January 31, 2008
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೦೧-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ೦೧
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನಕ್ಕೆ ಸಂಬಂಧಪಟ್ಟಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೧-೨೦೦೮ ಕ್ಕೆ ೧೦ ದಿನಗಳ ಹಿಂದೆ ಶ್ರೀನಿವಾಸಪುರ ತಾಲೂಕು ಪುಂಗನೂರು ಗ್ರಾಮದ ವಾಸಿಗಳಾದ ಮಂಜುನಾಥ ಮತ್ತು ಸರಸ್ವತಮ್ಮ ರವರು ನಾಗದೇನಹಳ್ಳಿ ಗ್ರಾಮದ ವಾಶಿ ಶಂಕರಮ್ಮ ರವರ ಮನೆಗೆ ಪ್ರವೇಶ ಮಾಡಿ ಮನೆಯಲ್ಲಿದ್ದ ಗ್ಯಾಸ್ ಸ್ಟವ್ ಮತ್ತು ಸಿಲಿಂಡರ್, ಹಿತ್ತಾಳೆ ಕೊಳಗ ೧೫ ಸೀರೆಗಳು ಮತ್ತು ಇತರೆ ಗೃಹಪಯೋಗಿ ವಸ್ತುಗಳನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಇದನ್ನು ಕೇಳಲು ಹೋದ ಶಂಕರಮ್ಮ ರವರಿಗೆ ಮಂಜುನಾಥ ಮತ್ತು ಸರಸ್ವತಮ್ಮ ರವರು ಹೊಡೆದು ಸಣ್ಣಪುಟ್ಟ ಗಾಯಗಳಾಗಿರುತ್ತವೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
January 30, 2008
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೧-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ೦೧
-
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ಷಹೀನ್ ಷಾ ನಗರದ ಜಗದೀಶ್ ಷೋಪಟಿಲಾಲ್ ರವರ ವಾಸದ ಮನೆಯಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೯-೦೧-೨೦೦೮ ರಂದು ರಾತ್ರಿ ೨೩೩೦ ಗಂಟೆ ಸಮಯದಲ್ಲಿ ಜಗದೀಶ್ ಷೋಪಟಿಲಾಲ್ ರವರು ತಮ್ಮ ಮನೆಯಲ್ಲಿ ಮಲಗಿದ್ದರು. ಆ ಸಮಯದಲ್ಲಿ ಮನೆಯ ಬಾಗಿಲನ್ನು ತಟ್ಟಿದ ಸುಮಾರು ೨೦ ರಿಂದ ೨೫ ವರ್ಷ ವಯಸ್ಸಿನ ಮೂರು ಜನ ಅಪರಿಚಿತರು ಬಾಗಿಲು ತೆಗೆದ ನಂತರ ಒಳಗೆ ಪ್ರವೇಶಿಸಿ ಜಗದೀಶ್ ಷೋಪಟಿಲಾಲ್ ರವರನ್ನು ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದು ಬೆಡ್ ರೂಂನಲ್ಲಿದ್ದ ಸ್ಟೀರ್ಳ ಅಲ್ಮೇರಾವನ್ನು ಹೊಡೆದು ಅದರಲ್ಲಿದ್ದ ನಗದು ಹಾಗೂ ಬಂಗಾರದ ಒಡವೆಗಳೂ ಸೇರಿದಂತೆ ಒಟ್ಟು ರೂ. ೨,೦೬,೦೦೦/ ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಮನೆಗಳ್ಳತನ: ೦೧
-
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ನ್ಯಾಮತ್ ಬಿ ದರ್ಗಾ ಬಳಿ ವಾಸವಾಗಿರುವ ಮಹಮದ್ ಇಲಿಯಾಜ್ ಎಂಬುವರ ವಾಸದ ಮನೆಯಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೦-೦೧-೨೦೦೮ ರಂದು ೦೧೦೦ ಗಂಟೆ ಸಮಯದಲ್ಲಿ ಮಹಮದ್ ಇಲಿಯಾಜ್ ರವರು ತಮ್ಮ ವಾಸದ ಮನೆಯಲ್ಲಿ ಮಲಗಿದ್ದರು. ಆ ಸಮಯದಲ್ಲಿ ಮನೆಯ ಕಿಟಕಿ ಬಾಗಿಲನ್ನು ಹೊಡೆದು ಮನೆಯ ಒಳಗೆ ಪ್ರವೇಶಿಸಿದ ಯಾರೋ ಕಳ್ಳರು ಮನೆಯ ಕೋಣೆಯಲ್ಲಿದ್ದ ೨ ಮೊಬೈಲ್ ಪೋನ್ ಗಳು ಹಾಗೂ ನಗದು ಸೇರಿದಂತೆ ಒಟ್ಟು ರೂ. ೧೨,೦೦೦/ ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ (ದೌರ್ಜನ್ಯತಡೆ) ಕಾಯ್ದೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಕಂಬಾಲಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೪-೦೧-೨೦೦೮ ರಂದು ೧೧೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಕಂಬಾಲಹಳ್ಳಿ ಗ್ರಾಮದ ವಾಸಿ ನರಸಿಂಹಪ್ಪ ಎಂಬುವರ ಮೇಲೆ ಶ್ರೀನಿವಾಸಪುರ ತಾಲೂಕು ಮಣಿಗಾನಹಳ್ಳಿ ಗ್ರಾಮದ ವಾಸಿ ಶ್ರೀನಿವಾಸರೆಡ್ಡಿ ಎಂಬುವರು ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಯಿಂದ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಹಲ್ಲೆ ನಡೆಸಿರುತ್ತಾರೆ. ಆರೋಪಿ ಶ್ರೀನಿವಾಸರೆಡ್ಡಿ ಎರಡು ಗ್ರಾಮಗಳ ಮತಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಿದ್ದು ಇದನ್ನು ಪ್ರಶ್ನಿಸಿದಾಗ ಈ ಕೃತ್ಯ ಸಂಭವಿಸಿರುತ್ತದೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ವ್ಯಕ್ತಿ ಕಾಣೆ ಪ್ರಕರಣಗಳು: ೦೧
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
January 29, 2008
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೧-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
-
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೧-೨೦೦೮ ರಂದು ೨೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ಮಂಜುನಾಥ ಕಾಲೋನಿಯ ವಾಸಿ ಶ್ರೀನಿವಾಸಯ್ಯ ಎಂಬುವರು ತನ್ನ ಸ್ನೇಹಿತ ರೆಡ್ಡಪ್ಪರವರೊಡನೆ ತಮ್ಮ ಟಿ.ವಿ.ಎಸ್ ಸ್ಟಾರ್ ಸಿಟಿ ಸಂಖ್ಯೆ ಕೆಎ-೦೩-ಸಿವಿ-೧೪೧೪ ದ್ವಿಚಕ್ರವಾಹನದಲ್ಲಿ ಕೋಲಾರದಿಂದ ಮುಳಬಾಗಿಲಿಗೆ ಹೋಗುವ ಸಲುವಾಗಿ ಮುಳಬಾಗಿಲು ತಾಲೂಕು ಕುರುಬರಹಳ್ಳಿ ಗೇಟ್ ಸಮೀಪ ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂಭಾಗದಿಂದ ಬಂದ ಯಾವುದೋ ಒಂದು ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಶ್ರೀನಿವಾಸಯ್ಯ ಮತ್ತು ರೆಡ್ಡಪ್ಪ ರವರಿಗೆ ಗಾಯಗಳುಂಟಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೨
-
ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೧-೨೦೦೮ ರಂದು ರಾತ್ರಿ ಮಾಲೂರು ಟೌನ್ ಕುಂಬಾರಪೇಟೆ ವಾಸಿ ರಮೇಶ್ ಎಂಬುವರು ತಿರುಪತಿಗೆ ಹೋಗುವ ಸಲುವಾಗಿ ತಮ್ಮ ದ್ವಿಚಕ್ರವಾಹನದಲ್ಲಿ ನಂಗಲಿ ಬಳಿಯ ಕರ್ನಾಟಕ ರಾಜ್ಯದ ಗಡಿ ಪ್ರದೇಶದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ದ್ವಿಚಕ್ರವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿದ ಯಾರೋ ನಾಲ್ಕು ಜನ ಅಪರಿಚಿತರು ರಮೇಶ್ ರವರಿಗೆ ಚಾಕುವಿನಿಂದ ತಿವಿದು ಹಲ್ಲೆ ನಡೆಸಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
