ದಿನದ ಅಪರಾಧಗಳ ಪಕ್ಷಿನೋಟ ೦೯ ನೇ ನವಂಬರ್ ೨೦೦೯

November 8, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೯-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ಈಗ್ಗೆ ಒಂದು ವರ್ಷದ ಹಿಂದೆ ತಾತಿಕಲ್ಲು ಗ್ರಾಮದ ವಾಸಿ, ಚಿಕ್ಕರೆಡ್ಡಮ್ಮ ಎಂಬುವರನ್ನು ಚಿಕ್ಕಬಾಬು ಎಂಬುವರಿಗೆ ವರದಕ್ಷಿಣೆಯಾಗಿ ರೂ, ೧,೭೫,೦೦೦/- ಮತ್ತು ೨೦ ಗ್ರಾಂ, ಬಂಗಾರದ ವಡವೆಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟಿದ್ದರು. ನಂತರ ಗಂಡ ಚಿಕ್ಕಬಾಬು ಮತ್ತು ಅವರ ಮನೆಯವರು ಇನ್ನೂ ಹೆಚ್ಚಿನ ವರದಕ್ಷಿಣಯಾಗಿ ರೂ, ೫೦,೦೦೦/- ಗಳನ್ನು ವರದಕ್ಷಿಣೆಯಾಗಿ ತರುವಂತೆ ಮಾನಸಿಕ ಹಾಗು ದೈಹಿಕ ಹಿಂಸೆ ನೀಡಿ, ಬೆಕರಿಕೆ ಹಾಕಿರುತ್ತಾರೆ.

ರಸ್ತೆ ಅಪಘಾತಗಳು ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ : ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೮-೧೧-೨೦೦೯ ರಂದು ೧೭೪೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು, ಹೊಸೂರು ಗ್ರಾಮದ ವಾಸಿ, ರವಿಕುಮಾರ್‍  ಎಂಬುವರು,  ತನ್ನ ಹೊಂಡಾ  ತ್ರಿಚಕ್ರ ಸಂಖ್ಯೆ ಕೆ.ಎ-೦೪ ಇ.ಎಸ್. ೪೪೬೯ ರಲ್ಲಿ ರಾಷ್ಟೀಯ ಹೆದ್ದಾರಿ ೪ ರ ಚಲುವನಹಳ್ಳಿ ಗೇಟ್ ಬಳಿ ಬರುತ್ತಿದ್ದರು.  ಆ ಸಮಯದಲ್ಲಿ ಕೋಲಾರ ಕಡೆಯಿಂದ ಬಂದ ಮಾರುತಿ ಕಾರು ಸಂಖ್ಯೆ ಕೆ.ಎ-೦೫ ಎಂ.ಡಿ ೬೧೦೦ ರ ಚಾಲಕ, ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ತ್ರಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿ,  ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೇ ಹೊರಟು ಹೋಗಿರುತ್ತಾನೆ.  ಇದರ ಪರಿಣಾಮ ರವಿಕುಮಾರ್‍ ರವರ ಕಾಲು ಮತ್ತು ಕೈಗಳಿಗೆ ಗಾಯಗಳಾಗಿರುತ್ತದೆ. ಗಾಯಾಳು ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್‍ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೮-೧೧-೨೦೦೯ ರಂದು  ೧೯೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು  ರಾಜಕಲ್ಲಹಳ್ಳಿ ಗ್ರಾಮದ ವಾಸಿ ಎ.ಕೃಷ್ಣಪ್ಪ ಮತ್ತು ನಾಗರಾಜ  ಎಂಬುವರು ತನ್ನ ಹೀರೋ ಹೊಂಡಾ ಫ್ಯಾಷನ್ ದ್ವಿಚಕ್ರ ಸಂಖ್ಯೆ ಕೆಎ-೦೫-ಇವೈ- ೪೯೧೯ ರಲ್ಲಿ ವೇಮಗಲ್ – ನರಸಾಪುರ ರಸ್ತೆಯ ಚೌಡದೇನಹಳ್ಳಿ ಗೇಟ್ ಬಳಿ ಹೋಗುತ್ತಿದ್ದರು.  ಆ ಸಮಯದಲ್ಲಿ ನರಸಾಪುರ ಕಡೆಯಿಂದ ಬಂದ ಕಾರು ಸಂಖ್ಯೆ ಕೆಎ-೦೨-ಎಂಎಫ್- ೩೨೧೩ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿರುತ್ತಾನೆ.  ಇದರ ಪರಿಣಾಮ ನಾಗರಾಜ್  ರವರ ತಲೆಗೆ ಗಾಯಗಳಾಗಿರುತ್ತದೆ. ಗಾಯಾಳು ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೩

