ದಿನದ ಅಪರಾಧಗಳ ಪಕ್ಷಿನೋಟ ೦೯ನೇ ಫೆಬ್ರವರಿ ೨೦೧೦

February 9, 2010

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೯-೦೨-೨೦೧೦ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ  ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೨-೨೦೧೦ ರಂದು ೦೮೦೦ ಗಂಟೆ ಸಮಯದಲ್ಲಿ ಬೆಂಗಳೂರು ವೀರಸಂದ್ರ ಗ್ರಾಮದ ವಾಸಿಗಳಾದ ನಾರಾಯಣಪ್ಪ ಮತ್ತು  ಅವರ ಪತ್ನಿ ಗೌರಮ್ಮ ಎಂಬುವರು ತಮ್ಮ ದ್ವಿಚಕ್ರ ವಾಹನ ಸಂಖ್ಯೆ ಕೆಎ-೫೩-ಎಲ್-೯೭೬೨ರಲ್ಲಿ ಮಾಲೂರು ತಾಲೂಕು ಸೀತನಾಯಕನಹಳ್ಳಿ ಗ್ರಾಮದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ  ನಾರಾಯಣಪ್ಪ ತನ್ನ ವಾಹನವನ್ನುಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು  ಹೋಗುತ್ತಿದ್ದ ಸಮಯದಲ್ಲಿ ಸ್ಪೀಡ್ ಹಂಪ್ಸ್‌ ಬಳಿ ಹಿಂದೆ ಕುಳಿತಿದ್ದ ಗೌರಮ್ಮ ರವರು ವಾಹನದಿಂದ ಕೆಳಗೆ ಬಿದ್ದು ತಲೆಗೆ ತೀವ್ರತರವಾದ ಗಾಯವಾಗಿ ಚಿಕಿತ್ಸೆಗಾಗಿ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುತ್ತಾರೆ.   

ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೨-೨೦೧೦ ರಂದು ೧೮೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಕಂಬೀಪುರ ಗ್ರಾಮದ ವಾಸಿ ನರಸಿಂಹಯ್ಯ ಎಂಬುವರು ಗ್ರಾಮದ ಬಳಿ ಸೈಕಲ್‌ನಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ  ಯಾವುದೋ ದ್ವಿಚಕ್ರ ವಾಹನದ ಸವಾರ ತನ್ನ ವಾಹನವನ್ನುಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಣ ನರಸಿಂಹಪ್ಪ ರವರ ತಲೆಗೆ ತೀವ್ರತರವಾದ ಗಾಯವಾಗಿ ಚಿಕಿತ್ಸೆಗಾಗಿ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುತ್ತಾರೆ.   

-ಸಾಧಾರಣ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೩-೦೧-೨೦೧೦ ರಂದು ೧೯೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಪಟ್ಟಣದ ರಾಮಕೃಷ್ಣ ಬಡಾವಣೆ ವಾಸಿ ರವಿ @ ಪಾಲ್ ರವಿ ರಾಜ್ ಎಂಬುವರು ಪಾಳ್ಯ ಗೇಟ್ ಬಳಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಆ ಸಮಯದಲ್ಲಿ  ಬಂದ ಯಮಹಾ ದ್ವಿಚಕ್ರ ವಾಹನ  ಸಂಖ್ಯೆ ಕೆಎ-೦೭-ಕೆ-೧೯೨೧ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾರೆ. ಪರಿಣಾಮ ಪಾಲ್ ರವಿ ರಾಜ್  ರವರಿಗೆ   ಗಾಯಗಳಾಗಿ  ಚಿಕಿತ್ಸೆಗಾಗಿ ಇ.ಟಿ.ಸಿ.ಎಂ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ:ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೦೪-೦೧-೨೦೧೦ ರಂದು ಬೆಳಿಗ್ಗೆ ಶ್ರೀನಿವಾಸಪುರ ತಾಲೂಕು ಬಂಗವಾದಿ ಗ್ರಾಮದ ವಾಸಿ ವೆಂಕಟೇಶಪ್ಪ ಎಂಬುವರ ಪತ್ನಿಯಾದ ವಿ.ಪ್ರೇಮ ಎಂಬುವರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ.  

ಮುಂಜಾಗ್ರತೆ  ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :  

-ಸ್ಥಳ ದಂಡ ಮೊತ್ತ : ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೮ನೇ ಫೆಬ್ರವರಿ ೨೦೧೦

February 7, 2010

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೮-೦೨-೨೦೧೦ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ  ಕಳ್ಳತನ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಂಪ್ ಹೌಸ್‌ನಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೦೨-೨೦೧೦ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ತಂಬಿಹಳ್ಳಿ  ಗ್ರಾಮದ ಹನುಮಂತಪ್ಪ ಎಂಬುವರ ಕೋಳವೆ ಬಾವಿಗೆ  ಅಳವಡಿಸಿದ್ದ ರೂ. ೧೦,೦೦೦/- ಬೆಲೆ ಬಾಳುವ ಒಂದು ಪ್ಯಾನಲ್ ಬೋರ್ಡ ಮತ್ತು ಇತರೆ ವಸ್ತುಗಳನ್ನು  ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.  

ವಾಹನ ಕಳ್ಳತನ : ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೦೨-೨೦೧೦ ರಂದು ೧೦೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಕೃಷ್ಣರಾಜಪುರ ಗ್ರಾಮದ ವಾಸಿ ಗುಮ್ಮಯ್ಯ ಎಂಬುವರು ತನ್ನ ಟಿವಿಎಸ್ ಹೆವಿಡ್ಯೂಟಿ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೮-ಎಲ್-೫೦೫ ಅನ್ನು ಮಾಲೂರು ಪಟ್ಟಣದ ನ್ಯಾಯಾಲಯದ ಕಾಂಪ್ಲೆಕ್ಸ್‌‌‌ನಲ್ಲಿ ನಿಲ್ಲಿಸಿ ಒಳಗೆ ಹೋಗಿ ಬರುವಷ್ಠರಲ್ಲಿ  ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ದ್ವಿಚಕ್ರ ವಾಹನದ ಬೆಲೆ ರೂ. ೨೦,೦೦೦/- ಗಳಾಗಿರುತ್ತದೆ.  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೨-೨೦೧೦ ರಂದು ೧೮೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ನಂಗಲಿ ಗ್ರಾಮದ ವಾಸಿಗಳಾದ ವೆಂಕಟಾಚಲಪತಿ ಮತ್ತು  ಶಂಕರಪ್ಪ ಎಂಬುವರು ನಡೆದುಕೊಂಡು ರಾಷ್ಟ್ರೀಯ ಹೆದ್ದಾರಿ-೪ರ ನಂಗಲಿ ದರ್ಗ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಪಲಮನೇರು ಕಡೆಯಿಂದ ಬಂದ ಲಾರಿ  ಸಂಖ್ಯೆ ಟಿಎನ್-೨೮-ಕೆ-೨೦೯೮ ರ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಶಂಕರಪ್ಪ ರವರಿಗೆ ಡಿಕ್ಕಿ ಹೊಡೆಸಿರುತ್ತಾರೆ. ಪರಿಣಾಮ ಶಂಕರಪ್ಪ ರವರ ತಲೆಗೆ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾರೆ.   

