November 30, 2007
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೧೧-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ೦೧
-
ಮಾಲೂರು ಪೊಲೀಸ್ ಠಾಣೆಯಲ್ಲಿ ಸುಲಿಗೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೧೧-೨೦೦೭ ರಂದು ೨೨೦೦ ಗಂಟೆ ಸಮಯದಲ್ಲಿ ಮಾಲುರು ಪುರ ಗಾಂಧಿನಗರದ ವಾಸಿ ನರಸಮ್ಮ (೨೫) ಎಂಬುವರು ತಮ್ಮ ಮನೆಯಲ್ಲಿದ್ದರು. ಆ ಸಮಯದಲ್ಲಿ ಯಾರೋ ಹೊರಗಿನಿಂದ ಅಕ್ಕ ಎಂದು ಕೂಗಿ ಬಾಗಿಲುತಟ್ಟಿದ ಶಬ್ದ ಕೇಳಿಸಿದ್ದು ಪರಿಚಯಸ್ಥರಿರಬಹುದೆಂದು ತಿಳಿದ ನರಸಮ್ಮ ರವರು ಬಾಗಿಲು ತೆರೆದಿರುತ್ತಾರೆ. ಆಗ ಹೊರಗಿನಿಂದ ಬಂದ ಇಬ್ಬರು ಅಪರಿಚಿತರು ಬಾಗಿಲು ಮುಚ್ಚಿ ನರಸಮ್ಮರವರ ಬಾಯಿ ಮತ್ತು ಕೈಗಳನ್ನು ಕಟ್ಟಿಹಾಕಿ, ಚಾಕುವಿನಿಂದ ಬೆದರಿಸಿ ಮನೆಯ ಬೀರುವಿನಲ್ಲಿಟ್ಟಿದ್ದ ಸುಮಾರು ರೂ. ೬೦,೦೦೦/ ಬೆಲೆ ಬಾಳುವ ಬಂಗಾರದ ಒಡವೆಗಳನ್ನು ದೋಚಿಕೊಂಡು ಹೋಗಿರುತ್ತಾರೆ.
ಮನೆಗಳ್ಳತನ: ೦೧
-
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ವರದಿಯಾಗಿರುತ್ತದೆ. ಮನೆಕಳವು ಪ್ರಕರಣದಲ್ಲಿ ಆರೋಪಿಗಳಾದ ಕೋಲಾರ ತಾಲೂಕು ಬೆಳ್ಳೂರು ಗ್ರಾಮ ವಾಸಿ ಚಿನ್ನಪ್ಪ (೨೩) ಮತ್ತು ಕೋಲಾರ ಪುರ ನಿಸಾರ್ ನಗರದ ವಾಸಿ ನಾಗರಾಜ (೨೩) ಎಂಬುವರು ಕಳವು ಮಾಲಿನೊಂದಿಗೆ ಸಿಕ್ಕಿಬಿದ್ದಿರುತ್ತಾರೆ. ಆರೋಪಿಗಳು ಈಗ್ಗೆ ೧೦ ದಿನಗಳ ಹಿಂದೆ ಕೋಲಾರದ ರಹಮತ್ ನಗರದ ಒಂದು ಮನೆಯ ಡೋರ್ ಲಾಕ್ ಹೊಡೆದು ಒಳಗೆ ಪ್ರವೇಶಿಸಿ ಮನೆಯಲ್ಲಿದ್ದ ನಗದು, ಬೆಳ್ಳಿ ಹಾಗೂ ಬಂಗಾರದ ಒಡವೆಗಳನ್ನು ಕಳುವು ಮಾಡಿರುತ್ತಾರೆ. ದಿನಾಂಕ ೩೦-೧೧-೨೦೦೭ ರಂದು ೦೭೦೦ ಗಂಟೆ ಸಮಯದಲ್ಲಿ ಆರೋಪಿಗಳು ಕೋಲಾರ-ಚಿಕ್ಕಬಳ್ಳಾಪುರ ರಸ್ತೆಯ ಸಂಗೊಂಡಹಳ್ಳಿ ಬಳಿ ಕಳವುಮಾಲಿನೊಂದಿಗೆ ಅನುಮಾನಸ್ಪದವಾಗಿ ನಿಂತಿದ್ದು ಇವರನ್ನು ನೋಡಿದ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಆರಕ್ಷಕ ಉಪನಿರೀಕ್ಷಕರಾದ ಶ್ರೀ ಎಂ.ಎಸ್ ಸರ್ದಾರ್ ರವರು ವಿಚಾರ ಮಾಡಿದಾಗ ಆರೋಪಿಗಳು ಕಳ್ಳತನ ಮಾಡಿರುವ ವಿಚಾರ ಬೆಳಕಿಗೆ ಬಂದಿರುತ್ತದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಿರುತ್ತೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೧೧-೨೦೦೭ ರಂದು ೦೯೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ತಾತಘಟ್ಟ ಗ್ರಾಮದ ವಾಸಿ ಚೆಲುವರಾಜು ಎಂಬುವರು ತಮ್ಮ ಗ್ರಾಮದಿಂದ ಮುಳಬಾಗಿಲಿಗೆ ಬಂದು ಬಸ್ ಸ್ಟಾಂಡ್ ಸಮೀಪ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಸಂಗಸಂದ್ರ ಗ್ರಾಮದ ವಾಸಿ ವಿಜಯಕುಮಾರ್, ಮಾರಂಡಹಳ್ಳಿ ವಾಸಿ ಚಲಪತಿ, ತಾತಘಟ್ಟ ಗ್ರಾಮದ ವಾಸಿಗಳಾದ ಆನಂದ, ದೇವರಾಜ್, ರಾಜಪ್ಪ ಇತರರು ಅಕ್ರಮಗುಂಪು ಕಟ್ಟಿಕೊಂಡು ದೊಣ್ಣೆ ಮತ್ತು ಕೈಗಳಿಂದ ಚೆಲುವರಾಜು ರವರಿಗೆ ಹೊಡೆದು ಗಾಯಪಡಿಸಿ, ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಟಿ.ನಡುಮಪಲ್ಲಿ ಅರಣ್ಯದಲ್ಲಿ ಮರ ಕಡಿದಿರುವ ಬಗ್ಗೆ ಆರೋಪಿಗಳ ವಿರುದ್ದ ಚಲುವರಾಜು ರವರು ಅರಣ್ಯ ಇಲಾಖೆಗೆ ದೂರು ನೀಡಿದ್ದು ಈ ಸಂಬಂಧ ದ್ವೇಷದಿಂದ ಆರೋಪಿಗಳು ಈ ಕೃತ್ಯ ಎಸಗಿರುತ್ತಾರೆ.
