ದಿನದ ಅಪರಾಧಗಳ ಪಕ್ಷಿನೋಟ ೦೭ ನೇ ಸೆಪ್ಟೆಂಬರ್ ೦೮

September 7, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೭-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಸಾವಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬೆಂಗಳೂರು ಹೊಂಗಸಂದ್ರ ವಾಸಿ ಗೀತಾ ಎಂಬುವರ ವಿವಾಹ ಆರು ವರ್ಷಗಳ ಹಿಂದೆ ಮಾಲೂರು ತಾಲೂಕು ಮಡಿವಾಳ ಗ್ರಾಮದ ಸೋಮಶೇಖರ್‍ ರವರೊಂದಿಗೆ ನಡೆದಿರುತ್ತದೆ. ವಿವಾಹನಂತರ ಮೋಟಾರ್‍ ಸೈಕಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಆಗಾಗ್ಗ ಜಗಳ ತೆಗೆಯುತ್ತಿದ್ದು ಸೋಮಶೇಖರ್‍ ದಿನಾಂಕ ೦೨-೦೯-೨೦೦೮ ರಂದು ತನ್ನ ತಾಯಿ ಕುಳ್ಳಮ್ಮ ಎಂಬುವರು ಗೀತಾ ರವರಿಗೆ ಕೈಗಳಿಂದ ಹೊಡೆದು ಕಾಲಿನಿಂ ಒದ್ದು ಹಲ್ಲೆ ನಡೆಸಿ ಹೆಚ್ಚಿನ ವರದಕ್ಷಿಣೆ ತರುವಂತೆ ಒತ್ತಾಯಿಸಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿರುತ್ತಾರೆ. ಗಾಯಗೊಂಡ ಗೀತಾರವರು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುಯತ್ತಿದ್ದು ದಿನಾಂಕ ೦೫-೦೯-೨೦೦೮ ರಂದು ೧೮೩೦ ಗಂಟೆ ಸಮಯದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಗಂಡ ಮತ್ತು ಅತ್ತೆ ನೀಡಿದ ಮಾನಸಿಕ ಹಾಗೂ ದೈಹಿಕ ಕಿರುಕುಳದಿಂದಲೇ ಗೀತಾ ರವರು ಮೃತಪಟ್ಟಿರುವುದಾಗಿ ಗೀತಾರವರ ತಂದೆ ಮದನಗಿರಿಯಪ್ಪ ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೦೯-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ದಾವಣಗೆರೆ ವಾಸಿ ಎಸ್.ನರೇಂದ್ರ ಎಂಬುವರು ತಮ್ಮ ಟಾಟಾ ಇಂಡಿಕಾ ಕಾರ್‍ ಕೆಎ-೧೭-ಎಂ-೫೯೮೩ ರಲ್ಲಿ ತನ್ನ ಹೆಂಡತಿ ಮತ್ತು ಮಕ್ಕಳೊಂದಿಗೆ ಬೆಂಗಳೂರಿಗೆ ಹೋಗುವ ಸಲುವಾಗಿ ಎನ್.ಹೆಚ್ ೪ ರ ರಾಮಸಂದ್ರ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಕೋಲಾರದ ಕಡೆಯಿಂದ ಬಂದ ಈಚರ್‍ ಟೆಂಪೋ ಸಂಖ್ಯೆ ಕೆಎ-೦೭-೬೫೩೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕಾರಿಗೆ ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮ ಕಾರಿನಲ್ಲಿದ್ದ ನರೇಂದ್ರ ಮತ್ತು ಇತರರಿಗೆ ಗಾಯಗಳುಂಟಾಗಿರುತ್ತದೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೯-೨೦೦೮ ರಂದು ೦೭೩೦ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ವಾಸಿ ಸುಬ್ರಮಣಿ ಎಂಬುವರು ತಮ್ಮ ದ್ವಿಚಕ್ರವಾಹನ ಸಂಖ್ಯೆ ಕೆಎ-೦೭-ಕೆ-೮೭೧೯ ರಲ್ಲಿ ಶ್ರೀನಿವಾಸಪುರ ತಾಲೂಕು ಮಾಣಿಕೆರೆ ಗ್ರಾಮದಿಂದ ರೆಡ್ಡಿಪಲ್ಲಿ ಗ್ರಾಮಕ್ಕೆ ಹೋಗುವ ಸಲುವಾಗಿ ಗೋಪಲ್ಲಿ ಕ್ರಾಸ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಬಜಾಜ್ ಪಲ್ಸರ್‍ ದ್ವಿಚಕ್ರವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮ ಸುಬ್ರಮಣಿ ರವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ಕೋಲಾರ ತಾಲೂಕು ಚಿಟ್ನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೫-೦೯-೨೦೦೮ ರಂದು ಚಿಂತಾಮಣಿ ನಗರದ ವಾಸಿ ಶ್ರೀನಿವಾಸ ಎಂಬುವರ ಬಾಮೈದ ವೆಂಕಟರಮಣ ರವರು ಚಿಟ್ನಹಳ್ಳಿ ಗ್ರಾಮದ ಶೋಭಾ ಎಂಬುವರನ್ನು ವಿವಾಹವಾಗಿದ್ದು ಶೋಭಾರವರನ್ನು ಕರೆದುಕೊಂಡು ಬರುವ ಸಲುವಾಗಿ ಶ್ರೀನಿವಾಸ ರವರು ಚಿಟ್ನಹಳ್ಳಿ ಗ್ರಾಮಕ್ಕೆಹೋಗಿದ್ದರು. ಆ ಸಮಯದಲ್ಲಿ ಇವರ ಮೇಲೆ ಜಗಳ ತೆಗೆದ ಚಿಟ್ನಹಳ್ಳಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವನು ಕೈಗಳಿಂದ ಮತ್ತು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾನೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೬ ನೇ ಸೆಪ್ಟೆಂಬರ್ ೦೮