-ಸಾಧಾರಣ: ೦೧

ರಾಯಲ್ಪಾಡ್ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೨-೨೦೧೦ ರಂದು ೨೦೪೫ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಮುದಿಮಡುಗು ಗ್ರಾಮದ ವಾಸಿಗಳಾದ ಅಮರ ನಾರಾಯಣ  ಮತ್ತು ಆರ್‍.ಜೆ.ಉತ್ತನ್ನ ಎಂಬುವರು ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೨-ಇ-೯೨೩೩ರಲ್ಲಿ ಮದನಪಲ್ಲಿ ರಸ್ತೆಯ ಅಕ್ಕಿ ಪಿಕ್ಕಿ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂದುಗಡೆಯಿಂದ ಬಂದ ಕಾರು  ಸಂಖ್ಯೆ ಕೆಎ-೦೭-ಎಂ-೨೫೨೫ ರ ಚಾಲಕ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾರೆ. ಪರಿಣಾಮ ಅಮರ ನಾರಾಯಣ ರವರಿಗೆ   ಗಾಯಗಳಾಗಿ  ಚಿಕಿತ್ಸೆಗಾಗಿ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ:ಇಲ್ಲ

ದೊಂಬಿ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೦೨-೨೦೧೦ ರಂದು ೧೮೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ವೀರಾಪುರ ಗ್ರಾಮದ ಶರಿಫೂನ್ನೀಸಾ ಮತ್ತು ಅವರ ಗಂಡ ತಮ್ಮ  ಜಮೀನಿನಲ್ಲಿ ರೇಷ್ಮೆ ಸೊಪ್ಪನ್ನು ಕಟಾವು ಮಾಡುತ್ತಿದ್ದರು. ಆ ಸಮಯದಲ್ಲಿ ವೀರೇನಹಳ್ಳಿ ವಾಸಿಗಳಾದ ಷೇಕ್ ಇಬ್ರಾಹೀಂ ಸಾಬ್ ಮತ್ತು ಇತರರು ಶರಿಫೂನ್ನೀಸಾ ರವರ ಜಮೀನಿಲ್ಲಿ ಏರ್‌ಟೆಲ್ ಟವರ್‍ ಅಳವಡಿಸುವ ವಿಚಾರದಲ್ಲಿ ಅಕ್ರಮ ಗುಂಪು ಕಟ್ಟಿಕೊಂಡು ಕೈಗಳಲ್ಲಿ ಕೋಲುಗಳನ್ನು ಹಿಡಿದುಕೊಂಡು ಬಂದು ಹೊಡೆದು   ರಕ್ತ ಗಾಯಪಡಿಸಿರುತ್ತಾರೆ. 

ಹಲ್ಲೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೨-೨೦೧೦ ರಂದು ೧೭೩೦ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ ಪಳ್ಳಿಗರಪಾಳ್ಯ ವಾಸಿ ಗೋವಿಂದಪ್ಪ ಎಂಬುವರ ಮೇಲೆ ಜಮೀನಿನ ಪಾಲಿನ ವಿಚಾರದಲ್ಲಿ ಜಗಳ ತೆಗೆದ ಸುಬ್ರಮಣಿ ಮತ್ತು ಇತರೆ ಇಬ್ಬರು ಮಚ್ಚಿನಿಂದ ಮುಖಕ್ಕೆ ಮತ್ತು ಇತರೆ ಕಡೆ ಹೊಡೆದು ರಕ್ತ ಗಾಯಪಡಿಸಿ ಕೊಲೆ ಮಾಡಲು ಪ್ರಯತ್ನ ಪಟ್ಟಿರುತ್ತಾರೆ. 

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆಸ್ವಾಭಾವಿಕ ಸಾವಿಗೆ  ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೦೨-೨೦೧೦ ರಂದು   ಕೋಲಾರ ತಾಲೂಕು ಚಿಟ್ನಹಳ್ಳಿ ಗ್ರಾಮದ ವಾಸಿ ಮುನಿಯಮ್ಮ  ಎಂಬುವರು ಹೊಟ್ಟೆ ನೋವು ತಾಳಲಾರದೆ ಹೆಚ್ಚಿನ ಮಾತ್ರೆ ಮತ್ತು ಔಷಧಿಯನ್ನು ಸೇವನೆ ಮಾಡಿ ಅಸ್ವಸ್ಥರಾಗಿ ಚಿಕಿತ್ಸೆಗಾಗಿ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ  ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :  

-ಸ್ಥಳ ದಂಡ ಮೊತ್ತ : ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೭ನೇ ಫೆಬ್ರವರಿ ೨೦೧೦

February 7, 2010

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೭-೦೨-೨೦೧೦ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಪಂಪ್ ಹೌಸ್‌ಗಳಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೦೨-೨೦೧೦ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ಜೋಡಿ ಕೃಷ್ಣಾಪುರ ಗ್ರಾಮದ ಕೃಷ್ಣಪ್ಪ, ಮುನಿಯಪ್ಪ, ವೇಣುಗೋಪಾಲ್, ಮುನಿಯಪ್ಪ ಮತ್ತು ವಿ.ನಂಜಪ್ಪ ಎಂಬುವರ ಪಂಪ್‌ ಹೌಸ್‌ಗಳಿಗೆ ಹಾಕಿದ್ದ ಬೀಗವನ್ನು ಮುರಿದು ಒಳಗೆ ಪ್ರವೇಶ ಮಾಡಿ ಔಷಧಿ ಹೊಡೆಯುವ ಹಿತ್ತಾಳೆ ಪಂಪುಗಳು, ಕೇಸಿಂಗ್ ಪೈಪು ಮತ್ತು ಕೇಬಲ್ ವೈರ್‌ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ಮಾಲಿನ ಒಟ್ಟು ಬೆಲೆ ರೂ. ೨೦,೦೦೦/- ಗಳಾಗಿರುತ್ತದೆ. 

