ದಿನದ ಅಪರಾಧಗಳ ಪಕ್ಷಿನೋಟ ೧ ನೇ ಫೆಬ್ರವರಿ ೨೦೦೯

January 31, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೧-೦೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳಾದ ಆಂದ್ರಪ್ರದೇಶದ ವಾಸಿ ರಮಣಾರೆಡ್ಡಿ, ಮುಳಬಾಗಿಲು ಕಳಸಾಪಲ್ಲಿ ಗ್ರಾಮದ ವಾಸಿಗಳಾದ ನಾರಾಯಣಸ್ವಾಮಿ, ಕೃಷ್ಣಮೂರ್ತಿ ಮತ್ತು ನಾಗಾರ್ಜುನ ಎಂಬುವರು ತಮ್ಮ ಬಳಿ ಕಳುವ ಮಾಡಲಾದ ೩ ರೋಲ್ ಅಲ್ಯಮಿನಿಯಂ ವೈರನ್ನು ಇಟ್ಟುಕೊಂಡಿದ್ದು ಮಾಲಿನೊಂದಿಗೆ ಸಿಕ್ಕಿ ಬಿದ್ದಿರುತ್ತಾರೆ.  ಆರೋಪಿಗಳು ದಿನಾಂಕ ೩೧೦೧-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ ಕಳವು ಮಾಲಿನೊಂದಿಗೆ ಮುಳಬಾಗಿಲು ವೇಣು ವಿಧ್ಯಾಸಂಸ್ಥೆ ಬಳಿ ಹೋಗುತ್ತಿದ್ದು ಶ್ರೀನಿವಾಸಪುರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಆರಕ್ಷಕ ಉಪನಿರೀಕ್ಷಕರಾದ ಸಲೀಂ ಸಿ ನಥಾಫ್ ರರು ತಮ್ಮ ಸಿಬ್ಬಂದಿಯೊಡನೆ ಅನುಮಾನದ ಮೇರೆಗೆ ಆರೋಪಿಗಳನ್ನು ಹಿಡಿದು ವಿಚಾರಣೆ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿರುತ್ತದೆ. ಆರೋಪಿಗಳನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗಿರುತ್ತದೆ.

ವಾಹನ ಕಳ್ಳತನ : ಇಲ್ಲ   

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೦೪-೧೨-೦೮ ರಂದು ಮಾಲೂರು ತಾಲೂಕು ಬಾಳಿಗಾನಹಳ್ಳಿ ಗ್ರಾಮದ ವಾಸಿಯಾದ ಕೃಷ್ಣಪ್ಪ ಎಂಬುವರು ತಮ್ಮ ಗ್ರಾಮದಿಂದ ಮಾಲೂರಿಗೆ ತಮ್ಮ ಹೀರೋಹೋಂಡಾ ಫ್ಯಾಷನ್ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಜೆಡ್-೪೩೦೪ ರಲ್ಲಿ ಸಂತೆಹಳ್ಳಿ ಕ್ರಾಸ್ ಬಳಿ ಬರುತ್ತಿದ್ದರು.  ಅ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ರಾಕ್ಟರ್‍ ಸಂ. ಕೆಎ-೦೭-ಟಿ-೩೨೮೨ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡಿಸಿರುತ್ತಾನೆ.  ಇದರ ಪರಿಣಾಮವಾಗಿ ಕೃಷ್ಣಪ್ಪ ರವರ ಎಡಭಾಗದ ಭುಜದ ಮೇಲೆ ಟ್ರಾಕ್ಟರ್‍ ಹರಿದು ಮೂಳೆಗೆ ತೀವ್ರವಾದ ಗಾಯವಾಗಿರುತ್ತದೆ.  ನಂತರ ಈ ಬಗ್ಗೆ ಬೆಂಗಳೂರಿನ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ವಾಪಸ್ಸು ಬಂದು ತಡವಾಗಿ ಅಂದರೆ ದಿನಾಂಕ ೩೧-೦೧-೨೦೦೮ ರಂದು ೧೭೩೦ ಗಂಟೆ ಸಮಯದಲ್ಲಿ ದೂರು ದಾಖಲು ಮಾಡಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಮೋಸ/ವಂಚನೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ನರಸಾಪುರ ಬಳಿ ಎನ್ ಹೆಚ್ ೪ ರಸ್ತೆಯಲ್ಲಿರುವ ಕೆಫೆ ಕಾಫಿ ಡೇ ಯಲ್ಲಿ ವಂಚನೆ ಕೃತ್ಯ ಬೆಳಕಿಗೆ ಬಂದಿರುತ್ತದೆ.  ಪಿ.ಮೋಹನ್ ಮತ್ತು ಆಂಥೋನಿ ದಾಸ್ ಎಂಬುವರು ಮೇಲ್ಕಂಡ ಕಾಫಿ ಡೇಯಲ್ಲಿ ಮ್ಯಾನೇಜರ್‍ ಆಗಿ ಈಗ್ಗೆ ೪ ತಿಂಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು ರೂ. ೧೩,೬೬೬/ ನಗದು ಹಾಗೂ ರೂ. ೬,೩೯೨/ ಬೆಲೆಯ ಕೂಫನ್ ಗಳು ಸೇರಿದಂತೆ ಒಟ್ಟು ರೂ. ೧೯,೫೫೮/ ಬೆಲೆಬಾಳುವುದನ್ನು ತೆಗದುಕೊಂಡು ಯಾರಿಗೂ ಹೇಳದೇ ಪರಾರಯಾಗಿರುತ್ತಾರೆ.

