ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೬-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೬-೨೦೦೮ ರಂದು ೦೯೧೦ ಗಂಟೆ ಸಮಯದಲ್ಲಿ ಬೆಂಗಳೂರು ಶಿವಾಜಿನಗರದ ವಾಸಿ ವಿ.ರವಿ ಎಂಬುವರು ತಮ್ಮ ಸ್ಕಾರ್ಪಿಯೋ ವಾಹನ ಸಂಖ್ಯೆ ಕೆಎ-೦೩-ಎಂಜೆ-೧೮೬೧ ರಲ್ಲಿ ಬೆಂಗಳೂರಿನಿಂದ ಚೆನ್ನೈಗೆ ಹೋಗುವ ಸಲುವಾಗಿ ಮುಳಬಾಗಿಲು ಸದಾ ಫುಡ್ ಫ್ಯಾಕ್ಟರಿ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂದಿನಿಂದ ಬಂದ ಇನೋವಾ ಕಾರ್ ಸಂಖ್ಯೆ ಕೆಎ-೦೨-ಡಿ-೩೯೪೯ ರ ಚಾಲಕ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಎರಡೂ ವಾಹನಗಳೂ ಜಖಂಗೊಂಡಿದ್ದು ಇನೋವಾ ಕಾರಿನಲ್ಲಿದ್ದವರಿಗೆ ಗಾಯಗಳುಂಟಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೨
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಮಣಿಘಟ್ಟ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೬-೨೦೦೮ ರಂದು ೦೮೩೦ ಗಂಟೆ ಸಮಯದಲ್ಲಿ ಮಣಿಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘಧ ಅಧ್ಯಕ್ಷರಾದ ಆರ್.ರಘುನಾಥರೆಡ್ಡಿ ರವರು ಸಹಕಾರ ಸಂಘದ ಕಛೇರಿಯಲ್ಲಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಮಣಿಘಟ್ಟ ಗ್ರಾಮದ ವಾಸಿಗಳಾದ ರಮೇಶ, ಶಿವಣ್ಣ, ರಾಮಕೃಷ್ಣಪ್ಪ, ಚಂದ್ರಪ್ಪ ಮತ್ತು ರಾಮೇಗೌಡ ಎಂಬುವರು ತಮ್ಮ ಬಳಿ ಅಪಾಯಕರವಾಧ ಆಯುಧಗಳನ್ನು ಹಿಡಿದುಕೊಂಡು ಅಕ್ರಮಗುಂಪು ಕಟ್ಟಿಕೊಂಡು ಆರ್.ರಘುನಾಥರೆಡ್ಡಿರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಅಧ್ಯಕ್ಷಗಿರಿಗೆ ರಾಜೀನಾಮೆ ಕೊಡುವಂತೆ ಒತ್ತಾಯಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.
ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಮುಡಿವಾರಿಪಲ್ಲಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೬-೨೦೦೮ ರಂದು ೨೦೩೦ ಗಂಟ ಸಮಯದಲ್ಲಿ ರಾಯಲ್ಪಾಡು ಗ್ರಾಮದ ವಾಸಿ ಶ್ರೀರಾಮಕೃಷ್ಣ ಎಂಬುವರು ತಮ್ಮ ಮಾರುತಿ ಓಮಿನಿ ಕಾರಿನಲ್ಲಿ ಮುಡಿವಾರಿಪಲ್ಲಿ ಗ್ರಾಮದ ವಾಸಿ ನರಸಿಂಹಮೂರ್ತಿ ಮತ್ತು ಬಾಬು ಹಾಗೂ ಇತರರೊಡನೆ ಶ್ರೀನಿವಾಸಪುದಿಂದ ಹೊರಟು ಮುಡಿವಾರಿಪಲ್ಲಿ ಗ್ರಾಮದಲ್ಲಿ ಬಂದಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಗಳಾದ ಭದ್ರಾಚಲಪತಿ, ಆದಿನಾರಾಯಣ, ರಾಮು ಮತ್ತಿತರೇ ೪-೫ ಜನರು ಅವಾಚ್ಯ ಶಬ್ದಗಳಿಂದ ಬೈದು ಕಾರಿನ ಗಾಜುಗಳನ್ನು ಜಖಂಗೊಳಿಸಿ ಶ್ರೀರಾಮಕೃಷ್ಣ ರವರ ತಲೆಗೆ ಕಲ್ಲಿನಿಂದ ಹೊಡೆದು ಗಾಯಪಡಿಸಿರುತ್ತಾರೆ. ಪರಸ್ಪರರ ನಡುವೆ ಇದ್ದ ರಾಜಕೀಯ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
ಹಲ್ಲೆ: ೦೧
ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಎಂ.ತುಮುಲಪಲ್ಲಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೨-೦೬-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ತುಮುಲಪಲ್ಲಿ ಗ್ರಾಮದ ವಾಸಿ ರಮಾದೇವಿ ರವರು ತಮ್ಮ ಪತಿಯೊಡನೆ ತಮ್ಮ ವಾಸದಮನೆಯಲ್ಲಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಗಳಾದ ನಾರಾಯಣಸ್ವಾಮಿ, ಭೂಚಕ್ರ ಮತ್ತು ರಾಜಾರೆಡ್ಡಿ ಎಂಬುವರು ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಮಚ್ಚಿನಿಂದ, ಕಾಲು ಮತ್ತು ಕೈಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
ಇತರೆ: ೦೨
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಸ್ವತ್ತುಹಾನಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಪಿ.ಸಿ ಹಳ್ಳಿಯಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೫-೦೬-೨೦೦೮ ರಂದು ೦೦೩೦ ಗಂಟೆ ಸಮಯದಲ್ಲಿ ಪಿ.ಸಿ ಹಳ್ಳಿ ವಾಸಿ ಶ್ರೀನಿವಾಸ ಎಂಬುವರ ವಾಸದ ಮನೆಗೆ ಯಾರೋ ಅಪರಿಚಿತರು ಬೆಂಕಿ ಹಚ್ಚಿರುತ್ತಾರೆ. ಇದರ ಪರಿಣಾಮ ಮನೆಯಲ್ಲಿದ್ದ ಬಟ್ಟೆಗಲೂ ಸೇರಿದಂತೆ ಟಿ.ವಿ ಇತರೇ ಗೃಹೋಪಯೋಗಿ ವಸ್ತುಗಳು ಸುಟ್ಟುಹೋಗಿದ್ದು ರೂ. ೩ ಲಕ್ಷ ನಷ್ಠ ಉಂಟಾಗಿರುತ್ತದೆ. ಕೋಲಾರ ನಗರ ಪಿ.ಸಿ ಹಳ್ಳಿ ವಾಸಿಗಳಾದ ರಾಮು ಮತ್ತು ಶ್ರೀನಿವಾಸ ಎಂಬುವರ ಮೇಲೆ ಅನುಮಾನವಿರುವುದಾಗಿ ಶ್ರೀನಿವಾಸ ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.