ಸಾಧಾರಣ  ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ:  ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೦೨-೨೦೧೦ ರಂದು ೧೭೩೦ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ತಂಬುಚೆಟ್ಟಿಪಾಳ್ಳ ವಾಸಿ ತೆರೇಸಮ್ಮ ಎಂಬುವರು ಖಾಸಗಿ ಬಸ್ಸು ಸಂಖ್ಯೆ ಕೆಎ-೦೭-೪೯೮೪ರಲ್ಲಿ ರಾಷ್ಟ್ರೀಯ ಹೆದ್ದಾರಿ-೪ರ ಮಾಲೂರು ಜಿಗ್‌ ಜಾಗ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಜೆಸಿಬಿ ಕ್ರೇನ್ ಸಂಖ್ಯೆ ಟಿಎನ್-೫೩-ಝಡ್-೨೨೬೪ರ ಚಾಲಕ ತನ್ನ ಕ್ರೇನನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಬಸ್ಸಿಗೆ ಡಿಕ್ಕಿ ಹೊಡೆಸಿರುತ್ತಾರೆ. ಪರಿಣಾಮ ಬಸ್ಸಿನಲ್ಲಿದ್ದ ತೆರೆಸಮ್ಮ ರವರ ತಲೆಗೆ ಗಾಯಗಳಾಗಿರುತ್ತದೆ.  

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ:ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೦೨-೨೦೧೦ ರಂದು ೨೧೪೫ ಗಂಟೆ ಸಮಯದಲ್ಲಿ ಕೋಲಾರ ನಗರದ ಗೌರಿಪೇಟೆ ವಾಸಿ ಕೆ.ಶಿವಪ್ರಸಾದ್ ಎಂಬುವರು ತಮ್ಮ ಮನೆಯ ಬಳಿ ಇದ್ದರು. ಆ ಸಮಯದಲ್ಲಿ ಗೌರಿಪೇಟೆ ವಾಸಿಯಾದ ಮುನಿರಾಮಣಪ್ಪ ಎಂಬುವರು ಪಾನಮತ್ತನಾಗಿ ಹಳೇ ದ್ವೇಷದ ಹಿನ್ನೆಲೆಯಲ್ಲಿ  ಕಬ್ಬಿಣದ ಊದು ಕೊಳವೆಯಿಂದ ತಲೆಯ ಹಿಂಬಾಗಕ್ಕೆ ಹೊಡೆದು ಗಾಯಪಡಿಸಿರುತ್ತಾರೆ.      

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೧-೨೦೧೦ ರಂದು ೧೫೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕಾಮದೇನಹಳ್ಳಿ ಗ್ರಾಮದ ವಾಸಿ ನಂಜುಂಡಗೌಡ ಎಂಬುವರು ಮಾರ್ಜೇನಹಳ್ಳಿ ಗ್ರಾಮ ಪಂಚಾಯ್ತಿ ಕಾರ್ಯಾದರ್ಶಿಯನ್ನು ಮಾತನಾಡಿಸಿಕೊಂಡು ನಿಂತಿದ್ದರು.   ಆ ಸಮಯದಲ್ಲಿ ವರದೇನಹಳ್ಳಿ ಆಶೋಕ ಮತ್ತು ಕೂತಾಂಡ್ಲಹಳ್ಳಿ ಸೋಮು ಎಂಬುವರು ಜಗಳ ತೆಗೆದು ಅವಾಚ್ಚಶಬ್ದಗಳಿಂದ ಬೈದು ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತರೆ. 

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹುಡುಗ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೨-೨೦೧೦ ರಂದು   ಕೋಲಾರ ತಾಲೂಕು ಕಾರಹಳ್ಳಿ ಗ್ರಾಮದ ವಾಸಿ ನಂಜುಂಡಪ್ಪ ಎಂಬುವರ ಮಗನಾದ ಪ್ರತಾಪ್ @ ಶ್ರೀನಿವಾಸ(೧೮) ಎಂಬುವನು ಮನೆಯಿಂದ ಹೊರಗೆ ಹೋದವನು ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ.

ಮುಂಜಾಗ್ರತೆ  ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :  

-ಸ್ಥಳ ದಂಡ ಮೊತ್ತ : ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೬ನೇ ಫೆಬ್ರವರಿ ೨೦೧೦

February 6, 2010

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೬-೦೨-೨೦೧೦ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೦೨-೨೦೧೦ಕ್ಕೆ ಹಿಂದೆ ಯಾರೋ ದುರಾತ್ಮರು ಮುಳಬಾಗಿಲು ತಾಲೂಕು ರಾಷ್ಟ್ರೀಯ ಹೆದ್ದಾರಿ-೪ ರ ನಲ್ಲೂರು ಗೇಟ್ ಬಳಿ ಸುಮಾರು ೨೫ – ೩೦ ವರ್ಷ ವಯಸ್ಸುಳ್ಳ ಗಂಡಸನ್ನು ಕೊಲೆ ಮಾಡಿ ತಲೆ ಮತ್ತು ಮುಖವನ್ನು ಸುಟ್ಟು ಹಾಕಿರುತ್ತಾರೆ.  

ಡಕಾಯತಿ: ಇಲ್ಲ

ಸುಲಿಗೆ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೨-೦೨-೨೦೧೦ ರಂದು ಮಾಲೂರು ಪಟ್ಟಣದ ಬಾಲಾಜಿ ಟಾಕೀಸ್  ರಸ್ತೆಯಲ್ಲಿ ವಾಸವಾಗಿರುವ ಸುನೀಲ್ ಕುಮಾರ್‍ ಮತ್ತು ಮುರಳಿ ಎಂಬುವರು ತಮ್ಮ ದ್ವಿಚಕ್ರ ವಾಹನಗಳಲ್ಲಿ ಕೋಲಾರ ನಗರದ ತೇರಹಳ್ಳಿ ಬೆಟ್ಟಕ್ಕೆ ಹೋಗಿ ವಾಪಸ್ಸು ತೇರಹಳ್ಳಿ ರಸ್ತೆಯಲ್ಲಿ ಬರುತ್ತಿದ್ದರು. ಆ ಸಮಯದಲ್ಲಿ ಬಂದ ೫ ಅಪರಿಚಿತರು ದೊಣ್ಣೆಯನ್ನು ತೋರಿಸಿ ದ್ವಿಚಕ್ರ ವಾಹನಗಳನ್ನು ಅಡ್ಡಗಟ್ಟಿ ನಿಲ್ಲಿಸಿ ಪ್ರಾಣ ಬೆದರಿಕೆ ಹಾಕಿ ಅವರ ಬಳಿ ಇದ್ದ ಎರೆಡು ಮೊಬೈಲ್ ಪೋನ್‌ ಮತ್ತು ನಗದು ರೂ. ೯,೦೦೦/- ಗಳನ್ನು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ.          