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ:

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೧ ನೇ ಜನವರಿ ೨೦೦೯

January 30, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೩೧-೦೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ  

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೨-೨೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ಮುಳಬಾಗಿಲು ನೇತಾಜಿನಗರದ ವಾಸಿ ಶ್ರೀನಿವಾಸ ಎಂಬುವರು ತಮ್ಮ ಕೆಎ-೦೩-ಇಜೆ-೩೦೦೧ ಸಂಖ್ಯೆ ದ್ವಿಚಕ್ರವಾಹನವನ್ನು ಮುಳಬಾಗಿಲು ತಾಲೂಕು ಕಛೇರಿಯ ಬಳಿ ನಿಲ್ಲಿಸಿದ್ದರು. ಆ ಸಮಯದಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಮಾರುತಿ ಓಮ್ನಿ ಸಂಖ್ಯೆ ಕೆಎ-೦೨-ಎಂಸಿ-೧೩೬೨ ಕಾರಿನ ಚಾಲಕ ನಿಂತಿದ್ದ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಜಖಂಗೊಂಡಿದ್ದು ಈ ಬಗ್ಗೆ ಪ್ರಶ್ನಿಸಿದಾಗ ಶ್ರೀನಿವಾಸ ರವರ ಮೇಲೆ ಜಗಳ ತೆಗೆದ ಕಾರಿನಲ್ಲಿದ್ದ ಗೋಪಿ, ಮುರಳಿ ಇತರೇ ಇಬ್ಬರು ಹಲ್ಲೆ ನಡೆಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ವೆಲಗಲಬುರೆ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೩-೦೧-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ವೆಲಗಲಬುರೆ ಗ್ರಾಮದ ವಾಸಿ ಭಾಗ್ಯಮ್ಮ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿ ಲಕ್ಷ್ಮಮ್ಮ ಎಂಬುವರು ಕೋಲಿನಿಂದ ಮತ್ತು ಕೈಯಿಂದ ಹೊಡೆದು ಗಾಯಪಡಿಸಿರುತ್ತಾರೆ. ಮಕ್ಕಳು ಗಲಾಟೆ ಮಾಡಿಕೊಂಡ ವಿಚಾರದ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ಇತರೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಮುಳಬಾಗಿಲು ಪುರಸಭೆ ಕಾರ್ಯಾಲಯದಲ್ಲಿ ಕಮ್ಯುನಿಟಿ ಆರ್ಗನೈಸರ್‍ ಆಫೀಸರ್‍ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀನಿವಾಸ ಎಂಬುವರು ದಿನಾಂಕ ೨೯-೦೧-೨೦೦೯ ರಂದು ಎಂದಿನಂತೆ ತಮ್ಮ ಕರ್ತವ್ಯದಲ್ಲಿ ನಿರತರಾಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಮುಳಬಾಗಿಲು ತೋಟಲಪಾಳ್ಯದ ವಾಸಿ ನಾಗರಾಜ್ ಎಂಬುವನು ಮಹಿಳಾ ಸಂಘದ ಸಾಲನ ವಿಚಾರದಲ್ಲಿ ಶ್ರೀನಿವಾಸ ರವರನ್ನು ಎಳೆದಾಡಿ ಅವಾಚ್ಯ ಶಬ್ದಗಳಿಂದ ಬೈದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ.

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

ಸ್ಥಳ ದಂಡ ಮೊತ್ತ:  

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತೆ.


