ದಿನದ ಅಪರಾಧಗಳ ಪಕ್ಷಿನೋಟ ೦೧ ನೇ ಮಾರ್ಚಿ ೨೦೦೯

February 28, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೧-೦೩-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ೦೨

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೨-೨೦೦೯ ರಂದು ೧೭೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ವೆಂಕರಾಜನಹಳ್ಳಿ ಗ್ರಾಮದ ವಾಸಿ ರೋಜಮ್ಮ ಎಂಬುವರು ಕೆಎ-೦೭-೩೨೭೦ ಸಂಖ್ಯೆಯ ಆಟೋವಿನಲ್ಲಿ ಟೇಕಲ್ ನಿಂದ ತಮ್ಮ ಊರಿಗೆ ಹೋಗುವ ಸಲುವಾಗಿ ಕೆಜಿ ಹಳ್ಳಿ-ಗೋಪಸಂದ್ರ ಟಾರ್‍ ರಸ್ತೆಯಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ರಾಕ್ಟರ್‍ ಸಂಖ್ಯೆ ಕೆಎ-೦೮-ಟಿ-೨೪೮೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟೋವಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ರೋಜಮ್ಮರವರ ತಲೆಗೆ ತೀವ್ರವಾದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮೂಲತಃ ಉಡುಪಿ ಜಿಲ್ಲೆ ವಾಸಿ ಪ್ರಸ್ತುತ ಕೋಲಾರದ ಗುರುಪ್ರಷಾದ್ ಹೋಟೆಲಿನಲ್ಲಿ ಅಡಿಗೆ ಕೆಲಸ ಮಾಡುತ್ತಿದ್ದ ನಾಗೇಶಪೂಜಾರಿ ಎಂಬುವರು ನರಸಿಂಹ ಎಂಬುವರೊಡನೆ ಅಡುಗೆ ಕೆಲಸಕ್ಕಾಗಿ ಕೊಂಡರಾಜನಹಳ್ಳಿಗೆ ಹೋಗಿದ್ದು ಅಲ್ಲಿಂದ ಹಿಂತಿರುಗಿ ಕೋಲಾರಕ್ಕೆ ಬರುವ ಸಲುವಾಗಿ ದಿನಾಂಕ ೨೮-೦೨-೨೦೦೯ ರಂದು ೨೩೩೦ ಗಂಟೆ ಸಮಯದಲ್ಲಿ ಎನ್.ಹೆಚ್ ೪ ರಸ್ತೆಯ ಆರ್‍.ಎಂ.ಸಿ ಯಾರ್ಡ್ ಬಳಿ ನಡೆದುಕೊಂಡು ಬರುತ್ತಿದ್ದರು. ಆ ಸಮಯದಲ್ಲಿ ಕೋಲಾರದ ಕಡೆಯಿಂದ ಬಂದ ಟ್ರಾಕ್ಟರ್‍ ಸಂಖ್ಯೆ ಕೆಎ-೦೭-ಟಿ-೩೧೯೭ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ನಾಗೇಶಪೂಜಾರಿ ರವರ ತಲೆಗೆ ತೀವ್ರವಾದ ಗಾಯಗಳಾಗಿದ್ದು ಚಿಕಿತ್ಸೆಗಾಘಿ ಎಸ್.ಎನ್.ಆರ್‍ ಆಸ್ಪತ್ರೆಗೆ ಸಾಗಿಸು ಮಾರ್ಗಮಧ್ಯ ಮೃತಪಟ್ಟಿರುತ್ತಾರೆ.

-ಸಾಧಾರಣ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೨-೨೦೦೯ ರಂದು ೧೭೩೦ ಗಂಟೆ ಸಮಯದಲ್ಲಿ ಮಾಲೂರು ಬಾರ್‍ ಒಂದರಲ್ಲಿ ಕೆಲಸ ಮಾಡುತ್ತಿರುವ ರಾಜು ಎಂಬುವರು ಹೀರೋಹೋಂಡಾ ಪ್ಯಾಷನ್ ಸಂಖ್ಯೆ ಕೆಎ-೦೮-ಜೆ-೫೭೦೩ ರಲ್ಲಿ ಮಾಲೂರು ಪುರದ ಹಾರೋಹಳ್ಳಿ ರಸ್ತೆಯಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಯಾವುದೋ ಒಂದು ಟ್ರಾಕ್ಟರಿನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ರಾಜುವಿನ ಎರಡೂ ಕಾಲು ಮತ್ತು ಇತರೇ ಕಡೆಗಳಲ್ಲಿ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೨-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಕರಿನಾಯಕನಹಳ್ಳಿ ಗ್ರಾಮದ ವಾಸಿಯಾದ ಶ್ರೀಮತಿ ಚಿನ್ನಮ್ಮ ಎಂಬುವರು ತಮ್ಮ ಮನೆಯಲ್ಲಿದ್ದರು. ಅ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ಕ್ರಿಷ್ಣಪ್ಪ ಮತ್ತು ೪ ಜನರು ಅಕ್ರಮ ಗುಂಪು ಕಟ್ಟಿಕೊಂಡು ಬಂದು ಕೈಗಳಿಂದ ಮತ್ತು ಕಾಲುಗಳಿಂದ ಚಿನ್ನಮ್ಮ ರವರಿಗೆ ಹೊಡೆದು ಜುಟ್ಟು ಹಿಡಿದು ಎಳೆದಾಡಿ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾನೆ. ಈ ಕೃತ್ಯಕ್ಕೆ ಸರ್ವೆ ನಂ ೭೯ ರ ಜಮೀನು ವಿಚಾರವೇ ಕಾರಣವಾಗಿರುತ್ತದೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ.

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ ನೇ ಫೆಬ್ರವರಿ ೨೦೦೯

February 28, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಮನೆಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೧-೦೨-೦೯ ರಂದು ೨೭-೦೨-೨೦೦೯ ರ ನಡೆವೆ ಈ ಕೃತ್ಯವು ಕೋಲಾರ ನಗರದ ಜಯನಗರ ಬಡಾವಣೆಯಲ್ಲಿ ಸಂಭವಿಸಿರುತ್ತದೆ. ಜಯನಗರ ಬಡಾವಣೆ ವಾಸಿಯಾದ ಶ್ರೀಮತಿ ಜಯಂತಿ ರವರು ದಿನಾಂಕ ೧೧-೦೨-೦೯ ರಂದು ತಮ್ಮ ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದು ನಂತರ ದಿನಾಂಕ ೨೭-೦೨-೨೦೦೯ ರಂದು ಮನೆಗೆ ವಾಪಸ್ಸು ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಮುಂದಿನ ಬಾಗಿಲು ಜಖಂ ಮಾಡಿ ಒಳಗೆ ಪ್ರವೇಶ ಮಾಡಿ ಬಂಗಾರದ ಮತ್ತು ಬೆಳ್ಳಿಯ ವಸ್ತುಗಳನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಹೊಗಳಗೆರೆ ಅರಣ್ಯ ಪ್ರದೇಶದ ಬಳಿ ನಿಂತಿದ್ದ ಲಾರಿ ಸಂ. ಯು.ಪಿ.೮೧-ಆರ್‍-೯೦೨೩ ರಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೭-೦೨-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ರಾಜೇಂದ್ರಕುಮಾರ್‍ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ಮೇಲ್ಕಂಡ ಸ್ಥಳಕ್ಕೆ ಹೋಗಿದ್ದು ಲಾರಿಯಲ್ಲಿದ್ದ ಬಿಡಿಭಾಗಗಳನ್ನು ಕಳುವು ಮಾಡಿತಿದ್ದು ಪೊಲೀಸರನ್ನು ಕಂಡ ಆರೋಪಿಗಳು ಪರಾರಿಯಾಗಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ೦೨