-
ವೇಮಗಲ್ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿರುತ್ತದೆ. ದಿನಾಂಕ ೨೯-೧೧-೨೦೦೭ ರಂದು ಕೋಲಾರ ತಾಲೂಕು, ವೇಮಗಲ್ ಹೋಬಳಿ ಬೆಟ್ಟಹೊಸಪುರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ಎರಡು ಗುಂಪುಗಳ ಜನರು ಅಕ್ರಮಗುಂಪು ಕಟ್ಟಿಕೊಂಡು ಪರಸ್ಪರ ದೊಣ್ಣೆಗಳಿಂದ, ಕೈಗಳಿಂದ ಹೊಡೆದಾಡಿಕೊಂಡು, ಅವಾಚ್ಯ ಶಬ್ದಗಳಿಂದ ಬೈದು. ಪ್ರಾಣ ಬೆದರಿಕೆ ಹಾಕಿಕೊಂಡಿರುತ್ತಾರೆ. ಇದರ ಪರಿಣಾಮ ಎರಡೂ ಗುಂಪಿನವರಿಗೂ ಗಾಯಗಳುಂಟಾಗಿರುತ್ತದೆ. ಈ ಸಂಬಂಧವಾಗಿ ದೂರುಗಳು ಮತ್ತು ಪ್ರತಿದೂರುಗಳ ದಾಖಲಾಗಿರುತ್ತದೆ. ಎರಡು ಗುಂಪಿನವರ ನಡುವೆ ಇದ್ದಂತಹ ವೈಷಮ್ಯವೇ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
November 29, 2007
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೧೧-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೩
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೩
-
ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೧೧-೨೦೦೭ ರಂದು ೦೯೪೫ ಗಂಟೆ ಸಮಯದಲ್ಲಿ ಕೋಲಾರ ನಗರ ಕೆ.ಪಿ.ಟಿ.ಸಿ.ಎಲ್ ಕಾಲೋನಿಯ ವಾಸಿ ಶ್ರೀಮತಿ ಶ್ಯಾಮಲಾ ರವರು ತಮ್ಮ ಗಂಡ ನಿಜಗುಣ ಆರಾಧ್ಯ ರವರೊಂದಿಗೆ ತಮ್ಮ ಟಿ.ವಿ.ಎಸ್ ಹೆವಿಡ್ಯೂಟಿ ಸಂಖ್ಯೆ ಕೆಎ-೦೬-ವಿ-೪೨೬೫ ವಾಹನದಲ್ಲಿ ಎನ್.ಹೆಚ್-೦೪ ರಸ್ತೆಯ ಹಾರೋಹಳ್ಳಿ ಗೇಟ್ ಸಮೀಪ ಬರುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಕಾರ್ ಸಂಖ್ಯೆ ಎಪಿ-೦೩-ಪಿ-೦೦೧೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ನಿಜಗುಣ ಆರಾದ್ಯರವರು ಕೆಳಗೆ ಬಿದ್ದಿದ್ದು ತಲೆಗೆ ಗಾಯಗಳುಂಟಾಗಿರುತ್ತದೆ.