January 28, 2008
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೧-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೧
-ಸಾಧಾರಣ: ೦೧
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
January 28, 2008
ಕೋಲಾರ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗಳ ನೇರ ನೇಮಕಾತಿ ಸಂಬಂಧವಾಗಿ ದಿನಾಂಕ ೦೩-೦೨-೨೦೦೮ ರಂದು ಸಿ.ಇ.ಟಿ ಪರೀಕ್ಷೆಯನ್ನು ಆಯೋಜಿಸಲಾಗಿರುತ್ತದೆ. ಪರೀಕ್ಷೆಯು ಬೆಳಗ್ಗೆ ೧೦೦೦ ಗಂಟೆಯಿಂದ ೧೧೩೦ ಗಂಟೆಯವರೆಗೆ ನಡೆಯಲಿದ್ದು ಈ ಸಂಬಂಧ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಹಾಜರಾತಿ ಪತ್ರವನ್ನು ಅಂಚೆ ಮೂಲಕ ಕಳುಹಿಸಲಾಗಿರುತ್ತದೆ. ಹಾಜರಾತಿ ಪತ್ರ ತಲುಪದೇ ಇದ್ದಂತಹ ಅಭ್ಯರ್ಥಿಗಳು ಜಿಲ್ಲಾ ಪೊಲೀಸ್ ಕಛೇರಿ, ಟಮಕ, ಕೋಲಾರ ಇಲ್ಲಿ ಸಂಪರ್ಕಿಸಬಹುದಾಗಿದೆ. ಸಿ.ಇ.ಟಿ ಪರೀಕ್ಷೆಗೆ ಈ ಕೆಳಕಂಡ ಶಾಲಾಕಾಲೇಜುಗಳಲ್ಲಿ ಸೀಟು ಹಂಚಿಕೆ ಮಾಡಲಾಗಿರುತ್ತದೆ.
|
೧
|
ಮಹಿಳಾ ಸಮಾಜ, ಕೋಲಾರ ರೋಲ್ ನಂ. ೩೭೭೦೦೧ ರಿಂದ ೩೭೭೬೮೦ |
೩೮೦
|
|
೨
|
ಮಹಿಳಾ ಕಾಲೇಜು, ಕೋಲಾರರೋಲ್ ನಂ. ೩೭೭೬೮೧ ರಿಂದ ೩೭೮೦೮೦ |
೪೦೦
|
|
೩
|
ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕೋಲಾರರೋಲ್ ನಂ. ೩೭೮೦೮೧ ರಿಂದ ೩೭೮೪೦೦ |
೩೨೦
|
|
೪
|
ಸರ್ಕಾರಿ ಬಾಲಕರ ಕಾಲೇಜು, ಕೋಲಾರ.ರೋಲ್ ನಂ. ೩೭೮೪೦೧ ರಿಂದ ೩೭೯೧೨೦ |
೭೨೦
|
|
೫
|
ಕಾನೂನು ಕಾಲೇಜು, ಕೋಲಾರ.ರೋಲ್ ನಂ. ೩೭೯೧೨೧ ರಿಂದ ೩೭೯೨೮೦ |
೧೬೦
|
|
೬
|
ಮೆಥೋಡಿಸ್ಟ್ ಜೂನಿಯರ್ ಕಾಲೇಜು, ಕೋಲಾರ.ರೋಲ್ ನಂ. ೩೭೯೨೮೧ ರಿಂದ ೩೭೯೮೦೦ |
೫೨೦
|
|
೭
|
ಗೋಕುಲ್ ಕಾಲೇಜು, ಕೋಲಾರರೋಲ್ ನಂ. ೩೭೯೮೦೧ ರಿಂದ ೩೮೦೧೪೮ |
೩೪೮
|
Leave a Comment » |
ಆಡಳಿತಾತ್ಮಕ |
Permalink
Posted by kolarpolice
January 27, 2008
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೧-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ೦೧
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
January 26, 2008
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೧-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ತೊರದೇವಂಡಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೦-೦೧-೨೦೦೮ ರಂದು ರಾತ್ರಿ ಕೋಲಾರ ತಾಲೂಕು ಮಲ್ಲಸಂದ್ರ ಗ್ರಾಮದಿಂದ ತೊರದೇವಂಡಹಳ್ಳಿ ಗ್ರಾಮಕ್ಕೆ ಹೊಸದಾಗಿ ಎಳೆದಿರುವ ೧೧ ಕೆ.ವಿ ತಂತಿಯ ರಾಬಿಟ್ ವಾಹಕ ತಂತಿಯನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ತಂತಿಯ ಬೆಲೆ ರೂ. ೪೯,೦೧೫/ ಆಗಿರುತ್ತದೆ.