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೨-೨೦೦೯ ರಂದು ೧೪೧೫ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕೆ.ಚೌಡದೇನಹಳ್ಳಿ ಗ್ರಾಮದ ವಾಸಿ ಲಕ್ಷ್ಮಣ (೩೫) ಎಂಬುವರು ತಮ್ಮ ಕುಟುಂಬದವರೊಡನೆ ಕೆಎ-೦೫-ಬಿ-೯೪೪೦ ಸಂಖ್ಯೆಯ ಟಾಟಾ ಸುಮೋ ವಾಹನದಲ್ಲಿ ಎನ್.ಹೆಚ್ ೪ ರಸ್ತೆಯ ಮುಳಬಾಗಿಲು ಬಳಿ ಆಗಾ ಫ್ಯಾಕ್ಟರಿಯ ಬಳಿ ಹೋಗುತ್ತಿದ್ದಾಗ ವಾಹನ ಪಂಕ್ಚರ್‍ ಆಗಿರುತ್ತದೆ. ಈ ಸಲುವಾಗಿ ಚಾಲಕ ಶಶಿ ಹಾಗೂ ಚಂದ್ರಮೋಹನ್ ಎಂಬುವರು ಇಳಿದು ಚಕ್ರ ಬದಲಿಸುತ್ತಿದ್ದರು. ಆ ಸಮಯದಲ್ಲಿ ಮುಳಬಾಗಿಲು ಕಡೆಯಿಂದ ಬಂದ ಕೆಎ-೦೨-ಎಂಡಿ-೯೭ ಸಂಖ್ಯೆಯ ಮಾರುತಿ ವ್ಯಾನ್ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಚಂದ್ರಮೋಹನ್ ರವರಿಗೆ ಗಾಯಗಳಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ.

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೨-೨೦೦೯ ರಂದು ಮಾಲೂರು ತಾಲ್ಲೂಕು ವೆಂಕಟರಾಜನಹಳ್ಳಿ ಗ್ರಾಮದ ವಾಸಿಯಾದ ಪಿ.ಯು.ಸಿ. ವಿದ್ಯಾರ್ಥಿನಿ ಕು. ರೋಜಮ್ಮ ಎಂಬುವರು ಕೆ.ಜಿ.ಹಳ್ಳಿ ಗ್ರಾಮದಿಂದ ತಮ್ಮ ಗ್ರಾಮಕ್ಕೆ ಆಟೋ ಸಂ. ಕೆಎ-೦೭-೩೨೭೦ ರಲ್ಲಿ ಹೋಗುತ್ತಿದ್ದರು. ಅ ಸಮಯದಲ್ಲಿ ಬಂದ ಟ್ರಾಕ್ಡರ್‍ ಸಂ. ಕೆಎ-೦೮-ಟಿ-೨೪೮೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮವಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ರೋಜಮ್ಮ ರವರ ತಲೆಗೆ ತೀವ್ರವಾದ ಗಾಯಗಳಾಗಿ ಸ್ಥಳದಲ್ಲಿಯೆ ಮೃತಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೨-೨೦೦೯ ರಂದು ೧೪೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಯಟ್ಟಕೋಡಿ ಗ್ರಾಮದ ವಾಸಿಯಾದ ಶ್ರೀಮತಿ ಚಿನ್ನಮ್ಮ ಎಂಬುವರು ತಮ್ಮ ಮನೆಯಲ್ಲಿದ್ದರು. ಅ ಸಮಯದಲ್ಲಿ ಅವರ ಸಂಬಂಧಿಕರಾದ ಮೋಟಪ್ಪ ಮತ್ತು ೪ ಜನರು ಅಕ್ರಮ ಗುಂಪು ಕಟ್ಟಿಕೊಂಡು ಬಂದು ದೊಣ್ಣೆ ಮತ್ತು ಕೈಗಳಿಂದ ಚಿನ್ನಮ್ಮ ರವರಿಗೆ ಹೊಡೆದು ಗಾಯಗಳನ್ನುಂಟು ಮಾಡಿ, ಅಕೆಯ ಬಟ್ಟೆಗಳನ್ನು ಹಿಡಿದು ಎಳದಾಡಿ ಮಾನಭಂಗ ಮಾಡಲು ಪ್ರಯತ್ನಿಸಿ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾನೆ. ಈ ಕೃತ್ಯಕ್ಕೆ ಶ್ರೀಮತಿ ಚಿನ್ನಮ್ಮ ರವರು ಈ ಹಿಂದೆ ಅದೇ ಗ್ರಾಮದ ವಾಸಿಯಾದ ನಾಗರಾಜು ಎಂಬುವರೊಂದಿಗೆ ಮನೆಯವರು ವಿರೋದದ ನಡೆವೆ ಮದುವೆ ಆಗಿರುವುದೆ ಕಾರಣವಾಗಿರುತ್ತದೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ. ೫೦೦/-

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

 


ದಿನದ ಅಪರಾಧಗಳ ಪಕ್ಷಿನೋಟ ೨೭ ನೇ ಫೆಬ್ರವರಿ ೨೦೦೯

February 26, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೨-೦೨-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕೋಟಿಗಾನಹಳ್ಳಿ ಗ್ರಾಮದ ವಾಸಿ ಗುರಪ್ಪ ಎಂಬುವರು ವಿರೂಪಾಕ್ಷಿ ಗ್ರಾಮದಿಂದ ಮುಳಬಾಗಿಲಿಗೆ ಹೋಗುವ ಸಲುವಾಗಿ ವಿರೂಪಾಕ್ಷಿ ಗ್ರಾಮದಲ್ಲಿ ಟಿಎನ್-೩೨-ಎನ್-೦೦೫೬ ಬಸ್ಸಿಗೆ ಹತ್ತುತ್ತಿದ್ದರು. ಆ ಸಮಯದಲ್ಲಿ ಬಸ್ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಇದ್ದಕ್ಕಿದ್ದಂತೆ ಬಸ್ಸನ್ನು ಚಾಲನೆ ಮಾಡಿರುತ್ತಾನೆ. ಇದರ ಪರಿಣಾಮ ಗುರ್‍ರಪ್ಪ ಕೆಳಗೆ ಬಿದ್ದಿದ್ದು ಇವರ ತಲೆಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಮಿಂಡಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೨-೨೦೦೯ ಕ್ಕೆ ೨೦ ದಿನಗಳಿಂದ ಮಾಲೂರು ತಾಲೂಕು ಕರಿನಾಯಕನಹಳ್ಳಿ ಗ್ರಾಮದ ವಾಸಿಗಳಾದ ಮೋಹನ್ ರೆಡ್ಡಿ ಮತ್ತು ಕೃಷ್ಣಾರೆಡ್ಡಿ ಎಂಬುವರು ಮಿಂಡಹಳ್ಳಿ ಗ್ರಾಮದ ಸರ್ವೆ ನಂ. ೨೭ ರ ಸತ್ಯಮ್ಮ ಎಂಬುವರಿಗೆ ಸೇರಿದ ಜಮೀನಿನಲ್ಲಿ ೨೦ ಅಡಿಗಳ ರಸ್ತೆ ನಿರ್ಮಿಸಿ ನಷ್ಠ ಉಂಟು ಮಾಡಿ ಇದ್ದನ್ನು ಕೇಳಿದ್ದಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿರುತ್ತಾರೆ. ಹಾಗೂ ಗಂಗಮ್ಮ ಎಂಬುವರಿಗೆ ಸೇರಿದ ಜಮೀನಿನಲ್ಲಿದ್ದ ನೀಲಗಿರಿ ಮರಗಳನ್ನು ಬುಡಸಮೇತ ಕಿತ್ತುಹಾಕಿ ನಷ್ಠ ಉಂಟು ಮಾಡಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿರುತ್ತಾರೆ. ಈ ಬಗ್ಗೆ ಎರಡು ದೂರುಗಳು ಬಂದ ಹಿನ್ನಲೆಯಲ್ಲಿ ಪ್ರತ್ಯೇಕವಾಗಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೬

-ಸ್ಥಳ ದಂಡ ಮೊತ್ತ: ರೂ ೨೩೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ ನೇ ಫೆಬ್ರವರಿ ೨೦೦೯

