ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೦೫-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಚಉಕ್ಕಪದ್ಮಘಟ್ಟ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೦-೦೫-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಪದ್ಮನಾಭಘಟ್ಟ ಗ್ರಾಮದ ವಾಸಿ ವಿಶ್ವನಾಥ ಮತ್ತು ಇವರ ತಮ್ಮ ಪ್ರಕಾಶ್ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿ ವೆಂಕಟರಾಮಯ್ಯ ಮತ್ತಿತರೇ ಮೂವರು ಅಕ್ರಮಗುಂಪು ಕಟ್ಟಿಕೊಂಡು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಹಳೇ ವೈಷಮ್ಯ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
ಹಲ್ಲೆ: ೦೩
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ಟೌನ್ ಕೆ.ಇ.ಬಿ ವೃತ್ತದ ಬಳಿ ಕೃತ್ಯ ಸಂಭವಿಸಿರುತ್ತದೆ. ಖಾಸಗಿ ಬಸ್ಸಿನ ಕಂಡಕ್ಟರ್ ರಾಜಣ್ಣ ಎಂಬುವರ ಮೇಲೆ ಜಗಳ ತೆಗೆದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ನಂದಕುಮಾರ್ ಎಂಬುವರು ಕೈಗಳಿಂದ ಹೊಡೆದು ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಬಸ್ಸಿಗೆ ಜನರನ್ನು ಹತ್ತಿಸಿಕೊಳ್ಳುವ ವಿಚಾರದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.ಈ ಬಗ್ಗೆ ಇಬ್ಬರೂ ಜಗಳವಾಡಿ ಹೊಡೆದಾಡಿಕೊಂಡಿದ್ದು ದೂರು ಮತ್ತು ಪ್ರತಿದೂರು ಬಂದ ಹಿನ್ನೆಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಮಾರೇನಹಳ್ಳಿ ಕ್ರಾಸ್ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೯-೦೫-೨೦೦೯ ರಂದು ೧೫೨೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಟೌನ್ ವಾಸಿಗಳಾದ ರಾಜಾರಾಂ ಮತ್ತಿವರ ಮಗ ರವಿ ಎಂಬುವರ ಮೇಲೆ ಜಗಳ ತೆಗೆದ ಕೋಲಾರ ತಾಲೂಕು ಹೋಳೂರು ಗ್ರಾಮದ ವಾಸಿಗಳಾದ ಲಕ್ಷ್ಮಿನಾರಾಯಣ ಪ್ರಭಾಕರ ಮತ್ತು ಹರಿ ಎಂಬುವರು ದೊಣ್ಣೆ ಮತ್ತು ಕೈಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಆಸ್ತಿವಿಚಾರವಾಗಿ ಪರಸ್ಪರರಿಗೆ ಇದ್ದ ದ್ವೇಷ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.
ಇತರೆ: ೦೧
ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ವೈಧ್ಯರ ನಿರ್ಲಕ್ಷತೆಯಿಂದ ಸಾವು ಸಂಬಂವಿಸಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೭-೦೪-೨೦೦೯ ರಂದು ಬಂಗಾರುಪೇಟೆ ತಾಲೂಕು ಅತ್ತಿಗೆರೆ ಗ್ರಾಮದ ವಾಸಿ ಎಂ.ವಿ.ಮಂಜುನಾಥ ಎಂಬುವರು ಪತ್ನಿ ಶ್ರೀಮತಿ ಶಾರದ ಎಂಬುವರನ್ನು ಹೆರಿಗೆಗಾಗಿ ಕೋಲಾರ ಎಸ್.ಎನ್.ಆಸ್ಪತ್ರೆಗೆ ದಾಖಲಿಸಿದ್ದು, ವೈಧ್ಯಾಧಿಕಾರಿಯಾದ ಶ್ರೀಮತಿ ಸುಧಾಮಣಿ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿದ್ದು, ೧೫ ದಿನಗಳ ನಂತರ ಮತ್ತೆ ಹೊಟ್ಟೆನೋವು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದು. ಅಲ್ಲಿಯೂ ಸಹ ೨ ಬಾರಿ ಶಸ್ತ್ರ ಚಿಕಿತ್ಸೆ ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ ೩೦-೦೫-೨೦೦೯ ಬೆಳಗಿನ ಜಾವ ಮೃತಪಟ್ಟಿದ್ದು ಇದಕ್ಕೆ ಎಸ್.ಎನ್.ಆರ್.ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿದ ವೈಧ್ಯಾಧಿಕಾರಿಯಾದ ಶ್ರೀಮತಿ ಸುಧಾಮಣಿ ರವರ ನಿರ್ಲಕ್ಷತನವೆ ಕಾರಣವಾಗಿರುತ್ತದೆ ಎಂದು ಮಂಜುನಾಥ ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು:
-ಸ್ಥಳ ದಂಡ ಮೊತ್ತ: ರೂ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice
Posted by kolarpolice
Posted by kolarpolice



