ದಿನದ ಅಪರಾಧಗಳ ಪಕ್ಷಿನೋಟ ೩೧ನೇ ಅಕ್ಟೋಬರ್ ೦೮

October 31, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೧೦-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ:

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ಟೌನ್ ಸರ್ಕಾರಿ ಉರ್ದು ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೯-೧೦-೨೦೦೮ ರಂದು ರಾತ್ರಿ ಶಾಲೆಯೊಳಗೆ ಪ್ರವೇಶಿಸಿದ ಯಾರೋ ಕಳ್ಳರು ಶಾಲೆಯಲ್ಲಿದ್ದ ಅಕ್ಕಿ, ಬೇಳೆ ಮತ್ತು ಪುಸ್ತಕಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಬಗ್ಗೆ ಶಾಲೆಯ ಮುಖ್ಯೋಪಾದ್ಯಾಯರಾದ ಶ್ರೀಮತಿ ಗೌಸ್ ಉನ್ನೀಸಾ ರವರು ದೂರು ನೀಡಿದ್ದು ಕಳುವಾದ ವಸ್ತುಗಳ ಒಟ್ಟು ಬೆಲೆ ರೂ. ೩೩೭೫-೦೦ ಆಗಿರುತ್ತದೆ.

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಕಳವು ಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಅಂಗಡಿಯ ಗೋಡೆಯನ್ನು ಕೊರೆದು ಒಳ ನುಗ್ಗಿ ಕಳ್ಳತನ ಮಾಡುವ ಉದ್ದೇಶದಿಂದ ಗೋಡೆಯನ್ನು ಕೊರೆಯುತ್ತಿದ್ದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿರುತ್ತಾನೆ. ಕೋಲಾರ ನಗರ ಪೊಲೀಸ್ ಠಾಣೆಯ ಪೇದೆಗಳಾದ ವೆಂಕಟರಾಮೇಗೌಡ ಪೇದೆ ೪೫೦ ಮತ್ತು ನಾರಾಯಣಪ್ಪ ಪೇದೆ ೫೨೬ ರವರುಗಳು ದಿನಾಂಕ ೨೮-೧೦-೨೦೦೮ ರಂದು ರಾತ್ರಿ ಗಸ್ತಿನಲ್ಲಿ ಇದ್ದರು. ಸಮಯದಲ್ಲಿ ವ್ಯಕ್ತಿಯೊಬ್ಬ ದೊಡ್ಡ ಪೇಟೆಯ ಅಮೃತಾ ಜ್ಯೂವೆಲರ್ಅಂಗಡಿಯ ಗೋಡೆಯನ್ನು ಸುತ್ತಿ ಮತ್ತು ಕಬ್ಬಿಣದ ರಾಡಿಸ ಸಹಾಯದಿಂದ ಕೊರೆಯುತ್ತಿದ್ದು ಈತನನ್ನು ಕಂಡ ಪೊಲೀಸ್ ಸಿಬ್ಬಂದಿ ಕೂಡಲೇ ಹಿಡಿದುಕೊಂಡಿರುತ್ತಾರೆ. ಆರೋಪಿ ಕೋಲಾರ ಕಾರಂಜಿಕಟ್ಟೆಯ ವಾಸಿ ಚಂದ್ರಪ್ಪ ಎಂಬುದಾಗಿ ತಿಳಿದುಬಂದಿದ್ದು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ಟೌನ್ ತ್ಯಾಗರಾಜನಗರದಲ್ಲಿ ಕೃತ್ಯ ಸಂಭವಿಸಿರುತ್ತದೆ. ತ್ಯಾಗರಾಜನಗರದ ವಾಸಿ ಮುನಿಯಪ್ಪ (೪೫) ಎಂಬುವರು ದಿನಾಂಕ ೨೯-೧೦-೨೦೦೮ ರಂದು ತಮ್ಮ ವಾಸದ ಮನೆಗೆ ಬೀಗ ಹಾಕಿಕೊಂಡು ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ಹೋಗಿದ್ದರು. ಸಮಯದಲ್ಲಿ ಇವರ ಮನೆಯ ಬಾಗಿಲನ್ನು ಹೊಡೆದು ಮನೆಯ ಒಳಗೆ ಪ್ರವೇಶಿಸಿದ ಯಾರೋ ಕಳ್ಳರು ಮನೆಯಲ್ಲಿದ್ದ ಒಂದು ಕಲರ್ಟಿವಿ, ಡಿ.ವಿ.ಡಿ ಇನ್ನಿತರ ಗೃಹಬಳಕೆ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಸ್ತುಗಳ ಒಟ್ಟು ಮೌಲ್ಯ ರೂ. ,೭೦೦/ ಆಗಿರುತ್ತದೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ನುಕ್ಕನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೦-೧೦-೨೦೦೮ ರಂದು ೦೫೩೦ ಗಂಟೆ ಸಮಯದಲ್ಲಿ ನುಕ್ಕನಹಳ್ಳಿ ಗ್ರಾಮದ ವಾಸಿ ವಿ.ಎನ್.ಭಾಸ್ಕರ್ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಶ್ರೀನಿವಾಸ, ಪ್ರಕಾಶ ಮತ್ತು ಮುರಳಿ ಎಂಬುವರು ಕೈಗಳಿಂದ, ಮಚ್ಚಿನಿಂದ ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಅದೇ ದಿನ ಬೆಳಗ್ಗೆ ಸೀಮೆಎಣ್ಣೆ ಕೊಡುವ ವಿಚಾರದಲ್ಲಿ ಪರಸ್ಪರರ ನಡುವೆ ಮಾತುಕತೆಗಳು ನಡೆದಿದ್ದು ವಿವಾದದ ಹಿನ್ನೆಲೆಯಲ್ಲಿ ಕೃತ್ಯ ಸಂಭವಿಸಿರುತ್ತದೆ.