ಮನೆಗಳ್ಳತನ: ಇಲ್ಲ

ಸಾಧಾರಣ  ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ:  ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೨-೦೨-೨೦೧೦ ಗಂಟೆ ಸಮಯದಲ್ಲಿ ಶ್ರಿನಿವಾಸಪುರ ಪಟ್ಟಣದ ವಿನೋಭನಗರದ ವಾಸಿ ವಿರೇಗೌಡ ರವರ ಮಗನಾದ ಎಸ್.ವಿ.ದಯಾನಂದ ಎಂಬುವರು ಸೈಕಲ್‌ನಲ್ಲಿ ಉನಿಕಿಲಿ ಗ್ರಾಮದ ಬಳಿ ಹೋಗುತ್ತಿದ್ದರು. ಅ ಸಮಯದಲ್ಲಿ ಬಂದ ಎದುರುಗಡೆಯಿಂದ ಬಂದ ಟ್ರಾಕ್ಟರ್‍ ಸಂಖ್ಯೆ ಕೆಎ-೦೭-ಟಿ-೪೦೬೨ ರ ಚಾಲಕ ತನ್ನ ಟ್ರಾಕ್ಟರ್‌ನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ದಯಾನಂದ ರವರ ಕಾಲಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ.  

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ:ಇಲ್ಲ

ದೊಂಬಿ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೩-೧೨-೨೦೦೯ ರಂದು ೦೫೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ನಂದಂಬಳ್ಳಿ ಗ್ರಾಮದ ವಾಸಿ ಶ್ರೀಮತಿ ಧನಮ್ಮ ಮತ್ತು ಅವರ ಮನೆಯವರು ಅಬ್ಬಣಿ ಗ್ರಾಮದಲ್ಲಿ ಗುಡಿಸಿಲು ಮನೆಯಲ್ಲಿ ಮಲಗಿದ್ದರು. ಆ ಸಮಯದಲ್ಲಿ ನಂದಂಬಳ್ಳಿ ಗ್ರಾಮದ ವಾಸಿಗಳಾದ ಸುಬ್ಬಣ್ಣ ಮತ್ತು ಇತರೆ ೫ ಜನರು ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಅಕ್ರಮ ಗುಂಪು ಕಟ್ಟಿಕೊಂಡು ಬಂದು ಜಗಳ ತೆಗೆದು ಕೈಗಳಿಂದ ಹೊಡೆದು ಅವಾಚ್ಚಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೧-೨೦೧೦ ರಂದು ೦೮೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಗೌಡಹಳ್ಳಿ ಗ್ರಾಮದ ವಾಸಿ ಡಿ.ಗೋಪಾಲಪ್ಪ ಎಂಬುವರು ತಮ್ಮ ಜಮೀನಿನ ಬಳಿ ಇದ್ದರು. ಆ ಸಮಯದಲ್ಲಿ ಅದೇ  ಗ್ರಾಮದ ವಾಸಿಗಳಾದ ಜಿ.ಇ.ಕೃಷ್ಣಪ್ಪ ಮತ್ತು ಇತರೆ ೪ ಜನರು ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಅಕ್ರಮ ಗುಂಪು ಕಟ್ಟಿಕೊಂಡು ಕೈಗಳಲ್ಲಿ ದೊಣ್ಣೆಗಳನ್ನು ಹಿಡಿದುಕೊಂಡು ಬಂದು ಜಗಳ ತೆಗೆದು  ಅವಾಚ್ಚಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೨-೨೦೧೦ ರಂದು ೧೧೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕಲ್ಲೂರು ಗ್ರಾಮದ ವಾಸಿ ಶ್ರೀಮತಿ ಕೆಂಚಮ್ಮ  ಎಂಬುವರ ಮೇಲೆ ಸೀಪುರ    ಗ್ರಾಮದ ವಾಸಿಗಳಾದ ವೆಂಕಟಮ್ಮ ಮತ್ತು ಇತರೆ ೬ ಜನರು   ಅಕ್ರಮ ಗುಂಪು ಕಟ್ಟಿಕೊಂಡು  ಬಂದು ಜಗಳ ತೆಗೆದು ಕೈಗಳಿಂದ ಮತ್ತು ಕಲ್ಲಿನಿಂದ ಹೊಡೆದು ರಕ್ತಗಾಯಪಡಿಸಿ  ಅವಾಚ್ಚಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ಇಲ್ಲ   

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಷ ಸೇವನೆ ಮಾಡಿ ಮೃತ ಪಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೦೨-೨೦೧೦ ರಂದು ೧೩೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಛತ್ರಕೋಡಿಹಳ್ಳಿ ಗ್ರಾಮದ ವಾಸಿ ಶ್ರೀನಿವಾಸ ಎಂಬುವನು ಯಡಹಳ್ಳಿ ಸಮೀಪ ವಿಷ ಸೇವನೆ ಮಾಡಿ ಚಿಕಿತ್ಸೆಗಾಗಿ ಎಸ್‌.ಎನ್.ಆರ್‍.ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುತ್ತಾನೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ  ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :  

-ಸ್ಥಳ ದಂಡ ಮೊತ್ತ : ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೫ನೇ ಫೆಬ್ರವರಿ ೨೦೧೦

February 4, 2010

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೫-೦೨-೨೦೧೦ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ            