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೬
-ಮಾರಣಾಂತಿಕ: ೦೨
-
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೧-೨೦೦೮ ರಂದು ೦೬೦೦ ಗಂಟೆ ಸಮಯದಲ್ಲಿ ತಮಿಳುನಾಡು ವೆಲ್ಲೂರು ವಾಸಿ ಕೆ.ಭಾಸ್ಕರ್ ಎಂಬುವರು ತಮ್ಮ ಬಜಾಜ್ ಪಲ್ಸರ್ ಸಂಖ್ಯೆ ಕೆಎ-೦೧-ಇಸಿ-೭೯೭೯ ದ್ವಿಚಕ್ರವಾಹನದಲ್ಲಿ ಬೆಂಗಳೂರಿನಿಂದ ಗುಡಿಯಾತಂಗೆ ಹೋಗುವ ಸಲುವಾಗಿ ಕೋಲಾರ-ಮುಳಬಾಗಿಲು ಎನ್ ಹೆಚ್ ೦೪ ರಸ್ತೆಯ ಚದುಮನಹಳ್ಳಿ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಯಾವುದೋ ಒಂದು ಅಪರಿಚಿತ ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಕೆ.ಭಾಸ್ಕರ್ ರವರ ತಲೆಗೆ ತೀವ್ರವಾದ ಗಾಯಗಳಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ
-ಸಾಧಾರಣ: ೦೪
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
January 25, 2008
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೧-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ೦೧
-
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಕುರುಬರ ಪೇಟೆ ವಾಸಿ ನಾರಾಯಣಸ್ವಾಮಿ (೪೫) ರವರಿಗೆ ಸೇರಿದ ಟಿ.ವಿ.ಎಸ್ ಸೂಪರ್ ಎಕ್ಸ್ ಎಲ್ ಹೆವಿಡ್ಯೂಟಿ ಸಂಖ್ಯೆ ಕೆಎ-೦೭-ಎಲ್-೧೪೭೪ ದ್ವಿಚಕ್ರವಾಹನ ಕಳುವಾಗಿರುತ್ತದೆ. ದಿನಾಂಕ ೨೦-೧೨-೨೦೦೭ ರಂದು ರಾತ್ರಿ ನಾರಾಯಣಸ್ವಾಮಿರವರು ತಮ್ಮ ವಾಹನವನ್ನು ಕೋಲಾರ ಶಾಂತಿನಗರದಲ್ಲಿರುವ ತನ್ನ ಸ್ನೇಹಿತನ ಮನೆಯ ಮುಂದೆ ನಿಲ್ಲಿಸಿದ್ದಾಗ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಾಹನದ ಬೆಲೆ ರೂ ೨೮,೦೦೦/ ಆಗಿರುತ್ತದೆ.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೨
-
ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಗೊಲ್ಲಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೩-೦೧-೨೦೦೮ ರಂದು ರಾತ್ರಿ ಮಾಲೂರು ತಾಲೂಕು ಹುರುದೇನಹಳ್ಳಿ ಗ್ರಾಮದ ವಾಸಿ ಜಗದೀಶ್ ಎಂಬುವರು ಮದುವೆ ಸಮಾರಂಭವೊಂದರ ಪ್ರಯುಕ್ತ ಗೊಲ್ಲಹಳ್ಳಿಗೆ ಹೋಗಿದ್ದರು. ರಾತ್ರಿ ೦೨೦೦ ಗಂಟೆ ಸಮಯದಲ್ಲಿ ಮದುವೆ ಮನೆಯಲ್ಲಿ ಕರೆಂಟ್ ಹೋದ ವಿಚಾರಚಾಗಿ ಹೊಸೂರು ತಾಲೂಕು ಕುಪ್ಪನಹಳ್ಳಿ ಗ್ರಾಮದ ವಾಸಿ ರಾಜಗೋಪಾಲ ಎಂಬುವರ ಮೇಲೆ ಗೊಲ್ಲಹಳ್ಳಿ ಗ್ರಾಮದ ವಾಸಿಗಳಾದ ಕಾರ್ತಿಕ್, ಮಲ್ಲೇಶ್, ಸಂಪತ್ ಕುಮಾರ್, ಸುಬ್ರಮಣಿ, ರವಿ ಮತ್ತು ಮಂಜುನಾಥ ಎಂಬುವರು ಜಗಳ ತೆಗದು ಹೊಡೆಯುತ್ತಿದ್ದು ಅಡ್ಡ ಹೋದ ಜಗದೀಶ್ ರವರಿಗೆ ಆರೋಪಿಗಳು ಸೌದೆಯಿಂದ ಹೊಡೆದು ಗಾಯ ಪಡಿಸಿರುತ್ತಾರೆ.