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಶ್ರೀನಿವಾಸಪುರ ತಾಲೂಕು ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಕೃತ್ಯ ಸಂಬವಿಸಿರುತ್ತದೆ. ದಿನಾಂಕ: ೦೮-೧೧-೨೦೦೯ ರಂದು ೧೩೦೦ ಗಂಟೆ ಸಮಯದಲ್ಲಿ ಕಶಟ್ಟಿಹಳ್ಳಿ ಗ್ರಾಮದ ವಾಸಿ, ವೆಂಕಟಸ್ವಾಮಿ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ, ಗೋಪಾಲರೆಡ್ಡಿ ಮತ್ತಿತರೆ ಮೂವರು ಕೈಗಳಿಂದ ಹಾಗು ದೊಣ್ಣೆಗಳಿಂದ ಹೊಡೆದು, ಗಾಯ ಪಡಿಸಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಮಟ್ನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಬವಿಸಿರುತ್ತದೆ. ದಿನಾಂಕ: ೦೨-೧೧-೨೦೦೯ ರಂದು ೧೬೦೦ ಗಂಟೆ ಸಮಯದಲ್ಲಿ ಮಟ್ನಹಳ್ಳಿ ಗ್ರಾಮದ ವಾಸಿ, ಸರಸ್ವತಮ್ಮ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ, ಮತ್ತಿತರೆ ಇಬ್ಬರು ಕೈಗಳಿಂದ ಹಾಗು ದೊಣ್ಣೆಗಳಿಂದ ಹೊಡೆದು, ಪ್ರಾಣ ಬೆದರಿಕೆ ಹಾಕಿರುತ್ತಾರೆ.  ಜಮೀನಿನ ವಿವಾದದ ಹಿನ್ನೆಲೆಯಲ್ಲಿ ಕೃತ್ಯ ಸಂಬವಿಸಿರುತ್ತದೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಸುಗುಟೂರು ಗ್ರಾಮದಲ್ಲಿ ಕೃತ್ಯ ಸಂಬವಿಸಿರುತ್ತದೆ.  ದಿನಾಂಕ: ೦೮-೧೧-೨೦೦೯ ರಂದು ೧೬೩೦ ಗಂಟೆ ಸಮಯದಲ್ಲಿ ಕೆ ನಾಗೇಶ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ರಾಮಪ್ಪ ಎಂಬುವುರ ಹಳೆ ವೈಷಮ್ಯದ ಹಿನ್ನಲೆಯಲ್ಲಿ ರಾಡಿನಿಂದ ತೊಡೆಗೆ ಹೊಡೆದು ಗಾಯಪಡಿಸಿರುತ್ತಾರೆ. ಗಾಯಾಳು ಚಿಕಿತ್ಸೆಗಾಗಿ ಕೋಲಾರ ಎಸ್.ಎನ್.ಆರ್‍ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೯-೧೧-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಸಿಂಗೇಹಳ್ಳಿ ಗ್ರಾಮದ ವಾಸಿ ಎಸ್.ಎನ್.ವಿಜಯ ಕುಮಾರ್‍ ಎಂಬುವರ ಪತ್ನಿಯಾದ ಶ್ರೀಮತಿ ಕಲ್ಪನಾ(೨೩) ರವರು ವೇಮಗಲ್ ಸರ್ಕಾರಿ ಆಸ್ಪತ್ರೆಯ ಬಳಿಯಿಂದ ಕಾಣೆಯಾಗಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೮ ನೇ ನವಂಬರ್ ೨೦೦೯

November 7, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೮-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಟ್ರಾಕ್ಟರ್‌ನ ಟ್ರಾಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೫-೧೧-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ಹೊಲ್ಲಂಬಳ್ಳಿ ಗ್ರಾಮದ ವಾಸಿ ಬಸವರಾಜು ಎಂಬವರು ಜಮೀನಿನಲ್ಲಿ ನಿಲ್ಲಿಸಿದ್ದ ರೂ. ೪೫,೦೦೦/- ಬೆಲೆ ಬಾಳುವ ಟ್ರಾಕ್ಟರ್‌‌ನ ಟ್ರಾಲಿ ಸಂಖ್ಯೆ ಎಂವೈಜಡ್-೪೭೬೮ಅನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ೦೪