September 6, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೬-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯ ವಿರುದ್ದ ದೌರ್ಜನ್ಯ ಎಸಗಿರುವುದರ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಕಪ್ಪಲಮಡಗು ಗ್ರಾಮದ ವಾಸಿ ಜಯಲಕ್ಷ್ಮಮ್ಮ ಎಂಬುವರ ವಿವಾಹ ಮುಳಬಾಗಿಲು ತಾಲೂಕು ಮಣ್ಣಳ್ಳಿ ಗ್ರಾಮದ ವಾಸಿ ಸೋಮಶೇಕರ್‍ ಎಂಬುವರೊಂದಿಗೆ ದಿನಾಂಕ ೦೭-೦೯-೨೦೦೦ ರಂದು ನಡೆದಿದ್ದು ಮದುವೆ ಕಾಲದಲ್ಲಿ ಬಂಗಾರದ ಒಡವೆಗಳು ಮತ್ತು ನಗದುಹಣವನ್ನು ವರದಕ್ಷಿಣೆ ರೂಪದಲ್ಲಿ ನೀಡಲಾಗಿರುತ್ತದೆ. ವಿವಾಹದ ನಂತರ ಸೋಮಶೇಕರ್‍ ತನ್ನ ತಂದೆ ತಾಯಿಗಳೊಂದಿಗೆ ಸೇರಿಕೊಂಡು ಜಯಲಕ್ಷ್ಮಮ್ಮ ರವರಿಗೆ ಇನ್ನೂ ಹೆಚ್ಚಿನ ವರದಕ್ಷಿಣೆ ತರುವಂತೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ದಿನಾಂಕ ೨೧-೦೮-೨೦೦೮ ರಂದು ಆಂದ್ರಪ್ರದೇಶದ ರಾಮಸಮುದ್ರಂ ಗ್ರಾಮದ ವಾಸಿ ವಿಜಯಮ್ಮ ಎಂಬುವರನ್ನು ಎರಡನೇ ಮದುವೆ ಮಾಡಿಕೊಂಡಿರುತ್ತಾರೆ.

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೦೯-೨೦೦೮ ರಂದು ೨೦೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಬೈರನಹಳ್ಳಿ ಗ್ರಾಮದ ವಾಸಿ ಮುನಿನಾರಾಯಣಪ್ಪ ಮತ್ತು ವೆಂಕಟೇಶ್ ಎಂಬುವರು ಹೀರೋಹೋಂಡಾ ದ್ವಿಚಕ್ರವಾಹನ ಸಂಖ್ಯೆ ಕೆಎ-೦೮-ಕೆ-೩೦೨೧ ರಲ್ಲಿ ಎನ್.ಹೆಚ್ ೪ ರಸ್ತೆಯ ರಾಮಸಂದ್ರ ಬಾರ್ಡರ್‍ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ರಾಕ್ಟರ್‍ ಸಂಖ್ಯೆ ಕೆಎ-೦೭-ಟಿ-೮೩೬೮ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಿಗೆ ತೀವ್ರವಾದ ಗಾಯಗಳಾಗಿದ್ದು ಆ ಪೈಕಿ ಮುನಿನಾರಾಯಣಪ್ಪ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

