ದಿನದ ಅಪರಾಧಗಳ ಪಕ್ಷಿನೋಟ ೧೦ನೇ ಆಗಸ್ಟ್ ೨೦೦೯

July 31, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೧-೦೮-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಎ.ಟಿ.ಎಂ ನಲ್ಲಿ ಹಣ ಕಳ್ಳತನಕ್ಕೆ ಪ್ರಯತ್ನ ಪಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೭-೨೦೦೯ ರಂದು ರಾತ್ರಿ ಮುಳಬಾಗಿಲು ಪಟ್ಟಣದ ಎಂ.ಸಿ.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಅಳವಡಿಸಿರುವ ಎಟಿಎಂ ಕೇಂದ್ರದಲ್ಲಿ ಎಟಿಎಂ ಯಂತ್ರವನ್ನು ಹೊಡೆದು ಹಾಕಿ ಹಣ ಕಳ್ಳತನ ಮಾಡಲು ಪ್ರಯತ್ನ ಪಟ್ಟಿರುತ್ತಾರೆ. ಈ ಬಗ್ಗೆ ಬ್ಯಾಂಕಿನ ಮ್ಯಾನೇಜರ್‍ ಪಿ.ಎಸ್.ಸತ್ಯಮೂರ್ತಿ ಎಂಬುವರು ದೂರನ್ನು ದಾಖಲಿಸಿರುತ್ತಾರೆ,

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು:  ಇಲ್ಲ 

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೮೦೭-೨೦೦೯ ರಂದು ೧೬೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ಕುರುಬರಪೇಟೆ ವಾಸಿಗಳಾದ ಶ್ರೀಮತಿ ರಮಾ ಮತ್ತು ಅವರ ಮಗ ಭರತ್ ರವರ ತಮ್ಮ ಖಾಲಿ ನಿವೇಶನದ ಬಳಿ ಇದ್ದರು. ಆ ಸಮಯದಲ್ಲಿ ಅದೇ ಪೇಟೆಯ ವಾಸಿಗಳಾದ ಮುನಿಪರಸಯ್ಯ ಮತ್ತು ಅರುಣ್ ಎಂಬುವರು ಖಾಲಿ ನಿವೇಶನದಲ್ಲಿ ಅತಿಕ್ರಮ ಪ್ರವೇಶ ಮಾಡಿ ಅವಾಚ್ಚಶಬ್ದಗಳಿಂದ ಬೈದು ಕೈಗಳಿಂದ ಮುಖದ ಮೇಲೆ ಗುದ್ದಿ ರಕ್ತಗಾಯಪಡಿಸಿ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿರುತ್ತಾರೆ.

ಇತರೆ:  ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಆಸ್ವಾಭಾವಿಕ ಸಾವಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೭-೨೦೦೯ ರಂದು ರಾತ್ರಿ ವೈ.ಜಯರಾಜು, ಚಾಲಕ, ಕೆಎಸ್‌ಆರ್‌ಟಿಸಿ, ಶ್ರೀನಿವಾಸಪುರ ಘಟಕ ರವರು ವಿಶ್ರಾಂತಿಗೆಂದು ಬಸ್ಸಿನಲ್ಲಿ ಮಲಗಿದ್ದವರು ಮೃತಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೨೨  

-ಸ್ಥಳ ದಂಡ ಮೊತ್ತ:  ರೂ. ೩,೨೦೦/-

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೧ನೇ ಜುಲ್ಯೆ ೨೦೦೯

July 30, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೩೧-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೭-೨೦೦೯ ರಂದು ೧೪೦೦ ರಂದು ೧೪೦೦ ಗಂಟೆ ಸಮಯದಲ್ಲಿ ಯಾರೋ ಕಳ್ಳರು ಕೋಲಾರ ತಾಲೂಕು ಕೋಡಿಕಣ್ಣೂರು ಗ್ರಾಮದ ವಾಸಿ ಎನ್.ವಿಜಯ ಸಾರಥಿ ಎಂಬುವರ ಹೀರೋ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಎಲ್-೭೦೫೧ನ್ನು ಕೋಲಾರ ನಗರದ ಮುನೇಶ್ವರನಗರದ ಅವರ ಅಕ್ಕನ ಮನೆಯ ಮುಂದೆ ನಿಲ್ಲಿಸಿದ್ದನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಇದರ ಬೆಲೆ ರೂ. ೩೩,೬೦೦/- ಗಳಾಗಿರುತ್ತದೆ.  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ೦೧

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಕಲಿ ಕೈ ಗಡಿಯಾರ ತಯಾರು ಮಾಡಿ ಕಂಪನಿಗೆ ಮೋಸ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೭-೨೦೦೯ಕ್ಕೆ ಹಿಂದೆ ಕೋಲಾರ ನಗರದ ರಹಮತ್‌ನಗರದ ಎಸ್‌.ಆರ್‌.ಎಸ್.ವಾಚ್ ಅಂಗಡಿಯಲ್ಲಿ ಟೈಟಾನ್ ಕಂಪನಿಯ ಕೈಗಡಿಯಾರಗಳನ್ನು ಅಸಲಿಗೆ ಹೋಲಿಕೆಯಾಗುವಂತೆ ನಕಲಿ ಕೈಗಡಿಯಾರಗಳನ್ನು ತಯಾರು ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡಿ ಮೋಸ ಮತ್ತು ಕಂಪನಿಗೆ ನಷ್ಟವನ್ನುಂಟು ಮಾಡಿರುತ್ತಾರೆ. ಈ ಬಗ್ಗೆ ಶ್ರೀ ಲವಕುಮಾರ್‍, ಇನ್‌ವೆಸ್ಟೀಗೇಷನ್ ಆಫೀಸರ್‍, ಮೆ. ಇ.ಐ.ಪಿ.ಆರ್‍(ಇಂಡಿಯಾ) ಲಿ. ಬೆಂಗಳೂರು ರವರು ದೂರನ್ನು ನೀಡಿದ್ದು ರೂ. ೧೫,೦೦೦/- ಬೆಲೆ ಬಾಳುವ ನಕಲಿ ಕೈಗಡಿಯಾರ ಮತ್ತು ಇತರೆ ವಸ್ತುಗಳನ್ನು ಅಮಾನತ್ತು ಪಡಿಸಿರುತ್ತಾರೆ. 

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ೦೧

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಕಲಿ ಕ್ರಾಂಪ್ಟನ್ ಗ್ರೇವ್ ಪಾಲಿಸ್ಟರ್‍ ಬಲಾಸ್ಟ್‌  ಲಾಂಛನವನ್ನು  ಬಳಸಿಕೊಂಡು ಟೂಬ್‌ ಲೈಟ್‌ನ ಚೌಕ್‌ಗಳನ್ನು ನಕಲಿಯಾಗಿ ತಯಾರು        ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೭-೨೦೦೯ಕ್ಕೆ ಹಿಂದೆ ಕೋಲಾರ ನಗರದ ಬಂಬೂ ಬಜಾರ್‍ ನಲ್ಲಿರುವ ಕಿಸಾನ್ ಎಲೆಕ್ಟ್ರಿಕಲ್ಸ್‌  ಅಂಗಡಿಯಲ್ಲಿ  ಕ್ರಾಂಪ್ಟನ್ ಗ್ರೇವ್ ಪಾಲಿಸ್ಟರ್‍ ಬಲಾಸ್ಟ್‌ ಅನ್ನು ಅಸಲಿಗೆ ಹೋಲಿಕೆಯಾಗುವಂತೆ ನಕಲಿ ಟೂಬ್‌ ಲೈಟ್‌ನ ಚೌಕ್‌ಗಳನ್ನು  ತಯಾರು ಮಾಡಿ   ಕಂಪನಿಗೆ ನಷ್ಟವನ್ನುಂಟು ಮಾಡಿರುತ್ತಾರೆ. ಈ ಬಗ್ಗೆ ಶ್ರೀ ಲವಕುಮಾರ್‍, ಇನ್‌ವೆಸ್ಟೀಗೇಷನ್ ಆಫೀಸರ್‍, ಮೆ. ಇ.ಐ.ಪಿ.ಆರ್‍(ಇಂಡಿಯಾ) ಲಿ. ಬೆಂಗಳೂರು ರವರು ದೂರನ್ನು ನೀಡಿದ್ದು ರೂ. ೩,೩೦೦/- ಬೆಲೆ ಬಾಳುವ ನಕಲಿ ಟೂಬ್‌ ಲೈಟ್‌ನ ಚೌಕ್‌ಗಳನ್ನು ಅಮಾನತ್ತು ಪಡಿಸಿರುತ್ತಾರೆ.

