ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೬-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ದೇವಸ್ಥಾನದಲ್ಲಿ ಹುಂಡಿ ಕಳ್ಳತನಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೬-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ನಗರದಲ್ಲಿರುವ ಕೋಲಾರಮ್ಮ ದೇವಾಲಯದ ಬೀಗವನ್ನು ಮುರಿದು ಒಳಗೆ ಪ್ರವೇಶ ಮಾಡಿ ದೇವಸ್ಥಾನದ ಹುಂಡಿಯಲ್ಲಿದ್ದ ರೂ. ೧೦,೦೦೦/-ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ದೇವಸ್ಥಾನದ ಅರ್ಚಕರಾದ ಚಂದ್ರಶೇಖರ ದೀಕ್ಷಿತ್ ರವರು ದೂರನ್ನು ದಾಖಲಿಸಿರುತ್ತಾರೆ.
ಸಾಧಾರಣ ಕಳ್ಳತನ: ೦೪
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಎಸಿಎಸ್ಆರ್ ವೈರ್ ಕಳ್ಳತನಕ್ಕೆ ಸಂಬಂಧಿಸಿದಂತೆ ೪ ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತದೆ.
೧. ದಿನಾಂಕ ೦೬-೦೬-೨೦೦೯ ರ ರಾತ್ರಿ ಯಾರೋ ಕಳ್ಳರು ಮುಳಬಾಗಿಲು ತಾಲೂಕು ಬೀಮಾಪುರ ಗ್ರಾಮದ ಬಳಿ ರಾಮಯ್ಯ ಎಂಬುವರ ಪಂಪ್ಸೆಟ್ಗೆ ಅಳವಡಿಸಿದ್ದ ೭೨೦ ಮೀಟರ್ ಉದ್ದದ ಎಸಿಎಸ್ಆರ್ ವೈರ್ ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವೈರ್ನ ಬೆಲೆ ರೂ ೨೦,೮೮೮/- ಗಳಾಗಿರುತ್ತದೆ. ಈ ಬಗ್ಗೆ ಮಲ್ಲಯ್ಯ, ಕಿರಿಯ ಅಭಿಯಂತರರು, ಬೆಸ್ಕಾಂ, ಮುಳಬಾಗಿಲು ರವರು ದೂರನ್ನು ದಾಖಲಿಸಿರುತ್ತಾರೆ.
೨. ದಿನಾಂಕ ೧೨-೦೬-೨೦೦೯ ರ ರಾತ್ರಿ ಯಾರೋ ಕಳ್ಳರು ಮುಳಬಾಗಿಲು ತಾಲೂಕು ಎಸ್.ಐ.ಅನಂತಪುರ ಗ್ರಾಮದ ಬಳಿ ಸುರೇಂದ್ರ ಜಿ ಎಂಬುವರ ಪಂಪ್ಸೆಟ್ಗೆ ಅಳವಡಿಸಿದ್ದ ೬೬೬ ಮೀಟರ್ ಉದ್ದದ ಎಸಿಎಸ್ಆರ್ ವೈರ್ ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವೈರ್ನ ಬೆಲೆ ರೂ ೧೫,೦೮೬/- ಗಳಾಗಿರುತ್ತದೆ. ಈ ಬಗ್ಗೆ ಶಿವಶಂಕರ್, ಕಿರಿಯ ಅಭಿಯಂತರರು, ಆವಣಿ ಬೆಸ್ಕಾಂ ಶಾಖೆ, ಮುಳಬಾಗಿಲು ಉಪ-ವಿಭಾಗ ರವರು ದೂರನ್ನು ದಾಖಲಿಸಿರುತ್ತಾರೆ.
೩. ದಿನಾಂಕ ೧೭-೦೬-೨೦೦೯ ರ ರಾತ್ರಿ ಯಾರೋ ಕಳ್ಳರು ಮುಳಬಾಗಿಲು ತಾಲೂಕು ಜಮ್ಮುನಹಳ್ಳಿ ಗ್ರಾಮದ ಬಳಿ ವೆಂಕಟರಾಮಪ್ಪ ಎಂಬುವರ ಪಂಪ್ಸೆಟ್ಗೆ ಅಳವಡಿಸಿದ್ದ ೮೪೦ ಮೀಟರ್ ಉದ್ದದ ಎಸಿಎಸ್ಆರ್ ವೈರ್ ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವೈರ್ನ ಬೆಲೆ ರೂ ೨೭,೨೦೨/- ಗಳಾಗಿರುತ್ತದೆ. ಈ ಬಗ್ಗೆ ಮಲ್ಲಯ್ಯ, ಕಿರಿಯ ಅಭಿಯಂತರರು, ಬೆಸ್ಕಾಂ, ಮುಳಬಾಗಿಲು ರವರು ದೂರನ್ನು ದಾಖಲಿಸಿರುತ್ತಾರೆ.
