ದಿನದ ಅಪರಾಧಗಳ ಪಕ್ಷಿನೋಟ ೧೦ ನೇ ಜುಲ್ಯೆ ೨೦೦೯

July 9, 2009

ಕೋಲಾರ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೧೦-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೩

ವೇಮಗಲ್ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೭-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ಚೌಡದೇನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಅಡಿಗೆ ಕೋಣೆಗೆ ಹಾಕಿದ್ದ ಬೀಗವನ್ನು ಕಿತ್ತು ಹಾಕಿ ಒಳಗೆ ಪ್ರವೇಶ ಮಾಡಿ ೨ ಗ್ಯಾಸ್ ಸಿಲಿಂಡರ್‍, ೧೦ ಲೀಟರ್‍ ಪಾಮಾಯಿಲ್ ಎಣ್ಣೆ ಮತ್ತು ಒಂದು ವಾಟರ್‌ ಪಿಲ್ಟರ್‌ನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಸ್ತುಗಳ ಒಟ್ಟು ಬೆಲೆ ರೂ ೬,೦೦೦/-. ಈ ಬಗ್ಗೆ ಶಾಲೆಯ ಮುಖ್ಯೋಪಾದ್ಯಾಯರಾದ ಕಮಲ ಡಿ.ವಿ. ಎಂಬುವರು ದೂರನ್ನು ನೀಡಿರುತ್ತಾರೆ,  

ವೇಮಗಲ್ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೭-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ದೊಡ್ಡವಲ್ಲಬ್ಬಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಅಡಿಗೆ ಕೋಣೆಗೆ ಹಾಕಿದ್ದ ಬೀಗವನ್ನು ಕಿತ್ತು ಹಾಕಿ ಒಳಗೆ ಪ್ರವೇಶ ಮಾಡಿ ೨ ಗ್ಯಾಸ್ ಸಿಲಿಂಡರ್‍ ಮತ್ತು ಒಂದು ಗ್ರೈಂಡರ್‌ನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಸ್ತುಗಳ ಒಟ್ಟು ಬೆಲೆ ರೂ ೯,೦೦೦/-. ಈ ಬಗ್ಗೆ ಶಾಲೆಯ ಮುಖ್ಯೋಪಾದ್ಯಾಯರಾದ ಶ್ರೀರಾಮಚಂದ್ರ ಎಂಬುವರು ದೂರನ್ನು ನೀಡಿರುತ್ತಾರೆ,  

ವೇಮಗಲ್ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೭-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ಕುರುಗಲ್ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಅಡಿಗೆ ಕೋಣೆಗೆ ಹಾಕಿದ್ದ ಬೀಗವನ್ನು ಕಿತ್ತು ಹಾಕಿ ಒಳಗೆ ಪ್ರವೇಶ ಮಾಡಿ ೩ ಗ್ಯಾಸ್ ಸಿಲಿಂಡರ್‍   ಮತ್ತು ಒಂದು ಗ್ರೈಂಡರ್‌‌ನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಸ್ತುಗಳ ಒಟ್ಟು ಬೆಲೆ ರೂ ೭,೫೦೦/-. ಈ ಬಗ್ಗೆ ಶಾಲೆಯ ಮುಖ್ಯೋಪಾದ್ಯಾಯರಾದ ಶ್ರೀ ಚಿನ್ನಯ್ಯ ಎಂಬುವರು ದೂರನ್ನು ನೀಡಿರುತ್ತಾರೆ,  

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ  ೦೯-೦೭-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಮಲ್ಲೇಕುಪ್ಪ ಗ್ರಾಮದ ವಾಸಿಯಾದ ರಾಮಚಂದ್ರಪ್ಪ ಎಂಬವರು ಹಳೇಕುಪ್ಪ ಗ್ರಾಮದ ಬಳಿ ಹೊಂಗೆ ಮರದ ಕೆಳಗೆ ಮಲಗಿದ್ದರು. ಆ ಸಮಯದಲ್ಲಿ ಬಂದ ಲಾರಿ ಸಂಖ್ಯೆ ಕೆಎ-೫೩-೬೧೩೪ರ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ  ಮಾಡಿಕೊಂಡು ಬಂದು ರಾಮಚಂದ್ರಪ್ಪ ರವರ ಕಾಲುಗಳ ಮೇಲೆ ಹತ್ತಿಸಿಕೊಂಡು ಹೋಗಿರುತ್ತಾನೆ. ಪರಿಣಾಮ ಎರೆಡು ಕಾಲುಗಳಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೦೯-೦೭-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್‌‌ಟೇಬಲ್ ಸಂಖ್ಯೆ ೬೬೨ ಪಿ.ಬಾಬು ಎಂಬುವರು ಕೋಲಾರ ನಗರದ ಪಲ್ಲವಿ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ಆಟೋ ಸಂಖ್ಯೆ ಕೆಎ-೦೬-ಎ-೬೩೨ ರ ಚಾಲಕನಾದ ಮಂಜುನಾಥ ಎಂಬುವರು ತನ್ನ ಆಟೋ ಅನ್ನು ನಿಲುಗಡೆ ಇಲ್ಲದ ಸ್ಥಳದಲ್ಲಿ ನಿಲ್ಲಿಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸುತ್ತಿದ್ದು. ಆಟೋ ವನ್ನು ತೆಗೆಯುವಂತೆ ಹೇಳಿದ್ದಕ್ಕೆ ಅವಾಚ್ಚಶಬ್ದಗಳಿಂದ ಬೈದು, ಸಮವಸ್ತ್ರವನ್ನು ಹಿಡಿದು ಎಳೆದಾಡಿ, ಕೈಯಿಂದ ಮುಖಕ್ಕೆ ಗುದ್ದಿ ರಕ್ತಗಾಯಪಡಿಸಿ ಸರ್ಕಾರಿ ಕೆಲಸಕ್ಕೆ ಅಡಚಣೆಯನ್ನುಂಟುಮಾಡಿರುತ್ತಾನೆ.   