-
ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೧೧-೨೦೦೭ ರಂದು ಬಂಗಾರಪೇಟೆ ತಾಲೂಕು ವಾಸಿ ಹರೀಶ ಎಂಬುವರು ತಮ್ಮ ಬಜಾಜ್ ಪಲ್ಸರ್ ಸಂಖ್ಯೆ ಕೆಎ-೦೭-ಎಲ್-೮೯೯೪ ವಾಹನದಲ್ಲಿ ಕೋಲಾರ ನಗರದ ಬಾಪೂಜಿ ಶಾಲೆ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಆಟೋ ಸಂಖ್ಯೆ ಕೆಎ-೦೭-೬೯೬೮ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಹರೀಶ ರವರಿಗೆ ಗಾಯಗಳುಂಟಾಗಿದ್ದು ಕೋಲಾರದ ನೂಕಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ೦೧
-
ವೇಮಗಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೧೧-೨೦೦೭ ರಂದು ೨೩೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಬೆಟ್ಟಹೊಸಪುರ ಗ್ರಾಮದ ವಾಸಿ ರೆಡ್ಡಪ್ಪ ಎಂಬುವರ ಮೇಲೆ ಅದೇ ಗ್ರಾಮದ ವಾಸಿಗಳಾದ ಶ್ರೀನಿವಾಸ, ರಾಜೇಶ ಮತ್ತು ಶಿವ ಎಂಬುವರು ಜಗಳ ತೆಗೆದು ದೊಣ್ಣೆಗಳಿಂದ, ಕಲ್ಲಿನಿಂದ ಹಾಗೂ ಕೈಗಳಿಂದ ಹೊಡೆದು ತೀವ್ರ ಗಾಯಗಳನ್ನುಂಟು ಮಾಡಿ ಕೊಲೆ ಮಾಡಲು ಪ್ರಯತ್ನಿಸಿರುತ್ತಾರೆ. ಪರಸ್ಪರರ ಮದ್ಯೆ ಇದ್ದಂತಹ ವೈಯಕ್ತಿಕ ದ್ವೇಷವೆ ಈ ಕೃತ್ಯಕ್ಕೆ ಕಾರಣವಾಗಿರುವುದಾಗಿ ತಿಳಿದು ಬಂದಿರುತ್ತದೆ.
ದೊಂಬಿ: ೦೨
-
ವೇಮಗಲ್ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೧೧-೨೦೦೭ ರಂದು ೦೭೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಬೆಟ್ಟ ಹೊಸಪುರ ಗ್ರಾಮದಲ್ಲಿ ಪ್ರಕರಣ ಸಂಭವಿಸಿರುತ್ತೆ. ಬೆಟ್ಟಹೊಸಪುರ ಗ್ರಾಮದ ವಾಸಿ ಪರಮೇಶ ಎಂಬುವರ ಮೇಲೆ ಆರೋಪಿಗಳಾದ ಅದೇ ಗ್ರಾಮದಲ್ಲಿ ವಾಸವಾಗಿರುವ ಸತೀಶ, ಅದಾನಂದ, ರಾಜೇಶ, ರಾಜಣ್ಣ, ಶಿವಕುಮಾರ, ಕೆಪ್ಪಾರೆಡ್ಡಿ ಮತ್ತು ಬೈರಾರೆಡ್ಡಿ ಎಂಬುವರು ಜಗಳ ತೆಗೆದು ದೊಣ್ಣೆಗಳಿಂದ ಕಲ್ಲುಗಳಿಂದ ಹೊಡೆದು ಗಾಯ ಪಡಿಸಿ, ಅವಾಚ್ಯ ಶಬ್ದಗಳಿಂದ ಬೈದು, ಪ್ರಾಣ ಬೆದರಿಕೆ ಹಾಕಿರುತ್ತಾರೆ. ಪರಸ್ಪರ ಮದ್ಯೆ ಇದ್ದಂತಹ ವೈಯಕ್ತಿಕ ದ್ವೇಷ ಈ ಕೃತ್ಯಕ್ಕೆ ಕಾರಣವಾಗಿರುವುದಾಗಿ ತಿಳಿದು ಬಂದಿರುತ್ತದೆ.
ಹಲ್ಲೆ: ೦೧
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
November 28, 2007
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೧೧-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೧
-
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೧೧-೨೦೦೭ ರಂದು ೧೫೩೦ ಗಂಟೆ ಸಮಯದಲ್ಲಿ ಬೆಂಗಳೂರಿನ ಉಳ್ಳಾಲ ಉಪನಗರದ ವಾಸಿ ಶಿವಾರೆಡ್ಡಿ (೪೪) ಎಂಬುವರು ತಮ್ಮ ಕುಟುಂಬದೊಡನೆ ಮಾರುತಿ ಓಮನಿ ಕಾರ್ ಸಂಖ್ಯೆ ಕೆಎ-೦೪-ಎಂಬಿ-೨೬೮೪ ವಾಹನದಲ್ಲಿ ಕೋಲಾರದಿಂದ ಬೆಂಗಳೂರಿಗೆ ಹೋಗುವ ಸಲುವಾಗಿ ಎನ್.ಹೆಚ್-೦೪ ರಸ್ತೆಯ ಮಡೇರಹಳ್ಳಿ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಒಂದು ಕೆ.ಎಸ್.ಆರ್.ಟಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೧೨೨೦ ರ ಚಾಲಕ ಸಹೂರಾವ್ ಎಂಬುವರು ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಶಿವಾರೆಡ್ಡಿ ರವರು ಹೋಗುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಶಿವಾರೆಡ್ಡಿ, ಅವರ ಮಕ್ಕಳಾದ ಬ್ರಹ್ಮಿಣಿ ಹಾಗೂ ಪೃತ್ವಿ ಎಂಬುವರಿಗೆ ಗಾಯಗಳಾಗಿದ್ದು ಶಿವಾರೆಡ್ಡಿ ರವರ ಹೆಂಡತಿ ಅಮರಾವತಿ ಎಂಬುವರಿಗೆ ತೀವ್ರ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.