February 26, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂದಿಸಿಂದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೨-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಶೆಟ್ಟಿಹಳ್ಳಿ ಗ್ರಾಮದ ವಾಸಿಯಾದ ವೆಂಕಟೇಶಪ್ಪ ಮತ್ತು ಅತನ ಪತ್ನಿ ಕೆಂಪಮ್ಮ ಎಂಬುವವರು ಚೀಟಿ ಹಣದ ವಿಚಾರದಲ್ಲಿ ಜಗಳ ಮಾಡಿಕೊಂಡು ವೆಂಕಟೇಶಪ್ಪ ರವರು ಕೆಂಪಮ್ಮನ ಎದೆಗೆ ನೀಲಿಗಿರ ಮರದ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುತ್ತಾನೆ. ನಂತರ ಕೊಲೆಯನ್ನು ಮರೆಮಾಚುವ ಉದ್ದೇಶದಿಂದ ತೋಟದ ತೊಟ್ಟಿಯಲ್ಲಿ ಶವವನ್ನು ಹಾಕಿ ನಂತರ ಮನೆ ಹತ್ತಿರ ಶವವನ್ನು  ತಂದು ಮಲಗಿಸಿರುತ್ತಾನೆ. ಈ ಬಗ್ಗೆ ಕೆಂಪಮ್ಮ ರವರ ತಮ್ಮ ಚೌಡೇಗೌಡ ರವರು ದೂರು ದಾಖಲು ಮಾಡಿರುತ್ತಾರೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೩

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೨-೦೯ ರಂದು ೧೬೧೫ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ರಾಮಾಪುರ ಗ್ರಾಮದ ವಾಸಿಗಳಾದ ಯಲ್ಲಪ್ಪ ಮತ್ತು ಕಿಟ್ಟಪ್ಪ ಎಂಬುವರು ತಮ್ಮ ದ್ವಿಚಕ್ರ ವಾಹನ ಸಂ. ಕೆಎ-೪೧-ಇ-೨೪೮೩ ರಲ್ಲಿ ಮುಳಬಾಗಿಲಿನಿಂದ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದರು. ಅವರು ಕಾಶೀಪುರದ ಗೇಟ್ ಬಳಿ ಬಂದಾಗ ಎದರುಗಡೆಯಿಂದ ಬಂದ ಮಾರುತಿ ಕಾರ್‍ ಸಂ. ಕೆಎ-೦೪-ಬಿ-೧೯೨೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ಚಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾರೆ. ಇದರ ಪರಿಣಾಮವಾಗಿ ಯಲ್ಲಪ್ಪರವರಿಗೆ ಬಲಕಾಲು ಮತ್ತು ಬಲಕೈ ಮುರಿದಿದ್ದು ಕಿಟ್ಟಪ್ಪನವರಿಗೆ ಬಲಕಾಲು, ಬಲಕೈ ಮತ್ತು ತಲೆಗೆ ಗಾಯಗಳಾಗಿರುತ್ತವೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಹಳೇಕುಪ್ಪ ಗ್ರಾಮದ ಮುನಿಯಪ್ಪ ಎಂಬುವರು ಖಾಸಗಿ ಬಸ್ ಸಂ. ಕೆಎ-೦೭-೩೩೩೦ ರಲ್ಲಿ ಕ್ಲೀನರ್‍ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ದಿನಾಂಕ ೨೫-೦೨-೦೯ ರಂದು ೦೮೪೫ ಗಂಟೆ ಸಮಯದಲ್ಲಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಇದ್ದಕಿದ್ದಂತೆ ಬ್ರೇಕ್ ಹಾಕಿದ್ದು ಇದರ ಪರಿಣಾಮವಾಗಿ ಮಂಜುನಾಥ ಬಸ್ಸ ನಿಂದ ಕೆಳಗೆ ಬಿದ್ದು ತಲೆಗೆ ಗಾಯಗಳಾಗಿದ್ದು ಆರ್‍.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾನೆ. ಈ ಬಗ್ಗೆ ಮಂಜುನಾಥ್ ರವರ ತಾಯಿ ಶ್ರೀಮತಿ ವೆಂಕಟಲಕ್ಷ್ಮಮ್ಮ ರವರ ದೂರು ದಾಖಲು ಮಾಡಿರುತ್ತಾರೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೨-೦೯ ರಂದು ೧೧೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಕೇತಗಾನಹಳ್ಳಿ ಗ್ರಾಮದ ವಾಸಿಗಳಾದ ಶ್ರೀನಿವಾಸರೆಡ್ಡಿ ಮತ್ತು ನಾರಾಯಣಸ್ವಾಮಿ ಎಂಬುವರು ತಮ್ಮ ದ್ವಿಚಕ್ರ ವಾಹನ ಸಂ. ಕೆಎ-೦೭-ಕ್ಯೂ-೪೭೫೭ ರಲ್ಲಿ ಮುಳಬಾಗಿಲು ತಾಲೂಕು ಗಂಜಿಗುಂಟೆ ಗ್ರಾಮದ ಬಳಿ ಹೋಗುತ್ತಿದ್ದರು. ಅ ಸಮಯದಲ್ಲಿ ಎದರುಗಡೆಯಿಂದ ಬಂದ ಕೆ.ಎಸ್.ಆರ್‍.ಟಿ.ಸಿ. ಬಸ್ ಸಂ.ಕೆಎ-೦೭-ಎಫ್-೪೯೮ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ಚಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾರೆ. ಇದರ ಪರಿಣಾಮವಾಗಿ ದ್ಚಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಶ್ರೀನಿವಾಸರೆಡ್ಡಿ ಮತ್ತು ನಾರಾಯಣಸ್ವಾಮಿ ರವರಿಗೆ ಮುಖ, ಕೈ ಕಾಲುಗಳಿಗೆ ರಕ್ತಗಾಯಗಳಾಗಿದ್ದು ಕೋಲಾರದ ಎಸ್.ಎನ್. ಆರ್‍. ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ತಾಯ್ಲೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೫-೦೨-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ತಾಯ್ಲೂರು ಗ್ರಾಮದ ವಾಸಿ ತೋಹಿದ್ ಅಹ್ಮದ್ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಮುನಾವರ್‍ ಪಾಷ, ಜಿಯಾವುಲ್ಲಾ, ಅಮೀರ್‍ ಪಾಷ ಮತ್ತು ಮನ್ಸೂರ್‍ ಪಾಷ ಎಂಬುವರು ಕೈಗಳಿಂದ ಹೊಡೆದು ಚಾಕುವಿನಿಂದ ತಿವಿದು ಗಾಯಪಡಿಸಿರುತ್ತಾರೆ.

ದೊಂಬಿ: ಇಲ್ಲ

ಹಲ್ಲೆ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಓಬಲಾಪುರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೫-೦೨-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಓಬಲಾಪುರ ಗ್ರಾಮದ ವಾಸಿ ವಸಂತಮ್ಮ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಬಾಬು, ರಾಜೇಂದ್ರ, ಬುವಲಕ್ಷ್ಮಿ ಎಂಬುವರು ಮಚ್ಚಿನಿಂದ ಹೊಡೆದು ಗಾಯಪಡಿಸಿದ್ದು ಅಡ್ಡ ಬಂದ ವಸಂತಮ್ಮ ರವರ ಮಗ ಅನಿಲ್ ಕುಮಾರ್‍ ಹಾಗೂ ಗಂಡ ವೆಂಕಟೇಶಪ್ಪ ರವರಿಗೂ ಸಹಾ ದೊಣ್ಣೆ ಮತ್ತು ಕಲ್ಲುಗಳಿಂದ ಹೊಡೆದು ಗಾಯಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಸಂಗಸಂದ್ರ ಗ್ರಾಮದ ವಾಸಿ ಹನುಮಂತಪ್ಪ (೬೦) ಎಂಬುವರು ಕಾಣೆಯಾದವರು. ಹನುಮಂತಪ್ಪ ರವರು ಮಾನಸಿಕವಾಗಿ ಅಸ್ವಸ್ಥರಾಗಿದ್ದು ದೇವಾಲಯಕ್ಕೆ ಹೋಗಿಬರುವುದಾಗಿ ಹೇಳಿ ತನ್ನ ಮನೆಯಿಂದ ಹೊರಟಿದ್ದು ಹಿಂತಿರುಗಿ ಬರದೇ ಕಾಣೆಯಾಗಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೨