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ  

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:   

-ಸ್ಥಳ ದಂಡ ಮೊತ್ತ: ರೂ.   

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೯ ನೇ ಜುಲ್ಯೆ ೨೦೦೯

July 8, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೯-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ಟೌನ್ ಆಂಜನೇಯ ಸ್ವಾಮಿ ಗುಡಿ ಬೀದಿಯ ವಾಸಿ ವೆಂಕಟೇಶ್ ಎಂಬುವರ ಹೀರೋಹೋಂಡಾ ಸ್ಪ್ಲೆಂಡರ್‍ ಸಂಖ್ಯೆ ಕೆಎ-೦೬-ಎಸ್-೬೬೮೦ ದ್ವಿಚಕ್ರವಾಹನ ಕಳುವಾಗಿರುತ್ತದೆ. ದಿನಾಂಕ ೦೮-೦೭-೨೦೦೯ ರಮದು ೨೧೩೦ ಗಂಟೆ ಸಮಯದಲ್ಲಿ ವೆಂಕಟೇಶ್ ರವರು ತಮ್ಮ ವಾಹನವನ್ನು ತಮ್ಮ ಮನೆಯ ಕಾಂಪೌಂಡ್ ಬಳಿ ನಿಲ್ಲಿಸಿದ್ದ ಸಮಯದಲ್ಲಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಾಹನದ ಬೆಲೆ ರೂ. ೨೪,೦೦೦/ ಆಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಮುಳಬಾಗಿಲು ತಾಲ್ಲುಕು ಮುರಕನಕುಂಟೆ ಗ್ರಾಮದ ವಾಸಿಯಾದ ಮಮ್ತಾಜ್ ಮತ್ತು ಅದೇ ಗ್ರಾಮದ ವಾಸಿಯಾದ ಕೃಷ್ಣೇಗೌಡ ಎಂಬುವರು ನಡುವೆ ಸರ್ವೆ ನಂಬರ್‍  ೮೯ ರಲ್ಲಿ ಜಮೀನಿನ ವಿವಾದವಿದ್ದು  ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ.  ಈಗಿರುವಾಗ ದಿನಾಂಕ:  ೦೮-೦೭-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಕೃಷ್ಣಗೌಡ ರವರು ಜಮೀನನಲ್ಲಿ ಉಳುಮೆ ಮಾಡಲು ಹೋಗಿದ್ದು ಅಡ್ಡಿಪಡಿಸಲು ಹೋದ ಮಮ್ತಾಜ್ ರವರನ್ನು  ಅವಾಚ್ಯ ಶಬ್ದಗಳಿಂದ ಬೈದು ಕೈ ಮತ್ತು ಕಲ್ಲಿನಿಂದ ಹೊಡೆದ ಗಾಯಪಡಿಸಿರುತ್ತಾರೆ.

ಇತರೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಹರಟಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೭-೦೭-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಹರಟಿ ಗ್ರಾಮದ ವಾಸಿ ಎನ್.ವಿ.ಪ್ರಕಾಶ್ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಸುಬ್ರಮಣಿ, ಮುರುಗಪ್ಪ ಮತ್ತು ಜನಾರ್ಧನ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾರೆ. ಪರಸ್ಪರರ ನಡುವೆ ಇದ್ದ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:  ‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೮

-ಸ್ಥಳ ದಂಡ ಮೊತ್ತ: ರೂ. ೩೦೦೦/

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೮ ನೇ ಜುಲ್ಯೆ ೨೦೦೯

July 7, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಕಾರಂಜಿಕಟ್ಟೆ ೨ ನೇ ಕ್ರಾಸ್ ವಾಸಿ ಶ್ರೀಮತಿ ಮಂಜುಳಮ್ಮ ಎಂಬುವರ ವಾಸದ ಮನೆಯಲ್ಲಿ ಕಳವು ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೭-೦೭-೨೦೦೯ ರಂದು ರಾತ್ರಿ ಮಂಜುಳಮ್ಮ ಮನೆಯ ಬೀಗ ಹೊಡೆದು ಒಳ ಪ್ರವೇಶಿಸಿದ ಯಾರೋ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣಗಳು ಹಾಗೂ ರೂ, ೫,೦೦೦/ ನಗದನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಹೂವಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೪-೦೭-೨೦೦೯ ರಂದು ೦೭೩೦ ಗಂಟೆ ಸಮಯದಲ್ಲಿ ಹೂವಳ್ಳಿ ಗ್ರಾಮದ ವಾಸಿ ರಾಮಚಂದ್ರ (೨೮) ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಮುನಿವೆಂಕಟಪ್ಪ, ಆಂಜನಪ್ಪ, ನಾರಾಯಣಸ್ವಾಮಿ, ವೆಂಕರಾಮ, ಬೈರಮ್ಮ, ಮತ್ತು ಕಮಲಮ್ಮ ಎಂಬುವರು ಅಕ್ರಮಗುಂಪು ಕಟ್ಟಿಕೊಂಡು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಮತ್ತು ರಾಡುಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಈ ಸಂಬಂಧ ಸ್ಥಳದಲ್ಲಿ ಎರಡೂ ಗುಂಪಿನವರು ಹೊಡೆದಾಡಿಕೊಂಡು ಗಲಾಟೆ ಮಾಡಿಕೊಂಡಿದ್ದು ದೂರು ಮತ್ತು ಪ್ರತಿದೂರು ಬಂದ ಹಿನ್ನೆಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಹಲ್ಲೆ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ದಳಸನೂರು ಅರಣ್ಯ ಪ್ರದೇಶದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೭-೦೭-೨೦೦೯ ರಂದು ೧೪೩೦ ಗಂಟೆ ಸಮಯದಲ್ಲಿ ವನಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಕಣಾಚಾರಿ ಎಂಬುವರ ಮೇಲೆ ಜಗಳ ತೆಗೆದ ಪಾಳ್ಯ ಗ್ರಾಮದ ವಾಸಿಗಳಾದ ಕದಿರುವೇಲು ಹಾಗೂ ಮತ್ತಿತರೇ ಮೂರು ಜನರು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:  ‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೮