-ಸಾಧಾರಣ: ೦೧
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
November 28, 2007
ದಿನಾಂಕ ೨೭-೧೧-೨೦೦೭ ರಂದು ೧೧೩೦ ಗಂಟೆಗೆ ಮಾಸ್ತಿ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಶ್ರೀ ರಾಘವೇಂದ್ರನ್ ರವರು ತಮಗೆ ದೊರೆತ ಖಚಿತ ವರ್ತಮಾನದ ಮೇಲೆ ತಮ್ಮ ಸಿಬ್ಬಂದಿಯೊಡನೆ ಮಾಸ್ತಿ ಹೋಬಳಿಯ ರಾಜೇನಹಳ್ಳಿ ಕೆರೆ ಬಳಿ ದಾಳಿ ನಡೆಸಿ ಕೋಳಿ ಪಂದ್ಯದ ಜೂಜಾಟದಲ್ಲಿ ನಿರತರಾಗಿದ್ದ ೧೫ ಜನ ಆರೋಪಿಗಳನ್ನು ಸ್ಳಳದಲ್ಲಿಯೇ ಬಂಧಿಸಿರುತ್ತಾರೆ. ಕಾರ್ಯಾರಚರಣೆ ವೇಳೆ ಜೂಜಾಟಕ್ಕೆ ಪಣವಾಗಿ ಇಟ್ಟಿದ್ದ ರೂ ೭೧೦/ ನಗದು, ೫ ದ್ವಿಚಕ್ರವಾಹನಗಳು ಹಾಗೂ ೪ ಹುಂಜಗಳನ್ನು ವಶಪಡಿಸಿಕೊಂಡಿರುತ್ತಾರೆ.
ಬಂಧಿತ ಆರೋಪಿಗಳ ವಿವರ
- ಶ್ರೀನಿವಾಸ (೩೫)
- ಮುನಿಯಪ್ಪ (೩೫), ನೆಲ್ಲಹಳ್ಳಿ, ಮಾಲೂರು ತಾಲೂಕು.
- ನಾಗೇಶ (೨೨), ಅಸಂಬಳ್ಳಿ, ಮಾಲೂರು ತಾಲೂಕು.
- ಗೋವಿಂದಪ್ಪ (೩೦), ಮುಪ್ಪರಹಳ್ಳಿ, ಮಾಲೂರು ತಾಲೂಕು.
- ಪೂಜಾರಪ್ಪ (೪೩), ರಾಜೇನಹಳ್ಳಿ, ಮಾಲೂರು ತಾಲೂಕು.
- ಆನಂದ (೩೫), ನಲ್ಲಾಂಡಹಳ್ಳಿ, ಮಾಲೂರು ತಾಲೂಕು.
- ರಾಮಕೃಷ್ಣಪ್ಪ (೪೫), ದೊಡ್ಡ ಕಲ್ಲಹಳ್ಳಿ, ಮಾಲೂರು ತಾಲೂಕು.
- ಉತ್ತಪ್ಪ (೩೫), ರಾಜೇನಹಳ್ಳಿ, ಮಾಲೂರು ತಾಲೂಕು.
- ಶ್ರೀಕಂಠಪ್ಪ (೬೦), ಮಾರಂಗಪುರ, ಮಾಲೂರು ತಾಲೂಕು.
- ಮುನಿಯಪ್ಪ (೬೫), ಜನಗತಿಮ್ಮನಹಳ್ಳಿ, ಮಾಲೂರು ತಾಲೂಕು.
- ರಾಜಪ್ಪ (೪೫), ಅದಿಕಾರಹಟ್ಟಿ, ಮಾಲೂರು ತಾಲೂಕು.
- ಮುನಿಯಪ್ಪ (೬೫), ಬೂಧಿಕೋಟೆ.
- ಮಾರಪ್ಪ (೬೫), ಗೊಲ್ಲಹಳ್ಳಿ, ಮಾಲೂರು ತಾಲೂಕು.
- ಮಂಜು (೨೪), ಮುಪ್ಪರಹಳ್ಳಿ, ಮಾಲೂರು ತಾಲೂಕು.
- ನಾರಾಯಣಸ್ವಾಮಿ (೩೬), ದೊಡ್ಡಕಲ್ಲಹಳ್ಳಿ, ಮಾಲೂರು ತಾಲೂಕು.
ಈ ಸಂಬಂಧವಾಗಿ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಬಂಧಿತ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
Leave a Comment » |
ಅಪರಾಧ |
Permalink
Posted by kolarpolice
November 28, 2007
ಕೋಲಾರ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ನಾಗರೀಕ ಪೊಲೀಸ್ ಪೇದೆ ಹಾಗೂ ಮಹಿಳಾ ಪೊಲೀಸ್ ಪೇದೆ ಹುದ್ದೆಗಳ ನೇರ ನೇಮಕಾತಿ ಸಂಬಂಧವಾಗಿ ಕೋಲಾರ ಪೊಲೀಸ್ ಕವಾಯತು ಮೈದಾನದಲ್ಲಿ ದೇಹದಾರ್ಡ್ಯತೆ / ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ಏರ್ಪಡಿಸಲಾಗಿರುತ್ತದೆ.
