ದಿನದ ಅಪರಾಧಗಳ ಪಕ್ಷಿನೋಟ ೩೦ ನೇ ಸೆಪ್ಟೆಂಬರ್ ೦೮

September 30, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ದೂಲಪಲ್ಲಿ ಗ್ರಾಮದ ವಾಸಿ ಜಯರಾಮಪ್ಪ ಎಂಬುವರ ಕೆಎ-೦೭-ಕ್ಯೂ-೨೭೨೦ ಸಂಖ್ಯೆಯ ಟಿ.ವಿ.ಎಸ್.ಎಕ್ಸ್.ಎಲ್ ದ್ವಿಚಕ್ರವಾಹನ ಕಳುವಾಗಿರುತ್ತದೆ. ಜಯರಾಮಪ್ಪ ರವರು ತನ್ನ ವಾಹನವನ್ನು ದಿನಾಂಕ ೦೨-೦೨-೨೦೦೮ ರಂದು ರಾತ್ರಿ ತನ್ನ ವಾಸದಮನೆಯ ಮುಂದೆ ನಿಲ್ಲಿಸಿದ್ದ ಸಮಯದಲ್ಲಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಾಹನದ ಬೆಲೆ ರೂ. ೨೫,೩೦೦/ ಆಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಮತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೯-೨೦೦೮ ರಂದು ೧೨೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಜಮ್ಮನಹಳ್ಳಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರು ತಮ್ಮ ಮಕ್ಕಳಾದ ಮನು ಮತ್ತು ಲಕ್ಷ್ಮಿ ಎಂಬುವರೊಂದಿಗೆ ತನ್ನ ದ್ವಿಚಕ್ರವಾಹನ ಟಿ.ವಿ.ಎಸ್ ಸೂಪರ್‍ ಎಕ್ಸ್.ಎಲ್ ಸಂಖ್ಯೆ ಕೆಎ-೦೭-ಎಲ್-೩೨೨೧ ರಲ್ಲಿ ತಮ್ಮ ಗ್ರಾಮದ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಕೋಲಾರದ ಕಡೆಯಿಂದ ಬಂದ ಮಾರುತಿ ಓಮಿನಿ ಕಾರ್‍ ಸಂಖ್ಯೆ ಟಿ.ಎನ್-೦೭-ಎ.ವೈ-೦೮೬೭ ರ ಚಾಲಕ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಿಗೆ ಗಾಯಗಳಾಗಿದ್ದು ಕೋಲಾರದ ಎಸ್.ಎನ್.ಆರ್‍ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಚಿಕ್ಕತಿರುಪತಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೯-೨೦೦೮ ರಂದು ೧೬೦೦ ಗಂಟೆ ಸಮಯದಲ್ಲಿ ಚಿಕ್ಕತಿರುಪತಿ ಗ್ರಾಮದ ವಾಸಿ ಮುನಿಯಮ್ಮ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಶಾಂತಮ್ಮ ಮತ್ತು ಶ್ರೀನಿವಾಸ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ಪಿ.ಸಿ.ಬಡಾವಣೆಯ ವಾಸಿ ತೇಜಸ್ವಿನಿ (೨೪) ಎಂಬುವರು ಮೃತಪಟ್ಟವರು. ದಿನಾಂಕ ೨೪-೦೯-೨೦೦೮ ರಂದು ೨೦೩೦ ಗಂಟೆ ಸಮಯದಲ್ಲಿ ಆಕಸ್ಮಿಕ ಸುಟ್ಟಗಾಯಗಳಾದ ದೆಸೆಯಿಂದ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೇಜಸ್ವಿನಿ ರವರು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ ೨೯-೦೯-೨೦೦೮ ರಂದು ೦೬೩೦ ಗಂಟೆಗೆ ಮೃತಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ ನೇ ಸೆಪ್ಟೆಂಬರ್ ೦೮

September 29, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೪

-ಮಾರಣಾಂತಿಕ: ೦೩

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೮-೦೯-೨೦೦೮ ರಂದು ೧೮೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಜಿ.ಕೋಡಿಪಲ್ಲಿ ಗ್ರಾಮದ ವಾಸಿ ಹರಿವರಪ್ರಸಾದ್ ಎಂಬುವರು ತಮ್ಮ ಪತ್ನಿ ಶೈಲಜಾ ಎಂಬುವರೊಂದಿಗೆ ದ್ವಿಚಕ್ರವಾಹನ ಸಂಖ್ಯೆ ಕೆಎ-೦೭-ಕೆ-೨೦೫೭ ರಲ್ಲಿ ಹೋಗುತ್ತಿದ್ದು ಎನ್.ಹೆಚ್ ೪ ರ ದಾರೆಪಲ್ಲಿಮಿಟ್ಟ ಗೇಟ್ ಸಮೀಪ ವಾಹನವನ್ನು ನಿಲ್ಲಿಸಿಕೊಂಡು ಪಾರ್ವತಮ್ಮ ಎಂಬುವರೊಡನೆ ಮಾತನಾಡಿಕೊಂಡು ಇದ್ದರು.    ಆ ಸಮಯದಲ್ಲಿ ಮುಳಬಾಗಿಲು ಕಡೆಯಂದ ಬಂದ ಕೆ.ಎಸ್.ಆರ್‍.ಟಿಸಿ ವೋಲ್ವೋ ಬಸ್ ಸಂಖ್ಯೆ ಕೆಎ-೦೧-ಎಫ್-೮೩೫೮ ರ ಚಾಲಕ ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಹರಿವರಪ್ರಸಾದ್ ಮತ್ತಿತರಿಗೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ಹರಿವರಪ್ರಸಾದ್ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿತರರಿಗೆ ಗಾಯಗಳುಂಟಾಗಿರುತ್ತದೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಮತ್ತೊಂದು ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೮-೦೯-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಗುಟ್ಟಹಳ್ಳಿ ಗ್ರಾಮದ ವಾಸಿ ಎಂ.ನಾರಾಯಣಸ್ವಾಮಿ ಅವರ ತಮ್ಮ ರಮೇಶ ಎಂಬುವರು ತಮ್ಮ ಗ್ರಾಮಕ್ಕೆ ಹೋಗಲು ಗ್ರಾಮದ ಗೇಟ್ ಬಳು ಎನ್.ಹೆಚ್ ೪ ರಸ್ತೆಯನ್ನು ದಾಟುತ್ತಿದ್ದರು. ಆ ಸಮಯದಲ್ಲಿ ಮುಳಬಾಗಿಲು ಕಡೆಯಂದ ಬಂದ ಟಾಟಾ ಸುಮೋ ಸಂಖ್ಯೆ ಎಪಿ-೦೩-ಯು-೩೭೬೨ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆ ದಾಟುತ್ತಿದ್ದ ರಮೇಶ್ ರವರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿ ವಾಹನವನ್ನು ನಿಲ್ಲಿಸದೇ ಹೊರಟು ಹೋಗಿರುತ್ತಾನೆ.  ಇದರ ಪರಿಣಾಮ ಗಾಯಗೊಂಡ ರಮೇಶ್ ರವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿರುತ್ತಾರೆ..