-ಸಾಧಾರಣ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೦೯-೨೦೦೮ ರಂದು ೧೬೩೦ ಗಂಟೆ ಸಮಯದಲ್ಲಿ ಎನ್.ಹೆಚ್ ೪ ರಸ್ತೆಯ ಬೆತ್ತನಿ ಗ್ರಾಮದ ಬಳಿ ಎ.ಪಿ.-೦೪-ಎಲ್-೬೬೬೭ ಸ್ಕಾರ್ಪಿಯೋ ಕಾರಿನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದು ವಾಹನ ಉರುಳಿ ಬಿದ್ದಿರುತ್ತದೆ. ಇದರ ಪರಿಣಾಮ ಕಾರಿನಲ್ಲಿದ್ದ ಕೋಲಾರ ಗಾಂಧಿನಗರ ವಾಸಿ ಶಿವಕುಮಾರ್‍ ಎಂಬುವರಿಗೆ ಗಾಯಗಳುಂಟಾಗಿರುತ್ತದೆ. ಈ ಬಗ್ಗೆ ಪೊಲೀಸರು ಸ್ವಯಂ ಪ್ರಕರಣ ದಾಖಲು ಮಾಡಿಕೊಂಡಿರುತ್ತಾರೆ.

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೦೯-೨೦೦೮ ರಂದು ೧೩೫೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಟಮಕ ಗ್ರಾಮದ ವಾಸಿ ರಾಜಣ್ಣ ಮತ್ತು ಅವರ ಮಗ ಸಂತೋಷ್ ಕುಮಾರು ತಮ್ಮ ದ್ವಿಚಕ್ರವಾಹನ ಟಿ.ವಿ.ಎಸ್ ವಿಕ್ಟರ್‍ ಸಂಖ್ಯೆ ಕೆಎ-೦೭-ಕೆ-೯೯೩೦ ರಲ್ಲಿ ಎನ್.ಹೆಚ್ ೪ ರ ಗಾಜಲದಿನ್ನೆ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಬೆಂಗಳೂರು ಕಡೆಯಿಂದ ಬಂದ ಕೆಎ-೦೩-ಸಿ-೮೫೯೭ ಮಾರುತಿ ವ್ಯಾನ್ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ, ಇದರ ಪರಿಣಾಮ ಸಂತೋಷ್ ಕುಮಾರ್‍ ರವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಕೆರಸಮಂಗಲ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ಕೆರಸಮಂಗಲ ಗ್ರಾಮದ ವಾಸಿ ಅಮರ್‍ ಎಂಬುವರು ದಿನಾಂಕ ೦೪-೦೯-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ತಮ್ಮ ಮನೆಯಲ್ಲಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಗಳಾದ ಚಿಕ್ಕವೆಂಕಟರಮಣಪ್ಪ ಮತ್ತು ಇತರೇ ಇಬ್ಬರು ಅಮರ್‍ ರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಅಮರ್‍ ಮತ್ತು ಅವರ ತಾಯಿಗೆ ಕೈಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಮನಿಯನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ಮನಿಯನಹಳ್ಳಿ ಗ್ರಾಮದ ವಾಸಿ ಮುನಿರಾಜು ಎಂಬುವರು ದಿನಾಂಕ ೦೪-೦೯-೨೦೦೮ ರಂದು ೨೨೦೦ ಗಂಟೆ ಸಮಯದಲ್ಲಿ ತಮ್ಮ ಮನೆಯಲ್ಲಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಗಳಾದ ನಾರಾಯಣಸ್ವಾಮಿ ಮತ್ತು ಇತರೇ ಇಬ್ಬರು ಅಮರ್‍ ರವರ ಮೇಲೆ ಜಗಳ ತೆಗೆದು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ.

ಇತರೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹುಡುಗಿ ಅಪಹರಣವಾಗಿರುವುದರ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ಪೇಟೆ ಚಾಮನಹಳ್ಳಿ ತೋಟಗಳ ಮನೆಯಲ್ಲಿ ವಾಸವಾಗಿರುವ ೧೮ ವರ್ಷದ ಹುಡುಗಿ ಅಪಹರಣಕ್ಕೀಡಾಗಿರುತ್ತಾಳೆ. ದಿನಾಂಕ ೦೫-೦೯-೨೦೦೮ ರಂದು ೧೫೩೦ ಗಂಟೆ ಸಮಯದಲ್ಲಿ ಮಂಜುನಾಥ ಮತ್ತು ಇತರೇ ಇಬ್ಬರು ಸ್ಕಾರ್ಪಿಯೋ ಎ.ಪಿ-೦೪-ಎಲ್-೬೬೬೭ ಕಾರ್‍ ನಲ್ಲಿ ಹುಡುಗಿಯನ್ನು ಅಪಹರಿಸಿಕೊಂಡು ಹೋಗಿರುತ್ತಾರೆ. ಅಪಹರಣಕ್ಕೀಡಾದ ಹುಡುಗಿಯ ತಂದೆ ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಬೆಂಗಳೂರು ಹೊಂಗಸಂದ್ರ ವಾಸಿ ಗೀತಾ ಎಂಬುವರ ವಿವಾಹ ಆರು ವರ್ಷಗಳ ಹಿಂದೆ ಮಾಲೂರು ತಾಲೂಕು ಮಡಿವಾಳ ಗ್ರಾಮದ ಸೋಮಶೇಖರ್‍ ರವರೊಂದಿಗೆ ನಡೆದಿರುತ್ತದೆ. ವಿವಾಹನಂತರ ಮೋಟಾರ್‍ ಸೈಕಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಆಗಾಗ್ಗ ಜಗಳ ತೆಗೆಯುತ್ತಿದ್ದು ಸೋಮಶೇಖರ್‍ ದಿನಾಂಕ ೦೨-೦೯-೨೦೦೮ ರಂದು ತನ್ನ ತಾಯಿ ಕುಳ್ಳಮ್ಮ ಎಂಬುವರು ಗೀತಾ ರವರಿಗೆ ಕೈಗಳಿಂದ ಹೊಡೆದು ಕಾಲಿನಿಂ ಒದ್ದು ಹಲ್ಲೆ ನಡೆಸಿ ಹೆಚ್ಚಿನ ವರದಕ್ಷಿಣೆ ತರುವಂತೆ ಒತ್ತಾಯಿಸಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿರುತ್ತಾರೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಸೀಮೆಎಣ್ಣೆ ಸ್ಟೊವ್ ಅಂಟಿಸುವಾಗ ಬೆಂಕಿ ಹತ್ತಿಕೊಂಡು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೋಲಾರ ಗಾಂಧಿನಗರದಲ್ಲಿ ಸಂಭವಿಸಿರುತ್ತದೆ. ಗಾಂಧಿನಗರದ ವಾಸಿ ಶ್ರೀನಿವಾಸ್ (೩೫) ಎಂಬುವರು ದಿನಾಂಕ ೨೧-೦೮-೨೦೦೮ ರಂದು ತಮ್ಮ ಮನೆಯಲ್ಲಿ ಅಡುಗೆ ಮಾಡುವ ಸಲುವಾಗಿ ಸೀಮೆಎಣ್ಣೆ ಸ್ಟವ್ ಅಂಟಿಸುತ್ತಿದ್ದಾಗ ಬೆಂಕಿ ಬಟ್ಟೆಗಳಿಗೆ ಹತ್ತಿಕೊಂಡು ಸುಟ್ಟಗಾಯಗಳಾಗಿದ್ದು ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದ ಕಾರಣ ಶ್ರೀನಿವಾಸ್ ರವರು ದಿನಾಂಕ ೦೫-೦೯-೨೦೦೮ ರಂದು ೦೦೩೦ ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ೦೨

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ನಲ್ಲತಿಮ್ಮನಹಳ್ಳಿ ಗ್ರಾಮದ ವಾಸಿ ಮಂಜುನಾಥ್ ಎಂಬುವರ ತಂಗಿ ಮಾಲಾ (೧೮) ಎಂಬವರು ಕಾಣೆಯಾದವರು. ದಿನಾಂಕ ೦೧-೦೯-೨೦೦೮ ರಂದು ೦೮೩೦ ಗಂಟೆ ಸಮಯದಲ್ಲಿ ತನ್ನ ಮನೆಯಿಂದ ಹೊರಗೆ ಹೋದ ಮಾಲಾ ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾಳೆ.