ಪುರುಷ ಅಭ್ಯರ್ಥಿಗಳಿಗೆ ದಿನಾಂಕ ೦೩-೧೨-೨೦೦೭ ರಿಂದ ದಿನಾಂಕ ೦೭-೧೨-೨೦೦೭ ರವರೆಗೆ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ದಿನಾಂಕ ೦೮-೧೨-೨೦೦೭ ರಂದು ದೇಹದಾರ್ಡ್ಯತೆ / ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುತ್ತದೆ. ಪರೀಕ್ಷೆ ಮೇಲ್ಕಂಡ ದಿನಾಂಕಗಳಂದು ಬೆಳಗ್ಗೆ ೦೮೦೦ ಗಂಟೆಗೆ ಪ್ರಾರಂಭವಾಗಲಿದ್ದು ಈಗಾಗಲೇ ೧:೫ ರ ಅನುಪಾತದಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಹಾಜರಾತಿ ಹಾಳೆಗಳನ್ನು ಕಳುಹಿಸಿಕೊಡಲಾಗಿರುತ್ತದೆ.
|
ದಿನಾಂಕ
|
ರೋಲ್ ನಂಬರ್
|
ಅರ್ಹ ಅಭ್ಯರ್ಥಿಗಳು
|
|
ಇಂದ
|
ವರೆಗೆ
|
|
೦೩-೧೭-೦೭
|
೬೧೧೦೦೮
|
೬೧೧೮೧೧
|
೧೧೫ ಜನ ಅರ್ಹ ಪುರುಷ ಅಭ್ಯರ್ಥಿಗಳು
|
|
೦೪-೧೨-೦೭
|
೬೧೧೮೧೭
|
೬೧೨೫೭೨
|
೧೧೫ ಜನ ಅರ್ಹ ಪುರುಷ ಅಭ್ಯರ್ಥಿಗಳು
|
|
೦೫-೧೨-೦೭
|
೬೧೨೫೭೪
|
೬೧೩೬೦೨
|
೧೧೫ ಜನ ಅರ್ಹ ಪುರುಷ ಅಭ್ಯರ್ಥಿಗಳು
|
|
೦೬-೧೨-೦೭
|
೬೧೩೬೦೭
|
೬೧೪೫೭೫
|
೧೧೫ ಜನ ಅರ್ಹ ಪುರುಷ ಅಭ್ಯರ್ಥಿಗಳು
|
|
೦೭-೧೨-೦೭
|
೬೧೪೫೮೨
|
೬೧೫೬೭೦
|
೧೧೫ ಜನ ಅರ್ಹ ಪುರುಷ ಅಭ್ಯರ್ಥಿಗಳು
|
|
೦೮-೧೨-೦೭
|
೬೧೧೦೧೦
|
೬೧೫೬೬೬
|
೧೪೧ ಜನ ಅರ್ಹ ಮಹಿಳಾ ಅಭ್ಯರ್ಥಿಗಳು
|
Leave a Comment » |
ಆಡಳಿತಾತ್ಮಕ |
Permalink
Posted by kolarpolice
November 27, 2007
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೧೧-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೧೧-೨೦೦೭ ರಂದು ರಾತ್ರಿ ಮುಳಬಾಗಿಲು ತಾಲೂಕಿನ ಬಲ್ಲ ಗ್ರಾಮದಲ್ಲಿರುವ ಶ್ರೀಮತಿ ಮುನಿವೆಂಕಟಮ್ಮ ರವರ ಜಮೀನಿನ ಬಳಿ ಕೃತ್ಯ ಸಂಭವಿಸಿರುತ್ತದೆ. ಓ.ವೈ.ಟಿ ಐ.ಐ ಸ್ಥಾವರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ ೧೫ ಕೆ.ವಿ ವಿದ್ಯುತ್ ಪರಿವರ್ತಕದ ೩ ತಾಮ್ರದ ಕಾಯಿಲ್ ಗಳನ್ನು ಕೆಡವಿ ಅವುಗಳಲ್ಲಿದ್ದ ತಾಮ್ರದ ತಂತಿಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ತಾಮ್ರದ ತಂತಿಗಳ ಒಟ್ಟು ಮೌಲ್ಯ ರೂ. ೪೩,೮೬೨/ ಆಗಿರುತ್ತದೆ.
