ದಿನದ ಅಪರಾಧಗಳ ಪಕ್ಷಿನೋಟ ೦೪ ನೇ ಜುಲ್ಯೆ ೨೦೦೯

July 3, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೪-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಅರಬಿಕೊತ್ತನೂರು ಗ್ರಾಮದ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೨-೦೭-೨೦೦೯ ರಂದು ರಾತ್ರಿ ಅರಬಿಕೊತ್ತನೂರು ಗ್ರಾಮದ ಬಳಿ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಬೆಸ್ಕಾಂ ಇಲಾಖೆಗೆ ಸೇರಿದ ೨೨೦೦ ಮೀಟರ್‍ ವಿದ್ಯುತ್ ತಂತಿಯನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ತಂತಿಯ ಒಟ್ಟು ಬೆಲೆ ರೂ. ೨೧,೨೫೦/ ಆಗಿರುತ್ತದೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ‌ಇಲ್ಲ

ಇತರೆ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲ ಅಪಹರಣ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೦೭-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ ಮುಳಬಾಗಿಲು ರಾಮರಾಯನ ಕೋಟೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾದ ಎಂ.ನಾರಾಯಣಸ್ವಾಮಿ ರವರನ್ನು ಗೋಕುಲ್ ಕಾಲೇಜ್ ಬಳಿ ಬಲವಂತವಾಗಿ ಅಪಹರಿಸಿದ ಎ.ಪಿ.ಎಂ.ಸಿ ಯಾರ್ಡ್ ಅಧ್ಯಕ್ಷರಾದ ಎಸ್.ನಾರಾಯಣಗೌಡ ಎಂಬುವರು ಮುಳಬಾಗಿಲಿನ ಮಲ್ಲನಾಯಕನಹಳ್ಳಿ ರಸ್ತೆ ಏಡಿಪಾಳ್ಯದಲ್ಲಿ ಒಂದು ರೂಮಿನಲ್ಲಿ ಕೂಡಿಹಾಕಿ ಅವಾಚ್ಯ ಶಬ್ದಗಳಿಂದ ಬೈದು ಹೊಡೆದು ಪ್ರಾಣಬೆದರಿಕೆ ಹಾಕಿರುತ್ತಾರೆ. ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣಾ ಹಿನ್ನೆಲೆಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ದೌರ್ಜನ್ಯತಡೆ) ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಧನಮಟ್ನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೧-೦೪-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಧನಮಟ್ನಹಳ್ಳಿ ಗ್ರಾಮದ ವಾಸಿ ಮುನಿಯಪ್ಪ ಎಂಬುವರು ತಮ್ಮ ಸರ್ವೆ ನಂಬರ್‍ ೮೦ ರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಚೆನ್ನಸಂದ್ರ ಗ್ರಾಮದ ವಾಸಿಗಳಾದ ಸಿ.ಸೊಣ್ಣೇಗೌಡ, ಕೃಷ್ಣಪ್ಪ, ಮತ್ತು ಆನಂದ ಎಂಬುವರು ಮುನಿಯಪ್ಪ ರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿರುತ್ತಾರೆ.

ಅಸ್ವಾಭಾವಿಕ ಮರಣದ ಪ್ರಕರಣಗಳು:  ‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು:  ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೦೩ ನೇ ಜುಲ್ಯೆ ೨೦೦೯

July 3, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣಗಳು ದಾಖಲಾಗಿರುತ್ತದೆ. ಮಾಲೂರು ತಾಲೂಕು ಕೋಡಿಗಳ್ಳಿ ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯ ಹಾಗೂ ನಸಗೆರೆ ಗ್ರಾಮದ ಯಲ್ಲಮ್ಮ ದೇವಾಲಯಲ್ಲಿ ಕಳವು ಕೃತ್ಯಗಳು ಸಂಭವಿಸಿರುತ್ತದೆ. ದಿನಾಂಕ ೧೯-೦೫-೨೦೦೯ ರಂದು ದೇವಾಲಯಗಳ ಒಳಗೆ ಪ್ರವೇಶಿಸಿದ ಯಾರೋ ಕಳ್ಳರು ವೆಂಕಟರಮಣ ಸ್ವಾಮಿ ದೇವಾಲಯದ ರೂ. ೬೦,೦೦೦/ ಬೆಲೆ ಬಾಳುವ ಹಾಗೂ ನಸಗೆರೆ ಗ್ರಾಮದ ಯಲ್ಲಮ್ಮ ದೇವಾಲಯದ ರೂ. ೧೩,೪೦೦/ ಬೆಲೆ ಬಾಳುವ ದೇವರ ಮೇಲಿದ್ದ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಮಾಲೂರು ತಹಸೀಲ್ದಾರ್‍ ರವರು ದೂರು ನೀಡಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೫-೨೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಹುಲಿಮಂಗಲ ಗ್ರಾಮದ ವಾಸಿ ಮುನಿಯಮ್ಮ ಎಂಬುವರ ಮೊಮ್ಮಗನಾದ ಚಂದ್ರಶೇಖರ್‍ ಎಂಬುವನು ತನ್ನ ಮನೆಯ ಮುಂದೆ ಆಟವಾಡುತ್ತಿದ್ದನು. ಆ ಸಮಯದಲ್ಲಿ ಕೆಎ-೦೮-೨೮೩೦ ಸಂಖ್ಯೆಯ ಮಾಕ್ಸಿ ಕ್ಯಾಬ್ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟವಾಡುತ್ತಿದ್ದ ಹುಡುಗನಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಚಂದ್ರಶೇಖರ್‍ ನಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೨

ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಗುಂಡ್ಲಪಾಳ್ಯ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೩-೦೬-೨೦೦೯ ರಂದು ೧೬೦೦ ಗಂಟೆ ಸಮಯದಲ್ಲಿ ಗುಂಡ್ಲಪಾಳ್ಯ ಗ್ರಾಮದ ವಾಸಿ ಮುನಿಸ್ವಾಮಪ್ಪ ಎಂಬುವರು ಜಮೀನಿನಲ್ಲಿ ನೇಗಿಲು ಕಟ್ಟುತ್ತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಸುಮಾರು ೧೫ ಜನ ಅಬಕಾರಿ ಇಲಾಖೆಯವರು ಅಪರಾಧಿಯೊಬ್ಬ ಅಲ್ಲಿಗೆ ಬಂದಿರುವ ಬಗ್ಗೆ ಮುನಿಸ್ವಾಮಪನನ್ನು ಪ್ರಶ್ನಿಸಿರುತ್ತಾರೆ. ಇದಕ್ಕೆ ತನಗೇನೂ ತಿಳಿದಿಲ್ಲ ಎಂದು ನುಡಿದ ಮುನಿಸ್ವಾಮಪ್ಪ ನನ್ನು ಪಕ್ಕದ ಕಾಡಿಗೆ ಎಳೆದೊಯ್ದ ಅಬಕಾರಿ ಸಿಬ್ಬಂದಿ ಕಾಲಿನಿಂದ ಒದ್ದು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುತ್ತಾರೆ.

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೦೭-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಕೋಲಾರ ನಗರ ಕೀಲುಕೋಟೆ ವಾಸಿ ಹರೀಶ್ ಎಂಬುವರ ಮನೆಯೊಳಗೆ ಅಕ್ರಮಗುಂಪು ಕಟ್ಟಿಕೊಂಡು ಅಕ್ರಮವಾಗಿ ಪ್ರವೇಶ ಮಾಡಿದ ಅಲ್ಲಿಯ ವಾಸಿಗಳೇ ಆದ ನಾರಾಯಣಸ್ವಾಮಿ, ಗಂಗಾಧರ, ನಾಗೇಶ, ರಾಘವೇಂದ್ರ, ಚಿಕ್ಕವೀರಪ್ಪ, ಮುನಿರಾಜು ಮತ್ತು ಸುರೇಶ ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿ ಕಾಲುಗಳಿಂದ ಒದ್ದು ಪ್ರಾಣಬೆದರಿಕೆ ಹಾಕಿರುತ್ತಾರೆ. ಬಿಡಿಸಲು ಬಂದ ಹರೀಶ್ ರವರ ತಂದೆ ಮತ್ತು ಅತ್ತಿಗೆಯ ಮೇಲೂ ಸಹಾ ಆರೋಪಿಗಳು ಹಲ್ಲೆ ನಡೆಸಿರುತ್ತಾರೆ. ಹಳೇ ವೈಷಮ್ಯದ ಹಿನ್ನೆಲೆ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಹಲ್ಲೆ: ‌ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:  ‌ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಜಂಗಾನಹಳ್ಳಿ ಗ್ರಾಮದ ವಾಸಿ ಗೋವಿಂದಪ್ಪ ಎಂಬುವರು ೧೭ ವರ್ಷದ ಮಗಳಾದ ವರಲಕ್ಷ್ಮಿ ಎಂಬ ಹುಡುಗಿ ಕಾಣೆಯಾದವಳು. ಮುಳಬಾಗಿಲು ತಾಲೂಕು ಕಲ್ಕೆರೆ ಗ್ರಾಮದಲ್ಲಿರುವ ತನ್ನ ದೊಡ್ಡಪ್ಪ ವೆಂಕಟೇಶಪ್ಪ ಎಂಬುವರ ಮನೆಗೆ ಬಂದಿದ್ದ ವರಲಕ್ಷ್ಮಿ ದಿನಾಂಕ ೨೯-೦೬-೨೦೦೯ ರಂದು ಮನೆಯಿಂದ ಕಾಣೆಯಾಗಿರುತ್ತಾಳೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.