ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೪-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ೦೧
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ತನ್ನ ಗಂಡ ಅನೈತಿಕ ಸಂಬಂಧ ಹೊಂದಿದ್ದಾನೆಂಬ ಕಾರಣಕ್ಕೆ ಹೆಂಡತಿಯೇ ತನ್ನ ಮಗಳೊಡನೆ ಸೇರಿಕೊಂಡು ಗಂಡನನ್ನು ಕೊಲೆಗೈದ ಘಟನೆ ಕೋಲಾರ ತಾಲೂಕು ಅಮ್ಮೇರಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ಗುರುಮೂರ್ತಪ್ಪ (೫೦) ಎಂಬುವರು ಕೊಲೆಗೀಡಾದ ವ್ಯಕ್ತಿ. ದಿನಾಂಕ ೨೯-೦೪-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ತಮ್ಮ ವಾಸದಮನೆಯಲ್ಲಿ ಯಾವುದೋ ಒಂದು ಆಯುಧದಿಂದ ಗುರುಮೂರ್ತಪ್ಪ ರವರ ಕುತ್ತಿಗೆ, ಎಡಭುಜ ಮತ್ತು ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಲಾಗಿರುತ್ತದೆ. ಗುರುಮೂರ್ತಪ್ಪ ಹೊಂದಿದ್ದ ಅನೈತಿಕ ಸಂಬಂಧವೇ ಕೊಲೆಗೆ ಕಾರಣವಾಗಿರುವುದಾಗಿ ತಿಳಿದು ಬಂದಿರುತ್ತದೆ.
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಮುದ್ದೇರಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೮-೦೪-೨೦೦೯ ರಂದು ೧೨00 ಗಂಟೆ ಸಮಯದಲ್ಲಿ ಮುದ್ದೇರಿ ಗ್ರಾಮದ ವಾಸಿ ಮುನಿಯಪ್ಪ.ಟಿ.ಎಂ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ರಾಮಚಂದ್ರಪ್ಪ, ಸುಬ್ರಮಣಿ, ನಾರಾಯಣಸ್ವಾಮಿ, ಗಂಗಾಧರ, ಬಾಬು, ನಾರಾಯಣಪ್ಪ ಮತ್ತು ಅಬ್ಬಯ್ಯಪ್ಪ ಎಂಬುವರು ಅಕ್ರಮಗುಂಪು ಕೈಗಳಿಂದ ಮತ್ತು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ. ಪರಸ್ಪರರ ನಡವೆ ಇದ್ದ ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
ಹಲ್ಲೆ: ೦೧
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಅಜ್ಜಪ್ಪನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೮-೦೪-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಬೆಂಗಳೂರಪ್ಪ ಎಂಬುವರ ಮೇಲೆ ಜಮೀನು ವಿಚಾರದಲ್ಲಿ ಜಗಳ ತೆಗೆದ ಚಿಕ್ಕಣ್ಣ ಮತ್ತು ಚನ್ನಕೃಷ್ಣಪ್ಪ ಎಂಬುವರು ದೊಣ್ಣೆಯಿಂದ ತಲೆಗೆ ಕಾಲಿಗೆ ಹೊಡೆದು ಗಾಯಪಡಿಸಿರುತ್ತಾರೆ. ಚಿಕಿತ್ಸೆಗಾಗಿ ಕೋಲಾರದ ಎಸ್ಎನ್ಆರ್ ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಬೂಸಾಲಕುಂಟೆ ಗ್ರಾಮದ ಕೆರೆಯ ನೀರಿನಲ್ಲಿ ಸುಮಾರು ೩೫ ರಿಂದ ೪೦ ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುತ್ತದೆ. ದಿನಾಂಕ ೨೯-೦೪-೨೦೦೯ ರಂದು ೧೨೦೦ ಗಂಟೆ ಸಮಯದಲ್ಲಿ ಮೃತದೇಹವನ್ನು ಕಂಡ ನಾರಾಯಣಪ್ಪ ಎಂಬುವರು ದೂರು ನೀಡಿದ್ದು ಮೃತವ್ಯಕ್ತಿ ಆಕಸ್ಮಿಕವಾಗಿ ಕಾಲುಜಾರಿ ಕೆರೆಯ ನೀರಲ್ಲಿ ಬಿದ್ದು ಮೃತಪಟ್ಟಿರಬಹುದಾಗಿ ಶಂಕೆ ವ್ಯಕ್ತವಾಗಿರುತ್ತದೆ.
ವ್ಯಕ್ತಿ ಕಾಣೆ ಪ್ರಕರಣಗಳು: ೦೨
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ರೋಣೂರು ಗ್ರಾಮದ ವಾಸಿ ಶೇಷಪ್ಪ ಎಂಬುವರ ಪುತ್ರಿ ಆರ್.ಎಸ್.ನಂದಿನಿ (೧೭) ಕಾಣೆಯಾದ ಹುಡುಗಿ. ದಿನಾಂಕ ೨೬-೦೪-೨೦೦೯ ರಂದು ರಾತ್ರಿ ತನ್ನ ಮನೆಯಿಂದ ಹೊರಟ ಆರ್.ಎಸ್.ನಂದಿನಿ ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾಳೆ.
ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಬಚ್ಚಿರೆಡ್ಡಿಗಾರಿಪಲ್ಲಿ ಗ್ರಾಮದ ವಾಸಿ ಲಕ್ಷ್ಮಿದೇವಮ್ಮ ಎಂಬುವರು ಕಾಣೆಯಾದ ಮಹಿಳೆ. ದಿನಾಂಕ ೨೯-೦೪-೦೦೯ ರಂದು ತನ್ನ ಮನೆಯಿಂದ ಹೊರಟ ಲಕ್ಷ್ಮಿದೇವಮ್ಮ ರವರು ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾರೆ. ಈ ಬಗ್ಗೆ ಲಕ್ಷ್ಮಿದೇವಮ್ಮ ರವರ ಪತಿ ವೇಮನಾರಾಯಣ ಎಂಬುವರು ದೂರು ನೀಡಿದ್ದು ಎದುರು ಮನೆಯ ವಾಸಿ ಸೀನಪ್ಪ ಎಂಬುವರ ಮೇಲೆ ಅನುಮಾನವಿರುವುದಾಗಿ ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು:
-ಸ್ಥಳ ದಂಡ ಮೊತ್ತ: ರೂ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice
Posted by kolarpolice
Posted by kolarpolice