ಇತರೆ: ೦೧

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಹುಡುಗಿಯ ಅಪಹರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಚಿಲೇಪಲ್ಲಿ ಗ್ರಾಮದಲ್ಲಿ ವಾಸವಾಗಿರುವ ಹುಡುಗಿ ಅಪಹರಣಕ್ಕೀಡಾಗಿರುತ್ತಾಳೆ. ದಿನಾಂಕ ೨೯-೧೦-೨೦೦೮ ರಂದು ೨೧೩೦ ಗಂಟೆ ಸಮಯದಲ್ಲಿ ಅಪಹರಣಕ್ಕೀಡಾದ ಹುಡುಗಿ ತನ್ನ ತಂದೆಯೊಡನೆ ಚಿಲೇಪಲ್ಲಿ ಗ್ರಾಮದ ಗೇಟ್ ಬಳಿ ಬಸ್ ಇಳಿದು ಬರುತ್ತಿರುವಾಗ ಕೆಎ-೦೭-ಎಂ-೨೨೯೧ ಸಂಖ್ಯೆಯ ವಾಹನದಲ್ಲಿ ಬಂದ ಅದೇ ಗ್ರಾಮದ ವಾಸಿ ವೆಂಕಟರಾಮಪ್ಪ ಹಾಗೂ ಇತರೇ ಮೂರು ಜನರು ಹುಡುಗಿಯನ್ನು ಬಲವಂತವಾಗಿ ವಾಹನದಲ್ಲಿ ಕುಳ್ಳರಿಸಿಕೊಂಡು ಅಪಹರಿಸಿರುತ್ತಾರೆ. ಬಗ್ಗೆ ಅಪಹರಣಕ್ಕೀಡಾದ ಹುಡುಗಿಯ ತಂದೆ ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೪೧

-ಸ್ಥಳ ದಂಡ ಮೊತ್ತ: ರೂ. ೫೫೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ನೇ ಅಕ್ಟೋಬರ್ ೦೮

October 30, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೧೦-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹೆಂಗಸಿನ ಮಾನಹರಣಕ್ಕೆ ಪ್ರಯತ್ನಿಸಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ವಕ್ಕಲೇರಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೧೦-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ವಕ್ಕಲೇರಿ ಗ್ರಾಮದ ವಾಸಿ ಮುನಿರತ್ನಮ್ಮ ಎಂಬುವರು ತಮ್ಮ ಗ್ರಾಮದ ಕೆರೆಯ ಬಳಿ ಕುರಿಗಳನ್ನು ಮೇಯಿಸುತ್ತಿದ್ದರು. ಸಮಯದಲ್ಲಿ ಹುಲ್ಲಿನ ಹೊರೆಯೊಂದನ್ನು ತನ್ನ ತಲೆಮೇಲೆ ಎತ್ತಲು ಸಹಾಯ ಮಾಡಲು ಕರೆದ ಜನಪ್ಪನಹಳ್ಳಿ ಗ್ರಾಮದ ವಾಸಿ ಗೋಪಾಲಕರಷ್ಣ ಎಂಬುವನು ಮುನಿರತ್ನಮ್ಮ ರವರ ಬಾಯಿಗೆ ಬಟ್ಟೆ ತುರುಕಿ ಎಳೆದಾಡಿ ಅತ್ಯಾಚರಕ್ಕೆ ಪ್ರಯತ್ನ ಪಟ್ಟಿರುತ್ತಾನೆ.

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೨೭

-ಸ್ಥಳ ದಂಡ ಮೊತ್ತ: ,೬೦೦/-

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಅಕ್ರಮ ಮದ್ಯ ದಾಸ್ತಾನು: ಒಬ್ಬನ ಬಂಧನ, ಮದ್ಯ ವಶ

October 30, 2008

ದಿನಾಂಕ ೨೯-೧೦-೨೦೦೮ ರಂದು ೧೬೪೫ ಗಂಟೆ ಸಮಯದಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಶ್ರೀ ನಾರಾಯಣಸ್ವಾಮಿ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ಕೋಲಾರ ತಾಲೂಕು ಜನಪ್ಪನ ಹಳ್ಳಿ ಗ್ರಾಮದ ಗೋಪಾಲಕೃಷ್ಣ ಎಂಬುವರ ಅಂಗಡಿಯ ಮೇಲೆ ತಮ್ಮ ಸಿಬ್ಬಂದಿಯೊಡನೆ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮದ್ಯವನ್ನು ವಶಪಡಿಸಿಕೊಂಡಿರುತ್ತಾರೆ. ಆರೋಪಿ ಗೋಪಾಲಕೃಷ್ಣ ತನ್ನ ಅಂಗಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ೧೮೦ ಎಂ.ಎಲ್ ೩೬ ಬಾಟಲ್ ಹೈವೆ ಫೈನ್ ವಿಸ್ಕಿಯನ್ನು ದಾಸ್ತಾನು ಮಾಡಿದ್ದು ಸಿಕ್ಕಿ ಬಿದ್ದಿರುತ್ತಾನೆ. ಆರೋಪಿಯನ್ನು ಬಂಧಿಸಿ ದಾಸ್ತಾನು ಮಾಡಲಾಗಿದ್ದ ಮದ್ಯವನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಬಗ್ಹೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ನೇ ಅಕ್ಟೋಬರ್ ೦೮

October 30, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೯-೧೦-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೃಷ್ಣಪ್ಪ, ಅಡಿಟರ್ಕಛೇರಿಯಲ್ಲಿ ಗುಮಾಸ್ತ, ಕೋಲಾರ ರವರು ಕೋಲಾರ ನಗರದ ಕುರುಬರಪೇಟೆಯಲ್ಲಿ ವಾಸವಾಗಿದ್ದು, ದಿನಾಂಕ ೨೭-೧೦-೨೦೦೮ ರಂದು ರಾತ್ರಿ ಪ್ರಮೀಳಮ್ಮ ಎಂಬ ಹೆಂಗಸನ್ನು ಕೊಲೆ ಮಾಡಿ ತಾನೂ ಸಹ ಹರಿತವಾದ ಆಯುಧದಿಂದ ಕುತ್ತಿಯನ್ನು ಕೊಯ್ದು ಕೊಂಡು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದು ಚಕಿತ್ಸೆಗಾಗಿ ಕೋಲಾರ ಎಸ್ಎನ್ಆರ್ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಬಗ್ಗೆ ಮನೆಯ ಮಾಲೀಕರಾದ ಜೈಶಂಕರ ಎಂಬುವರು ದೂರನ್ನು ನೀಡಿರುತ್ತಾರೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು:

-ಮಾರಣಾಂತಿಕ:

ವೇಮಗಲ್ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೮-೧೦-೨೦೦೮ ರಂದು ೧೯೪೫ ಗಂಟೆ ಸಮಯದಲ್ಲಿ ಹೊಸಕೋಟೆ ತಾಲೂಕು ಮಂಚಪ್ಪನಹಳ್ಳಿ ಗ್ರಾಮದ ವಾಸಿಗಳಾ ವೀರಭದ್ರೇಗೌಡ ಮತ್ತು ಅವರ ಕುಟುಂಬದವರು ಕ್ವಾಲೀಸ್ ವಾಹನ ಸಂಖ್ಯೆ ಕೆಎ-೦೪-ಎಂ-೭೫೭೫ ರಲ್ಲಿ ಕೋಟಿಲಿಂಗೇಶ್ವರ ದೇವಸ್ಥಾನವನ್ನು ನೊಡಿಕೊಂಡು ವಾಪಸ್ಸು ತಮ್ಮ ಗ್ರಾಮಕ್ಕೆ   ಹೋಗುವ ಸಲುವಾಗಿ  ರಾಷ್ಟ್ರೀಯ ಹೆದ್ದಾರಿ- ರಾಮಸಂದ್ರ ಬಾರ್ಡರ್ಬಳಿ ಹೋಗುತ್ತಿದ್ದರು.  ಸಮಯದಲ್ಲಿ  ಬೆಂಗಳೂರು ಗಡೆಯಿಂದ ಬಂದ ವಿನಾಯಕ ಖಾಸಗಿ ಬಸ್ಸು ಸಂಖ್ಯೆ ಕೆಎ-೦೧-ಸಿ-೨೦೮೮ ಚಾಲಕ ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಕ್ವಾಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ವಾಹನದಲ್ಲಿದ್ದ   ಮಂಜುನಾಥ್(೩೫) ಚಾಲಕ ಮತ್ತು  ಮಲ್ಲಿಕಾರ್ಜುನ ಎಂಬುವರು ತೀವ್ರತರದ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ. 

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೮-೧೦-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ಕೋಲಾರ ರಹಮತ್ ನಗರದ ವಾಸಿ ಸೈಯದ್ ಬಷೀರ್ಎಂಬುವರು ಕೋಲಾರ ಅಮ್ಮವಾರಿ ಪೇಟೆ ವೃತ್ತದ ಗಂಗಮ್ಮ ದೇವಾಲಯದ ಬಳಿ ನಡೆದುಕೊಂಡು ಹೋಗುತ್ತಿದ್ದರು.  ಸಮಯದಲ್ಲಿ  ಮೆಕ್ಕೆ ವೃತ್ತದ ಕಡೆಯಿಂದ ಬಂದ ಕೆಎ-೦೨-ಡಬ್ಲ್ಯೂ-೧೨೯೫  ಮಾಕ್ಸ್ ೧೦೦ ದ್ವಿಚಕ್ರವಾಹನದ ಚಾಲಕ ನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ನಡೆದುಕೊಂಡು ಹೋಗುತ್ತಿದ್ದ ಸೈಯದ್ ಬಷೀರ್ರವರಿಗೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ಸೈಯದ್ ಬಷೀರ್ರವರ ತಲೆಗೆ ಗಾಯಗಳಾಗಿದ್ದು ಕೋಲಾರ್ಎಸ್.ಎನ್‌.ಆರ್ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.   ಚಿಕಿತ್ಸೆ ಫಲಕಾರಿಯಾಗದೇ ಸೈಯದ್ ಬಷೀರ್ರವರು ದಿನಾಂಕ ೨೯-೧೦-೨೦೦೮ ರಂದು ೧೦೩೦ ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾರೆ.

 -ಸಾಧಾರಣ:  ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೯-೧೦-೨೦೦೮ ರಂದು ೦೭೦೦ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ವಾಸಿ ರವೀಂದ್ರ ಎಂಬುವರು ತನ್ನ ಕಾರ್  ಸಂಖ್ಯೆ ಪಿಬಿ-೦೮-ಎಸ್-೪೧೮೯ ರಲ್ಲಿ ಬೆಂಗಳೂರಿಗೆ ಹೋಗುವ ಸಲುವಾಗಿ ಎನ್.ಹೆಚ್ ಕೆಂದಟ್ಟಿ ಗೇಟ್ ಬಳಿ ಹೋಗುತ್ತಿದ್ದರು.  ಸಮಯದಲ್ಲಿ ಬೆಂಗಳೂರ ಕಡೆಯಿಂದ ಬಂದ ಲಾರಿ ಸಂಖ್ಯೆ ಎಪಿ-೧೬-ವೈ-೭೧೩೭ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಕಾರಿನಲ್ಲಿದ್ದ ರವೀಂದ್ರ ಮತ್ತು ಮನೋಹರ್ರವರಿಗೆ ಮುಖಕ್ಕೆ ಮತ್ತಿತರೇ ಕಡೆ ಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೯-೧೦-೨೦೦೮ ರಂದು ೧೧೪೫ ಗಂಟೆ ಸಮಯದಲ್ಲಿ ಗೌನಿಪಲ್ಲಿ ಗ್ರಾಮದ ವಾಸಿ ಅಸ್ಲಂಪಾಷ ಎಂಬುವರು ಚಾಕಾರಸನಹಳ್ಳಿ ಗ್ರಾಮದ ಗೇಟ್ ಬಳಿ ರಸ್ತೆಯನ್ನು ದಾಟುತ್ತಿದ್ದರು.  ಸಮಯದಲ್ಲಿ ಕೋಲಾರದ ಕಡೆಯಿಂದ ಬಂದ ಇನ್ನೋವಾ ಕಾರ್ಸಂಖ್ಯೆ ಕೆಎ-೫೩-ಎಂ-೭೫೨೬ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಅಸ್ಲಂಪಾಷ ರವರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಅಸ್ಲಂಪಾಷ ರವರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ:  ಇಲ್ಲ

ಹಲ್ಲೆ:   ಇಲ್ಲ

ಇತರೆ:  ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಠ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಜನ್ನಘಟ್ಟ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೯-೧೦-೨೦೦೮ ರಂದು ೨೨೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಜನಘಟ್ಟ ಗ್ರಾಮದ ವಾಸಿಗಳಾದ ಅರುಣ್, ಪ್ರಮೋದ್, ಸುಬ್ರಮಣಿ, ಪ್ರಸನ್ನ, ಚನ್ನಪ್ಪ ಎಂಬುವರು ಅಕ್ರಮಗುಂಪು ಕಟ್ಟಿಕೊಂಡು ಬಂದು ತನ್ನ ಗ್ರಾಮದಲ್ಲಿರುವ ಅಂಬೇಡ್ಕರ್ಭಾವಚಿತ್ರಕ್ಕೆ ಚಪ್ಪಲಿ ಹಾರವನ್ನು ಹಾಕಿ ಬಾಟಲುಗಳಿಂದ ಹೊಡೆದಿರುವುದಾಗಿ ಮತ್ತು ಗ್ರಾಮದಲ್ಲಿನ ದಲಿತರ ಮೇಲೆ ದೌರ್ಜನ್ಯ ಮಾಡಿ ಜಾತಿನಿಂದನೆ ಮಾಡಿರುತ್ತಾರೆಂದು ಅದೇ ಗ್ರಾಮದ ವಾಸಿ ಮಂಜುನಾಥ ಎಂಬುವರು  ದೂರನ್ನು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು೧೯   