ಮನೆಗಳ್ಳತನ: ಇಲ್ಲ

ಸಾಧಾರಣ  ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ಇಲ್ಲ

-ಸಾಧಾರಣ:  ೦೩

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೨-೨೦೧೦ ರಂದು ೧೯೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ನಾರಮಾಕಲಪಲ್ಲಿ ಗ್ರಾಮದ ವಾಸಿ ಸೋಮಶೇಖರ  ಮತ್ತು ಶಿವಾರೆಡ್ಡಿ ಎಂಬುವರು ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೨-ಇಎಫ್-೯೦೪೩ರಲ್ಲಿ ಶ್ರೀನಿವಾಸಪುರ – ಚಿಂತಾಮಣಿ ರಸ್ತೆಯ ಕಲ್ಲೂರು ಗ್ರಾಮದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಟಿವಿಎಸ್ ವಿಕ್ಟರ್‍ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೫-ಇಎನ್-೯೩೧೦ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಸೋಮಶೇಖರ  ಮತ್ತು ಶಿವಾರೆಡ್ಡಿ ಎಂಬುವರಿಗೆ ಗಾಯಗಳಾಗಿರುತ್ತದೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೨-೨೦೧೦ ರಂದು ೨೦೪೫ ಗಂಟೆ ಸಮಯದಲ್ಲಿ  ಮಾಲೂರು ತಾಲೂಕು ಹೆಚ್‌-ಹೊಸಕೋಟೆ ಗ್ರಾಮದ ವಾಸಿಗಳಾದ ಸುರೇಶರೆಡ್ಡಿ ಮತ್ತು ರಾಮಚಂದ್ರಪ್ಪ  ಎಂಬುವರು ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೮-ಕೆ-೯೬೧೯ರಲ್ಲಿ ರೈಲ್ವೆ ಬ್ರಿಡ್ಜ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ  ಇನೋವಾ ಕಾರು ಸಂಖ್ಯೆ ಕೆಎ-೦೧-ಡಿ-೬೧೮೦ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಸುರೇಶರೆಡ್ಡಿ ಮತ್ತು ರಾಮಚಂದ್ರಪ್ಪ  ರವರಿಗೆ ಗಾಯಗಳಾಗಿರುತ್ತದೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೨-೨೦೧೦ ರಂದು ೧೪೦೦ ಗಂಟೆ ಸಮಯದಲ್ಲಿ  ಮಾಲೂರು ತಾಲೂಕು ಗೊಲ್ಲಹಳ್ಳಿ ಗ್ರಾಮದ ವಾಸಿ   ಸೊಣ್ಣೆಳ್ಳೆಪ್ಪ  ಎಂಬುವರು ಮಾಲೂರು ಬಸ್ಸು ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹತ್ತುತ್ತಿದ್ದ ಸಮಯದಲ್ಲಿ ಬಸ್‌ನ ಚಾಲಕ ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಬ್ರೇಕ್ ಹಾಕಿದ್ದರಿಂದ ಸೊಣ್ಣೆಳ್ಳೆಪ್ಪ ಬಸ್ಸಿನಿಂದ ಕೆಳಗೆ ಬಿದ್ದ ಪರಿಣಾಮವಾಗಿ ಕಾಲಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ:ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೦೨-೨೦೧೦ ರಂದು ೨೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಚಾಮರೆಡ್ಡಿಹಳ್ಳಿ ಗ್ರಾಮದ ವಾಸಿ ವೆಂಕಟಪ್ಪ ಎಂಬುವರ ಮೇಲೆ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಜಗಳ ತೆಗೆದ ಕಸುವರೆಡ್ಡಿಹಳ್ಳಿ ಗ್ರಾಮದ ವಾಸಿಗಳಾದ ಆನಂದ ಮತ್ತು ಇತರೆ ಇಬ್ಬರು ಜಗಳ ತೆಗೆದು ಕಲ್ಲು, ದೊಣ್ಣೆ ಮತ್ತು ಕೈಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಗಾಯಾಳು ವೆಂಕಟಪ್ಪ ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಕೆತ್ತರಹಳ್ಳಿ ಗ್ರಾಮದ ವಾಸಿ ಶ್ರೀಮತಿ ಸುಜಾತ ಎಂಬುವರ ಗಂಡನಾದ ರಮೇಶ ಈಗ್ಗೆ ಸುಮಾರು ೨ ತಿಂಗಳಿನಿಂದ ತವರು ಮನೆಯಿಂದ ಹಣ ತರುವಂತೆ ಒತ್ತಾಯ ಮಾಡುತ್ತಿದ್ದು, ಈ ವಿಚಾರದಲ್ಲಿ ದಿನಾಂಕ ೦೫-೦೨-೨೦೧೦ ರಂದು ೧೦೩೦ ಗಂಟೆ ಸಮಯದಲ್ಲಿ ಗಂಡ ರಮೇಶ, ಅತ್ತೆ ಶನಿವೀರಮ್ಮ ಮತ್ತು ವಿಶಾಲಾಕ್ಷಮ್ಮ ಎಂಬುವರು ಕೈಗಳಿಂದ ಹೊಡೆದು ರಮೇಶ ಚಾಕುವಿನಿಂದ ಕಿವಿಯ ಮೇಲೆ ಮತ್ತು ಕೆನ್ನೆಯ ಮೇಲೆ ಹರಿತವಾದ ಗಾಯಪಡಿಸಿರುತ್ತಾನೆ.   

ಇತರೆ: ೦೨

ರಾಯಲ್ಪಾಡ್ ಪೊಲೀಸ್ ಠಾಣೆಯಲ್ಲಿ ನಾಟಿ ಸಾರಾಯಿ ಸೇವನೆ ಮಾಡಿ ಮೃತ ಪಟ್ಟಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೨-೨೦೧೦ ರಂದು ೧೯೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಅಮ್ಮಗಾರಿಪೇಟ ಗ್ರಾಮದಲ್ಲಿ ನಾಟಿ ಸಾರಾಯಿ ಸೇವನೆ ಮಾಡಿ ೧. ಡೈರಿ ನಾರಾಯಣಸ್ವಾಮಿ, ೨. ಭಜಂತ್ರಿ ವೆಂಕಟರವಣಪ್ಪ, ೩. ಕೊಂಡಪ್ಪ, ೪. ವೆಂಕಟಪ್ಪ ಮತ್ತು ರೆಡ್ಡಪ್ಪ ಎಂಬುವರ ಮೃತ ಪಟ್ಟಿರುತ್ತಾರೆ. ಭಜಂತ್ರಿ ವೆಂಕಟರವಣಪ್ಪ ಎಲ್ಲಿಂದಲೋ ನಾಟಿ ಸಾರಾಯಿ ತಂದು ಮನೆಯಲ್ಲಿ ಇಟ್ಟುಕೊಂಡು ಅದನ್ನು ಗ್ರಾಮದಲ್ಲಿ ಮಾರಾಟ ಮಾಡಿದ್ದರಿಂದ

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಾಣ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೦೨-೨೦೧೦ ರಂದು ೨೧೦೦ ಗಂಟೆ ಸಮಯದಲ್ಲಿ ಕೋಲಾರ ನಗರದ ಕೆ.ವಿಜಯ ಲಕ್ಷ್ಮೀ ಎಂಬುವರ ಮೇಲೆ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಜಗಳ ತೆಗೆದು ಆಸ್ತಿ ವಿಚಾರದಲ್ಲಿ ಹಾಕಿರುವ ಕೇಸ್ ವಾಪಸ್ಸು ಪಡೆಯಬೇಕೆಂದು ಕೆ.ಚಂದ್ರಶೇಖರ್‍ ಮತ್ತು ಇತರೆ ೪ ಜನರು ಒತ್ತಾಯ ಮಾಡಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ  ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :  

-ಸ್ಥಳ ದಂಡ ಮೊತ್ತ : ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೪ನೇ ಫೆಬ್ರವರಿ ೨೦೧೦

February 3, 2010

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೪-೦೨-೨೦೧೦ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ            