ದಿನದ ಅಪರಾಧಗಳ ಪಕ್ಷಿನೋಟ ೩೦ ನೇ ಜನವರಿ ೨೦೦೯

January 30, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ವಾಹನ ಕಳವು ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ದ್ವಿಚಕ್ರವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ದಿನಾಂಕ ೩೦-೦೧-೨೦೦೯ ರಂದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಆರಕ್ಷಕ ಉಪನಿರೀಕ್ಷಕರಾದ ಆರ್‍.ವೆಂಕಟೇಶ್ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ತಂಬಿಹಳ್ಳಿ ಗೇಟಿನ ಹೆಚ್.ಪಿ.ಶಿವಾನಿ ಡಾಬಾ ಹೋಟೆಲ್ ಬಳಿ ಕಳವು ಮಾಡಲಾದ ಕೆಎ-೦೧-ಇಪಿ-೨೬೨೮ ಟಿ.ವಿ,ಎಸ್ ವಿಕ್ಟರ್‍ ದ್ವಿಚಕ್ರವಾಹನವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮುಳಬಾಗಿಲು ನೂಕಲಬಂಡೆ ವಾಸಿಗಳಾದ ಅಮ್ಜದ್ ಮತ್ತು ಅಜುಗರ್‍ ಎಂಬುವರನ್ನು ಬಂಧಿಸಿ ರೂ. ೨೫,೦೦೦/ ಬೆಲೆ ಬಾಳುವ ದ್ವಿಚಕ್ರವಾಹನವನ್ನು ವಶಪಡಿಸಿಕೊಂಡಿರುತ್ತಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಅತ್ಮಹತ್ಯೆಗೆ ಪ್ರಚೋದನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಗಂಡನ ಕಿರುಕುಳವನ್ನು ತಾಳಲಾರದೇ ಹೆಂಡತಿ ಕುಂಟೆಯೊಂದರಲ್ಲಿ ಬಿದ್ದು ಅಸುನೀಗಿರುವ ಘಟನೆ ಮುಳಬಾಗಿಲು ಟೌನ್ ವಿಠಲೇಶ್ವರ ಪಾಳ್ಯದಲ್ಲಿ ಸಂಭವಿಸಿರುತ್ತದೆ. ಮುಳಬಾಗಿಲು ಟೌನ್ ವಾಸಿ ಸರಸ್ವತಮ್ಮ ಎಂಬುವರು ಮೃತಪಟ್ಟವರು. ದಿನಾಂಕ ೨೯-೦೧-೨೦೦೯ ಕ್ಕೆ ೨ ದಿನಗಳ ಹಿಂದೆ ಸರಸ್ವತಮ್ಮ ರವರು ಮನೆ ಬಿಟ್ಟು ಹೋಗಿದ್ದು ವಿಠಲೇಶ್ವರ ಪಾಳ್ಯದ ಕುಂಟೆಯಲ್ಲಿ ಇವರ ಮೃತದೇಹ ಕಂಡು ಬಂದಿರುತ್ತದೆ. ಈಗೆ ೧೬ ವರ್ಷಗಳ ಹಿಂದೆ ಸರಸ್ವತಮ್ಮ ರವರಿಗೆ ಶಂಕರಪ್ಪ ಎಂಬುವರೊಡನೆ ವಿವಾಹವಾಗಿದ್ದು ಶಂಕರಪ್ಪ ತನ್ನ ಹೆಂಡತಿಗೆ ಕಿರುಕುಳ ನೀಡುತ್ತಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿರುವುದಾಗಿ ಮೃತ ಸರಸ್ವತಮ್ಮ ರವರ ತಾಯಿ ಶಾರದಮ್ಮ ರವರು ತನ್ನ ದೂರಿನಲ್ಲಿ ತಿಳಿಸಿರುತ್ತಾರೆ.

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೧-೨೦೦೯ ರಂದು ೨೦೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಅವಗಾನಪಲ್ಲಿ ಗ್ರಾಮದ ವಾಸಿ ಎಲ್.ವೆಂಕಟರವಣಪ್ಪ (೪೦) ಎಂಬುವರು ಗೌನಿಪಲ್ಲಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಒಂದು ಟೆಂಪೋ ಬಂದಿದ್ದು ಅದನ್ನು ನಿಲ್ಲಿಸಿ ಅದರ ಹಿಂಭಾಗದಲ್ಲಿ ಹತ್ತುತ್ತಿದ್ದ ಸಮಯದಲ್ಲಿ ಇದ್ದಕ್ಕಿದ್ದಂತೆ ಟೆಂಪೋ ಚಾಲಕ ತನ್ನ ವಾಹನವನ್ನು ಅಜಾಗರೂಕತೆಯಿಂದ ಅತಿವೇಗ ವಾಗಿ ಚಾಲನೆ ಮಾಡಿರುತ್ತಾನೆ. ಇದರ ಪರಿಣಾಮ ಎಲ್.ವೆಂಕಟರವಣಪ್ಪ ರವರು ಆಯತಪ್ಪಿ ಕೆಳಗೆ ಬಿದ್ದಿದ್ದು ಇವರ ನಾಲ್ಕು ಹಲ್ಲುಗಳು ಮುರಿದು ಇತರೇ ಕಡೆ ಗಾಯಗಳಾಗಿರುತ್ತದೆ. ಟೆಂಪೋ ಚಾಲಕ ಸ್ಥಳದಲ್ಲಿ ತನ್ನ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದು ಗಾಯಾಳು ಪ್ರಸ್ತುತ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ವನಗನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೯-೦೧-೨೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ವನಗನಹಳ್ಳಿ ಗ್ರಾಮದ ವಾಸಿ ಸುರೇಶ್ ಎಂಬುವರು ಬಜಾಜ್ ಸಿಟಿ೧೦೦ ದ್ವಿಚಕ್ರವಾಹನದಲ್ಲಿ ತಮ್ಮ ಗ್ರಾಮದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಮಿನಿ ಬಸ್ ಸಂಖ್ಯೆ ಕೆಎ-೪೫-೧೧೭೭ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೩