-ಮಾರಣಾಂತಿಕ: ಇಲ್ಲ

-ಸಾಧಾರಣ : ೦೪

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೯ ರಂದು ೦೮೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಮೂರಾಂಡಹಳ್ಳಿ ಗ್ರಾಮದ ವಾಸಿ ಶ್ರೀರಾಮಪ್ಪ ಎಂಬುವರು ನಡೆದುಕೊಂಡು ಮೂರಾಂಡಹಳ್ಳಿ ಕ್ರಾಸ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಕೋಲಾರ ಕಡೆಯಿಂದ ಬಂದ ಗೂಡ್ಸ್ ಟೆಂಪೋ ಸಂಖ್ಯೆ ಎಪಿ-೧೫-ಡಬ್ಲ್ಯೂ-೪೨೬೬ರ ಚಾಲಕ ತನ್ನ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಶ್ರೀರಾಮಪ್ಪ ರವರಿಗೆ ಡಿಕ್ಕಿ ಹೊಡೆಸಿ ನಂತರ  ರಸ್ತೆ ಬದಿಯ ಹಳ್ಳಕ್ಕೆ ಉರುಳಿಸಿರುತ್ತಾನೆ. ಪರಿಣಾಮ ಟೆಂಪೋನಲ್ಲಿದ್ದ ನಾರಾಯಣಮ್ಮ, ನಾರೆಮ್ಮ ಮತ್ತು ಇತರರಿಗೆ ಗಾಯಗಳಾಗಿರುತ್ತದೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೯ ರಂದು ೨೨೦೦ ಗಂಟೆ ಸಮಯದಲ್ಲಿ  ಮುಳಬಾಗಿಲು ಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿ-೪ರ ತಾಯಲೂರು ಬೈಪಾಸ್ ಬಳಿ ಕೆಎಸ್‌‌ಆರ್‌ಟಿಸಿ ಬಸ್ ಸಂಖ್ಯೆ ಕೆಎ-೦೧-ಎಫ್-೮೪೪೮ ರ ಚಾಲಕ ತನ್ನ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಕಾರು ಸಂಖ್ಯೆ ಕೆಎ-೦೩-ಎಂಡಿ-೭೭೯೭ಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಕಾರಿನಲ್ಲಿದ್ದವರಿಗೆ ಗಾಯಗಳಾಗಿರುತ್ತದೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೯ ರಂದು ೧೫೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಕರಡಿಗಾನಹಳ್ಳಿ ಗ್ರಾಮದ ವಾಸಿ ಸುಬ್ರಮಣಿ ಎಂಬುವರು ತಮ್ಮ ಗ್ರಾಮದಿಂದ ನಂಗಲಿಗೆ ಹೋಗುವ ಸಲುವಾಗಿ ಕೆಎ-೫೨-೭೯೨ ಸಂಖ್ಯೆಯ ಆಟೋವಿನಲ್ಲಿ ನಂಗಲಿ ಸಮೀಪ ಹೋಗುತ್ತಿದ್ದರು. ಆ ಸಮಯದಲ್ಲಿ ಆಟೋ ಚಾಲಕ ತನ್ನ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದು ಆಟೋ ಉರುಲಿ ಬಿದ್ದಿರುತ್ತದೆ. ಇದರ ಪರಿಣಾಮ ಸುಬ್ರಮಣಿ ರವರಿಗೆ ಗಾಯಗಳುಂಟಾಗಿರುತ್ತದೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೧೧-೨೦೦೯ ರಂದು ೧೧೪೫ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ವಾಸಿ ಮದುಸೂಧನ್ ರೆಡ್ಡಿ ಎಂಬುವರು ತನ್ನ ತಾಯಿ, ಹೆಂಡತಿ ಹಾಗೂ ಇನ್ನಿತರರೊಡನೆ ತನ್ನ ಕಾರ್‍ ಸಂಖ್ಯೆ ಕೆಎ-೫೨-ಎಂ-೨೪೨೪ ರಲ್ಲಿ ಎನ್.ಹೆಚ್ ೪ ರಸ್ತೆಯ ತಂಬಿಹಳ್ಳಿ ಬ್ರಿಡ್ಜ್ ಸಮೀಪ ಹೋಗುತ್ತಿದ್ದರು. ಆ ಸಮಯದಲ್ಲಿ ಕೆಎ-೦೭-೬೦೨೫ ಟಿಪ್ಪರ್‍ ಲಾರಿ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಕಾರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಕಾರಿನಲ್ಲಿದ್ದವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೭ ನೇ ನವಂಬರ್ ೨೦೦೯

November 6, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೭-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ೦೧

-ಮಾರಣಾಂತಿಕ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೧೧-೨೦೦೯ ರಂದು ೧೮೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಸೋಮಯಾಜಲಪಲ್ಲಿ ಗ್ರಾಮದ ವಾಸಿ ಸಿ.ಎಂ.ಮಂಜುನಾಥ (೨೫) ಎಂಬುವರು ಕೆಎ-೦೪-ಎ-೨೯೩೭ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದು ತಮ್ಮ ಗ್ರಾಮದ ಪಶು ಆಸ್ಪತ್ರೆಯ ಮುಂಭಾಗದಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗು ರಸ್ತೆ ಬದಿಯ ಸಿಮೆಂಟ್ ದಿಂಡಿಗೆ ಡಿಕ್ಕಿ ಹೊಡೆದು ಬಿದ್ದಿರುತ್ತಾರೆ. ಇದರ ಪರಿಣಾಮ ಇವರ ತಲೆಗೆ ತೀವ್ರವಾದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