-ಸ್ಥಳ ದಂಡ ಮೊತ್ತ: ರೂ. ೨,೦೦೦/-

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ ನೇ ಫೆಬ್ರವರಿ ೨೦೦೯

February 24, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೫-೦೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಕೆಂಬೋಡಿ ಗ್ರಾಮದ ವಾಸಿ ದೊಡ್ಡನಾರಾಯಣಪ್ಪ ರವರ ಹೆಂಡತಿ ನಾರಾಯಣಮ್ಮ ಎಂಬುವರು ಕೊಲೆಗೀಡಾದವರು. ದಿನಾಂಕ ೨೨-೦೨-೨೦೦೯ ರಂದು ೧೧೩೦ ಗಂಟೆ ಸಮಯದಲ್ಲಿ ನಾರಾಯಣಮ್ಮ ರವರು ತನ್ನ ಮನೆಯಿಂದ ಹೊರಟ ನಾರಾಯಣಮ್ಮ ಹಿಂತಿರುಗದೇ ಕಾಣೆಯಾಗಿದ್ದರು. ಹೀಗೆ ಕಾಣೆಯಾಗಿದ್ದ ನಾರಾಯಣಮ್ಮ ರವರ ಮೃತ ದೇಹ ಸೊಣ್ಣಯ್ಯನವರ ಕೃಷ್ಣಪ್ಪನವರ ನೀಲಗಿರಿ ತೋಪಿನಲ್ಲಿ ದಿನಾಂಕ ೨೫-೦೨-೨೦೦೯ ರಂದು ೦೮೩೦ ಗಂಟೆಗೆ ಪತ್ತೆಯಾಗಿರುತ್ತದೆ. ನಾರಯಣಮ್ಮ ರವರ ಕುತ್ತಿಗೆಯಲ್ಲಿದ್ದ ೭೦ ಗ್ರಾಂ ಚಿನ್ನದ ಮಾಂಗಲ್ಯದ ಸರ ಮೃತದೇಹದಲ್ಲಿ ಇರದಿದ್ದು ಇದನ್ನು ಲಪಟಾಯಿಸುವ ಉದ್ದೇಶದಿಂದ ಯಾರೋ ದುರಾತ್ಮರು ಈ ಕೃತ್ಯ ಎಸಗಿರಬಹುದಾಗಿ ದೊಡ್ಡನಾರಾಯಣಪ್ಪ ರವರು ತನ್ನ ದೂರಿನಲ್ಲಿ ತಿಳಿಸಿರುತ್ತಾರೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕಳುವು ಮಾಡಲಾದ ಆಟೋವೊಮದನ್ನು ಮಾರಲು ಯತ್ನಿಸುತ್ತಿದ್ದ ಆರೋಪಿಗಳನ್ನು ಗಸ್ತಿನಲ್ಲಿದ್ದ ಪೊಲೀಸರು ಬಂಧಿಸಿರುತ್ತಾರೆ.  ದಿನಾಂಕ ೨೪-೦೨-೨೦೦೯ ರಂದು ೦೭೩೦ ಗಂಟೆ ಸಮಯದಲ್ಲಿ ಕೋಲಾರ ನಗರ ಪೊಲೀಸ್ ಠಾಣೆಯ ಪೇದೆಗಳಾದ ೩೧೦, ೬೮೭ ಮತ್ತು ೨೯೧ ರವರು ಗಸ್ತಿನ ಸಲುವಾಗಿ ಕೋಲಾರ-ಅಂತರಗಂಗೆ ರಸ್ತೆಯ ಪಲ್ಲಿವಿ ಥಿಯೇಟರ್‍ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಆರೋಪಿಗಳಾದ ಬೆಂಗಳೂರು ನಗರದ ವಾಸಿ ಸೈಐದ್ ಬಕಶ್, ಕೋಲಾರ ನಗರ ಷಹಿಂಷಾ ನಗರದ ವಾಸಿ ಫಾರೂಕ್ ಎಂಬುವರು ಕೆಎ-೦೩-ಸಿ-೬೫೧೭ ಆಟೋವನ್ನು ಮಾರಾಟ ಮಾಡುತ್ತಿದ್ದು ಪೊಲೀಸರನ್ನು ಕಂಡು ಓಡಿಹೋಗಲು ಪ್ರಯತ್ನಿಸಿರುತ್ತಾರೆ. ಹಿಂಬಾಲಿಸಿಕೊಂಡು ಹೋಗಿ ಆರೋಪಿಗಳನ್ನು ಹಿಡಿದಾಗ ಆಟೋವನ್ನು ಬೆಂಗಳೂರಿನಿಂದ ಕಳುವು ಮಾಡಿರುವುದಾಗಿ ತಿಳಿದು ಬಂದಿರುತ್ತದೆ. ಅಟೋವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಮಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೪-೦೨-೨೦೦೯ ರಂದು ೧೩೪೫ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ವಾಸಿ ಸಂತೋಷ ಎಂಬುವರು ತಮ್ಮ ಕುಟುಂಬದವರೊಡನೆ ಬೆಂಗಳೂರಿಗೆ ಹೋಗುವ ಸಲುವಾಗಿ ತಮ್ಮ ಕೆಎ-೦೧-ಎಂಇ-೯೯೪೫ ಇನೋವಾ ಕಾರಿನಲ್ಲಿ ಎನ್ ಹೆಚ್ ೪ ರಸ್ತೆಯ ತಾಯ್ಲೂರು ಕ್ರಾಸ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಕಾರನ್ನು ಚಾಲನೆ ಮಾಡುತ್ತಿದ್ದ ಚಾಲಕ ಪುರುಷೋತ್ತಮ ತನ್ನ ಕಾರನ್ನು ಅತಿವೇಗ ಮತ್ತು ಅಜಾಗರೂಲತೆಯಿಂದ ಚಾಲನೆ ಮಾಡಿದ್ದು ವಾಹನ ರಸ್ತೆ ಬದಿಯಲ್ಲಿ ಉರುಳಿ ಬಿದ್ದಿರುತ್ತದೆ. ಇದರ ಪರಿಣಾಮ ಕಾರಿನಲ್ಲಿದ್ದವರೆಲ್ಲರಿಗೂ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ  

ದೊಂಬಿ: ಇಲ್ಲ

ಹಲ್ಲೆ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಟೇಕಲ್ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೩-೦೨-೨೦೦೯ ರಂದು ೧೬೩೦ ಗಂಟೆ ಸಮಯದಲ್ಲಿ ಟೇಕಲ್ ಗ್ರಾಮದ ವಾಸಿ ನಾಗರಾಜ (೨೫) ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಗೋವಿಂದಪ್ಪ ಮತ್ತು ಚಿಕ್ಕಯಲ್ಲಪ್ಪ ಎಂಬುವರು ದೊಣ್ಣೆಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾರೆ. ಹಳೇ ದ್ವೇಷ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ೦೨

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಸಿನಿಮಾಟೋಗ್ರಫಿ ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣವು ಕೋಲಾರ ತಾಲೂಕು ಮ್ಯಾಜಿಸ್ಟ್ರೇಟ್ ಮತ್ತು ಯಹಸೀಲ್ದಾರ್‍ ರವರಾದ ಶ್ರೀಮತಿ ರೇಖಾ ರವರ ದೂರಿನ ಆಧಾರದ ಮೇರೆಗೆ ದಾಖಲಾಗಿರುತ್ತದೆ. ಶ್ರೀಮತಿ ರೇಖಾ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ದಿನಾಂಕ ೨೪-೦೨-೨೦೦೯ ರಂದು  ಕಾನೂನು ಬಾಹಿರವಾಗಿ ಅಶ್ಲೀಲ ಚಲನಚಿತ್ರ ಪ್ರದರ್ಶಿಸುತ್ತಿದ್ದ ಕೋಲಾರ ಬೋವಿ ಕಾಲೋನಿಯ ಗಜೇಂದ್ರ ವೀಡಿಯೋ ಪಾರ್ಲರ್‍ ಮೇಲೆ ದಾಳಿ ನಡೆಸಿ ಅಶ್ಲೀಲ ಸಿ.ಡಿಗಳು ಇತರೇ ಕ್ಯಾಸೆಟ್ ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈ ಬಗ್ಗೆ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೋಲಾರ ಬೋವಿ ಕಾಲೋನಿವಾಸಿಗಳಾದ ಗೋಪಾಲ್, ಮಧುಸೂಧನ್ ಹಾಗೂ ಕಾರಂಜಿಕಟ್ಟೆ ವಾಸಿ ಮುನಿರಾಜು ರವರ ವಿರುದ್ದ ಪ್ರಕರಣ ದಾಖಲಾಗಿರುತ್ತದೆ.