-ಸಾಧಾರಣ: ೦೨

ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೭-೦೯-೨೦೦೮ ರಂದು ೧೩೦೦ ಗಂಟೆ ಸಮಯದಲ್ಲಿ ಹಾಸನ ನಗರದ ವಾಸಿ ನಾಗೇಶ ಎಂಬುವರು ಲಾರಿ ಸಂಖ್ಯ ಕೆ-೧೩-ಎ-೧೯೩೪ ಅನ್ನು ಚಾಲನೆ ಮಾಡಿಕೊಂಡು ಬೆಂಗಳೂರಿಗೆ ಹೋಗುವ ಸಲುವಾಗಿ ಎನ್.ಹೆಚ್ ೪ ರಸ್ತೆ ನಂಗಳಿ ಬಳಿ ಹೋಗುತ್ತಿದ್ದರು.  ಆ ಸಮಯದಲ್ಲಿ ಮುಳಬಾಗಿಲು ಕಡೆಯಿಂದ ಬಂದ ಲಾರಿ ಸಂಖ್ಯೆ ಕೆಎ-೪೦-೫೫೯೯ ರ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಮಡು ನಾಗೇಶ್ ರವರ ಲಾರಿಗೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ನಾಗೇಶ್ ರವರ ತಲೆಗೆ ಗಾಯಗಳಾಗಿದ್ದು ಲಾರಿ ಜಖಂಗೊಂಡಿರುತ್ತದೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೫-೦೯-೨೦೦೮ ರಂದು ೦೯೦೦ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ ನೇತಾಜಿನಗರದ ವಾಸಿ ಎಂ.ಕೃಷ್ಣಪ್ಪ ಎಂಬುವರು ಮುಳಬಾಗಿಲು ಪಟ್ಟಣದ ಆರ್‍.ಎಂ.ಸಿ ಯಾರ್ಡ್ ಬಳಿ ನಡೆದುಕೊಂಡು ಹೋಗುತ್ತಿದ್ದರು.  ಆ ಸಮಯದಲ್ಲಿ ಎದುರುಗಡೆಯಿಂದ ಬಂದ ದ್ವಿಚಕ್ರವಾಹನ ಸಂಖ್ಯೆ ಕೆಎ-೦೭-ಎಲ್-೨೩೫೩ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಮಡು ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ಎಂ.ಕೃಷ್ಣಪ್ಪ ರವರ ಹಣೆಗೆ ಗಾಯಗಳಾಗಿದ್ದು ಕಾಲಿನ ಪಾದ ಮುರಿದಿರುತ್ತದೆ.  ಪ್ರಸ್ತುತ ಗಾಯಾಳು ಎಂ.ಕೃಷ್ಣಪ್ಪ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ನರಸಾಪುರ ಗ್ರಾಮದ ಎಂ.ಟಿ.ಬಿ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೮-೦೯-೨೦೦೮ ರಂದು ೧೬೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಬೆಳಮಾರನಹಳ್ಳಿ ಗ್ರಾಮದ ವಾಸಿ ಬಿ.ಸಿ.ಶ್ರೀನಿವಾಸ ಎಂಬುವರು ಅದೇ ಗ್ರಾಮದ ವಾಸಿ ಮುನಿವೀರಪ್ಪ ಎಂಬುವರಿಗೆ ಚಿಕಿತ್ಸೆ ಕೊಡಿಸುವ ಸಲುವಾಗಿ ನರಸಾಪುರದ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.  ಆ ಸಮಯದಲ್ಲಿ ಅಕ್ರಮಗುಂಪು ಕಟ್ಟಿಕೊಂಡು ಬಂದ ಕೋಲಾರ ತಾಲೂಕು ಬೆಳ್ಳೂರು ಗ್ರಾಮದ ವಾಸಿ ಅಂಬರೀಶ್ ಮತ್ತು ಇತರೇ ೭ ಜನರು ಬಿ.ಸಿ.ಶ್ರೀನಿವಾಸ ರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಕಲ್ಲಿನಿಂದ ಕಾಲುಗಳಿಂದ ಹೊಡೆದು ಗಾಯಪಡಿಸಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಕೋಳಿ ಪಂದ್ಯ ಜೂಜಾಟ ಕೇಂದ್ರದ ಮೇಲೆ ದಾಳಿ: ೯ ಜನರ ಬಂದನ, ರೂ. ೧೦,೩೫೦/ ವಶ

September 29, 2008

ದಿನಾಂಕ ೨೮-೦೯-೨೦೦೮ ರಂದು ೧೫೦೦ ಗಂಟೆ ಸಮಯದಲ್ಲಿ ಮುಳಬಾಗಿಲು ಆರಕ್ಷಕ ವೃತ್ತ ನಿರೀಕ್ಷಕರಾದ ಟಿ.ಜಯಶಂಕರ್‍ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ಮುಳಬಾಗಿಲು ತಾಲೂಕು ಅಬ್ಬಿಹಳ್ಳಿ ಗ್ರಾಮದ ಸಮೀಪ ತಮ್ಮ ಸಿಬ್ಬಂದಿಯೊಡನೆ ದಾಳಿ ನಡೆಸಿ ಕೋಳಿಪಂದ್ಯ ಜೂಜಾಟದಲ್ಲಿ ನಿರತರಾಗಿದ್ದವರ ಮೇಲೆ ದಾಳಿ ಮಾಡಿರುತ್ತಾರೆ. ಕಾರ್ಯಾಚರಣೆ ವೇಳೆ ಜೂಜಾಟದಲ್ಲಿ ನಿರತರಾಗಿದ್ದ ಸುಬ್ಬಣ್ಣ ಮತ್ತಿತರೇ ೮ ಜನರನ್ನು ಬಂಧಿಸಿ ಎರಡು ಕೋಳಿ ಮತ್ತು ನಗದು ರೂ. ೧೦,೩೫೦/ ಗಳನ್ನು ವಶಪಡಿಸಿಕೊಂಡಿರುತ್ತಾರೆ.

