ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೨-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧
-
ವೇಮಗಲ್ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈಗ್ಗೆ ೧೩ ವರ್ಷಗಳ ಹಿಂದೆ ಕೋಲಾರ ತಾಲೂಕು ವೇಮಗಲ್ ಗ್ರಾಮದ ವಾಸಿಯಾದ ಶ್ರೀಮತಿ ಹೇಮಾವತಿ ಎಂಬುವರ ವಿವಾಹ ಸಿಂಗಹಳ್ಳಿ ಗ್ರಾಮದ ವಾಸಿಯಾದ ವೆಂಕಟರಾಮಾಚಾರಿ ಎಂಬುವರೊಂದಿಗೆ ನಡೆದಿತ್ತು. ಮದುವೆ ಆದಾಗಿನಿಂದ ಗಂಡ ಮತ್ತು ಅತ್ತೆ ಸರಸ್ವತಮ್ಮ ಎಂಬುವರು ಹೇಮಾವತಿರವರಿಗೆ ಕಿರುಕುಳ ನೀಡುತ್ತಿದ್ದು ವರದಕ್ಷಣೆ ತರುವಂತೆ ತವರು ಮನೆಗೆ ಕಳುಹಿಸಿದ್ದರು. ದಿನಾಂಕ ೨೮-೦೨-೨೦೦೮ ರಂದು ವೆಂಕಟರಾಮಾಚಾರಿ ಮತ್ತೊಂದು ಮದುವೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು ಈ ಬಗ್ಗೆ ಹೇಮಾವತಿ ರವರು ದೂರು ದಾಖಲಿಸಿರುತ್ತಾರೆ.
ರಸ್ತೆ ಅಪಘಾತಗಳು: ೦೩
-ಮಾರಣಾಂತಿಕ: ೦೧
-
ವೇಮಗಲ್ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೨-೨೦೦೮ ರಂದು ೨೪೦೦ ಗಂಟೆ ಸಮಯದಲ್ಲಿ ಚಿಂತಾಮಣಿ ನಗರ ಅಗ್ರಹಾರದ ವಾಸಿಯಾದ ಸೈಯದ್ ಮುನೀರ್ ಪಾಷಾ ಎಂಬುವರು ಟೆಂಪೋ ಸಂಖ್ಯೆ ಕೆಎ-೦೭-೪೯೭೯ ರಲ್ಲಿ ಹೆಚ್.ಕ್ರಾಸ್ ಕಡೆಯಿಂದ ಚಿಂತಾಮಣಿ ಕಡೆ ಪ್ರಯಾಣಿಸುತ್ತಿದ್ದರು. ಟೆಂಪೋ ಉರಟಿ ಅಗ್ರಹಾರ ಗ್ರಾಮದ ಬಳಿ ಬಂದಾಗ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿರುತ್ತದೆ. ಇದರಿಂದಾಗಿ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಮುಜಬಿಲ್ ಎಂಬುವರಿಗೆ ತೀವ್ರವಾದ ಗಾಯಗಳಾಗಿದ್ದು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಅಲ್ಲಿ ಮೃತಪಟ್ಟಿರುತ್ತಾನೆ.
-ಸಾಧಾರಣ: ೦೨
-
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೨-೨೦೦೮ ರಂದು ೨೨೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ – ಮುಳಬಾಗಿಲು ರಸ್ತೆಯ ಎದರೂರು ಗ್ರಾಮದ ಬಳಿ ಕೆಎ-೫೩-೪೯೩೦ ಟೆಂಪೋ ಚಾಲಕನಾದ ಪ್ರದೀಪ್ ಕುಮಾರ್ ಎಂಬುವರು ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಉರಳಿಸಿರುತ್ತಾನೆ. ಇದರ ಪರಿಣಾಮವಾಗಿ ಟೆಂಪೋ ಜಖಂಗೊಂಡಿರುತ್ತದೆ.
