಲ್ಲಿ ಕೋಲಾರ-ಮಾಲೂರು ರಸ್ತೆಯ ಚೌಡದೇನಹಳ್ಳಿ ಗ್ರಾಮದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಮಾಲೂರು ಕಡೆಯಿಂದ ಬಂದ ಕೆ.ಎಸ್.ಆರ್‍.ಟಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೭೮೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮ ಸಿ,.ನಾರಾಯಣಸ್ವಾಮಿ ರವರಿಗೆ ಗಾಯಗಳುಂಟಾಗಿರುತ್ತದೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೧೧-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ತಾಡಿಗೋಳ್ ಗ್ರಾಮದ ವಾಸಿ ವೆಂಕಟರಾಮಯ್ಯ ಎಂಬುವರು ತಮ್ಮ ಮನೆಯ ಮುಂದೆ ನಿಂತಿದ್ದರು. ಆ ಸಮಯದಲ್ಲಿ ನೋಂದಣಿ ಸಂಖ್ಯೆ ಇಲ್ಲದ ಜೆ.ಸಿ.ಬಿ ವಾಹನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ವೆಂಕಟರಾಮಯ್ಯ ರವರಿಗೆ ಡಿಕ್ಕಿ ಹೊಡದಿರುತ್ತಾನೆ. ಇದರ ಪರಿಣಾಮ ಇವರ ಎರಡೂ ಕಾಲುಗಳು ಮುರಿದಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಯಲವಾರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೪-೧೦-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ಯಲವಾರ ಗ್ರಾಮದ ವಾಸಿ ನಾರಾಯಣಸ್ವಾಮಿ (೪೫) ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಗಣೇಶ ಎಂಬುವರು ಕೈಗಳಿಂದ ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಚಿಟ್ನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೯-೧೧-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಮಾದವಗುರ್ಜೇನಗಳ್ಳಿ ಗ್ರಾಮದ ವಾಸಿ ಎಂ.ಗೋಪಾಲ್ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ರಂಗಪ್ಪ ಮತ್ತು ಸೀನಪ್ಪ ಎಂಬುವರು ಕಬ್ಬಿಣದ ರಾಡಿನಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ. ಹಣಕಾಸಿನ ವಿಚಾರದ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ :

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.