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೧-೨೦೦೯ ರಂದು ೧೮೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕೋಡಿಕಣ್ಣೂರು ಗ್ರಾಮದ ವಾಸಿ ನಾರಾಯಣಪ್ಪ ರವರ ಮಗನೊಂದಿಗೆ ಅದೇ ಗ್ರಾಮದ ವಾಸಿಗಳಾದ ಮುನಿರಾಜು ಮತ್ತು ಬಾಬು ಎಂಬವರು ಜಗಳ ಮಾಡುತ್ತಿದ್ದರು. ಅದನ್ನು ಪ್ರಶ್ನಿಸಿದ ನಾರಾಯಣಪ್ಪ ರವರಿಗೆ ದೊಣ್ಣೆಗಳಿಂದ ತಲೆಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಘಿಲು ನಾಗನಹಳ್ಳಿ ಗ್ರಾಮದ ಸಮೀಪ ಕೃತ್ಯ ಸಂಭವಸಿರುತ್ತದೆ. ದಿನಾಂಕ ೧೯-೦೧-೨೦೦೯ ರಂದು೧೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಕಿರುಮಣಿ ಗ್ರಾಮದ ವಾಸಿ ಅರವಿಂದ್ ಎಂಬುವರು ನಾಗನಹಳ್ಳಿ ಗ್ರಾಮದಲ್ಲಿರುವ ತನ್ನ ಜಮೀನಿನಲ್ಲಿ ಜಿಲ್ಲಾ ಅರಣ್ಯಾಧಿಕಾರಿಗಳಿಂದ ಅನುಮತಿಯನ್ನು ಪಡೆದುಕೊಂಡು ಮರಗಳನ್ನು ಕಠಾವು ಮಾಡಲು ಹೊರಿಟಿದ್ದರು. ಆ ಸಮಯದಲ್ಲಿ ಕಿರುಮಣಿ ಗ್ರಾಮದ ವಾಸಿಗಳಾದ ಅಶ್ವತ್ಥನಾರಾಯಣರೆಡ್ಡಿ ಮತ್ತು ಇವರ ಹೆಂಡತಿ ವಸುಂಧರ ಎಂಬುವರು ಅರವಿಂದ್ ರವರ ಮೇಲೆ ಜಗಳ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಮಚ್ಚಿನಿಂದ ದೊಣ್ಣೆಯಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಕ್ಯಾಲನೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೦-೦೧-೨೦೦೯ ರಂದು ೦೮೦೦ ಗಂಟೆ ಸಮಯದಲ್ಲಿ ಕ್ಯಾಲನೂರು ಗ್ರಾಮದ ವಾಸಿ ಆಂಜನಪ್ಪ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ತಾತಪ್ಪ, ಮುನಿನಾರಾಯಣಪ್ಪ ಮತ್ತು ನಾಗವೇಣಮ್ಮ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ನಿವೇಶನವೊಂದಕ್ಕೆ ಸಂಬಂಧಿಸಿದಂತೆ ಪರಸ್ಪರರ ನಡುವೆ ಇದ್ದ ವಿವಾದ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಇತರೆ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಕಲ್ಲು ದಿಂಡುಗಳನ್ನು ಸಾಗಿಸುತ್ತಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ಗಣಿ ಮತ್ತು ಖನಿಜಸಂಪತ್ತು ಇಲಾಖೆಯ ಹಿರಿಯ ಭೂ ವಿಜ್ಞಾನಿ ಶ್ರೀ ಗಂಗಾಧರಯ್ಯ ರವರ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಚಾಕರಸನಹಳ್ಳಿ ಗ್ರಾಮದ ವಾಸಿ ಕೆಎ-೦೩-೨೧೦೧ ಲಾರಿಯ ಚಾಲಕ ಮುನಿಸ್ವಾಮಿ ಎಂಬುವನು ತನ್ನ ಲಾರಿಗೆ ಗುಡಿಗೊಂಡನಹಳ್ಳಿ ಗ್ರಾಮದ ಸರ್ವೆ ನಂಬರ್‍ ೧೬ ರ ಜಮೀನಿನಲ್ಲಿ ಅಕ್ರಮವಾಗಿ ಯಾವುದೇ ಪರವಾನಗಿ ಇಲ್ಲದೇ ಕಲ್ಲು ದಿಂಡುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದು ಬಂಧಿತನಾಗಿರುತ್ತಾನೆ. ವಾಹನ ಮತ್ತು ಆರೋಪಿಯನ್ನು ಹಾಜರು ಪಡಿಸಿದ್ದರ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೯

ಸ್ಥಳ ದಂಡ ಮೊತ್ತ: ರೂ. ೨೧೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತೆ.


ದಿನದ ಅಪರಾಧಗಳ ಪಕ್ಷಿನೋಟ ೨೯ ನೇ ಜನವರಿ ೨೦೦೯

January 29, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೯-೦೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೮-೦೧-೨೦೦೯ಕ್ಕೆ ೨-೩ ದಿನಗಳ ಹಿಂದೆ ಮುಳಬಾಗಿಲು ಪಟ್ಟಣದ ಸೋಮೇಶ್ವರಪಾಳ್ಯದ ಬಳಿ ಇರುವ ಶೇಕ್ ಮೊಹಿದ್ದೀನ್ ರವರ ನೀಲಗಿರಿ ತೋಪಿನಲ್ಲಿ ಯಾರೋ ದುರಾತ್ಮರು ೩೦ ರಿಂದ ೩೫ ವರ್ಷ ವಯಸ್ಸುಳ್ಳ ಹೆಂಗಸನ್ನು ಯಾವುದೋ ಉದ್ದೇಶದಿಂದ ತಲೆಯ ಮೇಲೆ ಕಲ್ಲನ್ನು ಹಾಕಿ ಕೊಲೆ ಮಾಡಿರುತ್ತಾರೆ. ಕೊಲೆಯಾದ ಮಹಿಳೆಯ ಮೈಮೇಲೆ ನೀಲಿ ಕೆಂಪು ಮಿಶ್ರಿತ ಸೀರೆ ಮತ್ತು ಕೆಂಪು ಜಾಕೀಟು ಇರುತ್ತದೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ 