-ಸ್ಥಳ ದಂಡ ಮೊತ್ತ: ರೂ. ೩೦೦೦/

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೭ ನೇ ಜುಲ್ಯೆ ೨೦೦೯

July 6, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೭-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ವಾಹನಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ಟೌನ್ ಜಹಗೀರ್‍ ಮೊಹಲ್ಲಾದ ವಾಸಿ ಅಸ್ಲಂ ಪಾಷ ಎಂಬುವರಿಗೆ ಸೇರಿದ ಟಿ.ವಿ.ಎಸ್ ಎಕ್ಸ್.ಎಲ್ ಸಂಖ್ಯೆ ಕೆಎ-೦೭-ಕ್ಯೂ-೫೯೯೬ ದ್ವಿಚಕ್ರವಾಹನ ಕಳುವಾಗಿರುತ್ತದೆ. ದಿನಾಂಕ ೦೬-೦೭-೨೦೦೯ ರಂದು ೨೨೩೦ ಗಂಟೆ ಸಮಯದಲ್ಲಿ ಅಸ್ಲಂಪಾಷಾ ರವರು ತಮ್ಮ ದ್ವಿಚಕ್ರವಾಹನವನ್ನು ಮುಳಬಾಗಿಲು ಟೌನ್ ಹೈದರ್‍ವಲ್ಲಿ ದರ್ಗಾದ ಮುಂಭಾಗ ನಿಲ್ಲಿಸಿದ್ದ ಸಮಯದಲ್ಲಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ದ್ವಿಚಕ್ರವಾಹನದ ಬೆಲೆ ರೂ. ೨೨,೦೦೦/ ಆಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಮಾರಣಾಂತಿ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಆಂದ್ರಪ್ರದೇಶ ವಾಸಿಗಳಾದ ಕೇಶವ, ರವಣ ಮತ್ತು ಚಂದ್ರ ಎಂಬುವರು ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು ದಿನಾಂಕ ೦೬-೦೭-೨೦೦೯ ರಂದು ೧೬೩೦ ಗಂಟೆ ಸಮಯದಲ್ಲಿ ತಮ್ಮ ಗ್ರಾಮಕ್ಕೆ ಹೋಗಲು ಮೂವರೂ ಬಜಾಜ್ ಪಲ್ಸರ್‍ ದ್ವಿಚಕ್ರವಾಹನ ಸಂಖ್ಯೆ ಎಪಿ-೦೩-ಹೆಚ್-೭೬೪೧ ರಲ್ಲಿ ತೂಪಲ್ಲಿ ಕೆರೆ ಕಟ್ಟೆ ಕ್ರಾಸ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ದ್ವಿಚಕ್ರವಾಹನವನ್ನು ಚಾಲನೆ ಮಾಡುತ್ತಿದ್ದ ರವಣ ತನ್ನ ವಾಹನವನ್ನು ಅತಿವೇಗ ಮತ್ತು

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಆರ್‍.ತಿಮ್ಮಸಂದ್ರ ಗ್ರಾಮದ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೬-೦೭-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಆರ್‍.ತಿಮ್ಮಸಂದ್ರ ಗ್ರಾಮದ ವಾಸಿ ಟಿ.ಹೆಚ್.ಆಂಜನೇಯಪ್ಪ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಟಿ.ಹೆಚ್.ನಾಗರಾಜ ಮತ್ತು ಸುಗುಣಮ್ಮ ಎಂಬುವರು ಕೈಗಳಿಂದ ಮತ್ತು ದೊಣ್ಣೆಯಿಂದ ಹೊಡೆದು ಗಾಯಪಡಿಸಿ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾರೆ. ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:  ‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಅಶ್ಲೀಲ ಸಿ.ಡಿ/ಡಿ.ವಿ.ಡಿ ಮಾರಾಟ: ಇಬ್ಬರ ಬಂಧನ