-ಸ್ಥಳ ದಂಡ ಮೊತ್ತ:  ರೂ. ೩೦೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಅಕ್ರಮ ಕಳ್ಳಬಟ್ಟಿ ಸಾಗಾಣಿಕೆ: ೩೦ ಲೀಟರ್ ಕಳ್ಳಬಟ್ಟಿ ವಶ, ಒಬ್ಬನ ಬಂಧನ

October 28, 2008

ದಿನಾಂಕ ೨೮-೧೦-೨೦೦೮ ರಂದು ೦೯೪೫ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಪೊಲೀಸ್ ಠಾಣೆಯ ಸಹಾಯಕ ಆರಕ್ಷಕ ಉಪನಿರೀಕ್ಷಕರಾದ ಶ್ರೀ ವೆಂಕಟೇಶಪ್ಪ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ಪೇದೆಗಳಾದ ೪೮೩ ಮತ್ತು ೧೩೧ ರವರೊಂದಿಗೆ ಶ್ರೀನಿವಾಸಪುರ ಟೌನ್ ಕೋಲಾರ ವೃತ್ತದ ಬಳಿ ದಾಳಿ ನಡೆಸಿ ಅಕ್ರಮವಾಗಿ ಲಾರಿ ಟ್ಯೂಬ್ ಒಂದರಲ್ಲಿ ಸಾಗಿಸುತ್ತಿದ್ದ ೩೦ ಲೀಟರ್ಕಳ್ಳಬಟ್ಟಿಯನ್ನು ವಶಪಡಿಸಿಕೊಂಡಿರುತ್ತಾರೆ. ಆರೋಪಿ ಶ್ರೀನಿವಾಸಪುರ ಟೌನ್ ಅಂಬೇಡ್ಕರ್ಪಾಳ್ಯದ ವಾಸಿ ಲಕ್ಷ್ಮಣ @ ಪಗಳೇಖಾನ್ ಎಂಬುವನನ್ನು ಬಂಧಿಸಲಾಗಿರುತ್ತದೆ. 

 


ಅಕ್ರಮ ಕಳ್ಳಬಟ್ಟಿ ದಾಸ್ತಾನು: ೧೫ ಲೀಟರ್ ಕಳ್ಳಬಟ್ಟಿ ವಶ

October 28, 2008

ದಿನಾಂಕ ೨೭-೧೦-೨೦೦೮ ರಂದು ೧೮೪೦ ಗಂಟೆ ಸಮಯದಲ್ಲಿ ಮಾಸ್ತಿ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಶ್ರೀ ಎಂ.ಎನ್.ಮಂಜುನಾಥ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ಮಾಸ್ತಿ ಗ್ರಾಮದ ವಾಸಿ ವೆಂಕಟಮ್ಮ ಎಂಬುವರ ಮನೆಯ ಮೇಲೆ ದಾಳಿ ನಡೆಸಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ೧೫ ಲಿಟರ್ಕಳ್ಳಬಟ್ಟಿಯನ್ನು ವಶಪಡಿಸಿಕೊಂಡಿರುತ್ತಾರೆ.  ವೆಂಕಟಮ್ಮ ಮತ್ತು ಇವರ ಗಂಡ ನಾರಾಯಣಸ್ವಾಮಿ ಎಂಬುವರ ವಿರುದ್ದ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ನೇ ಅಕ್ಟೋಬರ್ ೦೮

October 28, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೮-೧೦-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಮನೆಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಶ್ರೀನಿವಾಸಪುರ ತಾಲೂಕು ಕಲ್ಲೂರು ಗ್ರಾಮದ ವಾಸಿ ಪಾರ್ವತಮ್ಮ ಎಂಬುವರ ವಾಸದ ಮನೆಯಲ್ಲಿ ಕಳವುಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೦೭-೧೦-೨೦೦೮ ರಿಂದ ೧೭-೧೦-೨೦೦೮ ನಡುವಿನ ಅವಧಿಯಲ್ಲಿ ಪಾರ್ವತಮ್ಮ ರವರ ಮನೆಯ ಬಾಗಿಲು ತೆಗೆದು ಮನೆಯ ಬೀರುವಿನ ಒಳಗೆ ಇದ್ದ ಚಿನ್ನದ ಆಭರಣಗಳು ಹಾಗೂ ರೂ. ೧೦,೦೦೦/ ನಗದು ಸೇರಿದಂತೆ ಒಟ್ಟು ರೂ. ೯೮,೦೦೦/ ರೂಗಳಷ್ಟು ಕಳವು ಮಾಡಿಕೊಂಡು ಹೋಗಿರುತ್ತಾರೆ.  ಪಾರ್ವತಮ್ಮ ರವರು ಪ್ರತಿದಿನ ತೋಟದ ಕೆಲಸಕ್ಕೆ ಹೋಗುವಾಗಿ ತಮ್ಮ ಮನೆಗೆ ಬೀಗ ಹಾಕಿಮ ಬೀಗದ ಕೈಯನ್ನು ಕಾಂಪೌಂಡಿನ ಗೋಡೆಯ ಮೇಲೆ ಇಡುತ್ತಿದ್ದು ಇದನ್ನು ನೋಡಿಕೊಂಡಿದ್ದ ಯಾರೋ ಕಳ್ಳರು ಕೃತ್ಯ ಎಸಗಿರಬಹುದಾಗಿ ಪಾರ್ವತಮ್ಮ ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ಮಾಲೂರು ತಾಲೂಕು ಹುಲದೇನಹಳ್ಳಿ ಗ್ರಾಮದ ವಾಸಿ ರಮೇಶ್ ಎಂಬುವರು ತನ್ನ ಹೆಂಡತಿಗೆ ಹೆರಿಗೆ ಆಗಿದ್ದರ ಸಲುವಾಗಿ  ನೊಡಿಕೊಂಡು ಬರಲು ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ಹೋಗಿದ್ದು ದಿನಾಂಕ ೨೭-೧೦-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ತನ್ನ ಬಾವ ರಾಮಲಿಂಗಪ್ಪ ಎಂಬುವರೊಡನೆ ವಾಪಸ್ಸು ತಮ್ಮ ಗ್ರಾಮಕ್ಕೆ ಹೋಗುವ ಸಲುವಾಗಿ ಹೊರಟು ಮಾದಾಪುರ ಕ್ರಾಸ್ ಬಳಿ ಟಿ.ವಿ.ಎಸ್ ಎಕ್ಸ್.ಎಲ್ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದರು.  ಸಮಯದಲ್ಲಿ ಎದುರುಗಡೆಯಿಂದ ಬಂದ ಟೆಂಪೋ ಸಂಖ್ಯೆ ಕೆಎ-೦೩-೫೫೯೯ ಚಾಲಕ ತನ್ನ ಟೆಂಪೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮ ದ್ವಿಚಕ್ರವಾಹನ ಸವಾರರಿಗೆ ಗಾಯಗಳುಂಟಾಗಿದ್ದು ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಗಾಯಾಳುಗಳ ಪೈಕಿ ರಾಮಲಿಂಗಪ್ಪ ರವರು ಚಿಕಿತ್ಸೆ ಫಲಕಾರಿಯಾಗದ ಕಾರಣ ದಿನಾಂಕ ೨೭-೧೦-೨೦೦೮ ರಂದು ೧೯೦೦ ಗಂಟೆಗೆ ಮೃತಪಟ್ಟಿರುತ್ತಾರೆ.