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೊಂಬಿ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಠ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೨-೨೦೦೯ ರಂದು ೧೬೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಜಿ.ಬೈಪಲ್ಲಿ ಗ್ರಾಮದ ವಾಸಿ ಸುಬ್ಬಣ್ಣ (೩೩) ಎಂಬುವರ ಮೇಲೆ ಜಗಳ ತೆಗೆದ ಗೌನಿಪಲ್ಲಿ ಗ್ರಾಮದ ವಾಸಿಗಳಾದ ನಯಾಜ್, ತಫೀಕ್, ಇಂತಿಯಾಜ್ ಇನ್ನಿತರೇ ಒಟ್ಟು ೧೧-೧೫ ಜನರು ಅಕ್ರಮಗುಂಪು ಕಟ್ಟಿಕೊಂಡು ಬಂದು ಕೈಗಳಿಂದ ದೊಣ್ಣೆಗಳಿಂದ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿನಿಂದನೆ ಮಾಡಿರುತ್ತಾರೆ.

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ  

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:  

-ಸ್ಥಳ ದಂಡ ಮೊತ್ತ: ರೂ.   

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ ನೇ ಫೆಬ್ರವರಿ ೨೦೦೯

February 24, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೪-೦೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ  ದಾಖಲಾಗಿರುತ್ತದೆ. ದಿನಾಂಕ ೨೧-೦೨-೨೦೦೯ ಂದು ೧೭೩೦ ಗಂಟೆ ಸಮಯದಲ್ಲಿ ಪೆದ್ದಪಲ್ಲಿ ಮತ್ತು ಅತ್ತಿಕುಂಟೆ ಗ್ರಾಮದ ಮದ್ಯೆ ಎರಡು ಹೀರೋಹೋಂಡಾ ಸ್ಪ್ಲೆಂಡರ್‍ ಪ್ಲಸ್ ದ್ವಿಚಕ್ರವಾಹನಗಳ ನಡುವೆ ಮುಖಾಮುಖಿ ಸಂಭವಿಸಿದ ಅಪಘಾತದಲ್ಲಿ ಮುತ್ತುಕಪಲ್ಲಿ ಗ್ರಾಮದ ಇಬ್ಬರಿಗೆ ಗಾಯಗಳುಂಟಾಗಿರುತ್ತದೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಮತ್ತೊಂದು  ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೨-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಟೌನ್ ವಾಸಿ ಹನುಮಂತಪ್ಪ ರವರು ತಮ್ಮ ಸೈಕಲಿನಲ್ಲಿ ಶ್ರೀನಿವಾಸಪುರ ಟೌನ್ ಮದನಪಲ್ಲಿ ರಸ್ತೆಯ ಐ.ಬಿ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಈಚರ್‍ ಟೆಂಪೋ ಸಂಖ್ಯೆ ಕೆಎ-೦೩-ಬಿ-೩೦ ವಾಹನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ, ಇದರ ಪರಿಣಾಮ ಹನುಮಂತಪ್ಪ ರವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ  

ದೊಂಬಿ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಕಲ್ಲೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೧-೦೨-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಕಲ್ಲೂರು ಗ್ರಾಮದ ವಾಸಿ ಇಂದ್ರಮ್ಮ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಚಂದ್ರಪ್ಪ ಮತ್ತಿತರೇ ೪ ಜನರು ಅಕ್ರಮಗುಂಪು ಕಟ್ಟಿಕೊಂಡು ಬಂದು ಕೈಗಳಿಂದ ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಪರಸ್ಪರರ ನಡುವೆ ಇದ್ದ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೦೨

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ಗಾಂಧಿನಗರದ ವಾಸವಾಗಿರುವ ಮೂರು ವರ್ಷದ ಬಾಲಕ ಸಂತೋಷ್ ಸುಟ್ಟಗಾಯಗಳ ದೆಸೆಯಿಂದ ಮೃತಪಟ್ಟಿರುತ್ತಾನೆ. ದಿನಾಂಕ ೧೩-೦೨-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಸಂತೋಷ್ ಎಂಬ ಬಾಲಕ ತಾಯಿ ಅಡುಗೆಮನೆಯಲ್ಲಿ ಸೀಮೇಎಣ್ಣೆ ಸ್ಟೊವ್ ಅಂಟಿಸಿ ಹೊರಹೋಗಿದ್ದು ವೇಳೆ ಸ್ಟವ್ ಹತ್ತಿರ ಹೋದ ಸಂತೋಷ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿರುತ್ತದೆ. ಇದರ ಪರಿಣಾಮ ಸಂತೋಷ್ ಗೆ ಸುಟ್ಟಗಾಯಗಳಾಗಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ ೧೭-೦೨-೨೦೦೯ ರಂದು ೦೧೦೦ ಗಂಟೆ ಮೃತಪಟ್ಟಿರುತ್ತಾನೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ವಿ,ಗುಟ್ಟಹಳ್ಳಿ ಗ್ರಾಮದ ವಾಸಿ ಶ್ರೀನಿವಾಸ ಎಂಬುವರು ದಿನಾಂಕ ೨೩-೦೨-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಹುಣಸೇ ಮರವೊಂದಕ್ಕೆ ನೇಣುಹಾಕಿಕೊಂಡು ಮೃತಪಟ್ಟಿರುತ್ತಾನೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ  

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:  

-ಸ್ಥಳ ದಂಡ ಮೊತ್ತ: ರೂ.   