-
ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೨-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ತಾತಿಕಲ್ಲಿ ಗ್ರಾಮದ ವಾಸಿಯಾದ ಮುನಿವೆಂಕಟಪ್ಪ ಮತ್ತು ಅವರ ಸ್ನೇಹಿತರಾದ ವೆಂಕಟರವಣಪ್ಪ ಎಂಬುವರು ತಮ್ಮ ಟಿ.ವಿ.ಎಸ್. ದ್ವಿಚಕ್ರ ವಾಹನದಲ್ಲಿ ರಾಷ್ಟ್ರೀಯ ಹೆದ್ದಾರಿ-೪ ರ ತಾತಿಕಲ್ಲು ಗ್ರಾಮದ ಬಳಿ ಹೋಗುತ್ತಿದ್ದರು. ಅ ಸಮಯದಲ್ಲಿ ಬೆಂಗಳೂರು ಕಡೆಯಿಂದ ಬಂದ ಯಾವುದೋ ಕಾರಿನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಟಿ.ವಿ.ಎಸ್.ಗೆ ಡಿಕ್ಕಿ ಹೊಡೆದ ಪರಾರಿಯಾಗಿರುತ್ತಾನೆ. ಇದರ ಪರಿಣಾಮವಾಗಿ ಇಬ್ಬರಿಗೂ ಗಾಯಗಳಾಗಿದ್ದು ಕೋಲಾರದ ಎಸ್.ಎನ್.ಆರ್. ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿರುತ್ತಾರೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೨-೦೨-೨೦೦೮ ರಂದು ಮುಳಬಾಗಿಲು ತಾಲೂಕು ಚೆನ್ನಾಪುರ ಗ್ರಾಮದ ವಾಸಿಯಾದ ಕೃಷ್ಣೆಗೌಡ ಎಂಬುವರು ತಮ್ಮ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದರು. ಅ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಗಳಾದ ಮುನಿರತ್ನಪ್ಪ ಮತ್ತು ಇತರೆ ೫ ಜನರು ಅಕ್ರಮ ಗುಂಪುಕಟ್ಟಿಕೊಂಡು ಬಂದು ಕೃಷ್ನೆಗೌಡ ರವರಿಗೆ ಕೈ ಮತ್ತು ದೊಣ್ಣೆಗಳಿಂದ ಹೊಡೆದು ರಕ್ತಗಾಯಪಡಿಸಿ, ಅವಾಚ್ಯ ಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.
ಹಲ್ಲೆ: ಇಲ್ಲ
ಇತರೆ: ೦೧
-
ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಅಕಸ್ಮಿಕ ಅಪಘಾತಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೨-೨೦೦೮ ರಂದು ೧೦೦೦ ಗಂಟೆ ಸಮಯದಲ್ಲಿ ಕೋಲಾರದ ಟಮಕ ಕೈಗಾರಿಕ ಪ್ರದೇಶದಲ್ಲಿರುವ ಕೋಲಾರ್ ಅಲ್ಯೂಮೀನಿಯಂ ಪ್ಯಾಕ್ಟರಿಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ಪ್ಯಾಕ್ಟರಿಯಲ್ಲಿ ಮೇಸ್ತ್ರಿ ರಾಜಣ್ಣರವರು ಹೇಳಿದ ರೀತಿಯಲ್ಲಿ ಪ್ಯಾಕ್ಟರಿಯ ಕಾರ್ಮಿಕರಾದ ಚಲಪತಿ, ಮುನಿರಾಜು ಮತ್ತು ಮಂಜುನಾಥ ಎಂಬುವರು ಕಲ್ಲುಗಳನ್ನು ಎತ್ತುವ ಮಿಷನ್ ನಿಂದ ಕಬ್ಬಿಣದ ಗರಾಂಡಗಳನ್ನು ಚೈನುಗಳಿಗೆ ಕಟ್ಟಿ ಮೇಲಕ್ಕೆ ಎತ್ತುವಾಗ ಗೋಡೆಯ ಮೇಲೆ ಇದ್ದ ಸರ್ಜಾ ಕುಸಿದು ಬಿದ್ದು ಕಾರ್ಮಿಕರಿಗೆ ತೀವ್ರವಾದ ಗಾಯಗಳಾಗಿರುತ್ತವೆ. ಈ ಪೈಕಿ ಮುನಿರಾಜು ಎಂಬುವರ ತಲೆಗೆ ತೀವ್ರವಾದ ಗಾಯಗಳಾಗಿದ್ದು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾನೆ. ಪ್ಯಾಕ್ಟರಿಯ ಮಾಲೀಕರಾದ ಪೂವಲಿಂಗಂ ಮತ್ತು ಮೇಸ್ತ್ರಿ ರಾಜಣ್ಣ ರವರ ನಿರ್ಲಕ್ಷತೆ ಮತ್ತು ಬೇಜಾಬ್ದಾರಿಯಿಂದ ಈ ಕೃತ್ಯ ನಡೆದಿರುತ್ತದೆ ಎಂದು ಚಲಪತಿ ರವರು ದೂರು ದಾಖಲಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ೧೧
-ಸ್ಥಳ ದಂಡ ಮೊತ್ತ: ರೂ. ೧೬೦೦
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice
Posted by kolarpolice
Posted by kolarpolice