-ಸಾಧಾರಣ : ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೬ ನೇ ನವಂಬರ್ ೨೦೦೯

November 6, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೬-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ : ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಜಯಮಂಗಲ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೨-೧೧-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಜಯಮಂಗಲ ಗ್ರಾಮದ ವಾಸಿ ಸೋಮಶೇಖರ್‍ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಶಿವ, ಮಂಜುನಾತ ಮತ್ತಿತರೇ ೬ ಜನರು ಅಕ್ರಮ ಗುಂಪು ಕಟ್ಟಿಕೊಂಡು ಅವಾಚ್ಯ ಶಬ್ದಗಳಿಂದ ಬೈದು ಕಲ್ಲುಗಳಿಂದ ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ. ಜಮೀನಿನ ವಿವಾದದ ಹಿನ್ನೆಲೆ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಸುಗಟೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೬-೧೧-೨೦೦೯ ರಂದು ೦೭೦೦ ಗಂಟೆ ಸಮಯದಲ್ಲಿ ಸುಗಟೂರು ಗ್ರಾಮದ ವಾಸಿ ಎಸ್.ಬಿ. ನಂಜುಂಡೇಶ್ವರ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ನಾರಾಯಣಸ್ವಾಮಿ ಮತ್ತಿತರೇ ೧೨ ಜನರು ಅಕ್ರಮ ಗುಂಪು ಕಟ್ಟಿಕೊಂಡು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಸ್ವತ್ತು ಹಾನಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೬-೧೧-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಕೋಲಾರದ ಆರ್‍.ಟಿ.ಒ ಕಛೇರಿ ಮುಂದೆ ಹೋಗುತ್ತಿದ್ದ ಕೆಎ-೦೭-ಎಫ್-೧೧೧೬ ಸಂಖ್ಯೆ ಕೆ.ಎಸ್.ಅರ್‍.ಟಿ.ಸಿ ಬಸ್ಸನ್ನು ದ್ವಿಚಕ್ರವಾಹನದಲ್ಲಿ ಬಂದ ಸುಮಾರು ೬೦ ರಿಂದ ೭೦ ಜನರು ಅಡ್ಡಗಟ್ಟಿ ನಿಲ್ಲಿಸಿ ಕಲ್ಲುಗಳಿಂದ ಬಸ್ಸಿನ ಗ್ಲಾಸನ್ನು ಹೊಡೆದು ಸ್ವತ್ತು ಹಾನಿ ಪಡಿಸಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೫ ನೇ ನವಂಬರ್ ೨೦೦೯

November 4, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೫-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಕೂಟೇರಿ ಗ್ರಾಮದ ವಾಸಿ ವೆಂಕಟೇಶಪ್ಪ ಎಂಬುವರ ಮನೆಯಲ್ಲಿ ಕಳವು ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೧-೦೭-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ವೆಂಕಟೇಶಪ್ಪ ರವರ ಹೆಂಡತಿ ಲಕ್ಷ್ಮಿ ಪೂಜೆ ಮಾಡುವ ಸಲುವಾಗಿ ತನ್ನ ಓಲೆ ಜುಮುಕಿ ಇನ್ನಿತರ ಆಭರಣಗಳನ್ನು ದೇವರ ಫೋಟೋ ಮುಂದೆ ಇಟ್ಟಿದ್ದರು. ಆ ಸಮಯದಲ್ಲಿ ಯಾರೋ ಕಳ್ಳರು ಈ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ವೆಂಕಟೇಶಪ್ಪ ರವರು ದೂರು ನೀಡಿದ್ದು ತನ್ನ ಗ್ರಾಮದ ವಾಸಿ ನಾಗೇಶ್ (೧೯) ಎಂಬುವನ ಮೇಲೆ ಅನುಮಾನವಿರುವುದಾಗಿ ತಿಳಿಸಿರುತ್ತಾರೆ. ಕಳುವಾದ ಆಭರಣಗಳ ಬೆಲೆ ರೂ. ೭,೦೦೦/ ಆಗಿರುತ್ತದೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೯-೦೯-೦೯ ರಂದು ರಾತ್ರಿ  ಮಾಲೂರು ತಾಲ್ಲೂಕು ಕುಡಿಯನೂರು ಗ್ರಾಮದ ವಾಸಿಯಾದ ವೆಂಕಟೇಶಪ್ಪ ಎಂಬುವರು ತಮ್ಮ ಟಿ.ವಿ.ಎಸ್. ದ್ವಿಚಕ್ರ ವಾಹನ ಸಂ. ಕೆಎ-೦೧-ಡ್ಲೂಯು-೩೭೧೫ ರಲ್ಲಿ ಮೈ;ಲಾಂಡಹಳ್ಳಿ ಗೇಟ್ ಬಳಿ ಹೋಗುತ್ತಿದ್ದರು.  ಅ ಸಮಯದಲ್ಲಿ ಯಾವುದೋ ವಾಹನದ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ವೆಂಕಟೇಶಪ್ಪ ರವರಿಗೆ ಡಿಕ್ಕಿ ಹೊಡೆದಿದ್ದರು ಪರಿಣಾಮವಾಗಿ ಅವರಿಗೆ ತೀವ್ರವಾದ ಗಾಯಗಳಾಗಿರುತ್ತದೆ.  ಇವರನ್ನು ಅದೇ ಗ್ರಾಮದ ವಾಸಿಯಾದ ಶಶಿ ಎಂಬುವರು ಮರುದಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ : ೦೧-೧೦-೨೦೦೯ ರಂದು ಮೃತಪಟ್ಟಿರುವುದಾಗಿ ವಿಕ್ಟೋರಿಯ ಆಸ್ಪತ್ರೆ ಪೊಲೀಸ್ ಠಾಣೆಯ ಠಾಣಾಧಿಕಾರಿರವರು ಇಂದು ಮಾಲೂರು ಠಾಣೆಗೆ ಮಾಹಿತಿ ರವಾನಿಸಿರುತ್ತಾರೆ.