July 6, 2009

ದಿನಾಂಕ ೦೬-೦೭-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಶ್ರೀ ಡಿ.ಆರ್‍.ಪ್ರಕಾಶ್ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ಸಿಬ್ಬಂದಿಯೊಡನೆ ಶ್ರೀನಿವಾಸಪುರ ಟೌನ್ ವಿಷ್ಣು ಎಲೆಕ್ಟ್ರಾನಿಕ್ಸ್ ಮತ್ತು ಜಹೀರ್‍ ಸಿ.ಡಿ ಅಂಗಡಿಗಳಲ್ಲಿ ಪ್ರತ್ಯೇಕವಾಗಿ ದಾಳಿ ನಡೆಸಿ ಅಕ್ರಮವಾಗಿ ಅಶ್ಲೀಲ ಸಿ.ಡಿ ಮತ್ತು ಡಿ.ವಿ.ಡಿ ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುತ್ತಾರೆ. ಆರೋಪಿಗಳಾದ ಶ್ರೀನಿವಾಸಪುರ ಟೌನ್ ರಾಮಕೃಷ್ಣ ಬಡಾವಣೆ ವಾಸಿ ರವಿ ಹಾಗೂ ಕೊಳ್ಳೂರು ಕಾಲೋನಿ ವಾಸಿ ರಾಮು ಎಂಬುವರು ಅಕ್ರಮ ಮಾರಾಟದಲ್ಲಿ ತೊಡಗಿದ್ದು ಬಂಧಿತರಾಗಿರುತ್ತಾರೆ. ಕಾರ್ಯಾಚರಣೆ ವೇಳೆ ಅಕ್ರಮ ಮಾರಾಟಕ್ಕೆ ಬಳಸುತ್ತಿದ್ದ ಸಿ.ಡಿ ಮತ್ತು ಡಿ.ವಿ.ಡಿ ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಈ ಬಗ್ಗೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿರುತ್ತದೆ.


ಅಕ್ರಮ ಮದ್ಯ ಮಾರಾಟ: ಇಬ್ಬರ ಬಂಧನ , ಅಕ್ರಮ ಮದ್ಯ ವಶ

July 6, 2009

ದಿನಾಂಕ ೦೬-೦೭-೨೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಶ್ರೀ ಡಿ.ಆರ್‍.ಪ್ರಕಾಶ್ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ಸಿಬ್ಬಂದಿಯೊಡನೆ ಶ್ರೀನಿವಾಸಪುರ ಟೌನ್ ಎ.ಪಿ.ಎಂ.ಸಿ ಯಾರ್ಡ್ ಬಳಿ ದಾಳಿ ನಡೆಸಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುತ್ತಾರೆ. ಆರೋಪಿಗಳಾದ ಶ್ರೀನಿವಾಸಪುರ ಟೌನ್ ಸಂತೇ ಮೈದಾನದ ವಾಸಿ ನಾರಾಯಣಸ್ವಾಮಿ @ ಮೊಘಲ್ ಹಾಗೂ ನರಸಿಂಹಪ್ಪ ಎಂಬುವರು ತಮ್ಮ ಬಳಿ ಯಾವುದೇ ಪರವಾನಗಿ ಇಲ್ಲದೇ ಅಕ್ರವಾಗಿ ಮದ್ಯಮಾರಾಟದಲ್ಲಿ ತೊಡಗಿದ್ದು ಬಂಧಿತರಾಗಿರುತ್ತಾರೆ. ಕಾರ್ಯಾಚರಣೆ ವೇಳೆ ಅಕ್ರಮ ಮಾರಾಟಕ್ಕೆ ಬಳಸುತ್ತಿದ್ದ ರಾಜಾ ವಿಸ್ಕಿ ಬಾಟಲ್ ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಈ ಬಗ್ಗೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಅಡಿಯಲ್ಲಿ ಎರಡು ಪ್ರಕರಣಗಳು ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೬ ನೇ ಜುಲ್ಯೆ ೨೦೦೯

July 5, 2009

ಕೋಲಾರ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೬-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೪

-ಮಾರಣಾಂತಿಕ: ೦೨

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೦೭-೨೦೦೯ ರಂದು ೧೩೪೫ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಗೌನಿಪಲ್ಲಿ ಗ್ರಾಮದ ವಾಸಿಗಳಾದ ರವಿಕುಮಾರ್‍  ಮತ್ತು ಅವರ ಪತ್ನಿ ಶ್ರೀಮತಿ ವೆಂಕಟಲಕ್ಷ್ಮಮ್ಮ ಎಂಬುವರು ಟಿವಿಎಸ್‌ ವಿಕ್ಟರ್‍ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಜೆ-೫೯೦೪ರಲ್ಲಿ ಕೊಂಡಾಮರಿ ಗೇಟ್‌ನ ತಿರುವಿನಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ  ಬಂದ  ಟಾಟಾ ಸುಮೋ ಸಂಖ್ಯೆ ಎಪಿ-೦೪-ಬಿ-೬೧೬೧ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು   ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ರವಿಕುಮಾರ್‍  ರವರಿಗೆ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಗಾಯಾಳು ವೆಂಕಟಲಕ್ಷ್ಮಮ್ಮ ರವರನ್ನು ಚಿಕಿತ್ಸೆಗಾಗಿ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೭-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಆನೇಕಲ್  ತಾಲೂಕು ತಿಮ್ಮಸಂದ್ರ  ಗ್ರಾಮದ ವಾಸಿಗಳಾದ ಮುನಿಶಾಮಿ ಮತ್ತು ಆನಂದ ಎಂಬುವರು ಬಜಾಜ್ ಪಲ್ಸ್‌ರ್‌ ದ್ವಿಚಕ್ರ ವಾಹನ ಸಂಖ್ಯೆ ಕೆಎ-೫೧-ಜೆ-೮೯೯ರಲ್ಲಿ   ಮಾಲೂರು ತಾಲೂಕು ನಿರಗಟ್ಟ ಕೆರೆಯ ತಿರುವುನಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ  ದ್ವಿಚಕ್ರ ವಾಹನ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು   ಕೆರೆಯ ಹಳ್ಳದಲ್ಲಿ ಉರುಳಿಸಿರುತ್ತಾನೆ.  ಪರಿಣಾಮ ಮುನಿಶಾಮಿ ಮತ್ತು ಆನಂದ್  ರವರಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಸಾಗಿಸುವ ಮಾರ್ಗಮಧ್ಯೆ ಮುನಿಶಾಮಿ ಮೃತಪಟ್ಟಿದ್ದು ಆನಂದ್ ರವರು ಚಿಕಿತ್ಸೆಗಾಗಿ ಕೋಲಾರದ ಎಸ್‌‌ಎನ್‌ಆರ್‌ ಆಸ್ಪತ್ರೆಗ ದಾಖಲಾಗಿರುತ್ತಾರೆ.