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೨ ನೇ ಫೆಬ್ರವರಿ ೨೦೦೯

February 21, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಟಿವಿಎಸ್ ಸೂಪರ್‍ ಎಕ್ಸ್‌ಎಲ್ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರದ ಕೆ.ಜಿ.ಮೊಹಲ್ಲಾ ವಾಸಿ ಬಿ.ಶಕೀಲ್ ಅಹ್ಮದ್ ಎಂಬುವರ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೩-ಇಕ್ಯೂ- ೨೮೮೨ ದ್ವಿಚಕ್ರವಾಹನ ಕಳುವಾಗಿರುತ್ತದೆ. ಶಕೀಲ್ ಅಹ್ಮದ್ ಎಂಬುವರು ತನ್ನ ಮನೆಯ ಮುಂದೆ ವಾಹನವನ್ನು ನಿಲ್ಲಿಸಿ ಮನೆಯೊಳಗೆ ಹೋಗಿ ಊಟಮಾಡಿಕೊಂಡು ಬಂದು ನೋಡುವಷ್ಠರಲ್ಲಿ ಯಾರೋ ಕಳ್ಳರು ದ್ವಿಚಕ್ರವಾಹನವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಾಹನ ಬೆಲೆ ರೂ. ೧೩,೦೦೦/ ಆಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಿರುಕುಳ ಮತ್ತು ಆತ್ಮಹತ್ಯ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೪-೦೨-೦೯ ರಂದು ೧೭೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ತೊಟ್ಲಿ ಗ್ರಾಮದ ವಾಸಿಯಾದ ನಾಗರಾಜುರವರ ಪತ್ನಿ ಶ್ರೀಮತಿ ಭಾಗ್ಯಮ್ಮ ಎಂಬುವರು ಮನೆಯಲ್ಲಿ ಗಂಡ ಮತ್ತು ಅತ್ತೆ ಅಡಿಗೆ ಸರಿಯಾಗಿ ಮಾಡಿಲ್ಲವೆಂದು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸಿಸಿದ ಕಾರಣ ಭಾಗ್ಯಮ್ಮ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯಗೆ ಪ್ರಯತ್ನ ಪಟ್ಟಿದ್ದು ಇತರ ಪರಿಣಾಮವಾಗಿ ಸುಟ್ಟುಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್‍. ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೨-೨೦೦೯ ರಂದು ಬಂಗಾರಪೇಟೆ ತಾಲೂಕು ಯರ್‍ರಗಾನಹಳ್ಳಿ ಗ್ರಾಮದ ವಾಸಿ ತಾಯಮ್ಮ ಎಂಬುವರು ಎನ್.ಹೆಚ್ ೪ ರಸ್ತೆಯ ಬದಿಯಿರುವ ದೀಪ್ತಿಮಹಲ್ ಕಲ್ಯಾಣಮಂಟಪಕ್ಕೆ ಬಂದಿದ್ದು ೨೦೪೫ ಗಂಟೆ ಸಮಯದಲ್ಲಿ ರಸ್ತೆ ದಾಟುವ ಸಲುವಾಗಿ ರಸ್ತೆಯ ಬದಿ ನಿಂತಿದ್ದರು. ಆ ಸಮಯದಲ್ಲಿ ಮುಳಬಾಗಿಲು ಕಡೆಯಿಂದ ಬಂದ ಕೆಎ-೦೪-ಸಿ-೧೦೫೮ ಲಾರಿ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ತಾಯಮ್ಮರವರ ಕಾಲಿನ ಮೇಲೆ ಲಾರಿಯನ್ನು ಹರಿಸಿರುತ್ತಾನೆ. ಇದರ ಪರಿಣಾಮ ತಾಯಮ್ಮ ರವರ ಕಾಲು ಮತ್ತು ತಲೆಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೨-೨೦೦೯ ರಂದು ೨೦೧೫ ಗಂಟೆ ಸಮಯದಲ್ಲಿ ಕೋಲಾರ ಷಹೀನ್ ಷಾ ನಗರದ ವಾಸಿ ಇಂತಿಯಾಜ್ ಎಂಬುವರ ಹೆಂಡತಿಯಾದ ಹಸೀನಾ ಎಂಬುವರು ತನ್ನವಾಸದ ಮನೆಯ ಅಡುಗೆ ಕೋಣೆಯ ಕಬ್ಬಿಣದ ರಾಡಿಗೆ ತನ್ನ ವೇಲ್ ನಿಂದ ನೇಣು ಹಾಕಿಕೊಂಡು ಮೃತಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೨

-ಸ್ಥಳ ದಂಡ ಮೊತ್ತ: ರೂ. ೧೬೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಜೂಜಾಟ ದಾಳಿ: ೧೨ ಜನರ ಬಂಧನ, ರೂ ೭೮೯೪/- ವಶ:

February 21, 2009

ದಿನಾಂಕ ೨೧-೦೨-೨೦೦೯ ರಂದು ೧೬೩೦ ಗಂಟೆ ಸಮಯದಲ್ಲಿ ಮಾಲೂರು ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀ ಸಂಪತ್ ಕುಮಾರ್‍ ರವರಿಗೆ ಬಂದ ಖಚಿತ ವರ್ತಮಾನ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಮಾಲೂರು ಪಟ್ಟಣದ ಕಾರು ನಿಲ್ದಾಣದ ಬಳಿ ಹುಣಸೆ ಬೀಜದ ಸಹಾಯದಿಂದ ಹಣವನ್ನು ಪಣವಾಗಿಟ್ಟು ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ಮಾಡಿ ವಿಜಯ ಕುಮಾರ್‍ ಮತ್ತು ಇತರೆ ೧೧ ಜನರನ್ನು ಬಂದಿಸಿ ಪಣವಾಗಿಟ್ಟಿದ್ದ ಹಣ ರೂ. ೭,೮೯೪/- ಗಳನ್ನು ವಶಪಡಿಸಿಕೊಂಡಿರುತ್ತಾರೆ.  ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೧ ನೇ ಫೆಬ್ರವರಿ ೨೦೦೯

February 20, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೨

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೨-೨೦೦೯ ರಂದು ಕೋಲಾರ ಕಾರಂಜಿಕಟ್ಟೆಯ ವಾಸಿ ಎಸ್.ಬಾಲಕೃಷ್ಣ (೫೨) ಎಂಬುವರ ಮನೆಗೆ ಹಾಕಿದ್ದ ಬೀಗವನ್ನು ಕಿತ್ತು ಒಳಗೆ ಪ್ರವೇಶಿಸಿದ ಯಾರೋ ಕಳ್ಳರು ಮನಯ ರೂಮಿನ ಪೆಟ್ಟಿಗೆಯಲ್ಲಿದ್ದ ೨ ಜೊತೆ ಚಿನ್ನದ ಬಳೆಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ಆಭರಣಗಳ ಬೆಲೆ ರೂ. ೨೪,೫೦೦/ ಆಗಿರುತ್ತದೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೇವಾಲಯ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೨-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ಅರಾಭಿಕೊತ್ತನೂರು ಗ್ರಾಮದಲ್ಲಿರುವ ಶ್ರೀ ವೆಂಕಟರವಣಸ್ವಾಮಿ ಮತ್ತು ವೀರಭದ್ರಸ್ವಾಮಿ ದೇವಾಲಯಗಳ ಬಾಗಿಲುಗಳ ಬೀಗಗಳನ್ನು ಮುರಿದು ಒಳಗೆ ಪ್ರವೇಶ ಮಾಡಿ ೭ ಸಾವಿರ ಬೆಲೆ ಬಾಳುವ ಹುಂಡಿ ಹಣ ಮತ್ತು ಬೆಳ್ಳಿ ಲೇಪನದ ತಾಮ್ರದ ದೇವರ ಕೀರಿಡ ಮತ್ತು ಕವಚವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಎ.ಸಿ.ವಿಶ್ವನಾಥಗೌಡ ಎಂಬುವರು ದಿನಾಂಕ ೨೧-೦೨-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ದೂರು ದಾಖಲು ಮಾಡಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ತಮಿಳುನಾಡಿನ ವಾಸಿ ಪಲಿಮ್ಜಯಚಂದ್ರ ಎಂಬುವರ ಟಿ.ವಿ.ಎಸ್ ಅಪಾಚಿ ಸಂಖ್ಯೆ ಟಿಎನ್-೨೪-ಎಕ್ಸ್-೨೬೫೫ ದ್ವಿಚಕ್ರವಾಹನ ಕಳುವಾಗಿರುತ್ತದೆ. ಪಲಮ್ ಜಯಚಂದ್ರ ಎಂಬುವರು ಮಾಲೂರು ಹೆಡಗಿನಬೆಲೆ ಗೇಟ್ ಬಳಿ ರಸ್ತೆ ಬದಿಯಲ್ಲಿ ತನ್ನ ವಾಹನವನ್ನು ನಿಲ್ಲಿಸಿ ಮೂರ್ತ ವಿಸರ್ಜನೆಗೆ ಹೋಗಿದ್ದರು. ಆ ಸಮಯದಲ್ಲಿ ಇಬ್ಬರು ಅಪರಿಚಿತರು ದ್ವಿಚಕ್ರವಾಹನವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಾಹನ ಬೆಲೆ ರೂ. ೪೪,೦೦೦/ ಆಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಮೋಸಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈಗ್ಗೆ ಎರಡು ತಿಂಗಳ ಹಿಂದೆ ಕೋಲಾರ ತಾಲೂಕು ಸುಗಟೂರು ಗ್ರಾಮದ ವಾಸಿಯಾದ ಕು.ವೆಂಕಟಲಕ್ಷ್ಮೀ ಎಂಬುವರು ತಮ್ಮ ಗ್ರಾಮದ ಬಳಿ ದನಗಳನ್ನು ಮೇಯಿಸುತ್ತಿದ್ದರು. ಅ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಯಾದ ಪ್ರಸನ್ನ ಎಂಬುವರು ಅಕೆಯ ಮೇಲೆ ಬಲತ್ಕಾರವಾಗಿ ಅತ್ಯಾಚಾರ ಮಾಡಿ ನಂತರ ನಿನ್ನನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿರುತ್ತಾನೆ. ಈ ಬಗ್ಗೆ ಕು.ವೆಂಕಟಲಕ್ಷ್ಮೀ ರವರು ದಿನಾಂಕ ೨೧-೦೨-೦೯ ರಂದು ೧೪೪೫ ಗಂಟೆ ಸಮಯದಲ್ಲಿ ದೂರು ದಾಖಲು ಮಾಡಿರುತ್ತಾರೆ.