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೨

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೧-೨೦೦೯ ರಂದು ೧೪೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಬಲ್ಲಾ ಗ್ರಾಮದ ವಾಸಿ ವೆಂಕಟರಮಣಪ್ಪ ಎಂಬುವರ ಮನೆಯ ಮುಂದೆ ಇದ್ದ ಹೂವಿನ ಗಿಡಗಳನ್ನು ಅದೇ ಗ್ರಾಮದ ವಾಸಿಯಾದ ಅಮರಪ್ಪ ಎಂಬುವರ ಎಮ್ಮೆಗಳು ಮೇಯುತ್ತಿದ್ದ ಅದನ್ನು ವೆಂಕಟರಮಣಪ್ಪ ಓಡಿಸಿದ್ದರು. ಈ ವಿಚಾರದಲ್ಲಿ ಜಗಳ ತೆಗೆದು ಅಮರಪ್ಪ, ಬಾಲಕೃಷ್ಣ, ದುಗ್ಗಸಂದ್ರ ಮಣಿ, ಮತ್ತು ಪದ್ಮ ಎಂಬುವರು ಅವಾಚ್ಚಶಬ್ದಗಳಿಂದ ಬೈದು ದೊಣ್ಣೆಯಿಂದ ತಲೆಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಜೋಡಿಕೃಷ್ಣಾಪುರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೮-೦೧-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಜೋಡಿಕೃಷ್ಣಾಪುರ ಗ್ರಾಮದ ವಾಸಿ ನಾರಾಯಣಮ್ಮ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಚೌಡಪ್ಪ, ನಾಗರಾಜು, ಮಂಜುನಾಥ ಮತ್ತು ಸುಮಿತ್ರಮ್ಮ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ.

ಇತರೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸ್ವತ್ತುಹಾನಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಹೆಚ್.ಜಿ.ಹೊಸೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೯-೦೧-೨೦೦೯ ರಂದು ೦೧೦೦ ಗಂಟೆ ಸಮಯದಲ್ಲಿ ಹೆಚ್.ಜಿ.ಹೊಸೂರು ಗ್ರಾಮದ ವಾಸಿ ಶ್ರೀರಾಮರೆಡ್ಡಿ ಮತ್ತಿತರೇ ೮ ಜನರು ಅಕ್ರಮಗುಂಪು ಕಟ್ಟಿಕೊಂಡು ಬಂದು ಹೆಚ್.ಎನ್,ನಾಗಭೂಷಣ ಎಂಬುವರಿಗೆ ಸೇರಿದ ಟೀ ಮತ್ತು ಚಿಲ್ಲರೆಅಂಗಡಿಗೆ ಬೆಂಕಿ ಹಚ್ಚಿರುತ್ತಾರೆ.  ಇದರ ಪರಿಣಾಮ ಹೆಚ್.ಎನ್.ನಾಗಭೂಷಣ ರವರಿಗೆ ರೂ. ೪೦,೦೦೦/ ಗಳಷ್ಟು ನಷ್ಟ ಉಂಟಾಗಿರುತ್ತದೆ.

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೨೫

ಸ್ಥಳ ದಂಡ ಮೊತ್ತ:  ರೂ. ೩೨೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತೆ.


ದಿನದ ಅಪರಾಧಗಳ ಪಕ್ಷಿನೋಟ ೨೮ ನೇ ಜನವರಿ ೨೦೦೯

January 28, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ೦೧

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೧-೨೦೦೯ ರಂದು ಶ್ರೀನಿವಾಸಪುರ ತಾಲೂಕು ಎಗುವಚಿಂತಪಲ್ಲಿ ಗ್ರಾಮದ ವಾಸಿ ವೆಂಕಟಲಕ್ಷ್ಮಮ್ಮ (೩೦) ಎಂಬುವರು ಗೌನಿಪಲ್ಲಿ ಗ್ರಾಮದಿಂದ ಬಿಕೊತ್ತಕೋಟ ರಸ್ತೆಯಲ್ಲಿರುವ ದರ್ಗಾ ಮುಂಭಾಗ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂಭಾಗದಿಂದ ಬಂದ ಬಜಾಜ್ ಕ್ಯಾಲಿಬರ್‍ ಸಂಖ್ಯೆ ಕೆಎ-೦೨-ಇಬಿ-೧೫೩೬ ದ್ವಿಚಕ್ರವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ವೆಂಕಟಲಕ್ಷ್ಮಮ್ಮ ರವರಿಗೆ ತೀವ್ರವಾದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಆರೋಫಿ ದ್ವಿಚಕ್ರವಾಹನದ ಚಾಲಕ ತನ್ನ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುತ್ತಾನೆ.