-ಸಾಧಾರಣ: ೦೨

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೬-೨೦೦೯ ರಂದು ೧೨೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಕೀಲಾಗಾಣಿ ಗ್ರಾಮದ ವಾಸಿ ಹುಸೇನ್‌ ಪಾಷ   ಎಂಬುವರು ತನ್ನ ಟಿವಿಎಸ್ ಚಾಂಪ್ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಹೆಚ್‌-೩೨೧೦ರಲ್ಲಿ ರಾಷ್ಟ್ರೀಯ ಹೆದ್ದಾರಿ–೪ ಮಲ್ಲನಾಯಕನಹಳ್ಳಿ ಗೇಟ್  ಹೋಗುತ್ತಿದ್ದರು. ಆ ಸಮಯದಲ್ಲಿ  ಬಂದ  ಟಾಟಾ ಸುಮೋ ಸಂಖ್ಯೆ ಕೆಎ-೦೨-೧೨೭೯ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಹುಸೇನ್‌ ಪಾಷ ರವರಿಗೆ ಗಾಯಗಳಾಗಿರುತ್ತದೆ.

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೦೭-೨೦೦೯ ರಂದು ೧೦೧೫ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಛತ್ರಕೋಡಿಹಳ್ಳಿ ಗ್ರಾಮದ ವಾಸಿಗಳಾದ ಗೋವಿಂದಪ್ಪ ಮತ್ತು ಕೃಷ್ಣಮೂರ್ತಿ ಎಂಬುವರು ತನ್ನ ಟಿವಿಎಸ್ ಹೆವಿಡ್ಯೂಟಿ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೩-ಇಡಿ-೬೬೮೧ರಲ್ಲಿ ಕೋಲಾರ ನಗರದ ವೇಣುಗೋಪಾಲಸ್ವಾಮಿ ದೇವಸ್ಥಾನದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂದುಗಡೆಯಿಂದ ಬಂದ  ಕೆಎಸ್‌ಆರ್‌ಟಿಸಿ ಬಸ್ ಸಂಖ್ಯೆ ಕೆಎ-೦೭-ಎಫ್-೧೦೩೨ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಗೋವಿಂದಪ್ಪ ಮತ್ತು ಕೃಷ್ಣಪ್ಪ ರವರಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರದ ಎಸ್‌‌ಎನ್‌ಆರ್‌ ಆಸ್ಪತ್ರೆಗ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ‌ ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೭-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಹೊಲ್ಲಂಬಳ್ಳಿ ಗ್ರಾಮದ ವಾಸಿ ಗುರಪ್ಪರೆಡ್ಡಿ ಎಂಬುವರು   ಮನೆಯ ಬಳಿ ಅದೇ ಗ್ರಾಮದ  ವಾಸಿಗಳಾದಆರ್‍.ಆಂಜನೇಯಶಟ್ಟಿ ಮತ್ತು ಇತರೆ ೨ ಇಬ್ಬರು  ಅವಾಚ್ಚಶಬ್ದಗಳಿಂದ ಬೈದಾಡಿಕೊಳ್ಳುತ್ತಿದ್ದರು. ಇದನ್ನು ಪ್ರಶ್ನಿಸಿದ ಗುರಪ್ಪರೆಡ್ಡಿ ರವರಿಗೆ ಅವಾಚ್ಚಶಬ್ದಗಳಿಂದ ಬೈದು ಚಾಕು ಮತ್ತು ದೊಣ್ಣೆಯಿಂದ ಹೊಡೆದು ಗಾಯಗೊಳಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.  ಗಾಯಾಳು ಗುರಪ್ಪರೆಡ್ಡಿ ಚಿಕಿತ್ಸೆಗಾಗಿ ಕೋಲಾರದ ಎಸ್‌,ಎನ್.ಆರ್‍.ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ  