ಮನೆಗಳ್ಳತನ: ಇಲ್ಲ

ಸಾಧಾರಣ  ಕಳ್ಳತನ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸಿಎಸ್‌ಆರ್‍ ವೈರ್‍ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೨-೦೨-೨೦೧೦ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ಮಂಗಸಂದ್ರ ಗ್ರಾಮದ ಬಳಿ ಬೆಸ್ಕಾಂ ಇಲಾಖೆಯಿಂದ ಅಳವಡಿಸಿದ್ದ ೬ ವಿಧ್ಯುತ್ ಕಂಬಗಳನ್ನು ಹೊಡೆದು ನಾಶ ಪಡಿಸಿ ರೂ. ೨೮,೩೩೬/- ಬೆಲೆ ಬಾಳುವ ೧೬೦೦ ಮೀಟರ್‍ ಎಸಿಎಸ್‌ಆರ್‍ ವೈರ್‌ನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಕೆ.ಟಿ.ಪ್ರಭಾಕರ ರೆಡ್ಡಿ, ಶಾಖಾಧಿಕಾರಿಗಳು, ಬೆಸ್ಕಾಂ, ವಕ್ಕಲೇರಿ ಶಾಖೆ ರವರು ದೂರನ್ನು ದಾಖಲಿಸಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಚಕ್ರ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೧-೨೦೧೦ ರಂದು ರಾತ್ರಿ ಕೋಲಾರ ತಾಲೂಕು ತಂಬಿಹಳ್ಳಿ ಗ್ರಾಮದ ವಾಸಿ ಶಂಕರ್‍ ಷಂಷಿ ಎಂಬುವರ ದ್ವಿಚಕ್ರ ವಾಹನದಲ್ಲಿದ್ದ ಹಿಂದಿನ ಚಕ್ರವನ್ನು  ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಇದರ ಬೆಲೆ ರೂ, ೨,೧೫೦/- ಗಳಾಗಿರುತ್ತದೆ.

ವಾಹನ ಕಳ್ಳತನ : ಇಲ್ಲ  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ:  ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೧-೨೦೧೦ ರಂದು ೧೫೦೦ ಗಂಟೆ ಸಮಯದಲ್ಲಿ ಚಿಂತಾಮಣಿ ಪಟ್ಟಣದ ನಾಕುಂದಿ ವಾಸಿ ಶ್ರೀನಿವಾಸ ಮತ್ತು ಚನ್ನಕೃಷ್ಣ ಎಂಬುವರು ತನ್ನ ಯಮಹಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೫-ಕೆ-೩೪೨೦ರಲ್ಲಿ ಶ್ರೀನಿವಾಸಪುರ – ಮುಳಬಾಗಿಲು ರಸ್ತೆಯ ಲಕ್ಷ್ಮೀಸಾಗರ ಕೆರೆ ಕೋಡಿಯ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಗೂಡ್ಸ್ ಟೆಂಪೋ ಸಂಖ್ಯೆ ಕೆಎ-೦೭-೬೩೦೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಶ್ರೀನಿವಾಸ ಮತ್ತು ಚನ್ನ ಕೃಷ್ಣಪ್ಪ ಎಂಬುವರಿಗೆ ಗಾಯಗಳಾಗಿರುತ್ತದೆ.

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೦೨-೨೦೧೦ ರಂದು ೧೬೩೦ ಗಂಟೆ ಸಮಯದಲ್ಲಿ  ಕೋಲಾರ ನಗರದ ವಾಸಿ ಕಲೀಂ ಪಾಷ ಎಂಬುವರು  ಕಠಾರಿಪಾಳ್ಯ ಓ.ಇ. ಶಾಲೆಯ ಬಳಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ  ಸ್ಕೂಟರ್‍  ಸಂಖ್ಯೆ ಕೆಎ-೦೭-ಹೆಚ್-೩೮೪೯ ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಕಲೀಂ ಪಾಷ ರವರಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ:ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ   

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡು ಮೃತ ಪಟ್ಟಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೦೨-೨೦೧೦ ರಂದು ರಾತ್ರಿ ಕೋಲಾರ ತಾಲೂಕು ಕೋಗಿಲಹಳ್ಳಿ ಗ್ರಾಮದ ವಾಸಿ ಮುನಾವರ್‍ ಪಾಷ(೪೦) ಎಂಬುವರು ಮೆಹಬೂಬ್ ಪೆಟ್ರೋಲ್ ಬಂಕ್ ಹಿಂಬಾಗ ಇರುವ ಮಹಮದ್ ಷಾ ಎಂಬುವರ ಶೆಡ್‌‌ನಲ್ಲಿ ನೇಣು ಹಾಕಿಕೊಂಡು ಮೃತ ಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ  ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ೧೨

-ಸ್ಥಳ ದಂಡ ಮೊತ್ತ : ರೂ. ೧,೫೦೦/-

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೩ನೇ ಫೆಬ್ರವರಿ ೨೦೧೦

February 2, 2010

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೩-೦೨-೨೦೧೦ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ            

ಮನೆಗಳ್ಳತನ: ಇಲ್ಲ

ಸಾಧಾರಣ  ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಗಲ್‌‌ಪೇಟೆ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೯-೦೧-೨೦೧೦ ರಂದು ೨೦೧೫ ಗಂಟೆ ಸಮಯದಲ್ಲಿ ಕೋಲಾರ ನಗರದ ಪಿಡಬ್ಲ್ಯೂಡಿ ವಸತಿ ಗೃಹದಲ್ಲಿ ವಾಸವಾಗಿರುವ ಆಂಜನೇಯಪ್ಪ ಎಂಬುವರು ತನ್ನ ಹೀರೋ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೩-ಆರ್‍-೪೮೧೫ಅನ್ನು ಕೋಲಾರಮ್ಮ ದೇವಸ್ಥಾನದ ಮುಂದೆ ನಿಲ್ಲಿಸಿದ್ದನ್ನು ಯಾರೋ ಕಳ್ಳರು ಕಳುವ ಮಾಡಿಕೊಂಡು ಹೋಗಿರುತ್ತಾರೆ. ಇದರ ಬೆಲೆ ರೂ. ೩೦,೦೦೦/- ಗಳಾಗಿರುತ್ತದೆ,  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ:  ಇಲ್ಲ 

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ:ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೦೩-೦೨-೨೦೧೦ ರಂದು ೦೭೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಸೀತಹಳ್ಳಿ ಗ್ರಾಮದ ವಾಸಿ ಚಾಂದ್‌ಪಾಷ ಎಂಬುವರು ಮಿಣಸಂದ್ರ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರ ಬಳಿ ತಾನು ಕೊಟ್ಟಿದ ರೂ. ೩,೦೦,೦೦೦/- ಗಳನ್ನು ವಾಪಸ್ಸು ಕೇಳಲು ಹೋಗಿದ್ದರು. ಆ ಸಮಯದಲ್ಲಿ ನಾರಾಯಣಸ್ವಾಮಿ ಮತ್ತು ಇತರೆ ಇಬ್ಬರು ಜಗಳ ತೆಗೆದು ಕೈಗಳಿಂದ ಹೊಡೆದು ಅವಾಚ್ಚಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.   