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೧
-ಸಾಧಾರಣ: ೦೧
-
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೧೧-೨೦೦೭ ರಂದು ೧೩೩೦ ಗಂಟೆ ಸಮಯದಲ್ಲಿ ಬೆಂಗಳೂರು ಕೋರಮಂಗಲದ ವಾಸಿ ಅರ್ಜುನ್ ಎಂಬುವರು ತಮ್ಮ ಕುಟುಂಬದೊಂದಿಗೆ ತಿರುಪತಿಗೆ ಹೋಗುವ ಸಲುವಾಗಿ ತಮ್ಮ ಕಾರ್ ಸಂಖ್ಯೆ ಕೆಎ-೦೧-ಜೆಡ್-೭೧೯೨ ರಲ್ಲಿ ಮುಳಬಾಗಿಲು ಹೊರವಲಯ ಎನ್.ಹೆಚ್-೦೪ ರಸ್ತೆಯ ಕೆ.ಬೈಪಲ್ಲಿ ಕ್ರಾಸ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಪಕ್ಕದ ತಿರುವಿನಿಂದ ಮುಳಬಾಗಿಲು ಕಡೆಗೆ ಬಂದ ಒಂದು ಟೆಂಪೋ ಸಂಖ್ಯೆ ಎಪಿ-೦೩-ಯು-೫೧೭೪ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಕಾರಿನಲ್ಲಿದ್ದ ಅರ್ಜುನ್, ಅವರ ತಾಯಿ, ಹೆಂಡತಿ ಮತ್ತು ಮಗನಿಗೆ ಗಾಯಗಳುಂಟಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಕಿರುಮಣಿ ಗ್ರಾಮದ ವಾಸಿ ಶ್ರೀಮತಿ ಕೃಷ್ಣವೇಣಿ ಮತ್ತು ಅದೇ ಗ್ರಾಮದ ವಾಸಿ ಲಕ್ಷ್ಮಯ್ಯ ಎಂಬುವರಿಗೆ ಮುಳಬಾಗಿಲು ತಾಲೂಕು ನಾಗನಹಳ್ಳಿ ಗ್ರಾಮದ ಸರ್ವೆ ನಂಬರ್ ೧೧ ರ ಜಮೀನಿಗೆ ಸಂಬಂಧಿಸಿದಂತೆ ತಕರಾರುಗಳಿದ್ದು ದಿನಾಂಕ ೨೬-೧೧-೨೦೦೭ ರಂದು ೧೦೦೦ ಗಂಟೆ ಸಮಯದಲ್ಲಿ ಸರ್ವೆ ನಂಬರ್ ೧೧ ರ ಜಮೀನಿನಲ್ಲಿ ಎರಡೂ ಗುಂಪಿನವರು ಅಕ್ರಮ ಗುಂಪು ಕಟ್ಟಿಕೊಂಡು ಒಬ್ಬರಿಗೊಬ್ಬರು ದೊಣ್ಣೆಗಳಿಂದ, ಕೈಗಳಿಂದ ಹೊಡೆದಾಡಿಕೊಂಡು ಅವಾಚ್ಯ ಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿಕೊಂಡಿರುತ್ತಾರೆ. ಇದರ ಪರಿಣಾಮ ಶ್ರೀಮತಿ ಕೃಷ್ಣವೇಣಿ, ಲಕ್ಷ್ಮಯ್ಯ ಮತ್ತು ರಾಮಕೃಷ್ಣಪ್ಪ ರವರಿಗೆ ಗಾಯಗಳುಂಟಾಗಿರುತ್ತದೆ. ಈ ಸಂಬಂಧ ದೂರು ಮತ್ತು ಪ್ರತಿ ದೂರು ದಾಖಲಾಗಿರುತ್ತದೆ.
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು:ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
November 26, 2007
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೧೧-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ೦೧
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ವೀರಾಂಜನೇಯ ನಗರದ ವಾಸಿ ಪೆದ್ದಾಯಮ್ಮ ಎಂಬುವರ ಮನೆಯ ಮುಂದೆ ಇಟ್ಟದ್ದ ಎಲೆಕ್ಟ್ರಿಕ್ ಗೈ ವೈರ್ ಕಳುವಾಗಿರುತ್ತದೆ. ಪೆದ್ದಾಯಮ್ಮರವರ ಮಗ ವಿದ್ಯುತ್ ಗುತ್ತಿಗೆದಾರನಾಗಿದ್ದು ಇವರ ಮನೆಯ ಮುಂದೆ ಇಟ್ಟ ಎಲೆಕ್ಟ್ರಿಕ್ ಗೈ ವೈರನ್ನು ದಿನಾಂಕ ೨೪-೧೧-೨೦೦೭ ರಂದು ರಾತ್ರಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವೈರ್ ನ ಒಟ್ಟು ಬೆಲೆ ಸುಮಾರು ರೂ. ೨೫,೦೦೦/ ಆಗಿರುತ್ತದೆ.
ವಾಹನ ಕಳ್ಳತನ : ೦೧
-
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಮುನೇಶ್ವರ ನಗರದ ವಾಸಿ ಶ್ರೀ ಎನ್.ಮುನಿರತ್ನಯ್ಯ ಎಂಬುವರ ಸೈಕಲ್ ಕಳುವಾಗಿರುತ್ತದೆ. ದಿನಾಂಕ ೨೫-೧೧-೨೦೦೭ ರಂದು ೧೭೩೦ ಗಂಟೆ ಸಮಯದಲ್ಲಿ ಮುನಿರತ್ನಯ್ಯ ರವರ ಮಗ ಪ್ರದೀಪ್ ಕುಮಾರ್ ರವರು ಡೂಮ್ ಲೈಟ್ ವೃತ್ತದಬಳಿ ಇರುವ ಎಸ್.ಎ.ಸಿ.ಇ.ಟಿ.ಎಸ್ ಟ್ಯೂಷನ್ ರೂಂ ಬಳಿ ನಿಲ್ಲಿಸಿದ್ದ ಅಟ್ಲಾಸ್ ಸೈಕಲನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ಸೈಕಲ್ ಬೆಲೆ ರೂ. ೨,೪೫೯/ ಆಗಿರುತ್ತದೆ.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೧
-
ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೧೧-೨೦೦೭ ರಂದು ೧೮೪೫ ಗಂಟೆಗೆ ಕೋಲಾರ ತಾಲೂಕು ಮಟ್ನಹಳ್ಳಿ ಗ್ರಾಮದ ಸುಬ್ರಮಣಿ ಎಂಬುವರು ಮಾಲೂರಿನಿಂದ ಕೋಲಾರಕ್ಕೆ ಹೋಗುವ ಸಲುವಾಗಿ ತಮ್ಮ ಟಿ.ವಿ.ಎಸ್ ಸ್ಟಾರ್ ಸಿಟಿ ದ್ವಿಚಕ್ರ ವಾಹನದಲ್ಲಿ ಮಾಲೂರಿನ ಜೆ.ಎಸ್.ಎಸ್ ಶಾಲೆಯ ಮುಂಬಾಗ ಹೋಗುತ್ತಿದ್ದರು. ಆ ಸಮಯದಲ್ಲಿ ಕೋಲಾರ ಕಡೆಯಿಂದ ಬಂದ ಹೀರೋಹೋಂಡಾ ಪ್ಯಾಷನ್ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೮-ಜೆ-೩೬೪ ರ ಚಾಲಕ ಮೋಹನ್ ಎಂಬುವರು ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಮುಖಾಮುಖಿ ಡಿಕ್ಕಿ ಹೊಡೆದಿರುತ್ತಾರೆ. ಇದರ ಪರಿಣಾಮ ಸುಬ್ರಮಣಿರವರ ತಲೆ, ಕಿವಿ ಹಾಗೂ ಮೂಗಿಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವಾಗಿ ಮಾರ್ಗ ಮದ್ಯದಲ್ಲಿ ಮೃತಪಟ್ಟಿರುತ್ತಾನೆ.