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:  ೧೫

-ಸ್ಥಳ ದಂಡ ಮೊತ್ತ: ರೂ. ೧,೭೦೦/-   

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೫ ನೇ ಜುಲ್ಯೆ ೨೦೦೯

July 4, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೫-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಮಾವಿನ ಕಾಯಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು  ಚಾಂಪಲ್ಲಿ  ಗ್ರಾಮದ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೧-೦೭-೨೦೦೯ ರಂದು ರಾತ್ರಿ ಚಾಂಪಲ್ಲಿ ಗ್ರಾಮದ ಬಳಿ ಎಸ್‌.ಎನ್.ರಾಮರೆಡ್ಡಿ ರವರ ಮಾವಿನ ತೋಟದಲ್ಲಿ ಬೆಳೆದಿದ್ದ ೫ ಟನ್ ಮಾವಿನ ಕಾಯಿಯನ್ನು ಅದೇ ಗ್ರಾಮದ ವಾಸಿಗಳಾದ ಸಿ.ವಿ.ಶಿವಣ್ಣ ಮತ್ತು ಇತರರು ಸೇರಿಕೊಂಡು ಕಳವು ಮಾಡಿಕೊಂಡು ಹೋಗಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: 01

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣವು ಕೋಲಾರ ಅಮ್ಮವಾರಿಪೇಟೆ ಬಳಿ ವಾಸವಾಗಿರುವ ಶ್ರೀಮತಿ ಆಯಿಷಾ ಸಲ್ಮಾ ಎಂಬುವರ ದೂರಿನ ಆಧಾರದ ಮೇರೆಗೆ ದಾಖಲಾಗಿರುತ್ತದೆ. ಆಯಿಷಾ  ಸಲ್ಮಾ ರವರು ಇಮ್ತಿಯಾಜ್ ಖಾನ್ ರವರನ್ನು ನವೆಂಬರ್‍ ೨೦೦೮ ರಂದು ವಿವಾಹವಾಗಿರುತ್ತಾರೆ. ವಿವಾಹ ಕಾಲದಲ್ಲಿ ರೂ. ೨ ಲಕ್ಷ ನಗದು ಹಾಗೂ ಚಿನ್ನಾಭರಣಗಳನ್ನು ವರದಕ್ಷಿಣೆಯಾಗಿ ನೀಡಿದ್ದು ನಂತರವೂ ಇನ್ನೂ ಹೆಚ್ಚಿನ ವರದಕ್ಷಿಣೆ ತರುವಂತೆ ಇಮ್ತಿಯಾಜ್ ಖಾನ್ ತನ್ನ ಹೆಂಡತಿ ಆಯಿಷಾ ಸಲ್ಮಾ ರವರಿಗೆ ಒತ್ತಾಯಿಸಿ ಹೊಡೆದು ಗಾಯಪಡಿಸಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿರುವುದಾಗಿ ಅಲ್ಲದೇ ಪ್ರಾಣಬೆದರಿಕೆ ಹಾಕಿರುವುದಗಿ ಆಯಿಷಾ ಸಲ್ಮಾ ರವರು ತನ್ನ ದೂರಿನಲ್ಲಿ ತಿಳಿಸಿರುತ್ತಾರೆ.

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೭-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಹರಿಕೆರೆ ಗ್ರಾಮದ ವಾಸಿಗಳಾದ ನಾಗರಾಜ ಮತ್ತು ಶಂಕರಪ್ಪ ಎಂಬುವರ ಹೀರೋ ಹೋಂಡಾ ಸಿಡಿ-೧೦೦ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಇ-೧೧೩೪ರಲ್ಲಿ ಶ್ರೀನಿವಾಸಪುರ – ಮುಳಬಾಗಿಲು ರಸ್ತೆಯ ಅರಿಕೆರೆ – ಮೀಸಗಾನಹಳ್ಳಿ ಮದ್ಯ ವಾಹನವನ್ನು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಆ ಸಮಯದಲ್ಲಿ ಶ್ರೀನಿವಾಸಪುರ ಕಡೆಯಿಂದ ಬಂದ ಹೆಚ್‌-ಜಿ.ಹೊಸೂರು ಗ್ರಾಮದ ವಾಸಿ ನರಸಿಂಹಪ್ಪ ರವರು ತನ್ನ ಹೀರೋ ಹೋಂಡಾ ಸಿಡಿ-೧೦೦ ದ್ವಿಚಕ್ರ ವಾಹನ ಸಂಖ್ಯೆ ಸಿಕೆಪಿ-೮೮೪೮ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ನಿಲ್ಲಿಸಿದ್ದ ವಾಹನಕ್ಕೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ನಾಗರಾಜ ರವರಿಗೆ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿ ಮತ್ತು ಕೊಲೆಗೆ ಪ್ರಯತ್ನದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೨-೦೭-೨೦೦೯ ರಂದು             ೧೨೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಮಜರಾ ದಿನ್ನೂರು ಗ್ರಾಮದ ವಾಸಿ ಎಂ.ಡಿ.ರಮೇಶ ಎಂಬುವರು ತಮ್ಮ ಮನೆಯ ಬಳಿ ಇದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ಶ್ರೀನಿವಾಸ ಮತ್ತು ಇತರರು ಅಕ್ರಮ ಗುಂಪು ಕಟ್ಟಿಕೊಂಡು ಕೈಗಳಲ್ಲಿ ಗಡಾರಿ ಮತ್ತು ಸುತ್ತಿಗೆಗಳನ್ನು ಹಿಡಿದುಕೊಂಡು ಬಂದು ರಮೇಶ ರವರ ಮನೆಯ ಕಾಂಪೌಂಡ್‌ನಲ್ಲಿ ಅಕ್ರಮ ಪ್ರವೇಶ ಮಾಡಿ ಕಲ್ಲು ಚಪ್ಪಡಿಗಳನ್ನು ಹೊಡೆದು ಹಾಕಿ ರೂ. ೧೦,೦೦೦/- ಗಳಷ್ಟು ನಷ್ಟಮಾಡಿ, ಗಡಾರಿಯಿಂದ ಹೊಡೆದು ಕೊಲೆ ಮಾಡಲು ಪ್ರಯತ್ನ ಪಟ್ಟು, ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ,

ಹಲ್ಲೆ: ‌ಇಲ್ಲ

ಇತರೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೦೩-೦೭-೨೦೦೯ ರಂದು ಮುಳಬಾಗಿಲು ತಾಲೂಕು ಹೆಚ್.ಗೊಲ್ಲಹಳ್ಳಿ ಗ್ರಾಮದ ವಾಸಿ ವೆಂಕಟಸ್ವಾಮಿಯನ್ನು ಅದೇ ಗ್ರಾಮದ ವಾಸಿಗಳಾದ ಸೀತಪ್ಪ ಮತ್ತು ಮುನಿವೆಂಕಟಮ್ಮ ರವರು ಜಮೀನಿ ವಿಚಾರದಲ್ಲಿ ಜಗಳ ತೆಗೆದು ಎಲ್ಲಿಯಾದರು ಹೋಗಿ ಸತ್ತರೆ ನಾವು ತಣ್ಣಗೆ ಇರುತ್ತೇವೆ ಎಂದು ಪ್ರಚೋದನೆಯ ಮಾತುಗಳನ್ನಾಡಿದ್ದರಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಹಾಕಿಕೊಂಡು ಮೃತಪಟ್ಟಿರುತ್ತಾನೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:  ‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೪ ನೇ ಜುಲ್ಯೆ ೨೦೦೯

July 3, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೪-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಅರಬಿಕೊತ್ತನೂರು ಗ್ರಾಮದ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೨-೦೭-೨೦೦೯ ರಂದು ರಾತ್ರಿ ಅರಬಿಕೊತ್ತನೂರು ಗ್ರಾಮದ ಬಳಿ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಬೆಸ್ಕಾಂ ಇಲಾಖೆಗೆ ಸೇರಿದ ೨೨೦೦ ಮೀಟರ್‍ ವಿದ್ಯುತ್ ತಂತಿಯನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ತಂತಿಯ ಒಟ್ಟು ಬೆಲೆ ರೂ. ೨೧,೨೫೦/ ಆಗಿರುತ್ತದೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ‌ಇಲ್ಲ

ಇತರೆ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲ ಅಪಹರಣ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೦೭-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ ಮುಳಬಾಗಿಲು ರಾಮರಾಯನ ಕೋಟೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾದ ಎಂ.ನಾರಾಯಣಸ್ವಾಮಿ ರವರನ್ನು ಗೋಕುಲ್ ಕಾಲೇಜ್ ಬಳಿ ಬಲವಂತವಾಗಿ ಅಪಹರಿಸಿದ ಎ.ಪಿ.ಎಂ.ಸಿ ಯಾರ್ಡ್ ಅಧ್ಯಕ್ಷರಾದ ಎಸ್.ನಾರಾಯಣಗೌಡ ಎಂಬುವರು ಮುಳಬಾಗಿಲಿನ ಮಲ್ಲನಾಯಕನಹಳ್ಳಿ ರಸ್ತೆ ಏಡಿಪಾಳ್ಯದಲ್ಲಿ ಒಂದು ರೂಮಿನಲ್ಲಿ ಕೂಡಿಹಾಕಿ ಅವಾಚ್ಯ ಶಬ್ದಗಳಿಂದ ಬೈದು ಹೊಡೆದು ಪ್ರಾಣಬೆದರಿಕೆ ಹಾಕಿರುತ್ತಾರೆ. ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣಾ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ದೌರ್ಜನ್ಯತಡೆ) ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಧನಮಟ್ನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೧-೦೪-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಧನಮಟ್ನಹಳ್ಳಿ ಗ್ರಾಮದ ವಾಸಿ ಮುನಿಯಪ್ಪ ಎಂಬುವರು ತಮ್ಮ ಸರ್ವೆ ನಂಬರ್‍ ೮೦ ರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಚೆನ್ನಸಂದ್ರ ಗ್ರಾಮದ ವಾಸಿಗಳಾದ ಸಿ.ಸೊಣ್ಣೇಗೌಡ, ಕೃಷ್ಣಪ್ಪ, ಮತ್ತು ಆನಂದ ಎಂಬುವರು ಮುನಿಯಪ್ಪ ರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿರುತ್ತಾರೆ.

ಅಸ್ವಾಭಾವಿಕ ಮರಣದ ಪ್ರಕರಣಗಳು:  ‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೩ ನೇ ಜುಲ್ಯೆ ೨೦೦೯