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಮಂಗಾಪುರ ಗ್ರಾಮದ ವಾಸಿ ಬೈಸಮ್ಮ ಎಂಬುವರ ಮಗಳಾದ ಶಕುಂತಲಾ ಎಂಬವರು ಕಾಣೆಯಾದವರು. ದಿನಾಂಕ ೦೮-೦೮-೨೦೦೮ ರಂದು ೧೬೩೦ ಗಂಟೆ ಸಮಯದಲ್ಲಿ ತನ್ನ ಮನೆಯಿಂದ ಹೊರಗೆ ಹೋದ ಶಕುಂತಲಾ ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾಳೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಜೂಜಾಟ ದಾಳಿ: ನಾಲ್ವರ ಬಂಧನ, ದ್ವಿಚಕ್ರವಾಹನಗಳ ವಶ

September 5, 2008

ದಿನಾಂಕ ೦೫-೦೯-೨೦೦೮ ರಂದು ಮುಳಬಾಗಿಲು ವೃತ್ತ ನಿರೀಕ್ಷಕರಾದ ಟಿ.ಆರ್‍. ಜಯಶಂಕರ್‍ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ಸಿಬ್ಬಂದಿಯೊಡನೆ ಆವಣಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಬೆಟ್ಟದ ಸಮೀಪ ದಾಳಿ ನಡೆಸಿ ಕೋಳಿ ಪಂದ್ಯ ಜೂಜಾಟದಲ್ಲಿ ನಿರತರಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುತ್ತಾರೆ.  ಕಾರ್ಯಾಚರಣೆ ವೇಳೆ ಸ್ಥಳದಲ್ಲಿದ್ದ ನಾಲ್ಕು ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿರುತ್ತಾರೆ.

ಬಂಧಿತ ಆರೋಪಿಗಳ ವಿವರ:

  • ರಾಮಚಂದ್ರಪ್ಪ ಸಾಕುಲಕುಪ್ಪ ಗ್ರಾಮ ವಿ-ಕೋಟೆ ಆಂದ್ರಪ್ರದೇಶ
  • ಹರೀಶ್ ರಾಮನಲ್ಲೂರು ಗ್ರಾಮ
  • ಚಿನ್ನಪ್ಪಯ್ಯ ಕಂಡಹಳ್ಳಿ
  • ಮುನಿಯಪ್ಪ ವಿಜಲಾಪುರ

ಈ ಬಗ್ಗೆ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೫ ನೇ ಸೆಪ್ಟೆಂಬರ್ ೦೮

September 5, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೫-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸುಲಿಗೆ ಮತ್ತು ಕೊಲೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೦೯-೨೦೦೮ ರಂದು ೨೦೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ನಾಚಗುಂಡ್ಲಹಳ್ಳಿ ಗ್ರಾಮದ ವಾಸಿ ಮುನಿರಾಜು ಎಂಬುವರು ಟ್ರಾಕ್ಟರ್‍ ಟೈರುಗಳನ್ನು ಕೊಂಡುಕೊಂಡು ಬರುವ ಸಲುವಾಗಿ ಮದನಪಲ್ಲಿಗೆ ಹೋಗಲು ಆಂದ್ರಪ್ರದೇಶದ ರಾಮಸಂದ್ರ ಗ್ರಾಮಕ್ಕೆ ಹೋಗಿ ಕಾರಣಾಂತರಗಳಿಂದ ಹಿಂದಿರುಗಿ ತಮ್ಮ ಗ್ರಾಮಕ್ಕೆ ಬರುತ್ತಿದ್ದರು. ಆ ಸಮಯದಲ್ಲಿ ಬುರುಡೇಪಲ್ಲಿ ಗ್ರಾಮದ ಸಮೀಪ ತನ್ನ ಟಿ.ವಿ.ಎಸ್ ದ್ವಿಚಕ್ರವಾಹನ ಚೈನ್ ಕಳಚಿಕೊಂಡಿದ್ದು ವಾಹನವನ್ನು ತಳ್ಳಿ ಕೊಂಡು ಹೋಗುತ್ತಿದ್ದರು. ಆಗ ಎದುರುಗಡೆಯಿಂದ ಬಂದ ಮೂರು ಜನರು ಮುನಿರಾಜು ರವರನ್ನು ಅಡ್ಡಗಟ್ಟಿ ಅವರ ಬಳಿ ಇದ್ದ ರೂ. ೪೦,೬೦೦/ ಗಳನ್ನು ಕಸಿದುಕೊಂಡು ಮುನಿರಾಜು ರವರನ್ನು ಕೊಲೆ ಮಾಡುವ ಉದ್ದೇಶದಿಂದ ಬಾವಿಯೊಂದರೊಳಗೆ ತಳ್ಳಿ ಹೋಗಿರುತ್ತಾರೆ. ಆರೋಪಿಗಳ ಪೈಕಿ ಒಬ್ಬನು ಬುರುಡೇಪಲ್ಲಿ ಗ್ರಾಮದ ವಾಸಿ ಶ್ರೀನಿವಾಸ ಎಂದು ಮುನಿರಾಜುರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೯-೨೦೦೮ ರಂದು ೧೦೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ವಾಸಿ ವಿ.ಶ್ರೀನಿವಾಸ ಮತ್ತು ಇತರೇ ೪ ಜನರು ಕೆಎ-೪೦-೧೯೦೧ ಸಂಖ್ಯೆಯ ಆಟೋವಿನಲ್ಲಿ ನರಸಾಪುರದಿಂದ ಕೋಲಾರಕ್ಕೆ ಬರುವ ಸಲುವಾಗಿ ಎನ್.ಹೆಚ್ ೪ ರಸ್ತೆಯ ಶಾಂತಿಲ್ಯಾಣ ಮಂಠಪದ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಆಟೋಚಾಲಕ ತನ್ನ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದು ಅಟೋ ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಉರುಳಿ ಬಿದ್ದಿರುತ್ತದೆ. ಇದರ ಪರಿಣಾಮ ಆಟೋವಿನಲ್ಲಿದ್ದ ಎಲ್ಲರಿಗೂ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೪