-ಸಾಧಾರಣ: ೦೨

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೧-೨೦೦೯ ರಂದು ೧೯೧೫ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಚೌಢದೇನಹಳ್ಳಿ ಗ್ರಾಮದ ವಾಸಿ ಅಶ್ವತ್ಥಪ್ಪ ಎಂಬುವರು ದೊಡ್ಡವಲ್ಲಬಿ ಗ್ರಾಮದ ರಸ್ತೆಯ ಬಳಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಹೀರೋಹೋಂಡ ಸ್ಪ್ಲೆಂಡರ್‍ ಸಂಖ್ಯೆ ಕೆಎ-೪೩-ಜೆ-೨೨೬೮ ದ್ವಿಚಕ್ರವಾಹನದ ಚಾಲಕ ಅಶ್ವತ್ಥಪ್ಪ ರವರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಅಶ್ವತ್ಥಪ್ಪ ರವರಿಗೆ ತೀವ್ರವಾದ ಗಾಯಗಳಾಗಿದ್ದು ಪ್ರಸ್ತುತ ಬೆಂಳೂರಿನ ಹಾಸ್ ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೧-೨೦೦೯ ರಂದು ೦೭೩೦ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ವಾಸಿಗಳಾದ ಸತೀಶ್ ಕುಮಾರ್‍ ಮತ್ತು ಸಂತೋಷ್ ಕುಮಾರ್‍ ಎಂಬುವರು ತಮ್ಮ ಹ್ಯೂಂಡೈ ಅಸ್ಸೆಂಟ್ ಸಂಖ್ಯೆ ಕೆಎ-೦೫-ಎಫ್-೭೪೩೩ ಕಾರಿನಲ್ಲಿ ಆರ್‍.ಎಲ್.ಜಾಲಪ್ಪ ಆಸ್ಪತ್ರೆಯಿಂದ ಬೆಂಗಳೂರಿಗೆ ಹೋಗುವ ಸಲುವಾಗಿ ಎನ್.ಹೆಚ್ ೪ ರಸ್ತೆಯ ಶ್ರೀ ಸಾಯಿಹನುಮಾನ್ ಛತ್ರದ ಮುಂಭಾಗ ಹೋಗುತ್ತದ್ದರು. ಆ ಸಮಯದಲ್ಲಿ ಕಾರನ್ನು ಚಾಲನೆ ಮಾಡುತ್ತಿದ್ದ ಸಂತೋಷ್ ಕುಮಾರ್‍ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಮುಂದೆ ಹೋಗುತ್ತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಸಂತೋಷ್ ಕುಮಾರ್‍ ಗೆ ಗಾಯಗಳಾಗಿದ್ದು ಪ್ರಸ್ತುತ ಕೋಲಾರದ ನೂಕಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

ಸ್ಥಳ ದಂಡ ಮೊತ್ತ: ರೂ.

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತೆ.


ಜೂಜಾಟ ದಾಳಿ, ೫ ಜನರ ಬಂದನ, ರೂ. ೩೫೦ ವಶ:

January 27, 2009

ಕೋಲಾರ ಗ್ರಾಮಾಂತರ ಠಾಣೆಯ ಆರಕ್ಷಕ ಉಪ-ನಿರೀಕ್ಷಕರಾದ ಶ್ರೀ ಜಿ.ಸಿ.ನಾರಾಯಣಸ್ವಾಮಿ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಕೋಲಾರ ತಾಲೂಕು ಮಣಿಘಟ್ಟ ರಸ್ತೆಯಲ್ಲಿರುವ ಬೇತಲ್ ಚರ್ಚ್ ಹಿಂಬಾದಲ್ಲಿ ಹಣವನ್ನು ಪಣವಾಗಿಟ್ಟು ೫೨ ಇಸ್ಪೇಟ್ ಎಲೆಗಳ ಸಹಾಯದಿಂದ ಅಂದರ್‍ ಬಾಹರ್‍ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ಜೂಜಾಟದಲ್ಲಿ ತೊಡಗಿದ್ದ ೪ ಜನರನ್ನು ಬಂದಿಸಿ ರೂ. ೩೫೦/- ಗಳನ್ನು ವಶಪಡಿಸಿಕೊಂಡಿರುತ್ತಾರೆ.

ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬಂದಿತರ ವಿವರಗಳು:

  • ಸರ್ದಾರ್‍ ಖಾನ್ ಬಿನ್ ಲೇಟ್ ಸತ್ತಾರ್‍ ಖಾನ್, ೫೦ ವರ್ಷ, ಬೀಡಿ ಕಾರ್ಮಿಕ, ಖಾಕಿಷಾ ಮೊಹಲ್ಲಾ, ಕೋಲಾರ.
  • ಜಾವೀದ್ ಪಾಷ ಬಿನ್ ಬಾಷೂಸಾಬ್, ೩೭ ವರ್ಷ, ಟೀ ಅಂಗಡಿ ವ್ಯಾಪಾರ, ರಹಮತ್‌ನಗರ, ಕೋಲಾರ.
  • ರಿಯಾಜ್ ಪಾಷ ಬಿನ್ ಅಮೀರ್‍ ಜಾನ್, ೫೪ ವರ್ಷ, ಬೀಡಿ ಕಾರ್ಮಿಕ, ನೂರ್‍ ನಗರ, ಕೋಲಾರ.
  • ಸೈಯದ್ ರಿಯಾಜ್ ಬಿನ್ ಸೈಯದ್ ಮೊಹಿದ್ದೀನ್, ೫೭ ವರ್ಷ, ಖಾಕಿಷಾ ಮೊಹಲ್ಲಾ, ಕೋಲಾರ.
  • ಸೈಯದ್ ಖಾದರ್‍ ಬಿನ್ ಸೈಯದ್ ಪ್ಯಾರು, ೫೦ ವರ್ಷ, ರಹಮತ್‌ನಗರ, ಕೋಲಾರ.