ಈ ಬಗ್ಗೆ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ ನೇ ಸೆಪ್ಟೆಂಬರ್‍ ೦೮

September 28, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೮-೨೦೦೮ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ:೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಹೊಂಗಸೊಬ್ಬಳನ್ನು ಹಾಡುಹಗಲೇ ಕೊಲೆಗೈದಿರುವಂತಹ ಘಟನೆ ಮಾಲೂರು ಟೌನ್ ಮಾರುತಿ ಬಡಾವಣೆಯಲ್ಲಿ ಸಂಭವಿಸಿರುತ್ತದೆ.  ದಿನಾಂಕ ೨೭-೦೮-೨೦೦೮ ರಂದು ಮಾರುತಿಬಡಾವಣೆಯ ವಾಸಿ ಅನುರಾಧ (೩೮) ಎಂಬುವರು ತನ್ನ ಮನೆಯಲ್ಲಿ ಇದ್ದರು.  ಆ ಸಮಯದಲ್ಲಿ ಮನೆಯೊಳಗೆ ನುಗ್ಗಿದ ಮೂರು ಜನ ಅಪರಿಚಿತರು ಅನುರಾಧ ರವರ ಕತ್ತನ್ನು ಕುಯ್ದು ಕೊಲೆ ಮಾಡಿರುತ್ತಾರೆ.  ಕೊಲೆಗೆ ಕಾರಣ ಮತ್ತು ವಿವರಗಳನ್ನು ತಿಳಿಯಬೇಕಾಗಿರುತ್ತದೆ.

ಡಕಾಯತಿ:ಇಲ್ಲ

ಸುಲಿಗೆ:ಇಲ್ಲ

ಮನೆಗಳ್ಳತನ:ಇಲ್ಲ

ಸಾಧಾರಣ ಕಳ್ಳತನ:ಇಲ್ಲ

ವಾಹನ ಕಳ್ಳತನ:ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು:ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:ಇಲ್ಲ

-ಸಾಧಾರಣ:ಇಲ್ಲ

ಮೋಸ / ವಂಚನೆ ಪ್ರಕರಣಗಳು:ಇಲ್ಲ

ಕೊಲೆಗೆ ಪ್ರಯತ್ನ:ಇಲ್ಲ

ದೊಂಬಿ:ಇಲ್ಲ

ಹಲ್ಲೆ:೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಹೋಳೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೭-೦೯-೨೦೦೮ ರಂದು ೧೦೦೦ ಗಂಟೆ ಸಮಯದಲ್ಲಿ ಹೋಳೂರು ಗ್ರಾಮದ ವಾಸಿ ರಮಣಮ್ಮ ರವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ರಂಗನಾಥ ಮತ್ತು ಶ್ರೀನಿವಾಸ ಎಂಬುವರು ಚಾಕುವಿನಿಂದ ಕುತ್ತಿಗೆಗೆ ತಿವಿದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.  ಮನೆಭಾಗ್ ವಿಚಾರದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಮಾಲೂರು ತಾಲೂಕು ಗುಂಡ್ಲಪಲ್ಲಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೨-೦೯-೨೦೦೮ ರಂದು ೧೫೦೦ ಗಂಟೆ ಸಮಯದಲ್ಲಿ ಅಡ್ಡಗುಟ್ಟೆ ಗ್ರಾಮದ ವಾಸಿ ರತ್ನಮ್ಮ ಎಂಬುವರ ಮೇಲೆ ಜಗಳ ತೆಗೆದ ಗುಂಡ್ಲಪಲ್ಲಿ ಗ್ರಾಮದ ವಾಸಿಗಳಾದ ಲಕ್ಷ್ಮಮ್ಮ ಮತ್ತು ರಮೇಶ್ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ.  ರತ್ನಮ್ಮ ಎಂಬುವರು ಆರೋಪಿಗಳೀಗೆ ಸೇರಿದ ಹೊಲದಲ್ಲಿ ಕುರಿಗಳನ್ನು ಮೇಯಿಸಿದ್ದ ವಿಚಾರದ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ಇತರೆ:೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸ್ವತ್ತುಹಾನಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ವಕ್ಕಲೇರಿ ಹೋಬಳಿ ಬೆಸ್ಕಾಂ ಕಛೇರಿ ಬಳಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೬-೦೯-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ವಕ್ಕಲೇರಿ ಗ್ರಾಮದ ಗ್ರಾಮಸ್ಥರು ಸರಿಯಾದ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಬೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ್ದು ಆ ಸಮಯದಲ್ಲಿ ಕಛೇರಿಯ ಕಿಟಕಿ ಮತ್ತಿತರೇ ಉಪಕರಣಗಳನ್ನು ಹೊಡೆದು ಜಖಂಗೊಳಿಸಿ ಇಲಾಖೆಗೆ ನಷ್ಟ ಉಂಟುಮಾಡಿರುತ್ತಾರೆ.

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ಕುರುಬರ ಪೇಟೆ ಅಂಬೀಸ್ ಹೋಟೆಲ್ ವಬಳಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೫-೦೯-೨೦೦೮ ರಂದು ೧೯೧೫ ರಿಂದ ೨೦೦೦ ಗಂಟೆ ಸಮಯದಲ್ಲಿ ಕೋಲಾಋ ಕಿಲಾರಿಪೇಟೆಯ ವಾಸಿ ಶ್ರೀರಾಮಪ್ಪ ಎಂಬುವರ ಮಗ ನವೀನ್ ಕುಮಾರ್‍ (೧೮) ಮತ್ತು ಮತ್ತು ಇವರ ಸಂಬಂಧಿಕ ವೆಂಕಟೇಶ್ (೧೮) ಎಂಬುವರು ಕೋಲಾರದ ಅಂಬಿಸ್ ಹೋಟೆಲ್ ಬಳಿ ನಿಂತಿದ್ದರು.  ಆ ಸಮಯದಲ್ಲಿ ಅಲ್ಲಿಗೆ ಒಂದು ಕಾರಿನಲ್ಲಿ ಬಂದ ಅಪರಿಚಿತರು ಇಬ್ಬರನ್ನೂ ಬಲವಂತವಾಗಿ ಅಪಹರಿಸಿಕೊಂಡು ಕಾರಿನಲ್ಲಿ ಕುಳ್ಳರಿಸಿಕೊಂಡು ಹೋಗಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು:ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:ಇಲ್ಲ

ಮುಂಜಾಗ್ರತೆ ಕ್ರಮಗಳು:ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ ನೇ ಸೆಪ್ಟೆಂಬರ್ ೦೮