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೭-೨೦೦೯ ರಂದು ೦೮೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಕೊತ್ತಮಂಗಲ ಗ್ರಾಮದ ವಾಸಿ ಎಂ.ರಾಮಚಂದ್ರಪ್ಪ ಎಂಬುವರ ಮಗಳಾದ ಕುಮಾರಿ ಕೆ.ಆರ್‌.ಪದ್ಮಶ್ರೀ @ ರಾಧಿಕ ಎಂಬುವರು ಮನೆಯಿಂದ ಮುಳಬಾಗಿಲು ಪಟ್ಟಣಕ್ಕೆ ಡಿ.ಇಡಿ ಕೋಚಿಂಗ್ ತರಬೇತಿಗೆ ಹೋಗಿ ಬರುವುದಾಗಿ ಹೇಳಿ ಬಂದವರು ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ. 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:   

-ಸ್ಥಳ ದಂಡ ಮೊತ್ತ:  ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಜೂಜಾಟ ದಾಳಿ: ಇಬ್ಬರ ಬಂದನ, ರೂ. ೮೫೦/- ವಶ.

July 30, 2009

ದಿನಾಂಕ ೩೧-೦೭-೨೦೦೯ ರಂದು ೧೩೩೦ ಗಂಟೆ ಸಮಯದಲ್ಲಿ ಗಲ್‌ಪೇಟೆ ಪೊಲೀಸ್ ಠಾಣೆಯ ಆರಕ್ಷಕ ಉಪ-ನಿರೀಕ್ಷಕರಾದ ಶ್ರೀ ಎಂ.ಎಸ್.ಸರ್ದಾರ್‍ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ಕೋಲಾರ ನಗರದ ಮಣಿಘಟ್ಟ ರಸ್ತೆಯ ಮೋರಿಯ ಕೆಳಗೆ ಹಣವನ್ನು ಪಣವಾಗಿಟ್ಟು ಅಂದರ್‍-ಬಾಹರ್‍ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ಮಾಡಿ ೨ ರನ್ನು ಬಂದಿಸಿ, ರೂ. ೮೫೦/- ಗಳನ್ನು ವಶ ಪಡಿಸಿಕೊಂಡಿರುತ್ತಾರೆ.

ಬಂದಿತರ ವಿವರ:

  • ನಾಗರಾಜ ಬಿನ್ ನರಸಿಂಹಪ್ಪ, ೨೩ ವರ್ಷ, ಬಲಜಿಗರು, ಗಾಂಧೀನಗರ, ಕೋಲಾರ.
  • ಹರೀಶ ಬಿನ್ ಸುರೇಶ, ೨೨ ವರ್ಷ, ಬಲಜಿಗರು, ಗಾಂಧೀನಗರ, ಕೋಲಾರ.

ಈ ಬಗ್ಗೆ ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ನೇ ಜುಲ್ಯೆ ೨೦೦೯

July 29, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೩೦-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು:  ೦೩

-ಮಾರಣಾಂತಿಕ: ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೯-೦೭-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕೋಡಿರಾಮಸಂದ್ರ ಗ್ರಾಮದ ವಾಸಿ ವೆಂಕಟೇಶ ಎಂಬುವರು ರಾಷ್ಟ್ರೀಯ ಹೆದ್ದಾರಿ-೪ ಹನುಮಾನ್ ಕಲ್ಯಾಣ ಮಂಟಪದ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಟ್ರಾಕ್ಟರ್‍ ಸಂಖ್ಯೆ ಕೆಎ-೦೭-ಟಿ-೬೭೧೦ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ವೆಂಕಟೇಶ ರವರಿಗೆ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ.

-ಸಾಧಾರಣ: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೩-೦೭-೨೦೦೯ ರಂದು ೧೧೩೦ ಗಂಟೆ ಸಮಯದಲ್ಲಿ ಮಾಲೂರು ಪಟ್ಟಣದ ಪಟಾಲಮ್ಮ ಬಡಾವಣೆ ವಾಸಿ ರಮೇಶ್ ಎಂಬುವರು  ತನ್ನ ದ್ವಿಚಕ್ರ ವಾಹನದಲ್ಲಿ ಬಾಲಾಜಿ ವೃತ್ತದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಲಾರಿ ಸಂಖ್ಯೆ ಕೆಎ-೦೧-ಎಇ-೨೪೩೬ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ರಮೇಶ್ ರವರಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

 ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೮-೦೭-೨೦೦೯ ರಂದು ೧೭೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಜಯಮಂಗಲ ಗ್ರಾಮದ  ವಾಸಿ ಮುನಿರಾಜು ಎಂಬುವರು  ತನ್ನ ತನ್ನ ಸೈಕಲ್‌ನಲ್ಲಿ ಕೋಡಿಹಳ್ಳಿ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಬಜಾಜ್ ಮ್ಯಾಕ್ಸ್‌ ೧೦೦ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೩-ಇಇ-೮೬೭೫ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಮುನಿರಾಜು ರವರಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರದ ಎಸ್‌ಎನ್‌ಆರ್‌ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ,  ದಿನಾಂಕ ೨೬-೦೭-೨೦೦೯ ರಂದು ೨೧೧೮ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಯಾರಂಘಟ್ಟ ಗ್ರಾಮದ ವಾಸಿಯಾದ ರತ್ನಮ್ಮ  ಎಂಬುವರ ಮೇಲೆ  ಹಳೇ ದ್ವೇಷದ ಹಿನ್ನೆಲೆಯಲ್ಲಿ ಅದೇ ಗ್ರಾಮದ ವಾಸಿಗಳಾದ ಶ್ರೀನಿವಾಸಪ್ಪ ಮತ್ತು ಇತರೆ ೯ ಜನರು ಅಕ್ರಮ ಗುಂಫು ಕಟ್ಟಿಕೊಂಡು  ಬಂದು ಜಗಳ ತೆಗೆದು ರತ್ನಮ್ಮ, ವೆಂಕಟಪ್ಪ, ಕೃಷ್ಣಮೂರ್ತಿ ಮತ್ತು ಕೃಷ್ಣ ಎಂಬುವರನ್ನು  ಕೈಗಳಿಂದ ಮತ್ತು ಕಾಲಿನಿಂದ ಹೊಡೆದು  ರತ್ನಮ್ಮ ರವರ ಕತ್ತಿನಲ್ಲಿದ್ದ    ಮಾಂಗಲ್ಯ ಮತ್ತು ಕರಿಮಣಿ ಸರವನ್ನು ಕಿತ್ತುಕೊಂಡು ಹೊರಟುಹೋಗಿರುತ್ತಾರೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೯-೦೭-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಲಕ್ಕೂರು ಗ್ರಾಮದ ವಾಸಿಗಳಾದ ಜೈ ಭಾರತಮ್ಮ ಮತ್ತು  ರಾಜೇಂದ್ರರೆಡ್ಡಿ  ಎಂಬುವರ ನಡುವೆ ಈ ಹಿಂದೆ ಆಸ್ತಿ  ವಿಚಾರದಲ್ಲಿ ಗಲಾಟೆಗಳಾಗಿದ್ದು, ಪ್ರಕರಣಗಳೂ ಸಹ ದಾಖಲಾಗಿರುತ್ತದೆ. ಈ ದ್ವೇಷದ ಹಿನ್ನೆಲೆಯಲ್ಲಿ ರಾಜೇಂದ್ರರೆಡ್ಡಿ ಮತ್ತು ಇತರೆ ೧೬ ಜನರು ಅಕ್ರಮ ಗುಂಫು ಕಟ್ಟಿಕೊಂಡು ಕೈಗಳಲ್ಲಿ ಕಲ್ಲು, ದೊಣ್ಣೆ ಮತ್ತು ಮಚ್ಚುಗಳನ್ನು ಹಿಡಿದುಕೊಂಡು ಭಾರತಮ್ಮ ರವರ ಮನೆಯ ಬಳಿ ಬಂದು ಅವಾಚ್ಚಶಬ್ದಗಳಿಂದ ಬೈದು ಕಲ್ಲು ಮತ್ತು ಮಚ್ಚಿನಿಂದ ಹೊಡೆದು ಪ್ರಕರಣಗಳನ್ನು ವಾಪಸ್ಸು ಪಡೆಯಬೇಕೆಂದು ಇಲ್ಲದ್ದಿದ್ದರೆ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿರುತ್ತಾರೆ. ನಂತರ ಬಿಡಿಸಲು ಬಂದ ಅರುಣಾ ಎಂಬುವರನ್ನು ಹಿಡಿದು ಎಳೆದಾಡಿ ಮಾನಭಂಗಮಾಡಲು ಪ್ರಯತ್ನಪಟ್ಟು ಕತ್ತಿನಲ್ಲಿದ್ದ ೧೧೦ ಗ್ರಾಂ ಚಿನ್ನದ ತಾಳಿ ಮತ್ತು ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೊರಟುಹೋಗಿರುತ್ತಾರೆ. ಗಾಯಾಳುಗಳು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಹಲ್ಲೆ: ಹಲ್ಲೆ

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೯-೦೭೨-೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ಮುನೇಶ್ವರ ನಗರದ ವಾಸಿ ಶ್ರೀನಿವಾಸರಾಜು ಆರ್‍ ಎಂಬುವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳಿ ಇರುವ ಸ್ವಾಮಿ ಬೋರ್‌ವೆಲ್ ಮುಂದೆ ಬರುತ್ತಿದ್ದರು. ಆ ಸಮಯದಲ್ಲಿ ಬಂದ ಕಿಲಾರಿಪೇಟೆ ವಾಸಿ ವೆಂಕಟೇಶ್ @ ಮುಕ್ಕಡ್ ವೆಂಕಟೇಶ್ ಎಂಬುವರು ಹಳೇ ದ್ವೇಷದ ಹಿನ್ನೆಲೆಯಲ್ಲಿ ಅವಾಚ್ಚಶಬ್ದಗಳಿಂದ ಬೈದು ಮಚ್ಚಿನಿಂದ ತಲೆಗೆ ಹೊಡೆದು ರಕ್ತಗಾಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾನೆ.  

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ೦೩

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮರದಿಂದ ಬಿದ್ದು ಮೃತ ಪಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೦೫-೦೭-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಮಡಿವಾಳ ಗ್ರಾಮದ ವಾಸಿ ನರಸಿಂಹಪ್ಪ ಎಂಬುವರು ಬೇವಿನ ಸೊಪ್ಪನ್ನು ಕೀಳಲು ಮರ ಹತ್ತಿದ್ದು ಸೊಪ್ಪನ್ನು ಕೀಳುವಾಗ ಕಾಲು ಜಾರಿಬಿದ್ದು ಕತ್ತಿನಿ ಹಿಂಬಾಗಕ್ಕೆ ತೀವ್ರತರವಾದ ಗಾಯವಾಗಿ ಚಿಕಿತ್ಸೆಗಾಗಿ ಕೋಲಾರ ಆರ್‌.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದ ದಿನಾಂಕ ೨೯-೦೭-೨೦೦೯ ರಂದು ೧೨೩೫ ಗಂಟೆ ಸಮಯದಲ್ಲಿ ಮೃತ ಪಟ್ಟಿರುತ್ತಾರೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ವಿಧ್ಯುತ್ ಸ್ಪರ್ಶದಿಂದ ಮೃತ ಪಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೯-೦೭-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ವಿರೂಪಾಕ್ಷಿ  ಗ್ರಾಮದ ವಾಸಿ ನಾರಾಯಣಪ್ಪ ಎಂಬುವರು ಸುಬ್ರಮಣಿ ದೀಕ್ಷಿತ್ ರವರ ಸಮಾಧಿಯ ಬಳಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ವಿಧ್ಯುತ್ ತಂತಿ ತುಂಡಾಗಿ ಬಿದ್ದು ನೋಡದೆ ತುಳಿದ ಕಾರಣ ವಿಧ್ಯುತ್ ಪ್ರಸರಣವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯ ಮಾಡಿಕೊಂಡಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೯-೦೭-೨೦೦೯ ರಂದು ರಾತ್ರಿ ಕೋಲಾರದ ಖಾದ್ರಿಪುರದ ವಾಸಿ ಸೀನಪ್ಪ(೪೫) ಎಂಬುವರು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಆತ್ಮಹತ್ಯೆಗೆ ಹಣದ ಮುಂಗಟ್ಟು ಕಾರಣವಾಗಿರುತ್ತದೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:   

-ಸ್ಥಳ ದಂಡ ಮೊತ್ತ:  ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ನೇ ಜುಲ್ಯೆ ೨೦೦೯