ದಿನದ ಅಪರಾಧಗಳ ಪಕ್ಷಿನೋಟ ೨೭ ನೇ ಜನವರಿ ೨೦೦೯

January 26, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೭-೦೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ 

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ  

-ಸಾಧಾರಣ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೦೧-೨೦೦೯ ರಂದು ೧೪೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಮಾಸ್ತಿ ಗ್ರಾಮದ ವಾಸಿ ದೇವರಾಮ್ಜೀ ಎಂಬುವರ ಮಂಜುಳಾ ಮಗು ತನ್ನ ಮನೆಯ ಮುಂದೆ ಆಟವಾಡುತ್ತಿತ್ತು. ಆ ಸಮಯದಲ್ಲಿ ಮಾಲೂರು ಕಡೆಯಿಂದ ಬಂದ ಟೆಂಪೋ ಸಂಖ್ಯೆ ಕೆಎ-೪೨-೪೯೪ ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಮಗುವಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಹೊರಟುಹೋಗಿರತ್ತಾನೆ. ಇದರ ಪರಿಣಾಮ ಮಗುವಿನ ಹಣೆ ಮತ್ತು ಮುಖದ ಮೇಲೆ ಗಾಯಗಳಾಗಿದ್ದು ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಮುಳಬಾಗಿಲು ತಾಲೂಕು ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ ೨೫-೦೧-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಕೆ.ಶೆಟ್ಟಿಹಳ್ಳಿ ಗ್ರಾಮದ ವಾಸಿ ವೆಂಕಟೇಶಪ್ಪ (೩೫) ರವರ ಮೇಳೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಮುನೇಂದ್ರ ಮತ್ತಿತರರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಪ್ರಾಣಬೆದರಿಕೆ ಹಾಕಿರುತ್ತಾರೆ. ಪರಸ್ಪರರ ನಡುವೆ ಇದ್ದ ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೨೦

ಸ್ಥಳ ದಂಡ ಮೊತ್ತ:  ರೂ. ೨೮೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ ನೇ ಜನವರಿ ೨೦೦೯

January 25, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೬-೦೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೪-೨೦೦೭ ರಂದು ಬೆಂಗಳೂರ ಗ್ರಾಮಾಂತರ ಜಿಲ್ಲೆ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯ ವಾಸಿ ಲಕ್ಷ್ಮಿ ಎಂಬುವರನ್ನು ಮಾಲೂರು ಪಟ್ಟಣದ ಮಾಸ್ತಿ ಸರ್ಕಲ್ ಬಳಿ ಇರುವ ವಜ್ರಮುನಿ ಎಂಬುವರಿಗೆ ಮದುವೆ ಮಾಡಿಕೊಟ್ಟಿದ್ದು, ಮದುವೆ ಸಮಯದಲ್ಲಿ ವರದಕ್ಷಿಣೆಯಾಗಿ ರೂ. ೫೦,೦೦೦/- ಬೆಲೆ ವಡವೆಗಳನ್ನು ಕೊಟ್ಟರು ಸಹ ಇನ್ನಷ್ಟು ವರದಕ್ಷಿಣೆ ತರುವಂತೆ ಗಂಡ ಮತ್ತು ಅವರ ಮನೆಯವರು ಒತ್ತಾಯಿಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ಸೀಮೆ ಸುರಿದು ಸಾಯಿಸಲು ಪ್ರಯತ್ನ ಪಟ್ಟಿರುತ್ತಾರೆ, 