 -ಸಾಧಾರಣ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೧೦-೨೦೦೮ ರಂದು ೧೬೦೦ ಗಂಟೆ ಸಮಯದಲ್ಲಿ ಮೊಹಮದ್ ಪಾಹಿಲ್ ಎಂಬುವರು ಆಟೋ ಸಂಖ್ಯೆ ಸಿಎಎಸ್-೮೬೧ ರಲ್ಲಿ ತೇರಹಳ್ಳಿ ಬೆಟ್ಟದ ಮೇಲೆ ಹೋಗುವ ಸಲುವಾಗಿ ಹೋಗುತ್ತಿದ್ದರು.  ಸಮಯದಲ್ಲಿ ಆಟೋ ಚಾಲಕ ಸದುಲ್ಲಾ ಎಂಬುವರು ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದು ಆಟೋ ಉರುಳಿ ಬಿದ್ದಿರುತ್ತದೆ.  ಇದರ ಪರಿಣಾಮ ಆಟೋವಿನಲ್ಲಿದ್ದ ಜನರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ:  ಇಲ್ಲ

ಹಲ್ಲೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಮಜರಾ ಲಕ್ಷ್ಮಿಸಾಗರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೬-೧೦-೨೦೦೮ ರಂದು ೨೨೦೦ ಗಂಟೆ ಸಮಯದಲ್ಲಿ  ಮಜರಾ ಲಕ್ಷ್ಮಿಸಾಗರ ಗ್ರಾಮದ ವಾಸಿ ಗಂಗಮ್ಮ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಮುನಿರಾಜು ಮತ್ತಿತರೇ ಇಬ್ಬರು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.  ನಿವೇಶನವೊಂದಕ್ಕೆ ಸಂಬಂಧಿಸಿದಂತೆ ಪರಸ್ಪರರ ನಡುವಿನ ದ್ವೇಷ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಇತರೆ:  ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ನಗರ ಕಠಾರಿಪಾಳ್ಯದ ವಾಸಿ ಕೆ.ಎನ್.ಕಿರಣ್ ಕುಮಾರ್ಎಂಬ ೨೬ ವರ್ಷದ ವ್ಯಕ್ತಿ ಕಾಣೆಯಾದವರು.  ದಿನಾಂಕ ೧೭-೧೦-೨೦೦೮ ರಂದು ತನ್ನ ವಾಸದಮನೆಯಿಂದ ಹೊರಟ ಕಿರಣ್ ಕುಮಾರ್ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು   

-ಸ್ಥಳ ದಂಡ ಮೊತ್ತ:  

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದೀಪಾವಳಿ ಹಬ್ಬದಲ್ಲಿ ಪಟಾಕಿಗಳನ್ನು ಬಳಸುವ ಕುರಿತು ಸೂಚನೆಗಳು

October 28, 2008

ದೀಪಾವಳಿ ಹಬ್ಬದಂದು ಸಾಂಕೇತಿಕವಾಗಿ ಪಟಾಕಿಗಳನ್ನು ಸಿಡಿಸುವುದು ನಮ್ಮ ಸಂಪ್ರದಾಯದ ಪ್ರತೀಕವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಪಟಾಕಿಗಳನ್ನು ಅತಿ ಹೆಚ್ಚಾಗಿ ಸಿಡಿಸುವುದರಿಂದ ಶಬ್ದ ಹಾಗೂ ವಾಯು ಮಾಲಿನ್ಯ ಉಂಟಾಗುತ್ತದೆ. ಇದು ಹೃದಯಘಾತ ಉಸಿರಾಟದ ತೊಂದರೆ ಹಾಗೂ ಶಾಶ್ವತ ಶ್ರವಣ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನಮ್ಮ ಸುತ್ತ ಮುತ್ತ ಇರುವ ವೃದ್ದರು, ಶಿಶುಗಳು ಹಾಗೂ ರೋಗಿಗಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಯಿದೆ. ಈ ಹಿಂದೆ ದೀಪಾವಳಿ ಹಬ್ಬದ ದಿನಗಳಲ್ಲಿ ಶಬ್ದವನ್ನು ತಪಾಸಣೆ ಮಾಡಿದಾಗ ಶಬ್ದವು ಸೂಚಿಸಿರುವ ಮಿತಿಯನ್ನು ದಾಟಿರುವುದು ಕಂಡು ಬಂದಿರುತ್ತದೆ. ಅದ್ದರಿಂದ ಮುಂಜಾಗ್ರತೆ ವಹಿಸದಿದ್ದರೆ ಪಟಾಕಿಯನ್ನು ಸಿಡಿಸುವುದರಿಂದ ಸಣ್ಣ ಪುಟ್ಟ ಗಾಯಗಳು ಆಗಬಹುದು ಹಾಗೂ ದೊಡ್ಡ ಪ್ರಮಾಣದಲ್ಲಿ ಬೆಂಕಿ ಅನಾಹುತಗಳಾಗಬಹುದು. ಈ ಕಾರಣದಿಂದ ದೀಪಾವಳಿ ಹಬ್ಬದ ಸಮಯದಲ್ಲಿ ಜನತೆಯ ಹಿತ ದೃಷ್ಠಿಯಿಂದ ಪಟಾಕಿಯನ್ನು ಸಿಡಿಸುವುದರಲ್ಲಿ ಅಗತ್ಯ ಮುಂಜಾಗ್ರತೆ ವಹಿಸಬೇಕಾಗಿದ್ದು ಈ ನಿಟ್ಟಿನಲ್ಲಿ ಕೆಳಗೆ ಸೂಚಿಸಿರುವ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ.