September 27, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೪

-ಮಾರಣಾಂತಿಕ: ೦೨

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೦೯-೨೦೦೮ ರಂದು ೧೨೧೫ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು  ಮೋತಕಪಲ್ಲಿ ಗ್ರಾಮದ ವಾಸಿ ಮಿದ್ದಿಂಟಿ ಕೃಷ್ಣಪ್ಪ (೫೫) ಎಂಬುವರು ತಮ್ಮ ಗ್ರಾಮದಲ್ಲಿರುವ ತಮ್ಮ ಹೊಲದ ಕಡೆ ಹೋಗುವ ಸಲುವಾಗಿ ಗುಟ್ಟಹಳ್ಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.  ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಗೂಡ್ಸ್ ಆಟೋ ಒಂದರ ಚಾಲಕ ತನ್ನ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ಕೃಷ್ಣಪ್ಪ ರವರಿಗೆ ತೀವ್ರವಾದ ಗಾಯಗಳಾಗಿದ್ದು ಕೋಲಾರದ ಎಸ್.ಎನ್.ಆರ್‍ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಧರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೦೯-೨೦೦೮ ರಂದು ೧೬೩೦ ಗಂಟೆ ಸಮಯದಲ್ಲಿ ಕೋಲಾರ  ತಾಲೂಕು ಚಂಚಿಮಲೆ ಗ್ರಾಮದ ವಾಸಿ ಡಿ.ಶಂಕರಪ್ಪ  ಎಂಬುವರು ತಮ್ಮ ದ್ವಿಚಕ್ರವಾಹನ ಸಂಖ್ಯೆ ಕೆಎ-೦೮-ಇ-೯೩೨೬ ರಲ್ಲಿ ತಿಪ್ಪೇನಹಳ್ಳಿ ಮತ್ತು ಕ್ಯಾಲನೂರು ಗ್ರಾಮದ ಮಧ್ಯೆ ಹೋಗುತ್ತಿದ್ದರು.  ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಅನ್ನಪೂರ್ಣೇಶ್ವರಿ ಖಾಸಗಿ ಬಸ್ ಸಂಖ್ಯೆ ಕೆಎ-೦೬-ಬಿ-೩೩ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ಡಿ.ಶಂಕರಪ್ಪ ರವರಿಗೆ ತೀವ್ರವಾದ ಗಾಯಗಳಾಗಿದ್ದು ಕೋಲಾರದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟಿರುತ್ತಾರೆ.

-ಸಾಧಾರಣ: ೦೨

ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೦೯-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಕುಣಿಬಂಡೆ ಗ್ರಾಮದ ವಾಸಿ ಜಯರಾಮಪ್ಪ ಎಂಬುವರು ತಮ್ಮ ಬಜಾಜ್ ಕ್ಯಾಲಿಬರ್‍ ದ್ವಿಚಕ್ರವಾಹನದಲ್ಲಿ ಕಲರಸನಹಳ್ಳಿ ಗ್ರಾಮದ ವಾಸಿ ಸಿ.ವೆಂಕಟೇಶಪ್ಪ ಎಂಬುವರೊಡನೆ ಬೇವಹಳ್ಳಿ ಗ್ರಾಮದ ಗೇಟ್ ಸಮೀಪ ಹೋಗುತ್ತಿದ್ದರು.  ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ರಾಕ್ಟರಿನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದು ಸ್ಥಳದಲ್ಲಿ ವಾಹನವನ್ನು ನಿಲ್ಲಿಸದೇ ಹೊರಟುಹೋಗಿರುತ್ತಾನೆ.  ಇದರ ಪರಿಣಾಮ ದ್ವಿಚಕ್ರವಾಹನದಲ್ಲಿದ್ದ ಸವಾರರಿಗೆ ಗಾಯಗಳುಂಟಾಗಿರುತ್ತದೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಚೋಳಘಟ್ಟ ಗ್ರಾಮದ ವಾಸಿ ಸಿವಿತಾ ಎಂಬುವರ ಮಗಳಾದ ಎಸ್.ಅಂಕಿತ ೪ ನೇ ತರಗತಿಯನ್ನು ಬಿ.ಜಿ.ಎಸ್ ಪಬ್ಲಿಕ್ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದು  ದಿನಾಂಕ ೨೬-೦೯-೨೦೦೮ ರಂದು ೦೮೩೦ ಗಂಟೆ ಸಮಯದಲ್ಲಿ ತಮ್ಮ ಗ್ರಾಮದ ಬಸ್ ನಿಲ್ಧಾಣದ ಬಳಿ ಶಾಲಾವಾಹನವನ್ನು ಹತ್ತುತ್ತಿದ್ದರು.  ಆ ಸಮಯದಲ್ಲಿ ಕ್ಯಾಲನೂರು ಕಡೆಯಿಂದ ಬಂದ ದ್ವಿಚಕ್ರವಾಹನ ಸಂಖ್ಯೆ ಕೆಪಿ-೦೩-ಎಇ-೭೮೫ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಅಂಕಿತಾರವರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿ ವಾಹನವನ್ನು ನಿಲ್ಲಿಸದೇ ಹೊರಟುಹೋಗಿರುತ್ತಾನೆ.  ಇದರ ಪರಿಣಾಮ ಮಗುವಿನ ಕೈ ಮತ್ತು ಕಾಲುಗಳಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ:  ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಪ್ರಯತ್ನ, ದೊಂಬಿ ಹಾಗೂ ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ (ದೌರ್ಜನ್ಯತಡೆ) ಕಾಯ್ದೆಗೆ ಸಂಬಂಧಿಸಿದಂತೆ ಕೇಸು ಪತ್ತು ಪ್ರತಿಕೇಸು ದಾಖಲಾಗಿರುತ್ತದೆ.  ಹಣಕಾಸಿನ ವಿಚಾರದ ಹಿನ್ನೆಲೆಯಲ್ಲಿ ಎರಡು ಗುಂಪಿನ ಕಡೆಯವರು ಪರಸ್ಪರ ಜಗಳ ಮಾಡಿಕೊಂಡು ಹೊಡೆದಾಡಿಕೊಂಡಿರುವ ಘಟನೆ ಕೋಲಾರ ತಾಲೂಕು ನಾಯಕರಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ.  ದಿನಾಂಕ ೨೫-೦೯-೨೦೦೮ ರಂದು ೨೧೩೦ ಗಂಟೆ ಹಾಗೂ ೨೨೦೦ ಗಂಟೆ ಸಮಯದಲ್ಲಿ ಕೃತ್ಯ ಸಂಭವಿಸಿರುತ್ತದೆ.  ನಾಯಕರಹಳ್ಳಿ ಗ್ರಾಮದ ವಾಸಿಗಳಾದ ಸೋಮಪ್ಪ, ರಾಮಪ್ಪ, ನಾರೆಪ್ಪ ಮತ್ತು ಚಲಪತಿ ಎಂಬುವರೂ ಹಾಗೂ ಅದೇ ಗ್ರಾಮದ ವಾಸಿಗಳಾದ ನಾರಾಯಣಪ್ಪ, ಚೌಡಮ್ಮ, ವೆಂಕಟೇಶ ಮತ್ತು ಮಮತಾ ಎಂಬ ಎರಡು ಗುಂಪಿನವರಿಗೆ ಹಣಕಾಸಿನ ವಿಚಾರದಲ್ಲಿ ವೈಷಮ್ಯಗಳಿದ್ದು ಈ ಹಿನ್ನೆಲಯಲ್ಲಿ ಜಗಳ ಮಾಡಿಕೊಂಡು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಹೊಡೆದಾಡಿಕೊಂಡು ಪ್ರಾಣಬೆದರಿಕೆ ಹಾಕಿರುತ್ತಾರೆ.  ಈ ಬಗ್ಗೆ ದೂರು ಮತ್ತು ಪ್ರತಿದೂರು ಬಂದ ಹಿನ್ನೆಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ದೊಂಬಿ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಶ್ರೀನಿವಾಸಪುರ ತಾಲೂಕು ತಾಡಿಗೋಳ್ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೨-೦೯-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ತಾಡಿಗೋಳ್ ಗ್ರಾಮದ ವಾಸಿ ಸುನಿತಮ್ಮ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಲಕ್ಷ್ಮಿನರಸಿಂಹಮ್ಮ ಮತ್ತಿತರೇ ೫ ಜನರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆನಡೆಸಿರುತ್ತಾರೆ.  ಸುನಿತಮ್ಮ ರವರ ಹೊಲದಲ್ಲಿ ಆರೋಪಿಳಿಗೆ ಸೇರಿದ ಹಸುವೊಂದು ಬೆಳೆ ಮೇಯಿದಿರುವ ವಿಚಾರದ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.   