೦೪. ದಿನಾಂಕ ೨೦-೦೬-೨೦೦೯ ರ ರಾತ್ರಿ ಯಾರೋ ಕಳ್ಳರು ಮುಳಬಾಗಿಲು ತಾಲೂಕು ಭಟ್ರಹಳ್ಳಿ ರಸ್ತೆ ಕಪ್ಪಲಮಡುಗು ಸಮೀಪ ಬೆಸ್ಕಾಂ ಇಲಾಖೆಯಿಂದ ಅಳವಡಿಸಿದ್ದ ರಾಬಿಟ್ ವೈರ್, ಎಸಿಎಸ್ಆರ್ ವೈರ್ ಮತ್ತು ಕಂಬಗಳಲ್ಲಿ ಅಳವಡಿಸಿದ್ದ ಇತರೆ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವೈರ್ನ ಬೆಲೆ ರೂ ೪೬,೪೩೨/- ಗಳಾಗಿರುತ್ತದೆ. ಈ ಬಗ್ಗೆ ಸುಬ್ರಮಣ್ಯಂ, ಕಿರಿಯ ಅಭಿಯಂತರರು, (ಓ & ಎಂ) ಬೆಸ್ಕಾಂ, ಮುಳಬಾಗಿಲು ರವರು ದೂರನ್ನು ದಾಖಲಿಸಿರುತ್ತಾರೆ.
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ
ರಸ್ತೆ ಅಪಘಾತಗಳು: ೦೫
-ಮಾರಣಾಂತಿಕ: ೦೧
ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೮-೦೬-೨೦೦೯ ರಂದು ಸಂಜೆ ಮಾಲೂರು ತಾಲೂಕು ಚಳಗನಹಳ್ಳಿ ಗ್ರಾಮದ ವಾಸಿ ಗಿಡ್ಡಪ್ಪ ಎಂಬುವರು ತನ್ನ ಟಿವಿಎಸ್ ಹೆವಿಡ್ಯೂಟಿ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಕೆ-೭೩೩೩ರಲ್ಲಿ ಮೈಲಾಂಡಹಳ್ಳಿ ಸಮೀಪ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ನೊಂದಣಿ ಸಂಖ್ಯೆ ಗೊತ್ತಿಲ್ಲದ ಟಾಟಾ ಸುಮೋ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ತಲೆಗೆ ಎದೆಗೆ ಗಾಯಗಳಾಗಿ ಚಿಕಿತ್ಸೆಗಾಗಿ ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ ೨೧-೦೬-೨೦೦೯ ರಂದು ೧೭೩೦ ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾನೆ.
-ಸಾಧಾರಣ: ೦೪
ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೬-೨೦೦೯ ರಂದು ೦೭೦೦ ಗಂಟೆ ಸಮಯದಲ್ಲಿ ಲಾರಿ ಸಂಖ್ಯೆ ಎಪಿ-೦೨-ಟಿ-೩೬೭೭ ರ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ರಾಷ್ಟ್ರೀಯ ಹೆದ್ದಾರಿ-೪ ಟಮಕ ಬೈಪಾಸ್ ಬಳಿ ಉರುಳಿಸಿರುತ್ತಾನೆ. ಪರಿಣಾಮ ಲಾರಿ ಚಾಲಕನಿಗೆ ಗಾಯಗಳಾಗಿ ಲಾರಿಯಲ್ಲಿದ್ದ ಗ್ರಾನೈಟ್ ಕಲ್ಲುಗಳು ಡ್ಯಾಮೇಜ್ ಆಗಿರುತ್ತದೆ.