1. ಸಗಟು ಹಾಗೂ ಚಿಲ್ಲರೆ ಪಟಾಕಿಗಳ ಮಾರಾಟಗಾರರು ಸರ್ಕಾರವು ನಿಗಧಿಪಡಿಸಿದ ಅವಧಿಯಲ್ಲಿ ಹಾಗೂ ನಿಗಧಿತ ಪ್ರದೇಶದಲ್ಲಿಯೇ ಪಟಾಕಿಗಳನ್ನು ಮಾರಾಟ ಮಾಡಬೇಕು.

2. ಆಟಮ್‌ ಬಾಂಬ್‌, ಬೆಳ್ಳುಳ್ಳಿ ಪಟಾಕಿ ಮತ್ತು ಹೆಚ್ಚು ಶಬ್ದ ಮಾಡುವ (೧೨೫ ಡೆಸಿಬಲಗಿಂತ ಹೆಚ್ಚು ಶಬ್ದ ಮಾಡುವ) ಇತರೆ ಪಟಾಕಿಗಳ ಬಳಕೆ ಮಾರಾಟ ಮತ್ತು ಸಿಡಿಸುವುದನ್ನು ನಿಷೇದಿಸಿದೆ. ಇಂತಹ ಪಟಾಕಿ ಹಾಗೂ ಸಿಡಿಮದ್ದು ಮಾರಾಟ ಮಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

3. ಪಟಾಕಿ ಮತ್ತು ಸಿಡಿಮದ್ದುಗಳನ್ನು ವಸತಿ ಪ್ರದೇಶ, ಆಸ್ಪತ್ರೆ, ಪೆಟ್ರೋಲ್‌ಬಂಕ್ಸರ್ಕಾರಿ ಕಛೇರಿಗಳು, ಶಾಲಾ ಪ್ರದೇಶ ಹಾಗೂ ಇತರೆ ಶಬ್ದರಹಿತ ವಲಯದಲ್ಲಿ ಸಿಡಿಸಬಾರದು.

4. ವಿಶಾಲ ಮೈದಾನಗಳಲ್ಲಿ ಎಲ್ಲರೂ ಸಂಘಟಿತರಾಗಿ ಪಟಾಕಿ ಸಿಡಿಸಬೇಕು.

5. ಹಬ್ಬದ ದಿನಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಮನೆಯಲ್ಲಿ ಸಿದ್ದಪಡಿಸಿ ಇಟ್ಟುಕೊಳ್ಳಬೇಕು.

6. ವಾಹನಗಳನ್ನು ಸುರಕ್ಷಿತ ಸ್ಥಳಗಳಲ್ಲಿ ನಿಲ್ಲಿಸುವುದು.

7. ಪಟಾಕಿಗಳನ್ನು ರಾತ್ರಿ ೨೨೦೦ ಗಂಟೆಯಿಂದ ಬೆಳಿಗ್ಗೆ ೦೬೦೦ ಗಂಟೆಯವರೆಗೆ ಸಿಡಿಸಬಾರದು.

8. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಹತ್ತಿ ಬಟ್ಟೆಗಳನ್ನು ಧರಿಸಿಕೊಳ್ಳತಕ್ಕದ್ದು ಹಾಗೂ ಪಾದರಕ್ಷೆಗಳನ್ನು ಧರಿಸತಕ್ಕದ್ದು.

9. ಶಬ್ದ ಮಾಲಿನ್ಯದಿಂದ ರಕ್ಷಿಸಿಕೊಳ್ಳುವ ಸಲುವಾಗಿ ಕಿವಿಗಳಲ್ಲಿ ಹತ್ತಿ ಉಂಡೆಗಳನ್ನು ಇಟ್ಟುಕೊಳ್ಳತಕ್ಕದ್ದು.

ದೀಪಾವಳಿ ಹಬ್ಬವನ್ನು ಆಚರಿಸಿ ಶಬ್ದ ಹಾಗೂ ವಾಯು ಮಾಲಿನ್ಯ ತಡೆಗಟ್ಟಲು ಸಹಕರಿಸಬೇಕೆಂದು ಮತ್ತೊಮ್ಮೆ ಕೋರಲಾಗಿದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ನೇ ಅಕ್ಟೋಬರ್ ೦೮