July 28, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೯-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸರ ಕಳ್ಳತನಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಈ ಕೃತ್ಯವು ಮುಳಬಾಗಿಲು ಪಟ್ಟಣದ ಮುತ್ಯಾಲಪೇಟೆ ವಾಸಿಯಾದ ಶಿಕ್ಷಕಿ ಶ್ರೀಮತಿ ಭಾರತೀ ಎಂಬುವರ ಮನೆಯಲ್ಲಿ ನಡೆದಿರುತ್ತದೆ.  ದಿನಾಂಕ ೨೭-೦೭-೨೦೦೯ ರಂದು ಭಾರತೀ ರವರು ತಮ್ಮ ಮಾಂಗಲ್ಯ ಸರವನ್ನು ತಮ್ಮ ಮನೆಯ ಕಿಟಿಕಿಯಲ್ಲಿ ಇಟ್ಟು ಮಲಗಿದ್ದು ರಾತ್ರಿ ೧:೧೫ ಗಂಟೆ ಸಮಯದಲ್ಲಿ ಯಾರೋ ೨೦ ರಿಂದ ೨೫ ವರ್ಷ ವಯಸ್ಸಿನ ಒಬ್ಬ ಅಸಾಮಿ ಕಿಟಿಕಿ ಸರಳುಗಳ ಮಧ್ಯ ಕೈಹಾಕಿ ಸದರಿ ಸರವನ್ನು ಕಳುವು ಮಾಡಿಕೊಂಡು ಹೋಗಿರುತ್ತಾನೆ. ಕಳುವಾದ ಸರ ಸುಮಾರು ೨೦ ಗ್ರಾಂ ತೂಕದ್ದಾಗಿದ್ದು ೨೦.೦೦೦/- ರೂ ಬೆಲೆ ಬಾಳುವುದಾಗಿರುತ್ತದೆ ಎಂದು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ  ಪ್ರಯತ್ನಕ್ಕೆ  ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೮-೦೭-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಕೋಲಾರ ತಾಲ್ಲೂಕು ಕೆಂಚಾಪುರ ಗ್ರಾಮದ ವಾಸಿಯಾದ ಕುಮಾರಿ. ಆರತಿ ಎಂಬುವರು ತಮ್ಮ ಮನೆಯಲ್ಲಿದ್ದರು.  ಅ ಸಮಯದಲ್ಲಿ ಅದೇ ಗ್ರಾಮದ ವಾಸಿಯಾದ ಅಂಜಿನಪ್ಪ ಎಂಬುವರು ಆರತಿ ರವರ ಮನೆಗೆ ಬಂದು ಅಕೆಯನ್ನು ಹಿಡಿದು ಎಳೆದಾಡಿ ಮಾನಭಂಗ ಮಾಡಲು ಪ್ರಯತ್ನಿಸಿದ್ದು ಆಕೆ ಕಿರಿಚಾಡಿದಾಗ ಅವರ ತಾಯಿ ಮತ್ತು ಇತರೆ ಯವರು ಬಂದು ಅಂಜಿನಪ್ಪನನ್ನು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿರುತ್ತಾರೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ  ಪ್ರಯತ್ನಕ್ಕೆ  ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೦೭-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಮುಳಬಾಗಿಲು  ತಾಲ್ಲೂಕು ಪೆತ್ತಾಂಡ್ಲಹಳ್ಳಿ ಗ್ರಾಮದ ವಾಸಿಯಾದ  ಕುಮಾರಮ್ಮ  ಎಂಬುವರು ತಮ್ಮ ಮನೆಯ ಪಕ್ಕದಲ್ಲಿ ಸ್ನಾನ ಮಾಡುತ್ತಿದ್ದರು.   ಅ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಯಾದ ವೆಂಕಟೇಶಪ್ಪ ಎಂಬುವನು ಕುಮಾರಮ್ಮ ನನ್ನು ಹಿಡಿದು ಎಳದಾಡಿ  ಬಟ್ಟೆಗಳನ್ನು ಕಿತ್ತು ಮಾನಭಂಗ ಮಾಡಲು ಪ್ರಯತ್ನಿಸಿರುತ್ತಾನೆ. 

ರಸ್ತೆ ಅಪಘಾತಗಳು:  ೦೨

-ಮಾರಣಾಂತಿಕ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೮-೦೭-೨೦೦೯ ರಂದು ೧೨೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಅಹನ್ಯ ಗ್ರಾಮದ ವಾಸಿ ವೆಂಕಟಸ್ವಾಮಿರೆಡ್ಡಿ ಎಂಬುವರು ಗ್ರಾಮದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಟ್ರಾಕ್ಟರ್‍ ಸಂಖ್ಯೆ ಕೆಎ-೦೮-ಟಿ-೨೨೫೬ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ವೆಂಕಟಸ್ವಾಮಿರೆಡ್ಡಿ ರವರಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಸಾಗಿಸುವ ಮಾರ್ಗ ಮದ್ಯ ಮೃತಪಟ್ಟಿರುತ್ತಾನೆ.

-ಸಾಧಾರಣ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೮-೦೭-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ಪಟ್ಟಣದ  ವಾಸಿ ರಯಾನ್ ಪಾಷ(೭) ಎಂಬುವರು ಪಟ್ಟಣದ ಇಕ್ಬಾಲ್‌ಮೊಹಲ್ಲಾ ದಲ್ಲಿ ರಸ್ತೆ ದಾಟುತ್ತಿದ್ದರು. ಆ ಸಮಯದಲ್ಲಿ ಬಂದ ಸ್ಕೂಲ್ ವ್ಯಾನ್ ಸಂಖ್ಯೆ ಕೆಎ-೦೨-ಬಿ-೫೨೪೯ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ರಯಾನ್ ಪಾಷ  ರವರ ಎರೆಡು ಕಾಲುಗಳಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

 ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ೦೨

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೭-೦೭-೨೦೦೯ ರಂದು ೧೭೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಶಾಗತ್ತೂರು ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರು ಜಮೀನು ಬಗ್ಗೆ ವಿಚಾರಣೆಗಾಗಿ ಪೊಲೀಸರೊಂದಿಗೆ ಬಂದಿದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ಈಶ್ವರಪ್ಪ ಮತ್ತು ಇತರರು ಅಕ್ರಮ ಗುಂಪುಕಟ್ಟಿಕೊಂಡು ಬಂದು ಕೈಗಳಿಂದ, ಕಲ್ಲುಗಳಿಂದ ಮತ್ತು ದೊಣ್ಣೆಯಿಂದ ಹೊಡೆದಿರುತ್ತಾರೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೮-೦೭-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಲಕ್ಕೂರು ಗ್ರಾಮದ ವಾಸಿಗಳಾದ ರಾಜೇಂದ್ರ ಮತ್ತು  ಅನಿಲ್ ಕುಮಾರ್‍ ಎಂಬುವರ ನಡುವೆ ಖಾಲಿ ನಿವೇಶನದ ವಿಚಾರದಲ್ಲಿ ತಕರಾರಿದ್ದು ಎರೆಡೂ ಕಡೆಯವರು ಅಕ್ರಮ ಗುಂಫುಗಳನ್ನು ಪಟ್ಟಿಕೊಂಡು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿರುತ್ತಾರೆ. ಈ ಬಗ್ಗೆ ದೂರು ಮತ್ತು ಪ್ರತಿದೂರುಗಳು ದಾಖಲಾಗಿರುತ್ತದೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೮-೦೭-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಮುದುವಾಡಿ ಹೊಸಹಳ್ಳಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರ ಗ್ರಾಮದ ದೇವಸ್ಥಾನದ ಬಳಿ ಇದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ಶ್ರೀನಿವಾಸರೆಡ್ಡಿ ಮತ್ತು ಇತರೆ ೪ ಜನರು ಹಳೇ ವೈಷ್ಯಮ್ಯದ ಹಿನ್ನೆಲೆಯಲ್ಲಿ ಜಗಳ ತೆಗೆದು ಕಲ್ಲಿನಿಂದ ಮತ್ತು ದೊಣ್ಣೆಯಿಂದ ಹೊಡೆದು ಜಾತಿನಿಂದನೆ ಮಾಡಿರುತ್ತಾರೆ, ಜಗಳ ಬಿಡಿಸಲು ಬಂದ ಶ್ರೀನಿವಾಸ ಮತ್ತು ಈಶ್ವರಪ್ಪ ರವರಿಗೂ ಹೊಡೆದು ಗಾಯಪಡಿಸಿರುತ್ತಾರೆ. ಗಾಯಾಳುಗಳು ಚಿಕಿತ್ಸೆಗಾಗಿ ಕೋಲಾರದ ಎಸ್‌.ಎನ್.ಆರ್‍.ಆಸ್ಪತ್ರೆಗೆ ದಾಖಲಾಗಿರುತ್ತಾರೆ.   