-ಸಾಧಾರಣ: ೦೧
ಮೋಸ / ವಂಚನೆ ಪ್ರಕರಣಗಳು: ೦೧
-
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಮೋಸ / ವಂಚನೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ಜಯನಗರದ ಡೈಮಂಡ್ ಫ್ಯಾಕ್ಟರಿಯ ಮಾಲೀಕರಾದ ಸಿ.ಜಿ.ರೆಡ್ಡಿ ಮತ್ತು ಜ್ಞಾನಪಂಡಿತನ್ ಎಂಬುವರು ನಿರುದ್ಯೋಗಿ ಯುವಕರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಮೋಸ ಮಾಡಿರುತ್ತಾರೆ. ದಿನಾಂಕ ೧೪-೧೧-೨೦೦೭ ರಿಂದ ೨೫-೧೧-೨೦೦೭ ರ ಅವಧಿಯಲ್ಲಿ ಕೇವಲ ೩೦ ಜನ ಕೆಲಸ ಮಾಡಲು ಸಾಧ್ಯವಿರುವ ತಮ್ಮ ಫ್ಯಾಕ್ಟರಿಯಲ್ಲಿ ೧೨೦ ಜನರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಅವರಿಂದ ತಲಾ ರೂ ೩೦,೦೦೦/ ರಿಂದ ೩೫,೦೦೦/ ದಂತೆ ಸುಮಾರು ೪೦ ಲಕ್ಷ ರೂಗಳನ್ನು ಪಡೆದು ವಂಚನೆ ಮಾಡಿರುತ್ತಾರೆ.
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣದ ದಾಖಲಾಗಿರುತ್ತದೆ. ದಿನಾಂಕ ೨೫-೧೧-೨೦೦೭ ರಂದು ೦೯೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ತಾಳಕುಂಟೆ ಗ್ರಾಮದ ಸರ್ವೆ ನಂಬರ್ ೯೧ ರ ಜಮೀನಿನಲ್ಲಿ ರಾಂಪುರ ಗ್ರಾಮದ ವಾಸಿಗಳಾದ ನಾಗರೆಡ್ಡಿ, ನಾರಾಯಣಪ್ಪ, ಸೀನಪ್ಪ, ಮುನಿರೆಡ್ಡಿ ಎಂಬುವರು ಹಾಗೂ ತಾಳಕುಂಟೆ ಗ್ರಾಮದ ವಾಸಿಗಳಾದ ನಾಗರಾಜು, ರಾಜಪ್ಪ, ಮುನಿಯಪ್ಪ, ರುದ್ರೇಶ್, ಚಿನ್ನಪ್ಪ, ಮುನಿರಾಜ, ನಾರಾಯಣಪ್ಪ ಮುಂತಾದವರು ಒಬ್ಬರಿಗೊಬ್ಬರು ದೊಣ್ಣೆ ಮತ್ತು ಕೈಗಳಿಂದ ಹಲ್ಲೆ ನಡೆಸಿಕೊಂಡು, ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿರುತ್ತಾರೆ. ಇದರ ಪರಿಣಾಮ ಎರಡೂ ಗುಂಪಿನವರಿಗೂ ಗಾಯಗಳುಂಟಾಗಿರುತ್ತದೆ. ಸರ್ವೆ ನಂಬರ್ ೯೧ ರ ಜಮೀನಿನಲ್ಲಿದ್ದ ನೀಲಗಿರಿ ಮರಗಳನ್ನು ಕತ್ತರಿಸುವ ವಿಚಾರದಲ್ಲಿ ಪರಸ್ಪರರ ನಡುವೆ ಇದ್ದ ದ್ವೇಷವೇ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ. ಈ ಬಗ್ಗೆ ದೂರು ಮತ್ತು ಪ್ರತಿದೂರುಗಳು ದಾಖಲಾಗಿರುತ್ತದೆ.