ಹಲ್ಲೆ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಬೆಳ್ಳೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೪-೦೯-೨೦೦೮ ರಂದು ೧೬೦೦ ಗಂಟೆ ಸಮಯದಲ್ಲಿ ಬೆಳ್ಳೂರು ಗ್ರಾಮದ ವಾಸಿ ಬಿ.ವಿ.ಶ್ರೀನಿವಾಸ್ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ವೇಣು, ನಾರಾಯಣಸ್ವಾಮಿ ಮತ್ತು ನಾರಾಯಣಮ್ಮ ಎಂಬುವರು ದೊಣ್ಣೆ ಮತ್ತು ಕಲ್ಲುಗಳಿಂದ ಹೊಡೆದು ಗಾಯಪಡಿಸಿ ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ.  ಬಿ.ವಿ.ಶ್ರೀನಿವಾಸ್ ರವರು ನೋಡಿಕೊಳ್ಳುತ್ತಿದ್ದ ತೆಂಗಿನಮರಗಳಿಂದ ಆರೋಪಿಗಳು ತೆಂಗಿನಕಾಯುಗಳನ್ನು ಕಿತ್ತ ವಿಚಾರದ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:  ೫೬

-ಸ್ಥಳ ದಂಡ ಮೊತ್ತ:  ರೂ. ೭೪೦೦/

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ ನೇ ಸೆಪ್ಟೆಂಬರ್ ೦೮

September 27, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬೆಸ್ಕಾಂ ಇಲಾಖೆಗೆ ಸೇರಿದ ಟ್ರಾನ್ಸ್ ಫಾರ್‍ಮರ್‍ ಕಳುವಾದಂತಹ ಘಟನೆ ಕೋಲಾರ ತಾಲೂಕು ಶೆಟ್ಟಿಕೊತ್ತನೂರು ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೩-೦೯-೨೦೦೮ ರಂದು ರಾತ್ರಿ ಯಾರೋ ಕಳ್ಳರು ಶೆಟಟಿಕೊತ್ತನೂರು ಗ್ರಾಮದ ಬಳಿ ಅಳವಡಿಸಿದ್ದ ಟ್ರಾನ್ಸ್ ಫಾರ್‍ಮರನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ಮಾಲಿನ ಬೆಲೆ ರೂ. ೫೦೦೦/ ಆಗಿರುತ್ತದೆ. ಈ ಬಗ್ಗೆ ಬೆಸ್ಕಾಂ ವಕ್ಕಲೇರಿ ಶಾಖೆಯ ಶಾಖಾಧಿಕಾರಿಗಳಾದ ನಾಗರಾಜ್ ರಾವ್ ರವರು ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ವಾಹನ ಕಳ್ಳತನ : ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ವಾಹನಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಘಿಲು ಟೌನ್ ಮೇಲಿನ ಅಗ್ರಹಾರದ ವಾಸಿ ಅಶೋಕ ಎಂಬುವರಿಗೆ ಸೇರಿದ ಹೀರೋಹೋಂಡಾ ಸಂಖ್ಯೆ ಕೆಎ-೦೭-ಎಲ್-೯೭೬೭ ದ್ವಿಚಕ್ರವಾಹನ ಕಳುವಾಗಿರುತ್ತದೆ. ದಿನಾಂಕ ೧೪-೦೯-೨೦೦೮ ರಂದು ರಾತ್ರಿ ಅಶೋಕ ರವರು ತಮ್ಮ ದ್ವಿಚಕ್ರವಾಹನವನ್ನು ತನ್ನ ವಾಸದಮನೆಯ ಮುಂದೆ ನಿಲ್ಲಿಸಿದ್ದ ಸಮಯದಲ್ಲಿ ಯಾರೋಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಾಹನದ ಬೆಲೆ ರೂ. ’೪೨,೦೦೦/ ಆಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೯-೨೦೦೮ ರಂದು ೨೧೩೦ ಗಂಟೆ ಸಮಯದಲ್ಲಿ ಆಂದ್ರಪ್ರದೇಶದ ಪಲಮನೇರು ತಾಲೂಕಿನ ಚೇಲಮಂಗಲಂ ಎಂಬ ಗ್ರಾಮದ ವಾಸಿ ಸುಬ್ರಮಣಿ ಎಂಬುವರು ಮುಳಬಾಗಿಲು ತಾಲೂಕು ಕಪ್ಪಲಮಡಗು ಗ್ರಾಮದ ಸಮೀಪ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಯಾವುದೋ ಒಂದು ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಸುಬ್ರಮಣಿರವರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿ ವಾಹನವನ್ನು ನಿಲ್ಲಿಸದೇ ಹೊರಟುಹೋಗಿರುತ್ತಾನೆ. ಇದರ ಪರಿಣಾಮ ಸುಬ್ರಮಣಿರವರಿಗೆ ಬಲಗಾಲು ಮುರಿದು ತೀವ್ರವಾದ ಗಾಯಗಳಾಗಿದ್ದು ಎಸ್.ಎನ್.ಆರ್‍ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮಾಲುರು ತಾಲೂಕು ನಿಧುಮಾಕನಹಳ್ಳಿ ಗ್ರಾಮದ ವಾಸಿ ವೆಂಕಟಪ್ಪ ಎಂಬುವರ ಮಗನಾದ ಪ್ರಕಾಶ್ ಎಂಬುವರು ಮೃತಪಟ್ಟವರು. ಪ್ರಕಾಶ್ ರವರು ಹರೀಪುರದ ವಾಸಿ ನಾಗೇಶರೆಡ್ಡಿ ರವರ ತೋಟದ ಕೆಲಸಕ್ಕಾಗಿ ಹೋಗುತ್ತಿದ್ದರು. ಅದರಂತೆ ದಿನಾಂಕ ೨೩-೦೯-೨೦೦೮ ರಂದು ಸಹಾ ಕೆಲಸಕ್ಕೆ ಹೋಗಿ ಕೆಲಸ ಮಾಡುತ್ತಿರುವಾಗ ಅಸ್ವಸ್ಥರಾಗಿದ್ದು ತೋಟದ ಮಾಲೀಕರು ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿರುತ್ತಾರೆ. ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ ೨೪-೦೯-೨೦೦೮ ರಂದು ೧೦೦೦ ಗಂಟೆ ಸಮಯದಲ್ಲಿ ಪ್ರಕಾಶ್ ಮೃತಪಟ್ಟಿರುತ್ತಾರೆ. ಈ ಬಗ್ಗೆ ವೆಂಕಟಪ್ಪ ರವರು ದೂರು ನಿಡಿದ್ದು ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ ನೇ ಸೆಪ್ಟೆಂಬರ್ ೦೮

