ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೧೧-೨೦೦೯ ರಂದು ರಾತ್ರಿ ಕೋಲಾರ ತಾಲೂಕು ಕೋಮುಲ್ ಡೈರಿಯ ದಾಸ್ತಾನಿನ ಕೊಠಡಿಯ ಬಾಗಿಲನ್ನು ಮುರಿದು ಓಳಗೆ ಪ್ರವೇಶ ಮಾಡಿ ರೂ. ೫೨, ೪೩೯/ ಬೆಲೆ ಬಾಳುವ ಸುಹಾಸಿತ ಹಾಲು ಬಾಟಲ್ಗಳು ಮತ್ತು ಅದರ ಉತ್ಪನ್ನಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಕೋಮುಲ್ ಡೈರಿ ವ್ಯವಸ್ಥಾಪಕರಾದ ಸುರೇಶ್ ಕುಲಕರ್ಣಿ ರವರು ದೂರು ನೀಡಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ೦೧
ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬೆಂಗಳೂರು ನಗರದ ವಾಸಿ ಬಿ.ಎಂ.ಸುಬ್ರಮಣಿ ಎಂಬುವರ ಕೆಎ-೫೦-ಜೆ-೩೯೫೩ ಸಂಖ್ಯೆಯ ಯಮಹಾ ಎಸ್.ಜಡ್.ಎಸ್ ದ್ವಿಚಕ್ರವಾಹನ ಕಳುವಾಗಿರುತ್ತದೆ. ದಿನಾಂಕ ೧೭-೧೧-೨೦೦೯ ರಂದು ರಾತ್ರಿ ಬಿ.ಎಂ.ಸುಬ್ರಮಣಿ ಎಂಬುವರು ತಮ್ಮ ದ್ವಿಚಕ್ರವಾಹನವನ್ನು ಕೋಲಾರ ಕಾರಂಜಿಕಟ್ಟೆಯ ಸ್ಪಂದನಾ ಡಿಜಿಟಲ್ ಫ್ಲೆಕ್ಸ್ ಪ್ರಿಂಟ್ ಬಳಲಿ ನಿಲ್ಲಿಸಿದ್ದಾಗ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ೦೧
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಆಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೧೧-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೇತಮಂಗಲ ಗ್ರಾಮದ ವಾಸಿಗಳಾದ ಜೈಬೂನ್ನೀಸಾ, ಗುಲ್ಷಾನ್ ಮತ್ತು ಷೇಕ್ ಮುರಾದ್ ಎಂಬುವರು ಬಸ್ಸಿಗಾಗಿ ಕಾಯುತ್ತಾ ಮುಳಬಾಗಿಲು ತಾಲೂಕು ಸೀಗೇಹಳ್ಳಿ ಗೇಟ್ ಬಳಿ ನಿಂತಿದ್ದರು. ಆ ಸಮಯದಲ್ಲಿ ಬಂದ ಯಾವುದೋ ಅಪರಿಚಿತ ವಾಹನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಜೈಬೂನ್ನೀಸಾ ರವರಿಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ತಲೆಗೆ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾನೆ.
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೯-೧೧-೨೦೦೯ ರಂದು ೨೦೩೦ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ ಅಂಬೇಡ್ಕರ್ನಗರದ ವಾಸಿ ಕಾಶಿನಾಥ ಎಂಬುವರು ತಮ್ಮ ಮನೆಯಲ್ಲಿ ಇದ್ದರು. ಆ ಸಮಯದಲ್ಲಿ ಸುಬ್ರಮಣಿ ಮತ್ತು ಇತರೆ ೪ ಜನರು (ಎಲ್ಲರೂ ಅಂಬೇಡ್ಕರ್ನಗರದ ವಾಸಿಗಳು) ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಾಶಿನಾಥ ರವರ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಹೊಡೆದು ಗಾಯ ಪಡಿಸಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ದೌರ್ಜನ್ಯತಡೆ) ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಈಕಂಬಳ್ಳಿ ಕೆರೆಯಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೮-೧೧-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಬಸವನತ್ತ ಗ್ರಾಮದ ವಾಸಿ ಎ.ವೆಂಕಟೇಶಪ್ಪ ಎಂಬುವರ ಮೇಲೆ ಜಗಳ ತೆಗೆದ ಈಕಂಬಳ್ಳಿ ಗ್ರಾಮದ ವಾಸಿ ಸೊಣ್ಣೇಗೌಡ ಮತ್ತು ದೊಡ್ಡಹಸಾಳ ಗ್ರಾಮದ ವಾಸಿಗಳಾದ ಗೋಪಾಲ್ ಮತ್ತು ಉಮೇಶ್ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿ ದೊಣ್ಣೆ ಮತ್ತು ಕೈಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ. ಕೆರೆಯಲ್ಲಿ ಮಣ್ಣು ತೆಗೆಯುವ ವಿಚಾರದ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು :
-ಸ್ಥಳ ದಂಡ ಮೊತ್ತ : ರೂ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice
Posted by kolarpolice
Posted by kolarpolice