-ಸಾಧಾರಣ : ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ  

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ಇಲ್ಲ.

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಕಳವು ಪ್ರಕರಣ ಬಯಲಿಗೆ: ರೂ. ೨ ಲಕ್ಷ ಬೆಲೆಯ ಆಭರಣಗಳು ವಶ, ಒಬ್ಬನ ಬಂಧನ

November 4, 2009
Theft k(rul)

ಬಂಧಿತ ಆರೋಪಿ: ಪ್ರವೀಣ್ ಕುಮಾರ್‍

ದಿನಾಂಕ ೨೭-೧೦-೨೦೦೯ ರಂದು ಮದ್ಯಾಹ್ನ ಕೋಲಾರ ತಾಲೂಕು ಬಟ್ರಹಳ್ಳಿ ಗ್ರಾಮದ ವಾಸಿ ಆರ್‍.ಮುನೇಗೌಡ ಎಂಬುವರ ವಾಸದ ಮನೆಗೆ ನುಗ್ಗಿದ್ದ ಯರೋ ಕಳ್ಳರು ೨ ಲಕ್ಷ ರೂ ಬೆಲೆ ಬಾಳುವ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಕೋಲಾರ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಶ್ರೀ ಎ.ಧನಂಜಯ ಹಾಗೂ ಅಪರಾಧ ಪತ್ತೆ ದಳದ ಸಿಬ್ಬಂದಿಯವರಾದ ಎ.ಎಸ್.ಐ ವೆಂಕಟೇಶ್, ಪಿ.ಸಿ ೩೧೦ ಎ.ರಮೇಶ್, ಪಿ.ಸಿ ೬೮೭ ಮುನಿವೆಂಕಟಸ್ವಾಮಿ, ಪಿ.ಸಿ ೩೭೮ ರಮೇಶ್ ಬಾಬು ಮತ್ತು ಪಿ.ಸಿ ೧೩೬ ಖಾಸಿಂ ಎಂಬುವರನ್ನೊಳಗೊಂಡ ತಂಡ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಕೋಲಾರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ಕೆ.ಪಿ.ಪುಟ್ಟಸ್ವಾಮಿ, ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರಿ. ಫಣೀಂದ್ರಸಿಂಗ್ ರವರ ಮಾರ್ಗದರ್ಶನದಲ್ಲಿ ತನಿಖೆಯನ್ನು ಮುಂದುವರಿಸಿದ ಮೇಲ್ಕಂಡ ತಂಡ ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಕೆ.ಎನ್.ಪ್ರವೀಣ್ ಕುಮಾರ್‍ (೧೬) ತಂದೆ ನಾರಾಯಣಪ್ಪ ವಾಸ: ಕಳ್ಳಕುಪ್ಪ ಗ್ರಾಮ, ಬಂಗಾರಪೇಟೆ ತಾಲೂಕು ಎಂಬುವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತದೆ.  ಬಂಧಿತನು ನೀಡಿದ ಮಾಹಿತಿ ಮೇರೆಗೆ ಕಳುವಾದ ರೂ. ೨ ಲಕ್ಷ ಬೆಲೆಯ ಈ ಕೆಳಕಂಡ ಆಭರಣಗಳನ್ನು ವಶಪಡಿಸಿಕೊಳ್ಳಾಗಿರುತ್ತದೆ.

೧. ಒಂದು ಚಿನ್ನದ ಸರ

೨. ಲಕ್ಷ್ಮಿ ಡಾಲರ್‍ ಇರುವ ಮತ್ತೊಂದು ಚಿನ್ನದ ಸರ

೩. ಒಂದು ಕೈ ಚೈನ್

೪. ಒಂದು ಸಾದಾ ನೆಕ್ಲೆಸ್

೫. ೩ ಎಳೆ ಚಿನ್ನದ ಸರ

೬. ಒಂದು ಜೊತೆ ಬಳೆ

೭. ಹ್ಯಾಂಗಿಗ್ಸ್ ಓಲೆ ಒಂದು ಜೊತೆ

೮. ಒಂದು ಜೊತೆ ಕಿವಿ ಮಾಟಿಗಳು

೯. ಎರಡು ವೆಂಕಿ ಉಂಗುರಗಳು

೧೦. ೩ ಉಂಗುರಗಳು

೧೧. ಒಂದು ಸಾಧಾ ಉಂಗುರ.