September 25, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೯-೩೦೦೯ ರಂದು ೧೨೩೦ ಗಂಟೆ ಸಮಯದಲ್ಲಿ ಮುಳಬಾಗಿಲು ಟೌನ್ ಕಲೀಫಾ ಮೊಹಲ್ಲಾದ ವಾಸಿ ಅಬ್ದುಲ್ ಮುಜೀಪ್ ಎಂಬುವರು ಜಾಕೀರ್‍ ಎಂಬುವರೊಡನೆ ಟಿ.ವಿ.ಎಸ್ ದ್ವಿಚಕ್ರವಾಹನದಲ್ಲಿ ಮುಳಬಾಗಿಲು ಟೌನ್ ವರದರಾಜ ಟಾಕೀಸ್ ಬಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಸ್ಕಾರ್‍ಪಿಯೋ ಸಂಖ್ಯೆ ಕೆಎ-೪೦-ಎಂ-೧೧೪೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಿಗೆ ತೀವ್ರವಾದ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ಷಹೀನ್ ಷಾ ನಗರದ ಬಿಲಾಲ್ ಮಸೀದಿಯ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೯-೦೯-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಷಹೀನ್ ಷಾ ನಗರದ ವಾಸಿ ಖಾಜಾಖಾನ್ ಎಂಬುವರು ತಮ್ಮ ಮನೆಗೆ ನಡೆದುಕೊಂಡು ಬರುತ್ತಿದ್ದರು. ಆ ಸಮಯದಲ್ಲಿ ಅವರನ್ನು ಅಡ್ಡಗಟ್ಟಿದ ಅಲ್ಲಿಯ ವಾಸಿಗಳೇ ಆದ ಕಂಬಿಅಸ್ಲಂ, ಸಲೀಂ ಮತ್ತು ಜಮೀರ್‍ ಎಂಬುವರು ಖಾಜಾಖಾನ್ ರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಕಲ್ಲಿನಿಂದ, ಕೈಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಪರಸ್ಪರ ದ್ವೇಷ ಈ ಕೃತ್ಯಕ್ಕೆ ಕಾರಣವಾಗಿರುವುದಾಗಿ ತಿಳಿದುಬಂದಿರುತ್ತದೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣಗಳು ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಬ್ಯಾಟನೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೪-೦೯-೨೦೦೮ ರಂದು ೦೭೪೫ ಗಂಟೆ ಸಮಯದಲ್ಲಿ ಮುಲಬಾಗಿಲು ತಾಲೂಕು ಬ್ಯಾಟನೂರು ಗ್ರಾಮದ ವಾಸಿ ಸೋಮಶೇಖರ್‍ ಮತ್ತು ಮೋಹನ್ ಎಂಬುವರು ಹಾಗೂ ಅದೇ ಗ್ರಾಮದ ವಾಸಿಗಳಾದ ರಾಧಾಕೃಸ್ಣ ಮತ್ತು ಕೋದಂಡಪ್ಪ ಎಂಬುವರು ಪರಸ್ಪರ ಜಗಳ ಮಾಡಿಕೊಂಡು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಮಚ್ಚಿನಿಂದ, ಕೈ-ಕಾಲುಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿಕೊಂಡಿರುತ್ತಾರೆ. ಈ ಬಗ್ಗೆ ದೂರು ಮತ್ತು ಪ್ರತಿದೂರು ಬಂದ ಹಿನ್ನೆಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಇತರೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರಮಪ್ರವೇಶ ಮತ್ತು ಸ್ವತ್ತುಹಾನಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಯಲವಾರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೯-೦೯-೨೦೦೮ ರಂದು ೧೫೦೦ ಗಂಟೆ ಸಮಯದಲ್ಲಿ ಯಲವಾರ ಗ್ರಾಮದ ವಾಸಿ ಅಶ್ವತ್ಥಮ್ಮ ಎಂಬುವರ ಸರ್ವೇ ನಂ. ೧೩೭/೦೨ ರ ಜಮೀನಿನ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿದ ಅಜ್ಜಪ್ಪನಹಳ್ಳಿ ಗ್ರಾಮದ ವಾಸಿ ಶ್ರೀನಿವಾಸ ಮತ್ತು ನುಕ್ಕನಹಳ್ಳಿ ಗ್ರಾಮದ ವಾಸಿ ಚೌಡಪ್ಪ ಎಂಬುವರು ಜಮೀನಿನಲ್ಲಿದ್ದ ನೀಲಗಿರಿ ಮರಗಳನ್ನು ಹೊಡೆದುಹಾಕಿ ರೂ. ೧೫೦೦೦/ ಗಳ ನಷ್ಟವನ್ನು ಉಂಟುಮಾಡಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ ನೇ ಸೆಪ್ಟೆಂಬರ್ ೦೮