July 3, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣಗಳು ದಾಖಲಾಗಿರುತ್ತದೆ. ಮಾಲೂರು ತಾಲೂಕು ಕೋಡಿಗಳ್ಳಿ ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯ ಹಾಗೂ ನಸಗೆರೆ ಗ್ರಾಮದ ಯಲ್ಲಮ್ಮ ದೇವಾಲಯಲ್ಲಿ ಕಳವು ಕೃತ್ಯಗಳು ಸಂಭವಿಸಿರುತ್ತದೆ. ದಿನಾಂಕ ೧೯-೦೫-೨೦೦೯ ರಂದು ದೇವಾಲಯಗಳ ಒಳಗೆ ಪ್ರವೇಶಿಸಿದ ಯಾರೋ ಕಳ್ಳರು ವೆಂಕಟರಮಣ ಸ್ವಾಮಿ ದೇವಾಲಯದ ರೂ. ೬೦,೦೦೦/ ಬೆಲೆ ಬಾಳುವ ಹಾಗೂ ನಸಗೆರೆ ಗ್ರಾಮದ ಯಲ್ಲಮ್ಮ ದೇವಾಲಯದ ರೂ. ೧೩,೪೦೦/ ಬೆಲೆ ಬಾಳುವ ದೇವರ ಮೇಲಿದ್ದ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಮಾಲೂರು ತಹಸೀಲ್ದಾರ್‍ ರವರು ದೂರು ನೀಡಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೫-೨೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಹುಲಿಮಂಗಲ ಗ್ರಾಮದ ವಾಸಿ ಮುನಿಯಮ್ಮ ಎಂಬುವರ ಮೊಮ್ಮಗನಾದ ಚಂದ್ರಶೇಖರ್‍ ಎಂಬುವನು ತನ್ನ ಮನೆಯ ಮುಂದೆ ಆಟವಾಡುತ್ತಿದ್ದನು. ಆ ಸಮಯದಲ್ಲಿ ಕೆಎ-೦೮-೨೮೩೦ ಸಂಖ್ಯೆಯ ಮಾಕ್ಸಿ ಕ್ಯಾಬ್ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟವಾಡುತ್ತಿದ್ದ ಹುಡುಗನಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಚಂದ್ರಶೇಖರ್‍ ನಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೨

ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಗುಂಡ್ಲಪಾಳ್ಯ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೩-೦೬-೨೦೦೯ ರಂದು ೧೬೦೦ ಗಂಟೆ ಸಮಯದಲ್ಲಿ ಗುಂಡ್ಲಪಾಳ್ಯ ಗ್ರಾಮದ ವಾಸಿ ಮುನಿಸ್ವಾಮಪ್ಪ ಎಂಬುವರು ಜಮೀನಿನಲ್ಲಿ ನೇಗಿಲು ಕಟ್ಟುತ್ತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಸುಮಾರು ೧೫ ಜನ ಅಬಕಾರಿ ಇಲಾಖೆಯವರು ಅಪರಾಧಿಯೊಬ್ಬ ಅಲ್ಲಿಗೆ ಬಂದಿರುವ ಬಗ್ಗೆ ಮುನಿಸ್ವಾಮಪನನ್ನು ಪ್ರಶ್ನಿಸಿರುತ್ತಾರೆ. ಇದಕ್ಕೆ ತನಗೇನೂ ತಿಳಿದಿಲ್ಲ ಎಂದು ನುಡಿದ ಮುನಿಸ್ವಾಮಪ್ಪ ನನ್ನು ಪಕ್ಕದ ಕಾಡಿಗೆ ಎಳೆದೊಯ್ದ ಅಬಕಾರಿ ಸಿಬ್ಬಂದಿ ಕಾಲಿನಿಂದ ಒದ್ದು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೦೭-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಕೋಲಾರ ನಗರ ಕೀಲುಕೋಟೆ ವಾಸಿ ಹರೀಶ್ ಎಂಬುವರ ಮನೆಯೊಳಗೆ ಅಕ್ರಮಗುಂಪು ಕಟ್ಟಿಕೊಂಡು ಅಕ್ರಮವಾಗಿ ಪ್ರವೇಶ ಮಾಡಿದ ಅಲ್ಲಿಯ ವಾಸಿಗಳೇ ಆದ ನಾರಾಯಣಸ್ವಾಮಿ, ಗಂಗಾಧರ, ನಾಗೇಶ, ರಾಘವೇಂದ್ರ, ಚಿಕ್ಕವೀರಪ್ಪ, ಮುನಿರಾಜು ಮತ್ತು ಸುರೇಶ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿ ಕಾಲುಗಳಿಂದ ಒದ್ದು ಪ್ರಾಣಬೆದರಿಕೆ ಹಾಕಿರುತ್ತಾರೆ. ಬಿಡಿಸಲು ಬಂದ ಹರೀಶ್ ರವರ ತಂದೆ ಮತ್ತು ಅತ್ತಿಗೆಯ ಮೇಲೂ ಸಹಾ ಆರೋಪಿಗಳು ಹಲ್ಲೆ ನಡೆಸಿರುತ್ತಾರೆ. ಹಳೇ ವೈಷಮ್ಯದ ಹಿನ್ನೆಲೆ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಹಲ್ಲೆ: ‌ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:  ‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಜಂಗಾನಹಳ್ಳಿ ಗ್ರಾಮದ ವಾಸಿ ಗೋವಿಂದಪ್ಪ ಎಂಬುವರು ೧೭ ವರ್ಷದ ಮಗಳಾದ ವರಲಕ್ಷ್ಮಿ ಎಂಬ ಹುಡುಗಿ ಕಾಣೆಯಾದವಳು. ಮುಳಬಾಗಿಲು ತಾಲೂಕು ಕಲ್ಕೆರೆ ಗ್ರಾಮದಲ್ಲಿರುವ ತನ್ನ ದೊಡ್ಡಪ್ಪ ವೆಂಕಟೇಶಪ್ಪ ಎಂಬುವರ ಮನೆಗೆ ಬಂದಿದ್ದ ವರಲಕ್ಷ್ಮಿ ದಿನಾಂಕ ೨೯-೦೬-೨೦೦೯ ರಂದು ಮನೆಯಿಂದ ಕಾಣೆಯಾಗಿರುತ್ತಾಳೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.