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಕುಡುವುನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೪-೦೯-೨೦೦೮ ರಂದು ೦೮೦೦ ಗಂಟೆ ಸಮಯದಲ್ಲಿ ಕುಡುವನಹಳ್ಳಿ ಗ್ರಾಮದ ವಾಸಿ ಆರ್‍.ಜಯರಾಮರೆಡ್ಡಿ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಚಂದ್ರಪ್ಪ, ಮುನಿಸ್ವಾಮಿ ಮತ್ತು ನಾರಾಯಣಪ್ಪ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು. ಕೈಗಳಿಂದ ಹೊಡೆದು ಪ್ರಾಣಬೆದರಿಕೆ ಹಾಕಿರುತ್ತಾರೆ. ಆರ್‍.ಜಯರಾಮರೆಡ್ಡಿ ರವರಿಗೆ ಸೇರಿದ ಜಮೀನಿನಲ್ಲಿ ಆರೋಪಿ ಚಂದ್ರಪ್ಪ ತನ್ನ ಹಸುಗಳನ್ನು ಕಟ್ಟುತ್ತಿದ್ದು ಈ ವಿಷಯದ ಹಿನ್ನೆಲೆಯಲ್ಲಿ ಕೃತ್ಯ ಸಂಭವಿಸಿರುತ್ತದೆ.