September 24, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೦-೦೯-೨೦೦೮ ರಂದು ೨೩೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಪಟ್ಟಣದ ಹನುಮಾನಪಾಳ್ಯದ ವಾಸಿ ಕಿರಣ್ ಕುಮಾರ್‍ ಎಂಬುವರು ಅಟೋ ಸಂಖ್ಯೆ ಸಿ.ಜೆ.ಎಂ.೮೪೮೧ ರಲ್ಲಿ ಶ್ರೀನಿವಾಸಪುರ ತಾಲೂಕು ಬೀಸಗಾನಹಳ್ಳಿ ಗೇಟ್ ಬಳಿ ಹೋಗುತ್ತಿದ್ದರು.  ಅ ಸಮಯದಲ್ಲಿ ಟೆಂಪೋ ಸಂಖ್ಯೆ ಕೆಎ-೦೭-೨೨೮ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆಸಿರುತ್ತಾನೆ.  ಇದರ ಪರಿಣಾಮವಾಗಿ ಕಿರಣ್ ಕುಮಾರ್‍ ರವರಿಗೆ ಗಾಯಗಳಾಗಿರುತ್ತವೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೩-೦೯-೨೦೦೮ ರಂದು ೦೮೩೦ ಗಂಟೆ ಸಮಯದಲ್ಲಿ ಆಂದ್ರಪ್ರದೇಶದ ವಾಸಿ ನರಸಿಂಹುಲು ಎಂಬುವರು ತನ್ನ ಲಾರಿ ಸಂಖ್ಯೆ ಕೆಎ-೦೫-ಬಿ-೭೫೮೫ ರಲ್ಲಿ ದೇವನಹಳ್ಳಿಗೆ ಹೋಗುವ ಸಲುವಾಗಿ ಕೋಲಾರ-ಚಿಕ್ಕಬಳ್ಳಾಪುರ ರಸ್ತೆಯ ಪರ್ಜೇನಹಳ್ಳಿ ಗ್ರಾಮದ ಕೆರೆಯ ಸಮೀಪ ಹೋಗುತ್ತಿದ್ದರು.  ಆ ಸಮಯದಲ್ಲಿ ಎದುರುಗಡೆಯಿಂದ ಬಂದ ೪೦೭ ಟೆಂಪೋ ಸಂಖ್ಯೆ ಕೆಎ-೪೦-೬೭೬೮ ರ ಚಾಲಕ ತನ್ನ ಟೆಂಪೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಲಾರಿಗೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ಟೆಂಪೋ ಜಖಂಗೊಂಡಿದ್ದು ಟೆಂಪೋವಿನ ಚಾಲಕ ಗಾಯಗೊಂಡಿರುತ್ತಾನೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಮುಳಬಾಗಿಲು ತಾಲೂಕು ಟಿ.ಕುರುಬರಹಳ್ಳಿ ಗ್ರಾಮದ ಬಳಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೨-೦೯-೨೦೦೮  ರಂದು ೧೭೦೦ ಗಂಟೆ ಸಮಯದಲ್ಲಿ ಟಿ.ಕುರುಬರಹಳ್ಳಿ ಗ್ರಾಮದ ವಾಸಿ ಚನ್ನರಾಯಪ್ಪ ಎಂಬುವರ ಪತ್ನಿ ವೆಂಕಟರತ್ನಮ್ಮ ರವರು ತಮ್ಮ ಹೊಲದ ಬಳಿ ಹೋಗಿದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿ  ಕರುಣಾಕರ್‍ ಎಂಬುವರು ಚನ್ನರಾಯಪ್ಪ ರವರ ಕಳ್ಳೇಕಾಯಿ ಹೊಲದಲ್ಲಿ ಹಸುಗಳನ್ನು ಮೇಯಿಸುತ್ತಿದ್ದರು. ಇದನ್ನು ಪ್ರಶ್ನಿಸಿದ ವೆಂಕಟರತ್ನಮ್ಮ ರವರಿಗೆ ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.

ಇತರೆ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಕಳವು ಪ್ರಯತ್ನ ಮತ್ತು ವಿಗ್ರಹಕ್ಕೆ ಹಾನಿ ಉಂಟು ಮಾಡಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಸೂಳದೇನಹಳ್ಳೀ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೨-೦೯-೨೦೦೮ ರಂದು ರಾತ್ರಿ ಸೂಳದೇನಹಳ್ಳಿ ಗ್ರಾಮದ ಪಕ್ಕದಲ್ಲಿರುವ ಗೌರೀಶ್ವರ ದೇವಾಲಯದ ಬೀಗವನ್ನು ಹೊಡೆದು ದೇವಾಲಯದ ಒಳಗೆ ಪ್ರವೇಶಿಸಿದ ಯಾರೋಕಳ್ಳರು ದೇವಾಲಯದ ಹಾಲಿನಲ್ಲಿದ್ದ ಬಸವಣ್ಣನವರ ವಿಗ್ರಹವನ್ನು ಪಕ್ಕಕ್ಕೆ ಜರುಗಿಸಿ ಎರಡುಅಡಿ ಹಳ್ಳ ತೋಡಿ ಕಳವು ಮಾಡಲು ಪ್ರಯತ್ನ ಪಟ್ಟಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಠ ಜಾತಿ / ಪರಿಶಿಷ್ಟ ಪಂಗಡ (ದೌರ್ಜನ್ಯತಡೆ) ಕಾಯ್ದೆ ಅಡಿಯಲ್ಲಿ ಹಾಗೂ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೩-೦೯-೨೦೦೮ ರಂದು ೧೯೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಬೆಳ್ಳೂರು ಗ್ರಾಮದ ವಾಸಿ ಮುನಿಚನ್ನಪ್ಪ ಮತ್ತು ಮುನಿರಾಜ ಎಂಬುವರ ಮೇಲೆ ವಿನಾಕಾರಣ ಜಗಳ ತೆಗೆದ ಬೆಳಮಾರನಹಳ್ಳಿ ಗ್ರಾಮದ ವಾಸಿಗಳಾದ ಪಿಳ್ಳಣ್ಣ ಮತ್ತಿತರರು ಅಕ್ರಮಗುಂಪು ಕಟ್ಟಿಕೊಂಡು ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿ ದೊಣ್ಣೆಗಳಿಂದ ಕೈಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೪೯