ಮಾಲೂರು ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮತ್ತು ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ಪುರ ತಾಲೂಕು ಕಛೇರಿಯ ಬಳಿಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೬-೨೦೦೮ ರಂದು ಕರ್ನಾಟಕ ವಿಧಾನ ಪರಿಷತ್ ಆಗ್ನೇಯ ಕ್ಷೇತ್ರದ ಪದವೀದರ ಚುನಾವಣಾ ಪ್ರಯುಕ್ತ ಮಾಲೂರು ಪೊಲೀಸ್ ಠಾಣೆ ಅಪರಾಧ ವಿಭಾಗದ ಆರಕ್ಷಕ ಉಪನಿರೀಕ್ಷಕರಾದ ವಿ.ಎಸ್.ಶಿವಕುಮಾರ್ ರವರು ತಾಲೂಕು ಕಛೇರಿಯ ಮತಗಟ್ಟೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ಸಮದಯಲ್ಲಿ ಜೆ.ಡಿ.ಎಸ್ ಮತ್ತು ಬಿ.ಜೆ.ಪಿ ಪಕ್ಷದ ಕಾರ್ಯಕರ್ತರು ೧೦೦ ಮೀಟರ್ ಅಂತರದ ಒಳಗೆ ಶಾಮಿಯಾನ ಮತ್ತು ಕಟೌಟುಗಳನ್ನು ಹಾಕಿಕೊಂಡು ಪ್ರಚಾರ ಮಾಡಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿರುತ್ತಾರೆ. ಇದನ್ನು ವಿ.ಎಸ್.ಶಿವಕುಮಾರ್ ರವರು ಅಡ್ಡಿಪಡಿಸಿದಾಗ ಅವಾಚ್ಯ ಶಬ್ದಗಳಿಂದ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೨
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ (ದೌರ್ಜನ್ಯತಡೆ) ಕಾಯ್ದೆ ಅಡಿಯಲ್ಲಿ ಮತ್ತು ಸ್ವತ್ತು ಹಾನಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಗಟ್ಟಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೬-೨೦೦೮ ರಂದು ೨೩೦೦ ಗಂಟೆ ಸಮಯದಲ್ಲಿ ಗಟ್ಟಹಳ್ಳಿ ಗ್ರಾಮದ ವಾಸಿ ಪರಿಶಿಷ್ಠ ಜಾತಿಗೆ ಸೇರಿದ ನಾರಾಯಣಸ್ವಾಮಿ ಎಂಬುವರ ಮನೆಗೆ ಯಾರೋ ಅಪರಿಚಿತರು ಬೆಂಕಿ ಹಚ್ಚಿರುತ್ತಾರೆ. ಇದರ ಪರಿಣಾಮ ಮನೆಯಲ್ಲಿದ್ದ ರೂ. ೧೦,೦೦೦/ ನಗದು ಸೇರಿದಂತೆ ಚಿನ್ನ ಇತರೇ ಗೃಹೋಪಯೋಗಿ ವಸ್ತುಗಳು ಸುಟ್ಟುಹೋಗಿದ್ದು ನಷ್ಠ ಉಂಟಾಗಿರುತ್ತದೆ.
ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ (ದೌರ್ಜನ್ಯತಡೆ) ಕಾಯ್ದೆ ಅಡಿಯಲ್ಲಿ ಹಾಗೂ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಎಂ.ತುಮ್ಮಲಪಲ್ಲಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೨-೦೬-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಎಂ.ತುಮ್ಮಲಪಲ್ಲಿ ಗ್ರಾಮದ ವಾಸಿ ನಾರಾಯಣಸ್ವಾಮಿ ಇವರ ತಂದೆ ತಿರುಮಳಪ್ಪ, ತಂಗಿ ರಾಮಕ್ಕ, ಹೆಂಡತಿ ಮುನಿರತ್ನಮ್ಮ ರವರುಗಳು ತಮ್ಮ ವಾಸದಮನೆಯಲ್ಲಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಗಳಾದ ದೋಬಿ ಕೃಷ್ಣಪ್ಪ, ದೋಬಿ ವೆಂಕಟರಮಣಪ್ಪ, ರವಣಪ್ಪ, ರಮಾದೇವಿ, ಇತರೇ ೪ ಜನರು ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿ ಕಲ್ಲುಗಳಿಂದ, ದೊಣ್ಣೆಗಳಿಂದ, ಕೈ ಕಾಲುಗಳಿಂದ ಹೊಡೆದು ಗಾಯಪಡಿಸಿರುತ್ತಾರೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯಿದೆ ಅಡಿ ದಾಖಲಾದ ಪ್ರಕರಣಗಳ ವಿವರ
-ದಾಖಲಾದ ಒಟ್ಟು ಪ್ರಕರಣಗಳು: ೦೪
-ಸ್ಥಳ ದಂಡ ಮೊತ್ತ: ರೂ. ೫೦೦/
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.