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೧-೦೭-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲ್ಲೂಕು ಕೂಂತಾಂಡ್ಲಹಳ್ಳಿ ಗ್ರಾಮದ ವಾಸಿಯಾದ ವೆಂಕಟರವಣಪ್ಪ ಎಂಬುವರು ಮಗಳಾದ ನಾಗವೇಣಿ ಎಂಬುವರು ಮನೆಯಿಂದ ಸೌದೆ ತರುವುದಾಗಿ ಹೊರಗೆ ಹೋದವಳು ಮನೆಗೆ ವಾಪಸ್ಸು  ಬಾರದೆ ಕಾಣೆಯಾಗಿರುತ್ತಾಳೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:   

-ಸ್ಥಳ ದಂಡ ಮೊತ್ತ:  ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ನೇ ಜುಲ್ಯೆ ೨೦೦೯

July 27, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೮-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು:  ಇಲ್ಲ

-ಮಾರಣಾಂತಿಕ: ಇಲ್ಲ 

-ಸಾಧಾರಣ: ಇಲ್ಲ

 ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.   ದಿನಾಂಕ ೨೭-೦೭-೨೦೦೯ ರಂದು ೦೭೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಭಟ್ರಹಳ್ಳಿ ಗ್ರಾಮದ ವಾಸಿಯಾದ ಮುನಿರಾಜು ಮತ್ತು ಅವರ ಮನೆಯವರು ತಮ್ಮ ಬಾಬ್ತು ಖಾಲಿ ನಿವೇಶನದಲ್ಲಿ ಪಾಯವನ್ನು ತೆಗೆಯುತ್ತಿದ್ದರು.   ಅ ಸಮಯದಲ್ಲಿ ಬಂದ ಅದೇ ಗ್ರಾಮದ ವಾಸಿಗಳಾದ ರಘುಪತಿ ಮತ್ತು ಇತರೆ ೫ ಜನರು ಖಾಲಿ ನಿವೇಶನದ ವಿಚಾರದಲ್ಲಿ ಜಗಳ ತೆಗೆದು ಅಕ್ರಮ ಗುಂಪು ಕಟ್ಟಿಕೊಂಡು  ಬಂದು ಅವಾಚ್ಚಶಬ್ದಗಳಿಂದ ಬೈದು ಮುನಿರಾಜು ಮತ್ತು ಅವರ ಮನೆಯವರನ್ನು ಕೈಗಳಿಂದ ಮತ್ತು ಕಲ್ಲಿನಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.   ದಿನಾಂಕ ೨೭-೦೭-೨೦೦೯ ರಂದು ೧೮೩೦ ಗಂಟೆ ಸಮಯದಲ್ಲಿ ಕೋಲಾರ ಗ್ರಾಮಾಂತರ ಠಾಣೆಯ  ಮುಖ್ಯ ಪೇದೆ ೭೫ ಎಸ್.ನಾರಾಯಣ ಎಂಬುವರು  ಸಿಬ್ಬಂದಿಯೊಂದಿಗೆ ಸರ್ಕಾರಿ ವಾಹನದಲ್ಲಿ ಅರ್ಜಿ ವಿಚಾರವಾಗಿ ಕಮ್ಮಸಂದ್ರ ಗ್ರಾಮಕ್ಕೆ ಹೋಗಲು ಶಾಗತ್ತೂರು ಗ್ರಾಮದ ಮಾರ್ಗವಾಗಿ ಹೋಗಲು ಗ್ರಾಮದಲ್ಲಿ ಬರುವಷ್ಟರಲ್ಲಿ ಅಲ್ಲಿ ಸೇರಿದ್ದ ಸುಮಾರು ೫೦ ರಿಂದ ೬೦ ಜನರು ಜಗಳವಾಡುತ್ತಿದ್ದವರು ಪೊಲೀಸರನ್ನು ಕಂಡು ದಾಳಿ ಮಾಡಿ  ಅವಾಚ್ಚಶಬ್ದಗಳಿಂದ ಬೈದು ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ರಕ್ತಗಾಯಪಡಿಸಿ, ಸರ್ಕಾರಿ ವಾಹನವನ್ನು ಜಖಂಗೊಳಿಸಿ, ಸರ್ಕಾರಿ ಕೆಲಸಕ್ಕೆ ಅಡ್ಡಪಡಿಸಿ ಸಾಯಿಸುವುದಾಗಿ ಬೆದರಿಕೆ ಹಾಕಿರುತ್ತಾರೆ.

 

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:   

-ಸ್ಥಳ ದಂಡ ಮೊತ್ತ:  ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ನೇ ಜುಲ್ಯೆ ೨೦೦೯

July 26, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೭-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು:  ೦೨

-ಮಾರಣಾಂತಿಕ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೭-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ವೇಮಗಲ್ ಗ್ರಾಮದ ವಾಸಿಗಳಾದ ನಾಗರಾಜ  ಮತ್ತು ಗಂಗಾಧರ ಎಂಬುವರು ತನ್ನ ಹೀರೋ ಹೋಂಡಾ ಸ್ಪ್ಲೆಂಡರ್‍ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಕೆ-೪೬೦೧ರಲ್ಲಿ ಕೋಲಾರ ತಾಲೂಕು ಗರುಡನಹಳ್ಳಿ ಗೇಟ್ ಬಳಿ   ಬರುತ್ತಿದ್ದರು. ಆ ಸಮಯದಲ್ಲಿ ವೇಮಗಲ್ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಸಂಖ್ಯೆ ಕೆಎ-೦೭-ಎಫ್-೯೫೭ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಆಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರಿಗೂ ತೀವ್ರತರವಾದ ರಕ್ತಗಾಯಗಳಾಗಿ ನಾಗರಾಜ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಗಂಗಾಧರ ಎಂಬುವರನ್ನು ಚಿಕಿತ್ಸೆಗಾಗಿ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುತ್ತಾರೆ, 

-ಸಾಧಾರಣ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾದಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೬-೦೭-೨೦೦೯ ರಂದು ೧೬೦೦ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ ಗುಣಗಂಟಪಾಳ್ಯ ವಾಸಿ ದೇವರಾಜ ಎಂಬುವರು ತನ್ನ ಹೀರೋ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಜೆ-೮೮೮೯ರಲ್ಲಿ ಹೋಗುತ್ತಿದ್ದರು. ಆಸಮಯದಲ್ಲಿ ಬಂದ ಅಪರಿಚಿ ಆಟೋ ಚಾಲಕ ತನ್ನ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿ ಆಟೋ ನಿಲ್ಲಿಸದೆ ಪರಾರಿಯಾಗಿರುತ್ತಾನೆ, ಪರಿಣಾಮ ದೇವರಾಜು ರವರಿಗೆ ಗಾಯಗಳಾಗಿರುತ್ತದೆ.

 ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.   ದಿನಾಂಕ ೨೬-೦೭-೨೦೦೯ ರಂದು ೧೪೦೦ ಗಂಟೆ ಸಮಯದಲ್ಲಿ ಕೋಲಾರ ನಗರದ ಪಿ.ಸಿ.ಬಡಾವಣೆ ವಾಸಿಯಾದ ವಿಕಾಸ್ ಬೈರೇಗೌಡ ಎಂಬುವರು ತಮ್ಮ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-೨೯೯೯ರಲ್ಲಿ ಮಿನಿ ಹೋಟಲ್ ಕಡೆಯಿಂದ ಮನೆಗೆ  ಹೋಗುತ್ತಿದ್ದರು. ಅ ಸಮಯದಲ್ಲಿ ಬಂದ ಅದೇ ಬಡಾವಣೆಯ ವಾಸಿಗಳಾದ ರಾಖೇಶ್ ಮತ್ತು ಇತರೆ ೫ ಜನರು ಹಳೇ ದ್ವೇಷದ ಹಿನ್ನೆಲೆಯಲ್ಲಿ ಅಕ್ರಮ ಗುಂಪು ಕಟ್ಟಿಕೊಂಡು ಬಂದು ವಿಕಾಸ್ ರವರನ್ನು ಅಡ್ಡಗಟ್ಟಿ ದ್ವಿಚಕ್ರ ವಾಹನವನ್ನು ಕಿತ್ತುಕೊಂಡು ಮನೆಯೋಳಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ವೆಂಕಟೇಗೌಡ ರವರನ್ನು ದೊಣ್ಣೆಯಿಂದ ತಲೆಗೆ ಮತ್ತು ಕಾಲಿಗೆ ಹೊಡೆದು ಕಿಟಕಿ ಗಾಜು ಮತ್ತು ಟಿವಿಯನ್ನು ಹೊಡೆದು ಹಾಕಿ ವೆಂಕಟೇಗೌಡ ರವರ ತಾಯಿ ಮತ್ತು ಹೆಂಡತಿಯ ಕತ್ತಿನಲ್ಲಿದ್ದ   ಬಂಗಾರದ ಚೈನುಗಳನ್ನು ಕಿತ್ತುಕೊಂಡು ಪ್ರಾಣಬೆದರಿಕೆ ಹಾಕಿರುತ್ತಾರೆ.

ಹಲ್ಲೆ: ೦೨

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.   ದಿನಾಂಕ ೨೬-೦೭-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಕೋಲಾರ ನಗರದ ಪಿ.ಸಿ.ಬಡಾವಣೆ ವಾಸಿಯಾದ ರಾಕೇಶ್ ಎಂಬುವರು ಮಹೇಶ್ ರವರ ಅಂಗಡಿ ಬಳಿ ನಿಂತಿದ್ದರು. ಅ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಬಡಾವಣೆಯ ವಾಸಿಗಳಾದ ವೆಂಕಟೇಗೌಡ ಮತ್ತು ವಿಕಾಸ್ ಎಂಬುವರು ಹಳೇ ದ್ವೇಷದ ಹಿನ್ನೆಲೆಯಲ್ಲಿ ಜಗಳ ತೆಗೆದು   ಅವಾಚ್ಚಶಬ್ದಗಳಿಂದ ಬೈದು ಚೈನರ್‍ ಪ್ಯಾಕೇಟ್ ನಿಂದ ತಲೆಗೆ  ಮತ್ತು ತುಟಿಗೆ ಹೊಡೆದು ರಕ್ತಗಾಯಪಡಿಸಿ ಮುರಳಿ ರವರು ಕತ್ತಿನಲ್ಲಿದ್ದ ಬಂಗಾರದ ಚೈನು ಮತ್ತು ಒಂದು ಸಾವಿರ ರೂಪಾಯಿಗಳನ್ನು  ಕಿತ್ತುಕೊಂಡು ಪ್ರಾಣಬೆದರಿಕೆ ಹಾಕಿರುತ್ತಾರೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.   ದಿನಾಂಕ ೨೬-೦೭-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ದೊಮ್ಮರಹಳ್ಳಿ ಗ್ರಾಮದ ವಾಸಿಯಾದ  ಬಯಮ್ಮ ಎಂಬುವರನ್ನು ಅದೇ ವಾಸಿಗಳಾದ ಮುನಿರಾಜು ಮತ್ತು ಇತರೆ ಇಬ್ಬರು  ಹಳೇ ದ್ವೇಷದ ಹಿನ್ನೆಲೆಯಲ್ಲಿ ಜಗಳ ತೆಗೆದು   ಅವಾಚ್ಚಶಬ್ದಗಳಿಂದ ಬೈದು ದೊಣ್ಣೆಯಿಂದ ತಲೆಗೆ ಹೊಡೆದು ರಕ್ತಗಾಯ ಪಡಿಸಿರುತ್ತಾರೆ.

ಇತರೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಬೆದರಿಕೆ ಹಾಕಿರುವ ಬಗ್ಗೆ  ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೩-೦೭-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಚಿಕ್ಕನಹಳ್ಳಿ ಗ್ರಾಮದ ವಾಸಿ ಪದ್ಮನಾಭ ಎಂಬುವರಿಗೆ ಪಾತನಪಲ್ಲಿ ಗ್ರಾಮದ ವಾಸಿ ಆನಂದ ಎಂಬುವರು ಜಮೀನು ವಿಚಾರದಲ್ಲಿ ದೂರವಾಣಿ ಕರೆ ಮಾಡಿ ಅವಾಚ್ಚ ಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:   

-ಸ್ಥಳ ದಂಡ ಮೊತ್ತ:  ರೂ.  

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ ನೇ ಜುಲ್ಯೆ ೨೦೦೯

July 25, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೬-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೧೧-೦೭-೨೦೦೯ ರಂದು ರಾತ್ರಿ ಯಾರೋ ಕಳ್ಳರು ಶ್ರೀನಿವಾಸಪುರ ತಾಲ್ಲೂಕು ಶೆಟ್ಟಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೀಗವನ್ನು ಹೊಡೆದು ಒಳಗೆ ಪ್ರವೇಶ ಮಾಡಿ ಒಳಗಡೆ ಇದ್ದ ೪ ಗ್ಯಾಸ್ ಸಿಲಿಂಡರ್‍ ಮತ್ತು ೭ ಕೆ.ಜಿ. ಅಡಿಗೆ ಎಣ್ಣೆಯನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ.  ಕಳುವಾಗಿರುವ ವಸ್ತುಗಳ ಬೆಲೆ ೬,೦೦೦/- ಅಗಿರುತ್ತದೆ ಎಂದು ಅ ಶಾಲೆಯ ಮೂಖ್ಯೋಪಾಧ್ಯಾಯರಾದ ಶ್ರೀಮತಿ ವೆಂಕಟಲಕ್ಷ್ಮಮ್ಮ ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೪-೦೭-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಕೋಲಾರ ತಾಲ್ಲೂಕು ಕಾಮದೇನಹಳ್ಳಿ ಗ್ರಾಮದ ವಾಸಿಯಾದ ವಸಂತ ಕುಮಾರ್‍ ಎಂಬುವರು ತಮ್ಮ ದ್ವಿಚಕ್ರ ವಾಹನ ಸಂ. ಕೆಎ-೦೭-ಕೆ-೩೯೯೧      ಅನ್ನು ಕೋಲಾರ ನಗರದ ಹಳೇ ಬಸ್ ಸ್ಟ್ಯಾಂಡ್ ಬಳಿ ಇರುವ ಇಂಡಿಯನ್ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದರು.   ಅ ಸಮಯದಲ್ಲಿ ಯಾರೋ ಕಳ್ಳರು ದ್ವಿಚಕ್ರ ವಾಹನವನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ.  ಕಳುವಾಗಿರುವ ದ್ವಿಚಕ್ರ ವಾಹನದ ಬೆಲೆ ಸುಮಾರು ೨೫,೦೦೦/- ರೂಗಳಾಗಿರುತ್ತದೆ ಎಂದು ಪಿರ್‍ಯಾದಿದಾರರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೩