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ದಿನ್ನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೭-೦೮-೨೦೦೮ ರಂದು ೦೭೩೦ ಗಂಟೆ ಸಮಯದಲ್ಲಿ ದಿನ್ನಹಳ್ಳಿ ಗ್ರಾಮದ ವಾಸಿ ತಿಮ್ಮರಾಯಪ್ಪ ರವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿ ತಿಮ್ಮರಾಜು ಮತ್ತು ಇತರೇ ಇಬ್ಬರು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ. ಜಮೀನಿನ ಭಾಗ ಹಂಚಿಕೆಯ ವಿಚಾರದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಮತ್ತೊಂದು ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಮಂಚಿಕಲ್ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೨-೦೯-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ಮಂಚಿಕಲ್ ಗ್ರಾಮದ ವಾಸಿ ಶಂಕರಪ್ಪ ಎಂಬುವರ ಮೇಲೆ ಜಗಳ ತೆಗೆದ ಬನಹಳ್ಳಿ ಗ್ರಾಮದ ವಾಸಿ ರಮೇಶ್ ಎಂಬುವನು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾನೆ. ಶಂಕರಪ್ಪ ರವರ ಎತ್ತಿನಗಾಡಿಯ ಚಕ್ರ ರಮೇಶ್ ಚಾಲನೆ ಮಾಡಿಕೊಂಡು ಬರುತ್ತಿದ್ದ ಆಟೋವಿಗೆ ತಾಕಿದ್ದು ಈ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣಗಳು ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಶೇಷಾಪುರ ಗ್ರಾಮದಲ್ಲಿ ಕೃತ್ಯ ಸಮಭವಿಸಿರುತ್ತದೆ. ದಿನಾಂಕ ೦೪-೦೯-೨೦೦೮ ರಂದು ೨೦೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಬಲ್ಲ ಗ್ರಾಮದ ವಾಸಿ ಶಂಕರೇಗೌಡ ಮತ್ತು ಶೇಷಾಪುರ ಗ್ರಾಮದ ವಾಸಿಗಳಾದ ಬಾಬು ಮತ್ತು ನಾಗಪ್ಪ ಎಂಬುವರು ಪರಸ್ಪರ ಜಗಳ ಮಾಡಿಕೊಂಡು ದೊಣ್ಣೆಗಳಿಂದ ಕೈಗಳಿಂದ ಹೊಡೆದಾಡಿಕೊಂಡಿರುತ್ತಾರೆ. ಆಸ್ತಿ ವಿಚಾರದ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿದ್ದು ಈ ಬಗ್ಗೆ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಅಕ್ರಮ ಮರಳು ಸಾಗಾಣಿಕೆ: ಒಂದು ಲಾರಿ ವಶ, ಇಬ್ಬರ ಬಂಧನ

September 5, 2008

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಿರಿಯ ಅಭಿಯಂತರರಾದ ಗಂಗಾದರಯ್ಯ ಹಾಗೂ ಅವರ ಸಿಬ್ಬಂದಿಯವರು ಹಾಗೂ ಮುಳಬಾಗಿಲು ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಜಂಟಿ ಕಾರ್ಯಾಚರಣೆ ನಡೆಸಿ ಮುಳಬಾಗಿಲು ತಾಲೂಕು ಸೊಣ್ಣವಾಡಿ ಗ್ರಾಮದ ಬಳಿ ಅಕ್ರಮವಾಗಿ ಮರಳನ್ನು ಸಾಗಾಣಿಕೆ ಮಾಡುತ್ತಿದ್ದ ಲಾರಿಯನ್ಜು ನಿಲ್ಲಿಸಿ ವಶಕ್ಕೆ ಪಡೆದುಕೊಂಡಿರುತ್ತಾರೆ.  ಲಾರಿ ಚಾಲಕ ಹಾಗೂ ಮಾಲೀಕರ ವಿರುದ್ದ ಪ್ರಕರಣ ದಾಖಲಾಗಿದ್ದು ಆ ಪೈಕಿ ಲಾರಿ ಚಾಲಕರಾದ ಮಹಬೂಬ್ ಸಾಬ್ ಮತ್ತು ಅತುಲ್ಲಾ ಎಂಬುವರನ್ನು ಬಂಧಿಸಲಾಗಿರುತ್ತದೆ.


ಜೂಜಾಟ ದಾಳಿ: ೬ ಜನರ ಬಂಧನ. ರೂ. ೧೨೦೦/ ವಶ

September 4, 2008

ದಿನಾಂಕ ೦೪-೦೮-೨೦೦೮ ರಂದು ೧೩೩೦ ಗಂಟೆ ಸಮಯದಲ್ಲಿ ಶ್ರಿನಿವಾಸಪುರ ಪೊಲೀಸ್ ಠಾಣೆ ಆರಕ್ಷಕ ಉಪನಿರೀಕ್ಷಕರಾದ ಶ್ರೀ ಕೆ.ನರೇಂದ್ರ ಕುಮಾರ್‍ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ಶ್ರೀನಿವಾಸಪುರ ತಾಲೂಕು ಚಿಕ್ಕತಿಮ್ಮನಹಳ್ಳಿ ಗ್ರಾಮದ ಬಳಿ ಜೂಜಾಟದಲ್ಲಿ ತೊಡಗಿದ್ದ ಕದಿರರೆಡ್ಡಿ ಮತ್ತು ಇತರೇ ಮೂರು ಜನರನ್ನು ಬಂಧಿಸಿರುತ್ತಾರೆ. ಆರೋಪಿಗಳು ರೂ. ೧೨೦೦/ ಗಳನ್ನು ಪಣವಾಗಿಟ್ಟು ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್‍ ಬಾಹರ್‍ ಎಂಬ ಜೂಜಾಟದಲ್ಲಿ ನಿರತರಾಗಿದ್ದು ಸಿಕ್ಕಿ ಬಿದ್ದಿರುತ್ತಾರೆ. ಕಾರ್ಯಾಚರಣೆ ವೇಳೆ ರೂ. ೧೨೦೦/ ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿರುತ್ತಾರೆ.