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿರುವ ಬಗ್ಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೨-೨೦೦೯ ರಂದು ಮದ್ಯಾಹ್ನ ಕೋಲಾರ ತಾಲೂಕು ಪಂಚಾಯತಿ ಕಛೇರಿಗೆ ನುಗ್ಗಿದ ಹೋಳೂರು ಶಂಕರ್‍, ವೆಂಕಟೇಶ್, ಗಂಗಮ್ಮ, ಎಸ್.ರಮೇಶ್ ಮತ್ತು ರಾಜಪ್ಪ ಎಂಬುವರು ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರರನ್ನು ಅವಾಚ್ಯ ಶಬ್ದಗಳಿಂದ ಬೈದು ಬಲಾತ್ಕಾರವಾಗಿ ಕಛೇರಿಯಿಂದ ಹೊರತಳ್ಳಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿ ಕಛೇರಿಯಲ್ಲಿದ್ದ ಟೇಬಲ್, ಖುರ್ಚಿ, ಬೀರು, ಟೈಪಿಂಗ್ ಮೆಷೀನ್ ಇತ್ಯಾದಿ ಪೀಠೋಪಕರಣಗಳನ್ನು ಮುರಿದು ದ್ವಂಸ ಮಾಡಿರುತ್ತಾರೆ. ಅಂಚೆ ಕಛೇರಿಯ ಕೂಲಿ ಕಾರ್ಮಿಕರಿಗೆ ಕೂಲಿ ಪಾವತಿ ಮಾಡಿಲ್ಲ ಎಂಬ ಕಾರಣಕ್ಕೆ ಆರೋಪಿಗಳು ಈ ಕೃತ್ಯ ಎಸಗಿರುತ್ತಾರೆ.

ಹಲ್ಲೆ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೪-೦೨-೨೦೦೯ ರಂದು ಬೆಳಿಗ್ಗೆ ೧೦೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ದಿಂಬಚಾಮನಹಳ್ಳಿ ಗ್ರಾಮದ ವಾಸಿಯಾದ ನವೀನ್ ಕುಮಾರ್‍ ಎಂಬುವರು ನಗರದ ಕೀಲುಕೋಟೆಯಲ್ಲಿರುವ ಪಿ.ಯು. ಕಾಲೇಜು ಮುಂದೆ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಅ ಸಮಯದಲ್ಲಿ ಅಲ್ಲಿಗೆ ಬಂದ ಬಂಗಾರಪೇಟೆ ತಾಲೂಕು ಕಾರಮಂಗಲದ ವಾಸಿಯಾದ ಅಂಬರೀಶ್ ಎಂಬುವರು ಏನೋ ನನ್ನ ಮಗನೆ ಹಾಸ್ಟಲ್ ಮುಂದೆ ಮೂತ್ರ ವಿಸರ್ಜನೆ ಮಾಡುತ್ತೀಯ ಎಂದು ಅವಾಚ್ಯ ಶಬ್ದಗಳಿಂದ ಬೈದು ತನ್ನ ಕೈಯಲ್ಲಿದ್ದ ಬೀಗದಿಂದ ನವೀನ ಕುಮಾರ್‍ ರವರಿಗೆ ಹೊಡೆದು ರಕ್ತ ಗಾಯವನ್ನುಂಟು ಮಾಡಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಬೆಂಕಿ ಆಕಸ್ಮಿಕದಿಂದ ಮರಣ ಹೊಂದಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೩-೦೨-೨೦೦೯ ರಂದು ಮುಳಬಾಗಿಲು ಪಟ್ಟಣದ ಕುರುಬರಪೇಟೆ ವಾಸಿಯಾದ ಶೌಖತ್ ಅಲಿ ಎಂಬುವರು ಕುಡಿದ ಅಮಲಿನಲ್ಲಿ ಟೇಬಲ್ ಮೇಲೆ ಇಟ್ಟಿದ್ದ ಸೀಮೆಎಣ್ಣೆ ದೀಪವನ್ನು ಕೆಳಕೆ ತಳ್ಳಿ ಬೀಡಿ ಕುಡಿಯಲು ಬೆಂಕಿಕಡ್ಡಿಯನ್ನು ಹಚ್ಚಿದಾಗ, ಬೆಂಕಿ ಅಂಟಿಕೊಂಡು ಸುಟ್ಟಗಾಯಗಳಾಗಿದ್ದು ಕೋಲಾರದ ಎಸ್.ಎನ್.ಆರ್‍.ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಯಾಗಿದೆ ಮೃತಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೮

-ಸ್ಥಳ ದಂಡ ಮೊತ್ತ: ರೂ.೨,೩೦೦/-

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೦ ನೇ ಫೆಬ್ರವರಿ ೨೦೦೯

February 19, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೦-೦೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಗೌನಿಪಲ್ಲಿ ಪೊಲೀಸ್ ಠಾನೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ನಕ್ಕಲಗಡ್ಡ ಗ್ರಾಮದ ಏಡಗರಮ್ಮ ದೇವಾಲಯದಲ್ಲಿ ಕಳವು ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೯-೦೨-೨೦೦೯ ರಂದು ರಾತ್ರಿ ದೇವಾಲಯದ ಒಳಗೆ ಪ್ರವೇಶಿಸಿದ ಯಾರೋ ಕಳ್ಳರು ಒಂದು ಚಿನ್ನದ ತಾಳಿ, ಬೆಳ್ಳಿ ನಾಣ್ಯಗಳು, ಬೆಳ್ಳಿ ಕಿರೀಟ ಇತ್ಯಾದಿ ಒಟ್ಟು ರೂ, ೭,೦೦೦/ ಬೆಲೆ ಬಾಳುವ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಗೌರಿಪೇಟೆಯ ವಾಸಿ ಆರ್‍.ಕೆ.ಮಂಜುಳಾ ಎಂಬುವರಿಗೆ ಸೇರಿದ ಟಿ.ವಿ.ಎಸ್ ಸೂಪರ್‍ ಎಕ್ಸ್.ಎಲ್ ಸಂಖ್ಯೆ ಕೆಎ-೦೭-ಕೆ-೩೪೭೪ ದ್ವಿಚಕ್ರವಾಹನ ಕಳುವಾಗಿರುತ್ತದೆ. ದಿನಾಂಕ ೧೪-೦೧-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಆರ್‍.ಕೆ.ಮಂಜುಳಾ ರವರು ತಮ್ಮ ದ್ವಿಚಕ್ರವಾಹನವನ್ನು ಕೋಲಾರ ನಗರ ಕೆ.ಎಸ್.ಆರ್‍.ಟಿ.ಸಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿ ಕಾಫಿ ಕುಡಿಯುವ ಸಲುವಾಗಿ ಹೋಟೆಲಿಗೆ ಹೋಗಿದ್ದು ಈ ಸಮಯದಲ್ಲಿ ಯಾರೋ ಕಳ್ಳರು ದ್ವಿಚಕ್ರವಾಹನವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ದ್ವಿಚಕ್ರವಾಹನದ ಬೆಲೆ ರೂ. ೯,೪೦೦/ ಆಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಕೋಲಾರ ನಗರದ ಅಂಬೇಡ್ಕರ್‍ ನಗರದಲ್ಲಿ ಕೃತ್ಯ ಸಂಭವಿಸಿರುತ್ತದೆ. ಅಂಬೇಡ್ಕರ್‍ ನಗರದ ವಾಸಿ ಚಲಪತಿ ಎಂಬುವರ ತಂಗಿಯಾದ ಚಂದ್ರಕಲಾ ಎಂಬುವರಿಗೆ ಸುಬ್ರಮಣಿ ಎಂಬುವರೊಡನೆ ಈಗ್ಗೆ ೫ ವರ್ಷಗಳ ಹಿಂದೆ ವಿವಾಹವಾಗಿದ್ದು ಅಂದಿನಿಂದಲೂ ಕೋಲಾರದ ಅಂಬೇಡ್ಕರ್‍ ನಗರದಲ್ಲಿ ವಾಸವಾಗಿದ್ದರು.  ಮದುವೆಯಾದಾಗಿನಿಂದ ಸುಬ್ರಮಣಿ ತನ್ನ ಹೆಂಡತಿ ಚಂದ್ರಕಲಾ ರವರಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದು ಇದರ ಬಗ್ಗೆ ಆಗಾಗ್ಗ ರಾಜಿ ಪಂಚಾಯ್ತಿ ಮಾಡಲಾಗುತ್ತಿದ್ದು ದಿನಾಂಕ ೧೮-೦೨-೨೦೦೯ ರಂದು ಚಂದ್ರಕಲಾರವರು ತನ್ನ ಮೈಗೆ ಬೆಂಕಿ ಹಚ್ಚಿಕೊಂಡಿರುತ್ತಾರೆ. ಇದರ ಪರಿಣಾಮ ಚಂದ್ರಕಲಾರವರ ಮುಖ ಮತ್ತು ಕೈಕಾಲುಗಳು ಸುಟ್ಟು ಹೋಗಿದ್ದು ತನ್ನ ಗಂಡ ನೀಡಿದ ಹಿಂಸೆಯನ್ನು ತಾಳಲಾರದೇ ಈ ಕೃತ್ಯ ಎಸಗಿಕೊಂಡಿರುವುದಾಗಿ ಚಲಪತಿ ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೦೨-೨೦೦೯ ರಂದು ೦೯೪೫ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಟೌನ್ ನಸೀಮ ಮೆಮೋರಿಯಲ್ ಶಾಲೆಯ ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಹೈದರಾಲಿ ಮೊಹಲ್ಲಾದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹೀದಾ ಎಂಬ ಹುಡುಗನಿಗೆ ಡಿಕ್ಕಿ ಹೊಡೆದಿರುತ್ತಾನೆ, ಇದರ ಪರಿಣಾಮ ಬಾಲಕನಿಗೆ ಗಾಯಗಳುಂಟಾಗಿರುತ್ತದೆ.

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೦೨-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಎನ್.ಗೊಲ್ಲಹಳ್ಳಿ ಗ್ರಾಮದ ವಾಸಿ ವೆಂಕಟಪ್ಪ (೫೦) ಎಂಬುವರು ತಮ್ಮ ಮಗ ರಾಜೇಶ ಎಂಬುವರೊಡನೆ ಹೀರೋಹೋಂಡಾ ಸ್ಪ್ಲೆಂಡರ್‍ ಸಂಖ್ಯೆ ಕೆಎ-೦೩-ಇಟಿ-೭೨೮೮ ದ್ವಿಚಕ್ರವಾಹನದಲ್ಲಿ ಕೋಲಾರಕ್ಕೆ ಬರುವ ಸಲುವಾಗಿ ಆರ್‍.ಎಂ.ಸಿ ಯಾರ್ಡ್ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಹಿಂದಿನಿಂದ ಬಂದ ಗೂಡ್ಸ್ ಟೆಂಪೋ ಸಂಖ್ಯೆ ಕೆಎ-೦೫-ಎಬಿ-೩ ವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಿಗೆ ಗಾಯಗಳುಂಟಾಗಿದ್ದು ಪ್ರಸ್ತುತ ಕೋಲಾರ್‍ ಎಸ್.ಎನ್.ಆರ್‍ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ  

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಜಗಳ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ದಕ್ಕೆ ಉಂಟು ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೧೯-೦೨-೨೦೦೯ ರಂದು ೧೬೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಟೌನ್ ಹೈದರಾಲಿ ಮೊಹಲ್ಲಾದ ವಾಸಿ ಸಲೀಂಪಾಷ ಮತ್ತು ಇತರೇ ೫ ಜನರು ತಮ್ಮ ಮೊಹಲ್ಲಾದಲ್ಲಿ ಪರಸ್ಪರ ಜಗಳ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿರುತ್ತಾರೆ. ಗಸ್ತಿನಲ್ಲಿದ್ದ ಶ್ರೀನಿವಾಸಪುರ ಪೊಲೀಸ್ ಠಾಣೆಯ ಪೇದೆ ೧೭೧, ಷೇಕ್ ಹುಸೇನ್ ರವರು ಆರೋಪಿಗಳನ್ನು ಹಾಜರು ಪಡಿಸಿ ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.  ಶ್ರೀನಿವಾಸಪುರ ತಾಲೂಕು ವೈ.ಹೊಸಕೋಟೆ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೧-೨೦೦೯ ರಂದು ೨೧೩೦ ಗಂಟೆ ಸಮಯದಲ್ಲಿ ವೈ.ಹೊಸಕೋಟೆ ಗ್ರಾಮದ ವಾಸಿ ಎಂ.ವೆಂಕಟಸ್ವಾಮಿ ಎಂಬುವರ ಮೇಲೆ ಅದೇ ಗ್ರಾಮದ ವಾಸಿಗಳಾದ ಎಂ.ನಾರಾಯಣಸ್ವಾಮಿ, ನಾರಾಯಣರೆಡ್ಡಿ, ಎಂ.ವೆಂಕಟರಾಮ ಎಂಬುವರು ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು, ಜಾತಿನಿಂದನೆ ಮಾಡಿ ಹಲ್ಲೆ ನಡೆಸಿ ಪ್ರಾಣಬೆದರಿಕೆ ಹಾಕಿರುತ್ತಾರೆ. ಅಲ್ಲದೇ ವೆಂಕಟಸ್ವಾಮಿ ರವರ ಮನೆಯ ಮುಂದೆ ಇದ್ದ ಹುಲ್ಲಿನ ಮೆದೆಗೆ ಬೆಂಕಿ ಇಟ್ಟು ನಷ್ಠ ಉಂಟು ಮಾಡಿರುತ್ತಾರೆ. ಹಣದ ವಿಚಾರದಲ್ಲಿ ಪರಸ್ಪರರ ನಡುವಿನ ದ್ವೇಷ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ     

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ದೊಡ್ಡಶಿವಾರ ಗ್ರಾಮದ ವಾಸಿ ಇಂದ್ರಮ್ಮ ಎಂಬುವರ ೧೮ ವರ್ಷದ ಮಗಳಾದ ಆರ್‍.ಗೀತಾ ಎಂಬುವರು ಕಾಣೆಯಾದ ಹಡುಗಿ. ದಿನಾಂಕ ೧೫-೦೨-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಬಳೆ ತೆಗೆದುಕೊಂಡು ಬರಲು ಹೊರಟ ಆರ್‍.ಗೀತಾ ರವರು ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾರೆ.  

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೧೪

-ಸ್ಥಳ ದಂಡ ಮೊತ್ತ: ರೂ. ೨೦೦೦/

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.