ಹಲ್ಲೆ: ಇಲ್ಲ
ಇತರೆ: ಇಲ್ಲ ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
November 25, 2007
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೧೧-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಸು ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೧೧-೨೦೦೭ ರಂದು ೧೦೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಕಸಿವಿರೆಡ್ಡಿಹಳ್ಳಿ ಗ್ರಾಮದ ವಾಸಿಗಳಾದ ನಾರಾಯಣಸ್ವಾಮಿ ಮತ್ತು ಆನಂದ ಎಂಬುವರು ಮುಳಬಾಗಿಲು ಹೊರವಲಯದ ತಾಯಲೂರು ಬೈಪಾಸ್ ಬಳಿ ಒಂದು ಸೀಮೆಹಸುವನ್ನು ಹಿಡಿದುಕೊಂಡು ಬರುತ್ತಿದ್ದರು. ಅದೇ ಸಮಯದಲ್ಲಿ ಗಸ್ತಿನಲ್ಲಿದ್ದ ಪೇದೆಗಳಾದ ಮೋಹನ್ ಮತ್ತು ಚಂದ್ರು ರವರು ಅನುಮಾನಾಸ್ಪದವಾಗಿ ಬರುತ್ತಿದ್ದವರನ್ನು ಹಿಡುದುಕೊಂಡು ವಿಚಾರಿಸಲಾಗಿ ಸರಿಯಾದ ಉತ್ತರ ನೀಡದ ಕಾರಣ ಹೆಚ್ಚಿನ ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಬಂದಿರುತ್ತಾರೆ. ವಿಚಾರಣೆ ವೇಳೆಯಲ್ಲಿ ಅಪರಾಧಿಗಳು ಸೀಮೆ ಹಸುವನ್ನು ಮುಳಬಾಗಿಲು ತಾಲೂಕು ಮಡಿವಾಳ ಗ್ರಾಮದ ಜಯರಾಮಪ್ಪ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿಕೊಂಡು ಬಂದಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಹಸುವಿನ ಬೆಲೆ ರೂ ೧೫,೦೦೦/ ಗಳಾಗಿರುತ್ತದೆ.
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
November 24, 2007
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೧೧-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧
ರಸ್ತೆ ಅಪಘಾತಗಳು: ೦೩
-ಮಾರಣಾಂತಿಕ: ೦೧
-
ನಂಗಲಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೭-೧೦-೨೦೦೭ ರಂದು ಮುಳಬಾಗಿಲು ಚಿಕ್ಕಗೊಲ್ಲಹಳ್ಳಿ ವಾಸಿ ಶ್ರೀರಾಮಪ್ಪ ಎಂಬುವರು ಎನ್.ವೆಂಕಟಾಪುರದ ಬಳಿ ರಸ್ತೆ ದಾಟುತ್ತಿದ್ದಾಗ ಯಾವುದೋ ಒಂದು ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗಳಾಗಿತ್ತು. ಇವರು ಮುಳಬಾಗಿಲು ಸರ್ಕಾರಿ ಆಸ್ಪತ್ರೆ, ಕೋಲಾರ ಎಸ್.ಎನ್.ಆರ್ ಆಸ್ಪತ್ರೆ, ಇತ್ಯಾದಿ ಕಡೆಗಳಲ್ಲಿ ಚಿಕಿತ್ಸೆ ಪಡೆದಿದ್ದು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ ೨೩-೧೧-೨೦೦೭ ರಂದು ೧೭೩೦ ಗಂಟೆಗೆ ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.
-ಸಾಧಾರಣ: ೦೨
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
November 24, 2007
ಗೌನಿಪಲ್ಲಿ ಪೊಲೀಸ್ ಠಾಣೆಯ ಪ್ರಭಾರಿ ಠಾಣಾಧಿಕಾರಿ ಮತ್ತು ತರಭೇತಿಯಲ್ಲಿರುವ ಪ್ರೊಬೆಷನರಿ ಡಿ.ಎಸ್.ಪಿ ಶ್ರೀ ಹೆಚ್.ಡಿ.ಆನಂದ್ ಕುಮಾರ್ ರವರು ಕಾರ್ಯಾಚರಣೆ ನಡೆಸಿ ೪೦ ಲೀಟರ್ ಕಲಬೆರಿಕೆ ಪೆಟ್ರೋಲ್ ಮತ್ತು ೧೦೦ ಲೀಟರ್ ಕಲಬೆರಿಕೆ ಡೀಸಲ್ನ್ನು ವಶಪಡಿಸಿಕೊಂಡಿರುತ್ತಾರೆ. ದಿನಾಂಕ ೨೩-೧೧-೨೦೦೭ ರಂದು ೧೫೩೦ ಗಂಟೆ ಸಮಯದಲ್ಲಿ ಗಸ್ತಿನಲ್ಲಿದ್ದಾಗ ಕೊಂಡಾಮರಿ ಗೇಟ್ ಬಳಿ ೭ ಕ್ಯಾನ್ ಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ನಿಂತಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಪೊಲೀಸರನ್ನು ಕಂಡು ಓಡಿಹೋಗಿದ್ದು ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿರುತ್ತದೆ.
ಈ ಸಂಬಂಧವಾಗಿ ಗೌನಪಲ್ಲಿ ಪೊಲೀಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳು ತಲೆ ಮರೆಸಿಕೊಂಡಿರುತ್ತಾರೆ.
Leave a Comment » |
ಅಪರಾಧ |
Permalink
Posted by kolarpolice