-
ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ತೋರನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೨-೦೧-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ತೋರನಹಳ್ಳಿ ಗ್ರಾಮದ ತಿಮ್ಮರಾಯಪ್ಪ (೩೮) ಎಂಬುವರು ತನ್ನ ವಾಸದಮನೆಯಲ್ಲಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಗಳಾದ ನಾರಾಯಣಪ್ಪ, ಮುನಯ್ಯ, ರಾಮಕೃಷ್ಣ, ನಾರಾಯಣಸ್ವಾಮಿ, ಪ್ರಕಾಶ್, ಮುನಿರಾಜು, ಸೀನಾ, ನಾಗಪ್ಪ ಮತ್ತು ಮಂಜು ಎಂಬುವರು ತಿಮ್ಮರಾಯಪ್ಪ ರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು, ಕೈಗಳಿಂದ ಕಾಲಿನಿಂದ ಹೊಡೆದು ಗಾಯ ಪಡಿಸಿರುತ್ತಾರೆ. ಅಡ್ಡಹೋದ ತಿಮ್ಮರಾಯಪ್ಪರವರ ಹೆಂಡತಿಗೂ ಸಹಾ ಆರೋಪಿಗಳು ಹಲ್ಲೆ ನಡೆಸಿ ಅವರ ಕತ್ತಿನಲ್ಲಿದ್ದ ಬಂಗಾರದ ಚೈನನ್ನು ಕಸಿದುಕೊಂಡು ಪ್ರಾಣ ಬೆದರಿಕೆ ಹಾಕಿರುತ್ತಾರೆ.
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೩
-
ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಠ ಪಂಗಡ (ದೌರ್ಜನ್ಯತಡೆ) ಕಾಯ್ದೆ ಹಾಗೂ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಘಟನೆಯು ಶ್ರೀನಿವಾಸಪುರ ತಾಲೂಕು ಕೂರಿಗೆಪಲ್ಲಿ ಗ್ರಾಮದಲ್ಲಿ ನಡೆದಿರುತ್ತದೆ. ದಿನಾಂಕ ೧೯-೦೧-೨೦೦೮ ರಂದು ೧೯೦೦ ಗಂಟೆ ಸಮಯದಲ್ಲಿ ಕೂರಿಗೆಪಲ್ಲಿ ಗ್ರಾಮದ ವಾಸಿ ನರಸಿಂಹಪ್ಪ ಎಂಬುವರು ಹಾಲನ್ನು ಡೈರಿಗೆ ಹಾಕಿ ತನ್ನ ಮನೆಗೆ ವಾಪಸ್ ಬರುತ್ತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಕೆ.ವಿ.ಶಿವಾರೆಡ್ಡಿ, ಕೆ.ವಿ.ರಾಜಾರೆಡ್ಡಿ, ಶಿವಕುಮಾರ್ ಹಾಗೂ ಮತ್ತಿತರರು ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿ ದೊಣ್ಣೆಗಳಿಂದ ಹಲ್ಲೆ ನಡೆಸಿ ನರಸಿಂಹಪ್ಪರವರ ಹೆಂಡತಿ ಲಲಿತಮ್ಮ ಎಂಬುವರನ್ನು ಹಿಡಿದು ಎಳೆದಾಡಿ ಮಾನಭಂಗ ಮಾಡಲು ಪ್ರಯತ್ನಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ. ಈ ಹಿಂದೆಯೂ ಸಹಾ ನರಸಿಂಹಪ್ಪ ಮತ್ತು ಆರೋಪಿಗಳಿಗೆ ಜಗಳವಾಗಿದ್ದು ಈ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.