ಬಂಧಿತ ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗಿದ್ದು. ಪ್ರಸ್ತುತ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೪ ನೇ ನವಂಬರ್ ೨೦೦೯

November 4, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೩-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಸುಮಾರು ೨೫-೩೦ ವರ್ಷ ವಯಸ್ಸಿನ ಅಪರಿಚಿತ ಗಂಡಸು ಕೊಲೆಗೀಡಾಗಿದ್ದು ಕೋಲಾರ ತಾಲೂಕು ಸೂಲೂರು ಗ್ರಾಮದ ಗೇಟ್ ಬಳಿ ಶವ ದೊರೆತಿರುತ್ತದೆ. ಮೃತ ವ್ಯಕ್ತಿಯ ಕೈ ಮತ್ತು ಕಾಲುಗಳನ್ನು ವಿದ್ಯುತ್ ವೈರ್‍‌ನಿಂದ ಕಟ್ಟಿಹಾಕಲಾಗಿದ್ದು ಶವವನ್ನು ಕಂಡ ಪೆಮ್ಮಶೆಟ್ಟಿಹಳ್ಳಿ ಗ್ರಾಮದ ವಾಸಿ ಪಿ.ದೇವರಾಜ ಎಂಬುವರು ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ. ಕೊಲೆಯಾದ ವ್ಯಕ್ತಿಯ ವಿವರ ಮತ್ತು ಕೊಲೆಗೆ ಕಾರಣವನ್ನು ತಿಳಿಯಬೇಕಾಗಿರುತ್ತದೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗ್ಯಾಸ್ ಸಿಲಿಂಡರ್‍ ಕಳುವಾದ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ವಡಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಕಳವು ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೧-೧೦-೨೦೦೯ ರಂದು ರಾತ್ರಿ ಶಾಲೆಯ ಬಾಗಿಲ ಬೀಗವನ್ನು ಮುರಿದು ಒಳ ಪ್ರವೇಶಿಸಿದ ಯಾರೋ ಕಳ್ಳರು ಶಾಲೆಯಲ್ಲಿದ್ದ ರೂ. ೧,೩೦೦/ ಬೆಲೆ ಬಾಳುವ ಎರಡು ಗ್ರಾಸ್ ಸಿಲಿಂಡರುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕರಾದ ಜಯಲಲಿತ ಎಂಬುವರು ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ : ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೧೧-೨೦೦೯ ರಂದು ೧೫೦೦ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ವಾಸಿಗಳಾದ ಮಧುನಸೂಧನ್ ಮತ್ತು ಕಿರಣ್ ಎಂಬುವರು ಸಂಖ್ಯೆ ಕೆಎ-೦೪-ಸಿ-೧೭೮೭ ಟಾಟಾ ಇಂಡಿಕಾ ಕಾರಿನಲ್ಲಿ ಬೆಂಗಳೂರಿಗೆ ಹೋಗುವ ಸಲುವಾಗಿ ಮುಳಬಾಗಿಲು-ಪುಂಗನೂರು ರಸ್ತೆಯ ಶ್ರೀನಿವಾಸ ನಗರ ಗೇಟ್ ಸಮೀಪ ಹೋಗುತ್ತಿದ್ದರು. ಆ ಸಮಯದಲ್ಲಿ ವಡ್ಡಹಳ್ಳಿ ಕಡೆಯಿಂದ ಬಂದ ಕೆಎ-೦೧-ಎ-೧೧೪೧ ಸಂಖ್ಯೆಯ ಲಾರಿ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಕಾರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಕಾರು ಜಖಂಗೊಂಡು ಕಾರಿನಲ್ಲಿದ್ದವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ನರಸಾಪುರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೧-೧೧-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ನಾರಸಾಪುರ ಗ್ರಾಮದ ವಾಸಿ ಗಂಗಾಧರ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಮುನಿರಾಜ, ಮುನಿಯಪ್ಪ, ಪದ್ಮ ಮತ್ತು ಚಿಕ್ಕ ಮುನಿಯಮ್ಮ ಎಂಬುವರು ಅಕ್ರಮಗುಂಪು ಕಟ್ಟಿಕೊಂಡು ಬಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿ ಗಾಯಪಡಿಸಿರುತ್ತಾರೆ. ಈ ಬಗ್ಗೆ ಎರಡೂ ಗುಂಪಿನವರು ಹೊಡೆದಾಡಿಕೊಂಡಿದ್ದು ದೂರು ಮತ್ತು ಪ್ರತಿದೂರು ಬಂದ ಹಿನ್ನೆಲೆಯಲ್ಲಿ ಕೇಸು ಮತ್ತು ಪ್ರತಿಕೇಸಿನ ಅಡಿಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಸಹಾ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩ ನೇ ನವಂಬರ್ ೨೦೦೯