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ  ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೨ನೇ ಫೆಬ್ರವರಿ ೨೦೧೦

February 1, 2010

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೨-೦೨-೨೦೧೦ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ            

ಮನೆಗಳ್ಳತನ: ಇಲ್ಲ

ಸಾಧಾರಣ  ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೧-೨೦೧೦ ರಂದು ೧೯೩೦ ಗಂಟೆ ಸಮಯದಲ್ಲಿ ಕೋಲಾರ  ತಾಲೂಕು ಆಲಹಳ್ಳಿ ಗ್ರಾಮದ ವಾಸಿಗಳಾದ ಮುನಯ್ಯ ಮತ್ತು ಮನೋಹರ್‍ ಎಂಬುವರು ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೪೩-ಇ-೯೫೯೫ರಲ್ಲಿ ಶಿವಾರಪಟ್ಟಣ ಗೇಟ್ ಗೆ ಬರಲು ರಘು ಪೌಲ್ಟ್ರೀ ಫಾರಂ ಬಳಿ ಬರುತ್ತಿದ್ದರು. ಅ ಸಮಯದಲ್ಲಿ ಬಂದ ಟ್ರಾಕ್ಟರ್‍ ಸಂಖ್ಯೆ ಟಿಎನ್-೭೦-ಎ-೦೨೯೧ರ ಚಾಲಕ ತನ್ನ ಟ್ರಾಕ್ಟರ್‌‌ನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಇಬ್ಬರಿಗೂ ಗಾಯಗಳಾಗಿ ಚಿಕಿತ್ಸೆಗಾಗಿ ಸಾಗಿಸುವ ಮಾರ್ಗ ಮದ್ಯೆ ಮನೋಹರ್‍ ಮೃತ ಪಟ್ಟಿದ್ದು, ಮುನಯ್ಯ ರವರು ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

-ಸಾಧಾರಣ:  ಇಲ್ಲ 

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ:ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ರಾಯಲ್ಪಾಡ್ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೦೨-೨೦೧೦ ರಂದು  ೧೭೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು  ಕದಿರಂಪಲ್ಲಿ ಗ್ರಾಮದ ವಾಸಿಯಾದ ಮಂಗಮ್ಮ ಎಂಬುವರ  ಮೇಲೆ ಹುಣಸೇ ಕಾಯಿ ವಿಚಾರದಲ್ಲಿ ಜಗಳ ತೆಗೆದ ಅದೇ ‌ಗ್ರಾಮದ ವಾಸಿಯಾದ ವೆಂಕಟರವಣ ಎಂಬುವರು ದೊಣ್ಣೆಯಿಂದ ತಲೆಗೆ ಹೊಡೆದು ಗಾಯ ಪಡಿಸಿ ಅವಾಚ್ಚಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.  

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ  ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೧ನೇ ಫೆಬ್ರವರಿ ೨೦೧೦

February 1, 2010

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೧-೦೨-೨೦೧೦ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ            

ಮನೆಗಳ್ಳತನ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೧-೨೦೧೦ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ವೇಮಗಲ್ ಗ್ರಾಮದಲ್ಲಿರುವ ಶ್ರೀ ದ್ರೌಪತಾಂಭ ಧರ್ಮರಾಯಸ್ವಾಮಿ  ದೇವಾಲಯದ ಬೀಗವನ್ನು ಮುರಿದು ಒಳಗೆ ಪ್ರವೇಶ ಮಾಡಿ  ದೇವಿಯ ಚಿನ್ನದ ತಾಳಿ ಮತ್ತು ಹುಂಡಿಯನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ಮಾಲಿನ ಬೆಲೆ ರೂ. ೨೨,೦೦೦/- ಗಳಾಗಿರುತ್ತದೆ. ಈ ಬಗ್ಗೆ ಕಾಂತರಾಜ್, ಅಧ್ಯಕ್ಷರು, ಶ್ರೀ ದ್ರೌಪತಾಂಭ ಧರ್ಮರಾಯಸ್ವಾಮಿ  ದೇವಾಲಯ ರವರು ದೂರನ್ನು ದಾಖಲಿಸಿರುತ್ತಾರೆ.

ಸಾಧಾರಣ  ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ:  ಇಲ್ಲ 

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ:ಇಲ್ಲ

ದೊಂಬಿ: ೦೨

ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೧-೨೦೧೦ ರಂದು ೧೨೪೫ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಕಂಬಂದಿನ್ನ ಗ್ರಾಮದ ವಾಸಿಗಳಾದ ನಾರಾಯಣಸ್ವಾಮಿ ಮತ್ತು ಅವರ ಕಡೆಯವರು, ನರಸಿಂಹಪ್ಪ ಮತ್ತು ಅವರ ಕಡೆಯವರು ಹಳೇ ದ್ವೇಷದ ಹಿನ್ನೇಲೆಯಲ್ಲಿ ಪರಸ್ಪರ ಅಕ್ರಮ ಗುಂಪು ಕಟ್ಟಿಕೊಂಡು ಕಲ್ಲಿನಿಂದ ಮತ್ತು ಮಚ್ಚಿನಿಂದ ಹೊಡೆದಾಡಿಕೊಂಡು ಗಾಯಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ದೂರು ಮತ್ತು ಪ್ರತಿ ದೂರುಗಳು ದಾಖಲಾಗಿರುತ್ತದೆ.

ಹಲ್ಲೆ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೧-೨೦೧೦ ರಂದು  ಮಾಲೂರು ತಾಲೂಕು ಹುಳದೇನಹಳ್ಳಿ ಗ್ರಾಮದ ವಾಸಿಯಾದ ಯರ್‍ರಪ್ಪ ಎಂಬುವರ ನಿವೇಶನದಲ್ಲಿ ಅದೇ ಗ್ರಾಮದ ವಾಸಿಗಳಾದ ವೆಂಕಟೇಶ ಮತ್ತು ಆನಂದ  ಎಂಬುವರು ಪಾಯವನ್ನು ತೋಡುತ್ತಿದ್ದರು. ಇದನ್ನು ಪ್ರಶ್ನಿಸಿದ ಯರ್‍ರಪ್ಪ ರವರಿಗೆ ಅವಾಚ್ಚಶಬ್ದಗಳಿಂದ ಬೈದು ಕಾಲಿನಿಂದ ಒದ್ದು ಬಲಗೈ ಹೆಬ್ಬೆರಳನ್ನು ಕಚ್ಚಿ  ಗಾಯಪಡಿಸಿಕೊಂಡಿರುತ್ತಾರೆ.  