-
ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಠ ಪಂಗಡ (ದೌರ್ಜನ್ಯತಡೆ) ಕಾಯ್ದೆ ಹಾಗೂ ದೊಂಬಿಗೆ ಸಂಬಂಧಿಸಿದಂತೆ ಮತ್ತೊಂದು ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಘಟನೆಯು ಶ್ರೀನಿವಾಸಪುರ ತಾಲೂಕು ಕೂರಿಗೆಪಲ್ಲಿ ಗ್ರಾಮದಲ್ಲಿ ನಡೆದಿರುತ್ತದೆ. ದಿನಾಂಕ ೧೯-೦೧-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಮುಡಿವಾರಿಪಲ್ಲಿ ಗ್ರಾಮದ ವಾಸಿ ರಾಮಚಂದ್ರಪ್ಪ ಎಂಬುವರು ತನ್ನ ಸ್ನೇಹಿತ ಶಿವಾರೆಡ್ಡಿ ರವರನ್ನು ನೋಡಿಕೊಂಡು ಬರುವ ಸಲುವಾಗಿ ಕೂರಿಗೆಪಲ್ಲಿಗೆ ಹೋಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಕೂರಿಗೆಪಲ್ಲಿ ಗ್ರಾಮದ ವಾಸಿಗಳಾದ ಕೆ.ಬಿ.ಮಂಜುನಾಥ, ಕೆ.ಬಿ.ಶ್ರೀನಿವಾಸ್, ಕೆ.ಬಿ.ಮಂಜು, ರಾಮಕೃಷ್ನ, ನರಸಿಂಹಪ್ಪ, ಕೆ.ಎ.ಸುಧಾಕರ್, ರಾಮಲಿಂಗಾರೆಡ್ಡಿ ಹಾಗೂ ಮತ್ತಿತರರು ಶಿವಾರೆಡ್ಡಿ ರವರ ಮನೆಗೆ ಹೋಗದಂತೆ ರಾಮಚಂದ್ರಪ್ಪ ರವರನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿ ರಾಡಿನಿಂದ ಹೊಡೆದು ಗಾಯಪಡಿಸಿರುತ್ತಾರೆ. ಸ್ಥಳಕ್ಕೆ ಬಂದ ಶಿವಾರೆಡ್ಡಿರವರಿಗೂ ಸಹಾ ಆರೋಪಿಗಳು ಕಲ್ಲಿನಿಂದ ಹೊಡೆದು ಗಾಯಪಡಿಸಿರುತ್ತಾರೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಮಾಲೂರು ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಚಿಕ್ಕತಿರುಪತಿ ಗ್ರಾಮದ ವಾಸಿ ಮುನಿರೆಡ್ಡಿ ಎಂಬುವರ ಮಗಳಾದ ವೆನ್ನಲಾ (೨೧) ಎಂಬ ಹುಡುಗಿ ಕಾಣೆಯಾದವಳು. ದಿನಾಂಕ ೧೮-೦೧-೨೦೦೮ ರಂದು ೧೯೦೦ ಗಂಟೆ ಸಮಯದಲ್ಲಿ ತನ್ನ ಮನೆಯಿಂದ ಹೊರಟ ವೆನ್ನಲಾ ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾಳೆ. ಈ ಬಗ್ಗೆ ತಮ್ಮ ಗ್ರಾಮದ ವಾಸಿಗಳಾದ ರಘು, ಮುರಳಿ ಮತ್ತು ವೆಂಕಟೇಶ್ ಎಂಬುವರ ಮೇಲೆ ಅನುಮಾನ ಇರುವುದಾಗಿ ಮುನಿರೆಡ್ಡಿರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
January 24, 2008
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೧-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೩
-
ಗೌನಪಲ್ಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೫-೦೧-೨೦೦೮ ರಂದು ೦೬೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಬೈಪಲ್ಲಿ ಗ್ರಾಮದ ವಾಸಿ ರಾಜಣ್ಣ ಎಂಬುವರು ಸಂಕ್ರಾಂತಿ ಹಬ್ಬದ ಪ್ರಯುಕ್ತ ತನ್ನ ಎತ್ತುಗಳೊಡನೆ ತಮ್ಮ ಗ್ರಾಮದಲ್ಲಿ ಮೆರವಣಿಗೆ ಹೋಗುತ್ತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಗಳಾದ ನರಸಿಂಹಲು, ವೆಂಕಟಲಕ್ಷ್ಮಮ್ಮ, ಆದೆಮ್ಮ, ದಿನಕರ್ ಮತ್ತು ದ್ವಾರಕೀಶ್ ಎಂಬುವರು ಅಕ್ರಮ ಗುಂಪು ಕಟ್ಟಿಕೊಂಡು ರಾಜಣ್ಣರವರ ಮೇಲೆ ಜಗಳ ತೆಗೆದು ಕೈಗಳಿಂದ ಮತ್ತು ದೊಣ್ಣೆಯಿಂದ ಹೊಡೆದು ಗಾಯ ಪಡಿಸಿರುತ್ತಾರೆ. ಪರಸ್ಪರರ ನಡುವೆ ಇದ್ದ ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
