ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೧-೦೪-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
ವೇಮಗಲ್ ಪೊಲೀಸ್ ಠಾಣೆಯಲ್ಲಿ ಕಳವುಮಾಡುವ ಉದ್ದೇಶದಿಂದ ನಿಧಿಶೋಧನೆ ಮಾಡಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೩-೨೦೦೯ ರಂದು ಕೋಲಾರ ತಾಲೂಕು ಕಾಜಿಕಲ್ಲಹಳ್ಳಿ ಗ್ರಾಮದ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಬೆಟ್ಟದಲ್ಲಿ ರವಿ, ಕೃಷ್ಣಪ್ಪ, ರಾಮಪ್ಪ, ಅಮರೇಶ ಮತ್ತು ಶಂಕರಪ್ಪ ಎಂಬುವರು ಕಳ್ಳತನ ಮಾಡುವ ಉದ್ದೇಶದಿಂದ ಭೂಮಿಯನ್ನು ಅಗೆದು ನಿಧಿಶೋಧನೆ ಮಾಡಿರುತ್ತಾರೆ. ಈ ಬಗ್ಗೆ ಕಾಜಿಕಲ್ಲಹಳ್ಳಿ ಗ್ರಾಮದ ವಾಸಿ ನಂದೀಶರವರು ದೂರು ನೀಡಿರುತ್ತಾರೆ.
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೩೧-೦೩-೨೦೦೯ ರಂದು ೨೨೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಪುಣ್ಯಹಳ್ಳಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರಿಗೆ ಅದೇ ಗ್ರಾಮದ ವಾಸಿ ಸುಬ್ರಮಣಿ ಎಂಬುವರು ಮಕ್ಕಳು ಗಲಾಟೆ ಮಾಡಿಕೊಂಡ ವಿಚಾರದಲ್ಲಿ ಜಗಳ ತೆಗೆದು ಕಲ್ಲಿನಿಂದ ನಾರಾಯಣಸ್ವಾಮಿ ರವರ ಮುಖಕ್ಕೆ ಹೊಡೆದ ಪರಿಣಾಮ ನಾಲ್ಕು ಹಲ್ಲುಗಳು ಉದುರಿಬಿದ್ದು ರಕ್ತಗಾಯವಾಗಿರುತ್ತದೆ.
ಇತರೆ: ೦೩
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೩-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಬಂಬಡಿ ನಗರದ ಗ್ರಾಮದ ವಾಸಿ ಪೀರ್ ಸಾಬ್ (೪೫) ಎಂಬುವರು ತನ್ನ ಪೆಟ್ಟಿಗೆ ಅಂಗಡಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಭಾವುಟವನ್ನು ಹಾಕಿ ನೀತಿಸಂಹಿತೆ ಉಲ್ಲಂಘನೆ ಮಾಡಿರುತ್ತಾರೆ. ಈ ಬಗ್ಗೆ ಕೋಲಾರ ವಿಭಾಗ ಗಣೀ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿಯಾದ ನಾಗರಾಜ.ಎಸ್.ಅರ್ ರವರು ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣವು ಕೋಲಾರ ಸಹಾಯಕ ಕಮೀಷನರ್ ರವರಾದ ಶ್ರೀಮತಿ ಅರ್ಚನಾ ರವರು ನೀಡಿದ ದೂರಿನ ಆಧಾರದ ಮೇರೆಗೆ ದಾಖಲಾಗಿರುತ್ತದೆ. ದಿನಾಂಕ ೨೫-೦೩-೨೦೦೯ ರಂದು ಕೋಲಾರ ನಗರ ಸ್ಟೇಡಿಯಂ ಆವರಣದ ಬಳಿ ಕಾಂಗ್ರೆಸ್ ಪಕ್ಷದ ಮೆರವಣಿಗೆಗೆ ಆಗಮಿಸಿದ್ದ ವಾಹನಗಳ ಮೇಲೆ ಪಕ್ಷದ ಬ್ಯಾನರ್ ಮತ್ತು ಭಾವುಟಗಳನ್ನು ಹಾರಿಸಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿರುತ್ತದೆ.
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಮತ್ತೊಂದು ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣವು ಕೋಲಾರ ಸಹಾಯಕ ಕಮೀಷನರ್ ರವರಾದ ಶ್ರೀಮತಿ ಅರ್ಚನಾ ರವರು ನೀಡಿದ ದೂರಿನ ಆಧಾರದ ಮೇರೆಗೆ ದಾಖಲಾಗಿರುತ್ತದೆ. ದಿನಾಂಕ ೨೫-೦೩-೨೦೦೯ ರಂದು ಕೋಲಾರ ನಗರ ಜೂನಿಯರ್ ಕಾಲೇಜ್ ಆವರಣದ ಬಳಿ ಬಿ.ಜೆ.ಪಿ ಪಕ್ಷದ ಯುವಮೋರ್ಚಾ ಸಮಾವೇಶಕ್ಕೆ ಆಗಮಿಸಿದ್ದ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಿ ಆಮಿಷ ಒಡ್ಡಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿರುತ್ತದೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು:ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ೦೫
-ಸ್ಥಳ ದಂಡ ಮೊತ್ತ: ರೂ. ೮೦೦/-
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice
Posted by kolarpolice
Posted by kolarpolice