October 27, 2008

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ -೧೦-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೧೦-೨೦೦೮ ರಂದು ರಾತ್ರಿ ಕೋಲಾರ ನಗರ ಕಠಾರಿಪಾಳ್ಯದ ವಾಸಿ .ಎನ್.ಚಿಕ್ಕದೇವರಾಜು ಎಂಬುವರು ತನ್ನ ಮನೆಯ ಕಾಂಪೌಂಡಿನಲ್ಲಿ ನಿಲ್ಲಿಸಿದ್ದ ಬಜಾಜ್ ಪಲ್ಸ್ರ್ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಕ್ಯೂ-೩೪೬೩ ನ್ನು ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಾಹನದ ಬೆಲೆ ರೂ. ೪೮,೦೦೦/- ಗಳಾಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೧೦-೨೦೦೮ ರಂದು ೬೦ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ವಾಸಿಗಳಾದ ಅರವಿಂದ್ಸಿಂಗ್ ಮತ್ತು ಹರೀಶ್ ಎಂಬುವರ ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೫೦-ಹೆಚ್‌-೫೧೨೩ ರಲ್ಲಿ ಮಾಲೂರು ತಾಲೂಕು ಟೇಕಲ್ ಬಳಿ ಹೋಗುತ್ತಿದ್ದರು. ಸಮಯದಲ್ಲಿ ಟೇಕಲ್ ಕಡೆಯಿಂದ ಬಂದ ಲಾರಿ ಸಂಖ್ಯೆ ಕೆಎ-೫೩-೩೪೪೫ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಗೆ ಡಿಕ್ಕಿ ಹೊಡೆದ ಪರಿಣಾಮ ಅರವಿಂದ್ಸಿಂಗ್ ಮತ್ತು ಹರೀಶ್ ರವರಿಗೆ ತೀವ್ರವಾದ ರಕ್ತಗಾಯಗಳಾಗಿ ಚಿಕಿತ್ಸೆಗಾಗಿ ಬಂಗಾರುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ -೧೦-೨೦೦೮ ರಂದು ೯೩ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಬೂಡದೇರು ಗ್ರಾಮದ ವಾಸಿ ನಾಗಪ್ಪ ಎಂಬುವರ ಸೈಕಲ್ನಲ್ಲಿ ಬೈರಕೂರು ನಿಂದ ತನ್ನ ಗ್ರಾಮಕ್ಕೆ ಹೋಗುತ್ತಿದ್ದರು. ಸಮಯದಲ್ಲಿ ಪುಂಗನೂರು ಕಡೆಯಿಂದ ಬಂದ ಲಾರಿ ಸಂಖ್ಯೆ ಪಿ-೨೦-ಟಿ- ೨೧೩೦ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಸೈಕಲ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಗಪ್ಪ ರವರಿಗೆ ತೀವ್ರವಾದ ರಕ್ತಗಾಯಗಳಾಗಿರುತ್ತದೆ. ಲಾರಿ ಚಾಲಕ ವಾಹನದ ಸಮೇತ ಪರಾರಿಯಾಗಿರುತ್ತಾನೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೧೦-೨೦೦೮ ರಂದು ೯೦ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ ಟೀಚರ್ಕಾಲೋನಿ ವಾಸಿ ಪ್ರಕಾಶ್ ಮತ್ತು ಗಣೇಶ್ ರೆಡ್ಡಿ ಎಂಬುವರ ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೫೦-ಹೆಚ್‌-೫೧೨೩ ರಲ್ಲಿ ರಾಷ್ಟ್ರೀಯ ಹೆದ್ದಾರಿ- ನರಸಿಂಹತೀರ್ಥದ ಬಳಿ ಹೋಗುತ್ತಿದ್ದರು. ಸಮಯದಲ್ಲಿ ಕೋಲಾರ ಕಡೆಯಿಂದ ಬಂದ ಲಾರಿ ಸಂಖ್ಯೆ ಕೆಎ---೪೭೭೯ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಪ್ರಕಾಶ್ ರವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯಲ್ಲಿದ್ದ ಗಣೇಶ್ ರೆಡ್ಡಿ ರವರಿಗೆ ತೀವ್ರವಾದ ರಕ್ತಗಾಯಗಳಾಗಿ ಚಿಕಿತ್ಸೆಗಾಗಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೧೦-೨೦೦೮ ರಂದು ೦೩ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ವೀರಾಪುರ ಗ್ರಾಮದ ವಾಸಿ ಚಾಂದ್ಪಾಷ ಎಂಬುವರು ತನ್ನ ಮನೆಯಲ್ಲಿ ಇದ್ದರು. ಸಮಯದಲ್ಲಿ ಎದರು ಮನೆ ವಾಸಿಯಾದ ಸರ್ದಾರ್ಎಂಬುವರು ಮೊಬೈಲ್ನಲ್ಲಿ ಹಾಡುಗಳನ್ನು ಹಾಕಿಕೊಂಡು ಚುಡಾಯಿಸುತ್ತಿದ್ದನ್ನು ಕೇಳಿದ ಚಾಂದ್ ಪಾಷ ರವರ ತಂದೆಗೆ ಕಬ್ಬಿಣದ ರಾಡ್ನಿಂದ ಹೊಡೆದು ರಕ್ತಗಾಯಪಡಿಸಿ ಬಿಡಿಸಲು ಹೋದ ಚಾಂದ್ಪಾಷ ರವರಿಗೆ ಹೊಡೆದು ರಕ್ತ ಗಾಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ. ಗಾಯಾಗಳು ಚಿಕಿತ್ಸೆಗಾಗಿ ಕೋಲಾರದ ಎಸ್‌‌ಎನ್ಆರ್ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು

-ಸ್ಥಳ ದಂಡ ಮೊತ್ತ:

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ನೇ ಅಕ್ಟೋಬರ್ ೦೮

October 26, 2008

<!–[if gte mso 9]> Normal 0 MicrosoftInternetExplorer4 <![endif]–>

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ -೧೦-೨೦೦೮ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಕಾಯಿತಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೧೦-೨೦೦೮ ರಂದು ಬೆಳಗಿನ ಜಾವ ೦೩೦೦ ಗಂಟೆ ಸಮಯದಲ್ಲಿ ಲಾರಿ ಸಂಖ್ಯೆ ಎಂ.ಹೆಚ್-೨೫-ಬಿ.೯೨೩೨ ಚಾಲಕನಾದ ಪ್ರಕಾಶ್ ಮಾದಪ್ಪ ಮತ್ತು ಕ್ಲೀನರ್ವಿಜಯಕುಮಾರ್ಎಂಬುವರು ತಮ್ಮ ಲಾರಿಯಲ್ಲಿ ಕೋಕಾಕೋಲಾ ಬಿಸಲರಿ ಬಾಟ್ಲಲ್ ಗಳನ್ನು ತುಂಬಿಸಿಕೊಂಡು ಬೆಂಗಳೂರಿನಿಂದ ಬರುತ್ತಿದ್ದರು. ಸಮಯದಲ್ಲಿ ಲಾರಿ ಹಿಂದುಗಡೆ ಹಿಂಬಾಲಿಸಿಕೊಂಡು ಬಂದ ಒಂದು ಬಿಳಿ ಬಣ್ಣದ ಟಾಟಾಸುಮೋ ನಲ್ಲಿ ಜನ ಅಪರಿಚಿತರು ರಾಷ್ಟ್ರೀಯ ಹೆದ್ದಾರಿ- ತಂಬಿಹಳ್ಳಿ ಗೇಟ್ ಬಳಿ ಲಾರಿಯನ್ನು ಅಡ್ಡಗಟ್ಟಿ ನಾವು ಆರ್‍.ಟಿ.. ಕಚೇರಿಯವರು ಎಂದು ಹೇಳಿ ಬೆದರಿಕೆ ಹಾಕಿ ಕಬ್ಬಿಣದ ರಾಡಿನಿಂದ ಹೊಡೆದು ಅವರ ಬಳಿ ಇದ್ದ ನಗದು ರೂ ೧೪,೦೬೦/- ಮತ್ತು ಒಂದು ಮೊಬೈಲ್ ನ್ನು ಕಿತ್ತುಕೊಂಡು ಹನುಮನಹಳ್ಳಿ ಗೇಟ್ ಬಳಿ ಇಳಿದು ಪರಾರಿಯಾಗಿರುತ್ತಾರೆ. ಅಪರಿಚಿತರು ಕನ್ನಡ ಭಾಷೆ ಮಾತನಾಡುತ್ತಿದ್ದು ೨೫ ರಿಂದ ೩೦ ವರ್ಷ ವಯಸ್ಸಿನವರಾಗಿರುತ್ತಾರೆ.