ಈ ಬಗ್ಗೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಬಂಧಿತ ಆರೋಪಿಗಳನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೪ ನೇ ಸೆಪ್ಟೆಂಬರ್ ೦೮

September 4, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೪-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೯-೨೦೦೮ ರಂದು ೧೦೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಸೂಲಿಕುಂಟೆ ಗ್ರಾಮದ ವಾಸಿ ಬಾಬಾ ಜಾನ್ ರವರು ಎನ್.ಹೆಚ್ ೪ ರಸ್ತೆಯ ಗಾಜಲದಿನ್ನೆ ಗ್ರಾಮದ ಗೇಟ್ ಬಳಿ ಸೈಕಲನ್ನು ತಳ್ಳಿಕೊಂಡು ಬರುತ್ತಿದ್ದರು. ಆ ಸಮಯದಲ್ಲಿ ಮುಳಬಾಗಿಲು ಕಡೆಯಿಂದ ಬಂದ ದ್ವಿಚಕ್ರವಾಹನ ಸಂಖ್ಯೆ ಕೆಎ-೦೪-ಇವಿ-೬೬೬೪ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ನಡೆದುಕೊಂಡು ಹೋಗುತ್ತಿದ್ದ ಬಾಬಾಜಾನ್ ರವರಿಗೆ ಡಿಕ್ಕಿ ಹೊಡೆಸಿ ತನ್ನ ವಾಹನದೊಂದಿಗೆ ಸ್ಥಳದಿಂದ ಹೊರಟುಹೋಗಿರುತ್ತಾರೆ. ಇದರ ಪರಿಣಾಮ ಬಾಬಾಜಾನ್ ರವರ ತಲೆಯ ಹಿಂಬಾಗಕ್ಕೆ ತೀವ್ರವಾದ ಗಾಯಗಳಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಕೊಗ್ಗಲನತ್ತ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೨-೦೯-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ನರಸಿಂಹಪ್ಪ ಎಂಬುವರ ಮಗಳು ತನ್ನ ಗ್ರಾಮದ ಬಳಿ ಹಸುಗಳನ್ನು ಮೇಯಿಸುತ್ತಿದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿ ಕಾಂತರಾಜ ಎಂಬುವನು ಆಕೆಯ ಬಳಿ ಅಸಭ್ಯವಾಗಿ ವರ್ತಿಸಿರುದ್ದು ಇದನ್ನು ಪ್ರತಿರೋಧಿಸಿದ ಆಕೆಯನ್ನು ಪಕ್ಕದಲ್ಲಿ ಹಳ್ಳದಲ್ಲಿದ್ದ ನೀರಿನಲ್ಲಿ ಮುಳುಗಿಸಲು ಪ್ರಯತ್ನ ಪಟ್ಟಿರುತ್ತಾನೆ. ಈ ವಿಷಯವನ್ನು ಗ್ರಾಮದ ಹಿರಿಯರಿಗೆ ತಿಳಿಸಿದ್ದಕ್ಕೆ ಕುಪಿತಗೊಂಡ ಕಾಂತರಾಜು ಮತ್ತು ಇತರೇ ೬ ಜನರು ಅಕ್ರಮಗುಂಪು ಕಟ್ಟಿಕೊಂಡು ಮಾರಕಾಯುಧಗಳನ್ನು ಹಿಡಿದುಕೊಂಡು ನರಸಿಂಹಪ್ಪ ರವರ ಮನೆಗೆ ಅಕ್ರಮ ಪ್ರವೇಶ ಮಾಡಿ ದೊಣ್ಣೆ ಮಚ್ಚುಗಳಿಂದ ಹೊಡೆದು ಪ್ರಾಣಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ವೇಮಗಲ್ ಗ್ರಾಮದ ವಾಸಿ ಶ್ರೀಮತಿ ಲಕ್ಷ್ಮಮ್ಮ ಎಂಬುವರ ಮಗಳಾದ ಕುಮಾರಿ.ಶಾಂತಮ್ಮ (೧೬) ಎಂಬುವರು ಕಾ