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ  

-ಸಾಧಾರಣ: ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರನ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೧೧-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಕಾರ್‍ ಸಂಖ್ಯೆ ಕೆಎ-೦೭-ಎಂ-೮೫೭ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಕೋಲಾರ ನಗರ ಇ.ಟಿ.ಸಿ.ಎಂ ವೃತ್ತದ ಬಳಿ ಮೂರು ವರ್ಷದ ಯಶಸ್ ಎಂಬ ಬಾಲಕನಿಗೆ ಡಿಕ್ಕಿ ಹೊಡೆಸಿರುತ್ತಾನೆ. ಇದರ ಪರಿಣಾಮ ಮಗುವಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೧-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಮಂಡಿಕಲ್ ಗ್ರಾಮದ ವಾಸಿಗಳಾದ ಸೌಮ್ಯ ಬಿನ್ ವೆಂಕಟರಾಮೇಗೌಡ, ಕಲ್ಪನಾ ಬಿನ್ ಸೀತಾರಮಪ್ಪ ಮತ್ತು ಸೌಮ್ಯ ಬಿನ್ ವೆಂಕಟರಾಮಪ್ಪ ಎಂಬುವರು ನೀರು ಕುಡಿಯಲು ಹೋಗಿ ಆಕಸ್ಮಿಕವಾಗಿ ಜಾರಿ ಬಾವಿಯಲ್ಲಿ ಬಿದ್ದು ಮೃತ ಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೨-೧೨-೨೦೦೮ ರಂದು ಮಾಲೂರು ತಾಲೂಕು ರಾಮೇನಹಳ್ಳಿ ಗ್ರಾಮದ ವಾಸಿ ಮುನಿಕೃಷ್ಣಪ್ಪ ಎಂಬುವರು ಮನೆಯಿಂದ ರೂ ೧೭,೦೦೦/- ಗಳನ್ನು ತೆಗೆದುಕೊಂಡು ಬ್ಯಾಂಕಿನಲ್ಲಿ ಹಣ ಕಟ್ಟಲು ಹೋದವರು ಮನೆಗೆ ವಾಸಸ್ಸು ಬಾರದೆ ಕಾಣೆಯಾಗಿರುತ್ತಾರೆ. ಈ ಬಗ್ಗೆ ಕಾಣೆಯದ ಮುನಿಕೃಷ್ಣಪ್ಪ ರವರ ಪತ್ನಿ ನಾಗಮ್ಮ ಎಂಬುವರು ದೂರನ್ನು ನೀಡಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:   

ಸ್ಥಳ ದಂಡ ಮೊತ್ತ:  ರೂ.   

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ ನೇ ಜನವರಿ ೨೦೦೯

January 25, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೫-೦೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ  ರಾಬಿಟ್   ವಾಹಕ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೧-೨೦೦೯ ರಂದು ರಾತ್ರಿ ಮುಳಬಾಗಿಲು ತಾಲೂಕು ಚೋಳನಕುಂಟೆ ಗ್ರಾಮದಲ್ಲಿ ಬೆಸ್ಕಾಂ ನಿಂದ ಅಳವಡಿಸಿದ್ದ ರೂ. ೩೯,೭೪೩/- ಬೆಲೆ ಬಾಳುವ ೧೫೦೮ ಮೀಟರ್‍ ಉದ್ದದ ರಾಬಿಟ್ ವಾಹಕವನ್ನು ಯಾರೋ ಕಳ್ಳರು ಕಳುವುಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಶಿವಶಂಕರ್‍, ಶಾಖಾಧಿಕಾರಿಗಳು, ಬೆಸ್ಕಾಂ, ಆವಣಿ ಶಾಖೆ, ಮುಳಬಾಗಿಲು ರವರು ದೂರನ್ನು ದಾಖಲಿಸಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಅಪಹರಣಕ್ಕೆಸಂಬಂಧಿಸಿಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ತಾಲೂಕು ಬಸವನತ್ತ ಗ್ರಾಮದಲ್ಲಿ ವಾಸವಾಗಿರುವ ಲಕ್ಷ್ಮಮ್ಮ ಎಂಬವರ ಮೊಮ್ಮಗಳಾದ ಕುಮಾರಿ ನಿರ್ಮಲಾಕುಮಾರಿ(೧೭) ಎಂಬುವರು  ಅಪಹರಣಕ್ಕೀಡಾಗುತ್ತಾರೆ.  ದಿನಾಂಕ ೨೨-೦೧-೨೦೦೯ ರಂದು ೧೭೦೦ ಗಂಟೆ  ಸಮಯದಲ್ಲಿ ಮಧುಗಿರಿ ತಾಲೂಕು ಲಿಂಗೇನಹಳ್ಳಿ ವಾಸಿ ಚಂದ್ರಶೇಖರ ಮತ್ತು ಇತರೆ ೬ ಜನರು ಕಾರಿನಲ್ಲಿ ಬಂದು ನಿರ್ಮಲಾಕುಮಾರಿಯನ್ನು ಅಪಹರಣ ಮಾಡಿಕೊಂಡು ಹೋಗಿರುತ್ತಾರೆ.

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ  

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೫

ಸ್ಥಳ ದಂಡ ಮೊತ್ತ:  ರೂ. ೧,೭೦೦/-

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಜೂಜಾಟ ದಾಳಿ: ಮೂರು ಜನರ ಬಂಧನ, ರೂ. ೫೮೦ ವಶ

January 23, 2009

ದಿನಾಂಕ ೨೩-೦೧-೨೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಶ್ರೀ ಜಿ.ಸಿ.ನಾರಾಯಣಸ್ವಾಮಿ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ಕೆಂಬೋಡಿ ಗ್ರಾಮದ ಬಳಿ ಇರುವ ನೀಲಗಿರಿ ತೋಪಿನಲ್ಲಿ ದಾಳಿ ನಡೆಸಿ ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್‍ ಬಾಹರ್‍ ಎಂಬ ಅಕ್ರಮ ಜೂಜಾಟದಲ್ಲಿ ನಿರತರಾಗಿದ್ದ ಯಲ್ಲಪ್ಪ ಮತ್ತಿತರೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿರುತ್ತದೆ.  ಕಾರ್ಯಾಚರಣೆ ವೇಳೆ  ಜೂಜಾಟಕ್ಕೆ ಪಣವಾಗಿಟ್ಟದ್ದ ರೂ. ೫೮೦/ ನಗದನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.