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ  ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೧ನೇ ಜನವರಿ ೨೦೧೦

January 31, 2010

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೩೧-೦೧-೨೦೧೦ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಸುಲಿಗೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ದಿನಾಂಕ ೩೦-೦೧-೨೦೧೦ ರಂದು ೨೩೩೦ ಗಂಟೆ ಸಮಯದಲ್ಲಿ ನಡೆದಿರುತ್ತದೆ.  ಬೆಂಗಳೂರು ನಗರದ ಗಂಗೋತ್ತಿ ಸರ್ಕಲ್ ಬಳಿ ತಿರುಪತಿಗೆ ಹೋಗಿ ಬರುವ ಸಲುವಾಗಿ ಬೆಂಗಳೂರು ಕೋರಮಂಗಲದ ವಾಸಿ ಉಮೇಶ್   ರವರ   ಇನೋವಾ  ಕಾರು  ಸಂಖ್ಯೆ ಕೆಎ-೦೫-ಡಿ-೫೪೪೬ ಅನ್ನು  ಬಾಡಿಗೆ ಸಲುವಾಗಿ ಮೂರು ಜನ ಅಪರಿಚಿತರು ಪಡೆದಿದ್ದು. ಬೆಂಗಳೂರಿನಿಂದ ಬರುವ ಮಾರ್ಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ-೪ ರ ನಿಸರ್ಗ ಸರ್ವಿಸ್  ಸ್ಟೇಷನ್ ಬಳಿ ಬರುತ್ತಿದ್ದಾಗ ಅಪರಿಚಿತರು   ಇನ್ನು ಮೂರು ಜನ ಬರುತ್ತಾರೆಂದು ಕಾರು ನಿಲ್ಲಿಸಲು ಚಾಲಕನಿಗೆ ಸೂಚಿಸಿದ್ದು ಚಾಲಕ ತನ್ನ ವಾಹನವನ್ನು ನಿಲ್ಲಿಸಿದಾಗ ಅಪರಿಚಿತರು ಚಾಲಕನ ಕೈಕಾಲುಗಳನ್ನು ಕಟ್ಟಿ ಹಿಂದಿನ ಸೀಟಿನಲ್ಲಿ ಹಾಕಿ ರೂ. ೫,೦೦೦/-, ಎರೆಡು ನೂಕಿಯಾ ಮೊಬೈಲ್ ಕಿತ್ತುಕೊಂಡು ನರಸಾಪುರ ಮಾಲೂರು ರಸ್ತೆಯ ಆಲಹಳ್ಳಿ ಕ್ರಾಸ್ ಬಳಿ ಕಾರ್‍ ಚಾಲಕನಾಧ ಉಮೇಶ್ ನನ್ನು ಕಾರಿನಿಂದ ಹೊರಗೆ ತಳ್ಳಿ ಕಾರು ಸಮೇತ ಪರಾರಿಯಾಗಿರುತ್ತಾರೆ.            

ಮನೆಗಳ್ಳತನ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೧-೨೦೧೦ ರಂದು ರಾತ್ರಿ ಯಾರೋ ಕಳ್ಳರು ಮುಳಬಾಗಿಲು ತಾಲೂಕು ದೇವರಾಯಸಮುದ್ರ ಗ್ರಾಮದಲ್ಲಿರುವ ಶ್ರೀ ಸಂಕಟಮೋಚನ ಹನುಮಾನ್ ದೇವಾಲಯದ ಬೀಗವನ್ನು ಮುರಿದು ಒಳಗೆ ಪ್ರವೇಶ ಮಾಡಿ ರೋ. ೧೦,೦೦೦/- ಬೆಲೆ ಬಾಳುವ ದೇವರ ಮೇಲಿದ್ದ ಬೆಳ್ಳಿ ಲೇಪನದ ಹಿತ್ತಾಳೆ ಕವಚವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಗೋಪಾಲ್ ಜಿ.ಎನ್ ಎಂಬುವರು ದೂರನ್ನು ದಾಖಲಿಸಿರುತ್ತಾರೆ.

ಸಾಧಾರಣ  ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೧-೨೦೧೦ ರಂದು ರಾತ್ರಿ ೧೨೦೦ ಗಂಟೆ ಸಮಯದಲ್ಲಿ ಎನ್.ಹೆಚ್ ೪ ರಸ್ತೆಯ ಅಮ್ಮೇರಹಳ್ಳಿ ಕೆರೆಯ ಸಮೀಪ ಆಟೋ ಸಂಖ್ಯೆ ಕೆಎ-೦೭-೬೩೭೪ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಆಟೋ ಮುಗುಚಿಬಿದ್ದಿರುತ್ತದೆ. ಆಟೋ ಹಿಂಬದಿಯಲ್ಲಿದ್ದ ಕೋಲಾರ ಟೌನ್ ವಾಸಿ  ಫೈರೋಜ್‌ಪಾಷ ರವರ ಮೇಲೆ ಆಟೋ ಬಿದ್ದ ಪರಿಣಾಮ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯದಲ್ಲಿ ಮೃತಪಟ್ಟಿರುತ್ತಾರೆ.

-ಸಾಧಾರಣ:  ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೩-೦೧-೨೦೧೦ ರಂದು ೧೬೨೦ ಗಂಟೆ ಸಮಯದಲ್ಲಿ ಕೋಲಾರ ತಾಲ್ಲೂಕು ಅಮ್ಮೇರಹಳ್ಳಿ ಗ್ರಾಮದ ವಾಸಿ ಸುರೇಶ್ ಎಂಬುವರು  ಟ್ರಾಕ್ಟರ್‍ ಸಂ. ಎಂವೈಕೆ-೫೫೦೭ರಲ್ಲಿ ಕೋಲಾರ – ಮಾಲೂರು ರಸ್ತೆಯ ಚಲುವನಹಳ್ಳಿ ಗೇಟ್ ಬಳಿ ಟ್ರಾಕ್ಟರ್‍ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಉರುಳಿಸಿರುತ್ತಾನೆ. ಇದರ ಪರಿಣಾಮವಾಗಿ  ಸುರೇಶ ಮತ್ತು ವೆಂಕಟೇಶಪ್ಪ ಎಂಬುವರಿಗೆ ಗಾಯಗಳಾಗಿರುತ್ತದೆ. 

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ:ಇಲ್ಲ

ದೊಂಬಿ: ಇಲ್ಲ

ಹಲ್ಲೆ:  ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ  ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.