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.   ದಿನಾಂಕ ೨೪-೦೭-೨೦೦೯ ರಂದು ೨೩೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ಪಿ.ಸಿ.ಬಡಾವಣೆ ವಾಸಿಯಾದ ಮುರಳಿ ಎಂಬುವರು ತಮ್ಮ ಮನೆಯಲ್ಲಿದ್ದರು ಅ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಬಡಾವಣೆಯ ವಾಸಿಗಳಾದ ಉಮೇಶ್ ಮತ್ತು ಇತರೆ ೩ ಜನರು ಅಕ್ರಮ ಗುಂಪು ಕಟ್ಟಿಕೊಂಡು ಬಂದು ಮುರಳಿ ರವರನ್ನು ಮನೆಯಿಂದ ಹೊರಗಡೆ ಕರೆದು ವಿನಾಕಾರಣ ಜಗಳ ಮಾಡಿ ದೊಣ್ಣೆಗಳಿಂದ  ಮತ್ತು ಕೈಗಳಿಂದ ತಲೆ ಮತ್ತು ಮುಖಕ್ಕೆ ಹೊಡೆದೆ ಗಾಯಪಡಿಸಿ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾರೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೪-೦೭-೨೦೦೯ ರಂದು ೧೬೩೦ ಗಂಟೆ ಸಮಯದಲ್ಲಿ ಕೋಲಾರ ತಾಲ್ಲೂಕು ಅಮ್ಮನಲ್ಲೂರು ಗ್ರಾಮದ ವಾಸಿಗಳಾದ ನಾಗರಾಜ ಎಂಬುವರು ತಮ್ಮ ಮನೆಯ ಮುಂದೆ                 ಇದ್ದರು.  ಅ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ನಾರಾಯಣಪ್ಪ ಮತ್ತು ಇತರೆ ೧೪ ಜನರು ಕೋಳಿ ಅಕ್ರಮ ಪ್ರವೇಶದ ಮತ್ತು ಹಳೇ ಜಮೀನಿನ ವಿಚಾರದಲ್ಲಿ ಅಕ್ರಮ ಗುಂಪು ಕಟ್ಟಿಕೊಂಡು ಬಂದು ಮಾರಾಕಾಸ್ತ್ರಗಳಿಂದ ನಾಗರಾಜ ಮತ್ತು ಇತರೆ ೩ ಜನ ಮಹಿಳೆಯರನ್ನು ಹೊಡೆದು ಗಾಯಪಡಿಸಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ : ೨೧-೦೭-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಕೋಲಾರ ತಾಲ್ಲೂಕು ಹರಟಿ ಗ್ರಾಮದ ವಾಸಿಯಾದ ಯಲ್ಲಪ್ಪ ಎಂಬುವರು ತಮ್ಮ ಗ್ರಾಮದ ಹನುಮಪ್ಪ ರವರ ಮನೆಯ ಮುಂದೆ ಇದ್ದರು.  ಅ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ಹರೀಶ್  ಮತ್ತು ಇತರೆ ೬ ಜನರು ಅಕ್ರಮ ಗುಂಪು ಕಟ್ಟಿಕೊಂಡು ಬಂದು ಜಮೀನು ವಿಚಾರದಲ್ಲಿ ಜಗಳ ಮಾಡಿ ಯಲ್ಲಪ್ಪ ಮತ್ತು ಇತರೆ ೩ ಜನರನ್ನು ಅವಾಚ್ಯ ಶಬ್ದಗಳಿಂದ ಬೈದು  ದೊಣ್ನೆ ಮತ್ತು ಮಚ್ಚಿನಿಂದ ಹೊಡೆದು ಗಾಯಪಡಿಸಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:  ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯ ಮಾಡಿಕೊಂಡಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೪-೦೭-೨೦೦೯ ರಂದು ಕೋಲಾರ ನಗರದ ಗಲ್ ಪೇಟೆ ವಾಸಿಯಾದ ದೇವದಾಸ್ ಎಂಬುವರು ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿದ್ದ  ವಿಷವನ್ನು ಕುಡಿದು ಆತ್ಮಹತ್ಯ ಮಾಡಿಕೊಂಡಿರುತ್ತಾರೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯ ಮಾಡಿಕೊಂಡಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೫-೦೭-೨೦೦೯ ರಂದು ರಾತ್ರಿ ಮುಳಬಾಗಿಲು ತಾಲ್ಲೂಕು ಕಲ್ಲರಸನಹಳ್ಳಿ ಗ್ರಾಮದ ವಾಸಿಯಾದ ವೆಂಕಟರವಣಪ್ಪ  ಎಂಬುವರು ಪಿ.ಎಲ್.ಡಿ. ಭ್ಯಾಂಕಿನಲ್ಲಿ ಸಾಲ ಮಾಡಿದ್ದು ಭ್ಯಾಂಕಿನ ಅಧಿಕಾರಿಗಳು  ಜಮೀನು ಹರಾಜು ಹಾಕುವುದಾಗಿ ಡಂಗೂರು ಸಾರಿದ್ದು ಇದರಿಂದ ಜಿಗುಪ್ಸೆಗೊಂಡು ವಿಷ ಸೇವಿಸಿ  ಆತ್ಮಹತ್ಯ ಮಾಡಿಕೊಂಡಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೦೮

-ಸ್ಥಳ ದಂಡ ಮೊತ್ತ: ರೂ.  ೮೦೦/-

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ ನೇ ಜುಲ್ಯೆ ೨೦೦೯

July 24, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೫-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೪-೦೭-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಮಾಲೂರು ತಾಲ್ಲುಕು ಮದನಹಟ್ಟಿ ಗ್ರಾಮದ ವಾಸಿಯಾದ ಶ್ಯಾಮಲ ರವರು ತಮ್ಮ ಗ್ರಾಮದ ಬಸ್ ಗೇಟ್ ಬಳಿ ಹೋಗುತ್ತಿದ್ದರು.  ಅ ಸಮಯದಲ್ಲಿ ಬಂದ ದ್ವಿಚಕ್ರ ವಾಹನ ಸಂ.ಕೆಎ-೦೮-ಜೆ-೬೫೯೦ ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಶ್ಯಾಮಲರವರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಅಕೆಗೆ ಗಾಯಗಳಾಗಿರುತ್ತವೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.   ದಿನಾಂಕ ೧೫-೦೭-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಮಾಲೂರು ತಾಲ್ಲೂಕು ಆಲಂಬಾಡಿ ಗ್ರಾಮದ ವಾಸಿಗಳಾದ ಜಯಮ್ಮ ಮತ್ತು ಮುನಿರಾಜು ಎಂಬುವವರು ತಮ್ಮ ಗ್ರಾಮದಲ್ಲಿ ಎರಡು ಗುಂಪುಗಳಲ್ಲಿ ಅಕ್ರಮ ಗುಂಪು  ಕಟ್ಟಿಕೊಂಡು ಒಬ್ಬರಿಗೊಬ್ಬರು ದೊಣ್ನೆ ಮತ್ತು ಕಲ್ಲುಗಳಿಂದ  ಹೊಡದಾಡಿಕೊಂಡು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು  ಸಣ್ಣಪುಟ್ಟ ಗಾಯಗಳನ್ನುಂಟು ಮಾಡಿಕೊಂಡಿರುತ್ತಾರೆ.  ಈ ಕೃತ್ಯವು ಹಳೇ ದ್ವೇಷದ ಹಿನ್ನಲೆಯಲ್ಲಿ ನಡೆದಿರುತ್ತದೆ.   ಈ ಬಗ್ಗೆ ದೂರು ಮತ್ತು  ಪ್ರತಿ ದೂರುಗಳು ದಾಖಲಾಗಿರುತ್ತವೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ೦೮

-ಸ್ಥಳ ದಂಡ ಮೊತ್ತ: ರೂ.  ೮೦೦/-

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ ನೇ ಜುಲ್ಯೆ ೨೦೦೯

July 23, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೪-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೩-೦೭-೩೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರನಗರದ ವಿನಾಯಕನಗರದ ವಾಸಿ ನಾರಾಯಣ ಎಂಬುವರ ಮನೆಯ ಕಾಂಪೌಂಡಿನಲ್ಲಿ ನಿಲ್ಲಿಸಿದ್ದಿ ಟಿವಿಎಸ್ ಎಕ್ಸ್‌‌ಎಲ್‌ ಹೆವಿಡ್ಯೂಟಿ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಕೆ-೪೨೧೪ಅನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ, ಕಳುವಾದ ವಾಹನದ ಬೆಲೆ ರೂ. ೨೦,೦೦೦/- ಗಳಾಗಿರುತ್ತದೆ.   