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು:

-ಮಾರಣಾಂತಿಕ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೧೦-೨೦೦೮ ರಂದು ೦೭೪೫ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ವಾಸಿಯಾದ ದೇವಪಾಲ್ ಎಂಬುವರು ತಮ್ಮ ಸ್ನೇಹಿತರೊಂದಿಗೆ ಟಾಟಾ ಸುಮೋ ಸಂಖ್ಯೆ ಕೆಎ-೫೧-೨೯೮೧ ರಲ್ಲಿ ಮುಳಬಾಗಿಲು ಬಳಿಯ ಗೂಕುಂಟೆ ಗ್ರಾಮದ ಚರ್ಚಿನಲ್ಲಿದ್ದ ಕಾರ್ಯಕ್ರಮಕ್ಕೆ ಹೋಗುವ ಸಲುವಾಗಿ ಬೆಂಗಳೂರಿನಿಂದ ಬರುತ್ತಿದ್ದರು. ರಾಮಸಂದ್ರಮುಳಬಾಗಿಲು ರಸ್ತೆಯ ಗೂಕುಂಟೆ ಗ್ರಾಮದ ಸಮೀಪ ಬಂದಾಗ ಟಾಟಾ ಸುಮೋ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಮೋರಿ ಕಲ್ಲಿಗೆ ಡಿಕ್ಕಿ ಹೊಡೆಸಿದ ಪರಿಣಾಮವಾಗಿ ಟಾಟೋ ಸುಮೋದಲ್ಲಿದ್ದ ಬೆಂಜಮಿನ್ ಎಂಬುವರಿಗೆ ತೀವ್ರವಾದ ಗಾಯಗಳಾಗಿದ್ದು ಅರ್‍.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ.

-ಸಾಧಾರಣ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ -೧೦-೨೦೦೮ ರಂದು ೪೨ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಮಡೇರಹಳ್ಳಿ ಗ್ರಾಮದ ವಾಸಿ ಡಿ.ಆಂಜನಪ್ಪ ಎಂಬುವರ ತನ್ನ ಗೂಡ್ಸ್ ಆಟೋ ಸಂಖ್ಯೆ ಕೆಎ--೩೮ ರಲ್ಲಿ ರಾಷ್ಟ್ರೀಯ ಹೆದ್ದಾರಿ- ಮಡೇರಹಳ್ಳಿ ಗೇಟ್ ಹೋಗುತ್ತಿದ್ದರು. ಸಮಯದಲ್ಲಿ ಬಂದ ಬೆಂಗಳೂರು ಕಡೆಯಿಂದ ಬಂದ ಕಾರು ಸಂಖ್ಯೆ ಕೆಎ-೦೩-ಎಂಡಿ-೭೩೫೬ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟೋ ಗೆ ಡಿಕ್ಕಿ ಹೊಡೆದ ಪರಿಣಾಮ ಆಂಜನಪ್ಪ ರವರಿಗೆ ತೀವ್ರವಾದ ರಕ್ತಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರದ ಎಸ್‌.ಎನ್‌.ಆರ್‍.ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೧೦

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೮-೦೮-೨೦೦೮ ರಂದು ೨೨೦೦ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ ಮುತ್ಯಾಲಪೇಟೆ ವಾಸಿ ಗುರುಪ್ರಸಾದ್ ಎಂಬುವರು ತನ್ನ ಮನೆಯಲ್ಲಿ ಇದ್ದರು. ಸಮಯದಲ್ಲಿ ಬಂದ ವಿಜಯ ಕುಮಾರ್ಮತ್ತು ಇತರರು ಎಲ್ಲರೂ ಮುತ್ಯಾಲಪೇಟೆ ವಾಸಿಗಳು ಅಕ್ರಮ ಗುಂಪು ಕಟ್ಟಿಕೊಂಡು ಬಂದು ಹಣದ ವಿಚಾರದಲ್ಲಿ ಜಗಳ ತೆಗೆದು ಕಲ್ಲು ಮತ್ತು ದೊಣ್ಣೆಯಿಂದ ಹೊಡೆದು ರಕ್ತಗಾಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸ್ಪೋಟ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೧೦-೨೦೦೮ ರಂದು ೧೫೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಸುಗಟೂರು ಗ್ರಾಮದ ವಾಸಿ ಗೋವಿಂದರಾಜುಶೆಟ್ಟಿ ಎಂಬುವರು ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಪಡೆದ ಕೋಲಾರ ತಾಲೂಕು ತಹಶೀಲ್ದಾರ್ಆದ ಶ್ರೀಮತಿ ಟಿ.ರೇಖಾ ರವರು ಕೋಲಾರ ಗ್ರಾಮಾಂತರ ಪೊಲೀಸರ ನೆರೆವಿನೊಂದಿಗೆ ದಾಳಿ ಮಾಡಿ ಆಕ್ರಮವಾಗಿ ದಾಸ್ತಾನು ಮಾಡಿದ್ದ ರೂ ,೦೦,೦೦೦-೦೦ ಬೆಲೆ ಬಾಳುವ ೨೦೦೦ ಕೆ.ಜಿ. ಪಟಾಕಿಗಳನ್ನು ವಶ ಪಡಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಹುಡಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ವರದಿಯಾಗಿರುತ್ತದೆ. ದಿನಾಂಕ ೨೫-೧೦-೨೦೦೮ ರಂದು ೧೮೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕ್ಯಾಲನೂರು ಗ್ರಾಮದ ವಾಸಿಯಾದ ಶ್ರೀಮತಿ ಗೌರಮ್ಮ ಎಂಬುವರ ಪುತ್ರಿಯಾದ ಕು.ಲಕ್ಷ್ಮೀದೇವಿ (೧೯) ಎಂಬುವರು ಮನೆಯಿಂದ ತಮ್ಮ ಊರಿನಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಮಾಡಿಸಿಕೊಂಡು ಬರುವುದಾಗಿ ಮನೆ ಬಿಟ್ಟು ಹೋದವಳು ಇದುವರೆವಿಗೂ ವಾಪಸ್ಸು ಬಾರದೆ ಕಾಣೆಯಾಗಿರುತ್ತಾಳೆ. ಕಾಣೆಯಾದ ಹುಡಗಿಯ ಚಹರೆ ಗುಂಡುಮುಖ, ಕಪ್ಪು ಕೂದಲು, ಸಾಧಾರಣಾ ಮೈಕಟ್ಟು, ಅಡಿ ಎತ್ತರ ಮತ್ತು ನೀಲಿ ಬಣ್ಣದ ಚೂಡಿದಾರ್ಧರಸಿದ್ದು ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾಳೆ.

 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು ೧೭

-ಸ್ಥಳ ದಂಡ ಮೊತ್ತ: ರೂ. ೨೧೦೦/-

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.