-ಸ್ಥಳ ದಂಡ ಮೊತ್ತ: ರೂ. ೬೭೦೦/

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದ್ವಿಚಕ್ರವಾಹನ ಚೋರನ ಬಂಧನ: ಒಂದು ದ್ವಿಚಕ್ರವಾಹನ ವಶ

September 24, 2008

ದಿನಾಂಕ ೨೪-೦೯-೨೦೦೮ ರಂದು ೧೦೩೦ ಗಂಟೆ ಸಮಯದಲ್ಲಿ ಗಲ್ ಪೇಟೆ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಸರ್ದಾರ್‍ ಮತ್ತು ಅವರ ಸಿಬ್ಬಂದಿಯವರು ಕೋಲಾರ ನಗರದ ಸಂತೆಗೇಟ್ ಬಳಿ ಗಸ್ತಿನಲ್ಲಿದ್ದರು. ಅ ಸಮಯದಲ್ಲಿ ಒಬ್ಬ ಅಸಾಮಿ ನೊಂದಣಿ ಸಂಖ್ಯೆ ಇಲ್ಲದ ಕೆಂಪು ಬಣ್ಣದ ಹೀರೋ ಹೋಂಡಾ ದ್ವಿಚಕ್ರವಾಹನದೊಂದಿಗೆ ನಿಂತಿದ್ದು ಈ ಬಗ್ಗೆ ಅನುಮಾನಗೊಂಡು ಅವನನ್ನು ವಾಹನದ ಬಗ್ಗೆ ಪ್ರಶ್ನಿಸಿದಾಗ ಸಮಂಜಸವಾದ ಉತ್ತರ ನೀಡದ ಕಾರಣ ಮತ್ತು ದಾಖಲಾತಿಗಳನ್ನು ತೋರಿಸಲು ವಿಫಲನಾಗಿರುತ್ತಾನೆ. ಅವನ ಹೆಸರು ವಿಳಾಸ ಕೇಳಲಾಗಿ ಎಸ್.ಅಸ್ಲಾಂ @ ಜಲೀಲ್ ತಂದೆ ಎಸ್.ಬಾಷಾ, ೩೦ ವರ್ಷ, ಆಟೋ ಡ್ರವೈರ್‍, ನೆಹರೂಜೀ ಬೀದಿ, ವಿ.ಕೋಟೆ ಎಂದು ತಿಳಿಸಿದ್ದು ಮಾಲನ್ನು ವಶಪಡಿಸಿಕೊಂಡು ಅಸಾಮಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೩ ನೇ ಸೆಪ್ಟೆಂಬರ್ ೦೮

September 23, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೯-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಮನೆಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಹೊಸ ಬಡಾವಣೆ ೨ ನೇ ಕ್ರಾಸ್ ಕೆನರಾಬ್ಯಾಂಕ್ ಬಳಿ ವಾಸವಾಗಿರುವ ಕುಲಕರ್ಣಿ ಎಂಬುವರ ಮನೆಯಲ್ಲಿ ಕಳವು ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೦-೦೯-೨೦೦೮ ರಂದು ಕುಲಕರ್ಣಿರವರು ತಮ್ಮ ಮನೆಗೆ ಬೀಗ ಹಾಕಿಕೊಂಡು ಮೈಸೂರಿಗೆ ಹೋಗಿದ್ದು ಆ ಸಮಯದಲ್ಲಿ ಮನೆಯ ಹಿಂಭಾಗದ ಬಾಗಿಲನ್ನು ಹೊಡೆದು ಮನೆಯೊಳಗೆ ಪ್ರವೇಶಿಸಿದ ಯಾರೋ ಕಳ್ಳರು ಮನೆಯ ರೂಂನಲ್ಲಿದ್ದ ಬೀರುವನ್ನು ಹೊಡೆದು ಅದರಲ್ಲಿದ್ದ ೧೦ ರೇಷ್ಮೆ ಸೀರೆಗಳು ಹಾಗೂ ರೂ. ೮೬೦೦/ ನಗದನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೯-೨೦೦೮ ರಂದು ರಾತ್ರಿ ೧೯೩೦ ಗಂಟೆ ಸಮಯದಲ್ಲಿ ಕೋಲಾರ ಟೌನ್ ಟಿಪ್ಪುನಗರದ ವಾಸಿ ಅಹ್ಮದ್ ಪಾಷ (೪೫) ಎಂಬುವರು ತನ್ನ ದ್ವಿಚಕ್ರವಾಹನ ಸಂಖ್ಯೆ ಕೆಎ-೦೫-ಇ-೬೩೫೯ ರಲ್ಲಿ ಕೋಲಾರದಿಂದ ಮುಳಬಾಗಿಲಿಗೆ ಬರುವ ಸಲುವಾಗಿ ಎನ್.ಹೆಚ್ ೪ ರಸ್ತೆಯ ಜಮ್ಮುನಹಳ್ಳಿ ಗೇಟ್ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಯಾವುದೋ ಒಂದು ಅಪರಿಚಿತ ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಿಂದ ಹೊರಟುಹೋಗಿರುತ್ತಾನೆ. ಇದರ ಪರಿಣಾಮ ಅಹ್ಮದ್ ಪಾಷ ರವರಿಗೆ ತೀವ್ರವಾದ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ಧಾಗ ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ ೨೨-೦೯-೨೦೦೮ ರಂದು ೨೩೪೫ ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಹೊದಲವಾಡಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರು ಮೃತಪಟ್ಟಿರುತ್ತಾರೆ. ನಾರಾಯಣಸ್ವಾಮಿರವರಿಗೆ ವಿಪರೀತವಾದ ಕುಡಿತದ ಅಭ್ಯಾಸವಿದ್ದು ದಿನಾಂಕ ೨೧-೦೯-೨೦೦೮ ರಂದು ೦೬೪೫ ಗಂಟೆ ಸಮಯದಲ್ಲಿ ತಮ್ಮ ತೋಟದ ಬಳಿ ಯಾವುದೋ ಕಳೆನಾಶಕದ ಔಷಧಿಯನ್ನು ಸೇವಿಸಿ ಅಸ್ವಸ್ಥರಾಗಿರುತ್ತಾರೆ. ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ ೨೧-೦೯-೨೦೦೮ ರಂದು ೧೮೩೦ ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೭

-ಸ್ಥಳ ದಂಡ ಮೊತ್ತ: ರೂ. ೩೨೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.