November 2, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೩-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಎಂ.ಬಿ ರಸ್ತೆಯ ಶಾರದ ಟಾಕೀಸ್ ಹಿಂಬಾಗ ವಾಸವಾಗಿರುವ ಸೈಯದ್ ಇನಾವತುಲ್ಲಾ ಎಂಬುವರ ಮನೆಯಲ್ಲಿ ಕಳವು ಸಂಭವಿಸಿರುತ್ತದೆ. ದಿನಾಂಕ ೦೨-೧೧-೨೦೦೯ ರಂದು ರಾತ್ರಿ ಇನಾವತುಲ್ಲಾ ರವರು ತಮ್ಮ ಮನೆಗೆ ಬೀಗ ಹಾಕಿಕೊಂಡು ತಮ್ಮ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇರದ ಈ ಸಮಯದಲ್ಲಿ ಬಾಗಿಲಿನ ಬೀಗವನ್ನು ಮುರಿದು ಒಳ ಪ್ರವೇಶಿಸಿದ ಯಾರೋ ಕಳ್ಳರು ಮನೆಯ ಬೀರುವಿನಲ್ಲಿದ್ದ ರೂ. ೨೩,೦೦೦/ ಬೆಲೆ ಬಾಳುವ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: 01

ನಂಗಲಿ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಮಕಲಹಳ್ಳಿ ಗ್ರಾಮದ ವಾಸಿ ಎಸ್.ನಯಾಜ್ ಎಂಬುವರ ಜರ್ಸಿ ಜಾತಿಯ ಹಸು ಕಳುವಾಗಿರುತ್ತದೆ. ದಿನಾಂಕ ೦೨-೧೧-೨೦೦೯ ರಂದು ಇವರು ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೧೧-೨೦೦೯ ರಂದು ೦೭೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕೋಗಿಲಹಳ್ಳಿ ಗ್ರಾಮದ ವಾಸಿ ಸೈಯದ್ ಮುನೀರ್‍ ಪಾಷ (೩೫) ಎಂಬುವರು ಕೂಲಿ ಕೆಲಸಕ್ಕೆ ಹೋಗುವ ಸಲುವಾಗಿ ತಮ್ಮ ಗ್ರಾಮದಿಂದ ಹೊರಟು ಕೋಲಾರ-ಬಂಗಾರಪೇಟೆ ರಸ್ತೆಯ ಕೋಗಿಲಹಳ್ಳಿ ಕ್ರಾಸ್ ಬಳಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಂಗಾರಪೇಟೆ ಕಡೆಯಿಂದ ಬಂದ ಗೂಡ್ಸ್ ಟೆಂಪೋ ಸಂಖ್ಯೆ ಕೆಎ-೦೭-೩೮೨೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಸಯೈದ್ ಮುನೀರ್‍ ಪಾಷ ರವರಿಗೆ ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮ ತೀವ್ರವಾಗಿ ಗಾಯಗೊಂಡ ಇವರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

-ಸಾಧಾರಣ : ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಬಾಳಿಗಾನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೧-೧೧-೨೦೦೯ ರಂದು ೧೮೩೦ ಗಂಟೆ ಸಮಯದಲ್ಲಿ ಬಾಳಿಗಾನಹಳ್ಳಿ  ವಾಸಿಗಳಾದ ಬಿ.ಕೆ.ರವಿಶಂಕರ್‍  ಮತ್ತಿತರೇ ೭ ಜನರು ಅಕ್ರಮಗುಂಪು ಕಟ್ಟಿಕೊಂಡು ಗ್ರಾಮದ ಹಾಲು ಉತ್ಪಾದಕರ ಸಂಘದ ಕಛೇರಿ ಬಳಿಗೆ ಬಂದು ಅಲ್ಲಿದ್ದ ಸಂಘದ ಅದ್ಯಕ್ಷರು, ನಿರ್ದೇಶಕರು ಮತ್ತು ಕಾರ್ಯದರ್ಶಿಗಳ ಮೇಲೆ ಜಗಳ ತೆಗೆದು ಮಾರಕಾಸ್ತ್ರಗಳಿಂದ ಬೆದರಿಸಿ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨ ನೇ ನವಂಬರ್ ೨೦೦೯

