ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೭-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧
ಮಾಲೂರು ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಸಾವಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬೆಂಗಳೂರು ಹೊಂಗಸಂದ್ರ ವಾಸಿ ಗೀತಾ ಎಂಬುವರ ವಿವಾಹ ಆರು ವರ್ಷಗಳ ಹಿಂದೆ ಮಾಲೂರು ತಾಲೂಕು ಮಡಿವಾಳ ಗ್ರಾಮದ ಸೋಮಶೇಖರ್ ರವರೊಂದಿಗೆ ನಡೆದಿರುತ್ತದೆ. ವಿವಾಹನಂತರ ಮೋಟಾರ್ ಸೈಕಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಆಗಾಗ್ಗ ಜಗಳ ತೆಗೆಯುತ್ತಿದ್ದು ಸೋಮಶೇಖರ್ ದಿನಾಂಕ ೦೨-೦೯-೨೦೦೮ ರಂದು ತನ್ನ ತಾಯಿ ಕುಳ್ಳಮ್ಮ ಎಂಬುವರು ಗೀತಾ ರವರಿಗೆ ಕೈಗಳಿಂದ ಹೊಡೆದು ಕಾಲಿನಿಂ ಒದ್ದು ಹಲ್ಲೆ ನಡೆಸಿ ಹೆಚ್ಚಿನ ವರದಕ್ಷಿಣೆ ತರುವಂತೆ ಒತ್ತಾಯಿಸಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿರುತ್ತಾರೆ. ಗಾಯಗೊಂಡ ಗೀತಾರವರು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುಯತ್ತಿದ್ದು ದಿನಾಂಕ ೦೫-೦೯-೨೦೦೮ ರಂದು ೧೮೩೦ ಗಂಟೆ ಸಮಯದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಗಂಡ ಮತ್ತು ಅತ್ತೆ ನೀಡಿದ ಮಾನಸಿಕ ಹಾಗೂ ದೈಹಿಕ ಕಿರುಕುಳದಿಂದಲೇ ಗೀತಾ ರವರು ಮೃತಪಟ್ಟಿರುವುದಾಗಿ ಗೀತಾರವರ ತಂದೆ ಮದನಗಿರಿಯಪ್ಪ ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೦೯-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ದಾವಣಗೆರೆ ವಾಸಿ ಎಸ್.ನರೇಂದ್ರ ಎಂಬುವರು ತಮ್ಮ ಟಾಟಾ ಇಂಡಿಕಾ ಕಾರ್ ಕೆಎ-೧೭-ಎಂ-೫೯೮೩ ರಲ್ಲಿ ತನ್ನ ಹೆಂಡತಿ ಮತ್ತು ಮಕ್ಕಳೊಂದಿಗೆ ಬೆಂಗಳೂರಿಗೆ ಹೋಗುವ ಸಲುವಾಗಿ ಎನ್.ಹೆಚ್ ೪ ರ ರಾಮಸಂದ್ರ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಕೋಲಾರದ ಕಡೆಯಿಂದ ಬಂದ ಈಚರ್ ಟೆಂಪೋ ಸಂಖ್ಯೆ ಕೆಎ-೦೭-೬೫೩೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕಾರಿಗೆ ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮ ಕಾರಿನಲ್ಲಿದ್ದ ನರೇಂದ್ರ ಮತ್ತು ಇತರರಿಗೆ ಗಾಯಗಳುಂಟಾಗಿರುತ್ತದೆ.
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೯-೨೦೦೮ ರಂದು ೦೭೩೦ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ವಾಸಿ ಸುಬ್ರಮಣಿ ಎಂಬುವರು ತಮ್ಮ ದ್ವಿಚಕ್ರವಾಹನ ಸಂಖ್ಯೆ ಕೆಎ-೦೭-ಕೆ-೮೭೧೯ ರಲ್ಲಿ ಶ್ರೀನಿವಾಸಪುರ ತಾಲೂಕು ಮಾಣಿಕೆರೆ ಗ್ರಾಮದಿಂದ ರೆಡ್ಡಿಪಲ್ಲಿ ಗ್ರಾಮಕ್ಕೆ ಹೋಗುವ ಸಲುವಾಗಿ ಗೋಪಲ್ಲಿ ಕ್ರಾಸ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಬಜಾಜ್ ಪಲ್ಸರ್ ದ್ವಿಚಕ್ರವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮ ಸುಬ್ರಮಣಿ ರವರಿಗೆ ಗಾಯಗಳುಂಟಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ಕೋಲಾರ ತಾಲೂಕು ಚಿಟ್ನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೫-೦೯-೨೦೦೮ ರಂದು ಚಿಂತಾಮಣಿ ನಗರದ ವಾಸಿ ಶ್ರೀನಿವಾಸ ಎಂಬುವರ ಬಾಮೈದ ವೆಂಕಟರಮಣ ರವರು ಚಿಟ್ನಹಳ್ಳಿ ಗ್ರಾಮದ ಶೋಭಾ ಎಂಬುವರನ್ನು ವಿವಾಹವಾಗಿದ್ದು ಶೋಭಾರವರನ್ನು ಕರೆದುಕೊಂಡು ಬರುವ ಸಲುವಾಗಿ ಶ್ರೀನಿವಾಸ ರವರು ಚಿಟ್ನಹಳ್ಳಿ ಗ್ರಾಮಕ್ಕೆಹೋಗಿದ್ದರು. ಆ ಸಮಯದಲ್ಲಿ ಇವರ ಮೇಲೆ ಜಗಳ ತೆಗೆದ ಚಿಟ್ನಹಳ್ಳಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವನು ಕೈಗಳಿಂದ ಮತ್ತು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾನೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು:
-ಸ್ಥಳ ದಂಡ ಮೊತ್ತ:
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice