ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೯-೦೨-೨೦೧೦ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೩
-ಮಾರಣಾಂತಿಕ: ೦೨
ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೨-೨೦೧೦ ರಂದು ೦೮೦೦ ಗಂಟೆ ಸಮಯದಲ್ಲಿ ಬೆಂಗಳೂರು ವೀರಸಂದ್ರ ಗ್ರಾಮದ ವಾಸಿಗಳಾದ ನಾರಾಯಣಪ್ಪ ಮತ್ತು ಅವರ ಪತ್ನಿ ಗೌರಮ್ಮ ಎಂಬುವರು ತಮ್ಮ ದ್ವಿಚಕ್ರ ವಾಹನ ಸಂಖ್ಯೆ ಕೆಎ-೫೩-ಎಲ್-೯೭೬೨ರಲ್ಲಿ ಮಾಲೂರು ತಾಲೂಕು ಸೀತನಾಯಕನಹಳ್ಳಿ ಗ್ರಾಮದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ನಾರಾಯಣಪ್ಪ ತನ್ನ ವಾಹನವನ್ನುಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಸಮಯದಲ್ಲಿ ಸ್ಪೀಡ್ ಹಂಪ್ಸ್ ಬಳಿ ಹಿಂದೆ ಕುಳಿತಿದ್ದ ಗೌರಮ್ಮ ರವರು ವಾಹನದಿಂದ ಕೆಳಗೆ ಬಿದ್ದು ತಲೆಗೆ ತೀವ್ರತರವಾದ ಗಾಯವಾಗಿ ಚಿಕಿತ್ಸೆಗಾಗಿ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುತ್ತಾರೆ.
ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೨-೨೦೧೦ ರಂದು ೧೮೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಕಂಬೀಪುರ ಗ್ರಾಮದ ವಾಸಿ ನರಸಿಂಹಯ್ಯ ಎಂಬುವರು ಗ್ರಾಮದ ಬಳಿ ಸೈಕಲ್ನಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಯಾವುದೋ ದ್ವಿಚಕ್ರ ವಾಹನದ ಸವಾರ ತನ್ನ ವಾಹನವನ್ನುಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಣ ನರಸಿಂಹಪ್ಪ ರವರ ತಲೆಗೆ ತೀವ್ರತರವಾದ ಗಾಯವಾಗಿ ಚಿಕಿತ್ಸೆಗಾಗಿ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುತ್ತಾರೆ.
-ಸಾಧಾರಣ: ೦೧
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೩-೦೧-೨೦೧೦ ರಂದು ೧೯೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಪಟ್ಟಣದ ರಾಮಕೃಷ್ಣ ಬಡಾವಣೆ ವಾಸಿ ರವಿ @ ಪಾಲ್ ರವಿ ರಾಜ್ ಎಂಬುವರು ಪಾಳ್ಯ ಗೇಟ್ ಬಳಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಆ ಸಮಯದಲ್ಲಿ ಬಂದ ಯಮಹಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಕೆ-೧೯೨೧ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾರೆ. ಪರಿಣಾಮ ಪಾಲ್ ರವಿ ರಾಜ್ ರವರಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ಇ.ಟಿ.ಸಿ.ಎಂ ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ:ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೦೪-೦೧-೨೦೧೦ ರಂದು ಬೆಳಿಗ್ಗೆ ಶ್ರೀನಿವಾಸಪುರ ತಾಲೂಕು ಬಂಗವಾದಿ ಗ್ರಾಮದ ವಾಸಿ ವೆಂಕಟೇಶಪ್ಪ ಎಂಬುವರ ಪತ್ನಿಯಾದ ವಿ.ಪ್ರೇಮ ಎಂಬುವರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು :
-ಸ್ಥಳ ದಂಡ ಮೊತ್ತ : ರೂ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice