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೬-೨೦೦೯ ರಂದು ೧೮೪೫ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಎನಮರೇಪಲ್ಲಿ ಗ್ರಾಮದ ವಾಸಿ ಶ್ರೀರಾಮಪ್ಪ ಮತ್ತು ಅತನ ಪತ್ನಿ ಲಕ್ಷ್ಮೀದೇವಮ್ಮ ಎಂಬುವರು ಪುಂಗನೂರು ಕ್ರಾಸ್ – ಎನಮರೇಪಲ್ಲಿ ಕ್ರಾಸ್ ಮಧ್ಯೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ನೊಂದಣಿ ಸಂಖ್ಯೆ ಗೊತ್ತಿಲ್ಲದ ದ್ವಿಚಕ್ರ ವಾಹನ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ಲಕ್ಷ್ಮೀದೇವಮ್ಮ ರವರಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಗಾಯಗಳಾಗಿರುತ್ತದೆ,
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೬-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಅರಾಭಿಕೊತ್ತನೂರು ಗ್ರಾಮದ ವಾಸಿ ವೆಂಕಟೇಶಪ್ಪ ಎಂಬುವರು ನಡೆದುಕೊಂಡು ಮನೆಗೆ ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಲ್ಯಾನ್ಕೋ ಇಟಾಚೀ ಜೆ.ಸಿ.ಬಿ. ವಾಹನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ವೆಂಕಟೇಶಪ್ಪ ರವರಿಗೆ ಡಿಕ್ಕಿ ಹೊಡೆಸಿದ ಪರಿಣಾಮ ಎದೆಗೆ ಗಾಯಗಳಾಗಿ ಚಿಕಿತ್ಸೆಗಾಗಿ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ,
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೬-೨೦೦೯ ರಂದು ೨೧೩೦ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ವಾಸಿ ಕೆ.ಎನ್.ಅಶ್ವಿನ್ ಎಂಬುವರು ತನ್ನ ಕಾರು ಸಂಖ್ಯೆ ಕೆಎ-೦೫-ಎಂಸಿ-೬೦೭ ರಲ್ಲಿ ರಾಷ್ಟ್ರೀಯ ಹೆದ್ದಾರಿ-೪ ಮಡೇರಹಳ್ಳಿ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಬೆಂಗಳೂರು ಕಡೆಯಿಂಧ ಬಂದ ಕಾರು ಸಂಖ್ಯೆ ಕೆಎಲ್-೦೧-ಎಎಫ್-೭೩೯೧ರ ಕಾರು ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿದ ಪರಿಣಾಮ ಎರಡು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು ಎರೆಡು ವಾಹನಗಳು ಜಖಂ ಗೊಂಡಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೩
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೦೬-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ನರಸಾಪುರ ಗ್ರಾಮದ ವಾಸಿ ನಾಗರಾಜ ಎಂಬುವರು ತನ್ನ ತಾಯಿಯೊಂದಿಗೆ ಕೋಲಾರ ತಾಲೂಕು ಗಟ್ಟಹಳ್ಳಿ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮದುವೆಗೆ ಹೋಗಿದ್ದರು. ಆ ಸಮಯದಲ್ಲಿ ಅವರ ತಾಯಿ ಪಕ್ಕದ ಮಾವಿನ ತೋಪಿಗೆ ಮೂತ್ರವಿಸರ್ಜನೆಗಾಗಿ ಹೋಗಿದ್ದರು. ಕಾವಲುಗಾರನಾದ ಶ್ರೀರಾಮಪ್ಪ ವಿನಾಕಾರಣ ಜನಗಳ ತೆಗೆದು ನಾಗರಾಜ ರವರ ತಾಯಿಗೆ ಹೊಡೆಯುತ್ತಿದ್ದ, ಕೇಳಿದ್ದಕ್ಕೆ ಮಚ್ಚನಿಂದ ಬೀಸಿ ನಾಗರಾಜ ರವರ ಕೈಗೆ ಹೊಡೆದು ಗಾಯಪಡಿಸಿರುತ್ತಾನೆ. ಚಿಕಿತ್ಸೆಗಾಗಿ ಕೋಲಾರದ ಎಸ್ಎನ್ಆರ್ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ವೇಮಗಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೬-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕ್ಯಾಲನೂರು ಗ್ರಾಮದ ವಾಸಿ ರಾಘವೇಂದ್ರ ಎಂಬುವರು ಕುಡಿದ ಅಮಲಿನಲ್ಲಿ ಕೈಯಲ್ಲಿ ಚಾಕು ಹಿಡಿದುಕೊಂಡು ಗಲಾಟೆ ಮಾಡುತ್ತಿದ್ದನು. ಇದನ್ನು ಕೇಳಿದ ಆನಂದ ಎಂಬವರಿಗೆ ಚಾಕುವಿನಿಂದ ಇರಿದು ರಕ್ತಗಾಯಪಡಿಸಿ ಅವಾಚ್ಚಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ. ಚಿಕಿತ್ಸೆಗಾಗಿ ಕೋಲಾರದ ಎಸ್ಎನ್ಆರ್ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೦-೦೬-೨೦೦೯ ರಂದು ಕೋಲಾರ ತಾಲೂಕು ಶೆಟ್ಟಿಕೊತ್ತನೂರು ಗ್ರಾಮದ ವಾಸಿ ಮುನಿಯಪ್ಪ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಮಾವಿನ ಗಿಡಗಳಲ್ಲಿನ ಫಸಲನ್ನು ಅದೇ ಗ್ರಾಮದ ವಾಸಿಗಳಾದ ಈಶ್ವರಪ್ಪ ಮತ್ತು ಇತರೆ ೫ ಜನರು ಕೀಳುತ್ತಿದ್ದು ಕೇಳಿದ್ದಕ್ಕೆ ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ೧೮
-ಸ್ಥಳ ದಂಡ ಮೊತ್ತ: ೨,೦೦೦/-
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.