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೩೧-೧೦-೨೦೦೮ ರಂದು ಕೋಲಾರ ತಾಲೂಕು ಗಂಗಾಪುರ ಗ್ರಾಮದ ವಾಸಿ ಟಿ.ವಿಮಲ ಎಂಬುವರನ್ನು ರಮೇಶ ಎಂಬುವರಿಗೆ ೧೦೦ ಗ್ರಾಂ ಬಂಗಾರದ ಒಡವೆಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟಿದ್ದರು. ನಂತರ ಇನ್ನು ಹೆಚ್ಚಿನ ವರದಕ್ಷಿಣೆ ತರುವಂತೆ ಗಂಡ ರಮೇಶ ಮತ್ತು ಅವರ ಮನೆಯವರು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ಪ್ರಾಣ ಬೆದರಿಕೆ ಹಾಕಿರುತ್ತಾರೆ,

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೭-೨೦೦೯ ರಂದು ೧೧೩೦ ಗಂಟೆ ಸಮಯದಲ್ಲಿ  ಬಂಗಾರುಪೇಟೆ ತಾಲೂಕು ಹನುಮಂತರಾಯನದಿನ್ನೆ ವಾಸಿಗಳಾದ ಕೃಷ್ಣಪ್ಪ ಮತ್ತು ವೆಂಕಟೇಶ  ಎಂಬುವರು  ಕೋಲಾರ ನಗರದ ಎಂ.ಬಿ.ರಸ್ತೆಯ ರುಚಿ ಸಾಗರ್‍ ಹೋಟಲ್ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ   ಬಂದ ಬಜಾಜ್ ಡಿಸ್ಕವರ್‍ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಎಲ್-೫೯೩೦ ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ವೆಂಕಟೇಶ್ ರವರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಗಾಯಗಳುಂಟಾಗಿ ಚಿಕಿತ್ಸೆಗಾಗಿ ಕೋಲಾರದ ಎಸ್‌.ಎನ್.ಆರ್‍.ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೭-೨೦೦೯ ರಂದು ೧೮೧೫ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಹೊಲ್ಲಂಬಳ್ಳಿ ಗ್ರಾಮದ ವಾಸಿ ಮುನಿನಾರಾಯಣಪ್ಪ ಎಂಬುವರು ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೨-೭೪೯೨ ರಲ್ಲಿ ಯಾರಂಗಟ್ಟ ಗೇಟ್ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಬಂದ ಟ್ರಾಕ್ಟರ್‍  ಸಂಖ್ಯೆ ಕೆಎ-೦೭-ಟಿ-೬೦೬೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರನಾದ ಮುನಿನಾರಾಯಣಪ್ಪ  ರವರಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ೦೨

ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೨-೦೭-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ದೊಡ್ಡಹತ್ತಿಹಳ್ಳಿ ಗ್ರಾಮದ ವಾಸಿಯಾದ  ಜನಾರ್ಧನ್  ರವರ ಮೇಲೆ ಕೆರೆಯಲ್ಲಿ ಮಣ್ಣು ತೆಗೆಯುವ ವಿಚಾರದಲ್ಲಿ ಜಗಳ ತೆಗೆದ ಅದೇ ಗ್ರಾಮ ವಾಸಿಯಾದ ವೇಣುಗೋಪಾಲ ಮತ್ತು ಇತರೆ ೬ ಜನರು ಅಕ್ರಮ ಗುಂಪು ಕಟ್ಟಿಕೊಂಡು ಕೈದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳನ್ನು ಹಿಡಿದೊಕೊಂಡು ಬಂದು ಹೊಡೆದು ಗಾಯಪಡಿಸಿರುತ್ತಾರೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೨-೦೭-೨೦೦೯ ರಂದು ೨೦೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ದೊಡ್ಡಹತ್ತಿಹಳ್ಳಿ ಗ್ರಾಮದ ವಾಸಿಯಾದ  ಆರ್‍.ಮಂಜುನಾಥ  ರವರ ಮೇಲೆ ಡೈರಿ ಕಾರ್ಯಾದರ್ಶಿ ವಿಚಾರದಲ್ಲಿ ಜಗಳ ತೆಗೆದ ಅದೇ ಗ್ರಾಮ ವಾಸಿಯಾದ ಸುಬ್ರಮಣಿ ಮತ್ತು ಇತರೆ ೯ ಜನರು ಅಕ್ರಮ ಗುಂಪು ಕಟ್ಟಿಕೊಂಡು ಕೈದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳನ್ನು ಹಿಡಿದೊಕೊಂಡು ಮನೆಯೋಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಚಶಬ್ದಗಳಿಂದ ಬೈದು ದೊಣ್ಣೆ ಮತ್ತು ರಾಡ್‌ ನಿಂದ ಹೊಡೆದು ಗಾಯಪಡಿಸಿರುತ್ತಾರೆ.

ಹಲ್ಲೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೧೯-೦೭-೨೦೦೯ ರಂದು ಮುಳಬಾಗಿಲು ತಾಲೂಕು ಬಿಸನಹಳ್ಳಿ ಗ್ರಾಮದ ವಾಸಿಯಾದ ರಾಮಕೃಷ್ಣಪ್ಪ ಎಂಬುವರ ಮೇಲೆ ಜಮೀನು ವಿಚಾರದಲ್ಲಿ ಜಗಳ ತೆಗೆದ ಅದೇ ಗ್ರಾಮದ ವಾಸಿಯಾದ ಕೃಷ್ಣಮೂರ್ತಿ ಎಂಬುವರು ರಾಮಕೃಷ್ಣಪ್ಪ ರವರ ಜಮೀನಿನಲ್ಲಿ ಅತಿಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿದ್ದ ನೀಲಗಿರಿ ಮರಗಳನ್ನು ನಾಶಪಡಿಸಿ ಅವಾಚ್ಚಶಬ್ದಗಳಿಂದ ಬೈದು ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿರುತ್ತಾರೆ,

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೩-೦೭-೨೦೦೯ ರಂದು ೦೨೦೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ರೋಜರಪಲ್ಲಿ ಗ್ರಾಮದ ವಾಸಿ ಶ್ರೀಮತಿ ಮಂಜುಳ(೧೮) ಎಂಬುವರು ಮನೆಯಿಂದ ಹೊರಗೆ ಹೋದವರು ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ. 

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:  

-ಸ್ಥಳ ದಂಡ ಮೊತ್ತ:  ರೂ.   

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.