-
ಗೌನಪಲ್ಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಮತ್ತೊಂದು ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೧-೨೦೦೮ ರಂದು ೧೯೦೦ ಗಂಟೆ ಸಮಯದಲ್ಲಿ ಗೌನಪಲ್ಲಿ ಗ್ರಾಮದ ವಾಸಿ ಮುಜೀಬ್ ಪಾಷ ಎಂಬುವರು ತಮ್ಮ ವಾಸದ ಮನೆಯಲ್ಲಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಗಳಾದ ಅಜಮದ್, ನಯಾಜ್, ಇಂತಿಯಾಜ್, ಪಯಾಜ್, ಮುನೀರ್, ನದೀಮ್ ಮತ್ತಿತರರು ಅಕ್ರಮ ಗುಂಪು ಕಟ್ಟಿಕೊಂಡು ಮುಜೀಬ್ ಪಾಷರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಮತ್ತು ದೊಣ್ಣೆಯಿಂದ ಹೊಡೆದು ಗಾಯ ಪಡಿಸಿರುತ್ತಾರೆ. ಪರಸ್ಪರರ ನಡುವೆ ಇದ್ದ ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
-
ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೧-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ತೊರನಹಳ್ಳಿ ಗ್ರಾಮದ ವಾಸಿ ಶ್ರೀನಿವಾಸ (೩೫) ಮತ್ತು ಮುನಯ್ಯ ಎಂಬುವರು ತಮ್ಮ ತಮ್ಮ ಗ್ರಾಮದ ಮುನಿಯಪ್ಪರವರ ಅಂಗಡಿಯ ಬಳಿ ಕುಳಿತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಗಳಾದ ತಿಮ್ಮಪ್ಪ, ದೊನಪ್ಪ, ನಾರಾಯಣಸ್ವಾಮಿ, ಕೃಷ್ಣಪ್ಪ ಮತ್ತಿತರರು ಅಕ್ರಮ ಗುಂಪು ಕಟ್ಟಿಕೊಂಡು ಶ್ರೀನಿವಾಸರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಮತ್ತು ದೊಣ್ಣೆಯಿಂದ ಹೊಡೆದು ಗಾಯ ಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ. ಪರಸ್ಪರರ ನಡುವೆ ಇದ್ದ ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
ಹಲ್ಲೆ: ೦೧
-
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಕುರುಡಮಲೆ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೫-೦೧-೨೦೦೮ ರಂದು ೦೯೩೦ ಗಂಟೆ ಸಮಯದಲ್ಲಿ ಕುರುಡಮಲೆ ಗ್ರಾಮದ ವಾಸಿ ವೆಂಕಟರಾಮಪ್ಪ (೪೦) ಎಂಬುವರ ಮೇಲೆ ಅದೇ ಗ್ರಾಮದ ವಾಸಿಗಳಾದ ಮುನೆಪ್ಪ, ಶಿವಪ್ಪ, ನಾಗರಾಜ ಮತ್ತು ಸುಬ್ರಮಣಿ ಎಂಬುವರು ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆನಡೆಸಿ ಗಾಯಪಡಿಸಿರುತ್ತಾರೆ. ಪರಸ್ಪರರ ನಡುವೆ ಇದ್ದ ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice
January 23, 2008
ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೧-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
-
ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೧-೨೦೦೮ ರಂದು ೨೧೧೫ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕಾಮದೇನಹಳ್ಳಿ ಗ್ರಾಮದ ವಾಸಿ ಕೆ.ಸಿ.ಜಗನ್ನಾಥ (೨೬) ಎಂಬುವರು ಕೋಲಾರ ನಗರದ ಬೃಂದಾವನ ವೃತ್ತದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂಭಾಗದಿಂದ ಬಂದ ಕೆಎ-೦೭-ಎಲ್-೩೬೯೫ ಸಂಖ್ಯೆಯ ದ್ವಿಚಕ್ರವಾಹನದ ಚಾಲಕ ತನ್ನ ದ್ವಿಚಕ್ರವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಕೆ.ಸಿ.ಜಗನ್ನಾಥರವರಿಗೆ ಗಾಯಗಳುಂಟಾಗಿದ್ದು ಚಿಕಿತ್ಸೆಗಾಗಿ ಕೋಲಾರದ ಅಮೂಲ್ಯ ನರ್ಸಿಂಗ್ ಹೊಂ ನಲ್ಲಿ ದಾಖಲಾಗಿರುತ್ತಾರೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ೦೧
-
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೧-೨೦೦೮ ರಂದು ೦೬೧೦ ಗಂಟೆ ಸಮಯದಲ್ಲಿ ಕೋಲಾರ ನಗರ ಕೆ.ಜಿ ಮೊಹಲ್ಲಾದ ವಾಸಿ ಅಬ್ದುಲ್ ಬಷೀರ್ (೫೫) ಎಂಬುವರು ನಮಾಜ್ ಮುಗಿಸಿಕೊಂಡು ತಮ್ಮ ಮನೆಯ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಅಬ್ದುಲ್ ವಾಜೀರ್, ಗುಲ್ಜಾರ್ ಮತ್ತು ಅಬ್ದುಲ್ ನಜೀರ್ ಎಂಬುವರು ಒಂದು ಛಾಪಾಕಾಗದವನ್ನು ತಂದು ಸಹಿಮಾಡುವಂತೆ ಅಬ್ದುಲ್ ಬಷೀರ್ ರವರನ್ನು ಒತ್ತಾಯ ಮಾಡಿರುತ್ತಾರೆ. ಸಹಿ ಮಾಡಲು ನಿರಾಕರಿಸಿದ ಅಬ್ದುಲ್ ಬಷೀರ್ ರವರ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿದ ಮೇಲ್ಕಂಡ ಆರೋಪಿಗಳು ಕೊಠಡಿಯೊಂದರಲ್ಲಿ ಕೂಡುಹಾಕಿ ಬಾಯಿಗೆ ಬಟ್ಟೆ ತುರುಕಿ ಹೊಡೆದು ಕೊಲೆ ಮಾಡಲು ಪ್ರಯತ್ನಸಿ ಛಾಪಾಕಾಗದದ ಮೇಲೆ ಸಹಿ ಮಾಡುವಂತೆ ಒತ್ತಾಯಿಸಿರುತ್ತಾರೆ. ಆರೋಪಿಗಳು ಮತ್ತು ಅಬ್ದುಲ್ ಬಷೀರ್ ಸಹೋದರರಾಗಿದ್ದು ಆಸ್ತಿ ವಿಚಾರದಲ್ಲಿ ಪರಸ್ಪರರ ನಡುವೆ ಇದ್ದ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
ದೊಂಬಿ: ಇಲ್ಲ
ಹಲ್ಲೆ: ೦೨
-
ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮತ್ತು ಮಾನಭಂಗಕ್ಕೆ ಪ್ರಯತ್ನ ಪಟ್ಟ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ದೊಡ್ಡಕಲ್ಲಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೨-೦೧-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ ದೊಡ್ಡಕಲ್ಲಹಳ್ಳಿ ಗ್ರಾಮದ ವಾಸಿ ಸಂಪಂಗಿರಾಮಯ್ಯ (೪೫) ಎಂಬುವರು ತಮ್ಮ ಮನೆಯಲ್ಲಿದ್ದರು. ಆ ಸಮಯದಲ್ಲಿ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿದ ದೊಡ್ಡಕಲ್ಲಹಳ್ಳಿ ಗ್ರಾಮದ ವಾಸಿಗಳಾದ ಮುನಿಸ್ವಾಮಿ ಮತ್ತು ಮುನಿಯಪ್ಪ ಎಂಬುವರು ಸಂಪಂಗಿರಾಮಯ್ಯ ರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಸಂಪಂಗಿರಾಮಯ್ಯ ರವರ ಹೆಂಡತಿಯನ್ನು ಹಿಡಿದು ಎಳೆದಾಡಿ ಮಾನಭಂಗ ಮಾಡಲು ಪ್ರಯತ್ನಿಸಿ ದೊಣ್ಣೆ ಮತ್ತು ಕೈಗಳಿಂದ ಹೊಡೆದು ಗಾಯ ಪಡಿಸಿರುತ್ತಾರೆ. ಸಂಪಗಿರಾಮಯ್ಯ ರವರು ನ್ಯಾಯಾಲಯದಲ್ಲಿ ಆರೋಪಿಗಳ ವಿರುದ್ದವಾಗಿ ಸಾಕ್ಷಿ ಹೇಳಿದ್ದನ್ನು ಮನಸ್ಸಿನಲ್ಲಿಟ್ಟುಕೊಂಡು ಆರೋಪಿಗಳು ಈ ಕೃತ್ಯ ನಡೆಸಿರುತ್ತಾರೆ.
ಇತರೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by kolarpolice