November 1, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೨-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ : ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೧೧-೨೦೦೯ ರಂದು ವೇಮಗಲ್ ವಾಸಿ ಮುನಿರಾಜ ಎಂಬುವರು ತನ್ನ ಸ್ನೇಹಿತ ಅನ್ವರ ಎಂಬುವರೊಡನೆ ಕೆಂದಟ್ಟಿ ಗ್ರಾಮದ ಬಳಿಯ ನಿಸರ್ಗ ಡಾಭ ಮುಂದೆ ನಿಂತಿದ್ದರು. ಆ ಸಮಯದಲ್ಲಿ ಕೋಲಾರ ನಗರದ ಕಡೆಯಿಂದ ಬಂದ ಇನ್ನೋವಾ ಕಾರ್‍ ಸಂಖ್ಯೆ ಕೆಎ-೦೩-ಎಂಹೆಚ್-೩೯೦ ರ ಚಾಲಕ ರಾಘವೇಂದ್ರ ರೆಡ್ಡಿ ಎಂಬುವರು ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮ ಮುನಿರಾಜ ಮತ್ತು ಅನ್ವರ್‍ ರವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಕೋಲಾರ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಹಲ್ಲೆ ಅಕ್ರಮಪ್ರವೇಶ ಮತ್ತು ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಕೂಟೇರಿ ಗ್ರಾಮದ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೧-೧೦-೨೦೦೯ ರಂದು ಮದ್ಯಾಹ್ನ ಈ ಲಕ್ಷ್ಮಿಸಾಗರ ಗ್ರಾಮದ  ವಾಸಿ ಲಕ್ಷ್ಮಮ್ಮ ಎಂಬುವರ ಮೇಲೆ ಜಗಳ ತೆಗೆದ ಕೃಷ್ಣಪ್ಪ ಎಂಬುವನು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದು ಪ್ರಾಣಬೆದರಿಕೆ ಹಾಕಿರುತ್ತಾನೆ. ಈ ಹಿಂದೆ ಕೃಷ್ಣಪ್ಪ ಲಕ್ಷ್ಮಮ್ಮ ರವರ ಮನೆಗೆ ಅಕ್ರಮಪ್ರವೇಶ ಮಾಡಿ ಜೆ.ಸಿ.ಬಿ ಯಿಂದ ಮನೆ ನಾಷ ಮಾಡಿ ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ಕಳವು ಮಾಡಿದ್ದು ಈ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುವುದಾಗಿ ಲಕ್ಷ್ಮಮ್ಮ ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೧ ನೇ ನವಂಬರ್ ೨೦೦೯

October 31, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೧-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ : ೦೨

ಕೋಲಾರ ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೧೦-೨೦೦೯ ರಂದು ೧೩೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ  ತಾಲ್ಲೂಕು ಬಂಡಮಾಕನಹಳ್ಳಿ ಗ್ರಾಮದ ವಾಸಿಯಾದ ಹೇಮಂತ್ ಎಂಬುವರು ಕೆ.ಎಸ್.ಆರ್‍.ಟಿ.ಸಿ. ಬಸ್ ಸಂ. ಕೆಎ-೦೭-ಎಫ್-೧೩೫೧ ರಲ್ಲಿ ಕೋಲಾರ ಕಡೆಯಿಂದ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದರು.  ಬಸ್ ಚಾಲಕ ಬೇತಮಂಗಲ ರಸ್ತೆಯ ಬಸಾಪುರ ಗೇಟ್ ಬಳಿ  ವಾಹನವನ್ನು  ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದರ ಪರಿಣಾಮವಾಗಿ ಬಾಗಿಲಲ್ಲಿ ನಿಂತಿದ್ದ ಹೇಮಂತ್ ಕೆಳಗಡೆ ಬಿದ್ದು ಗಾಯಗಳಾಗಿರುತ್ತದೆ.

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೧೦-೨೦೦೯ ರಂದು ೧೦೪೫ ಗಂಟೆ ಸಮಯದಲ್ಲಿ ಮದನಪಲ್ಲಿ ವಾಸಿಯಾದ ಶ್ರೀನಿವಾಸಲು ಎಂಬುವರು ತಮ್ಮ ದ್ವಿಚಕ್ರವಾಹನ ಸಂಖ್ಯೆ ಎಪಿ-೦೩-ಬಿ-೯೯೫೨ ರಲ್ಲಿ ವಸಂತನಾಯನಕೆರೆ ಕಟ್ಟೆ ಮೇಲೆ ಹೋಗುತ್ತಿದದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಕೆಎ-೪೦-೬೮೦೦ ಖಾಸಗಿ ಬಸ್ ಚಾಲಕ ತನ್ನ ವಾಹನವನ್ನು  ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಾಣಬೆದರಿಕೆ ಒಡ್ಡಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೧೦-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಬೆಳಗಾನಹಳ್ಳಿ ಗ್ರಾಮದ ವಾಸಿ ಮಂಜುನಾಥ ಎಂಬುವರು ತಮ್ಮ ಗ್ರಾಮದ ಹಾಲಿನ ಕೇಂದ್ರದ ಬಳಿ ಇದ್ದಾಗ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿ ರಾಜಗೋಪಾಲ್ ಎಂಬುವನು ಜಗಳ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾನೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.