ದಿನದ ಅಪರಾಧಗಳ ಪಕ್ಷಿನೋಟ ೨೧ ನೇ ಜುಲ್ಯೆ ೨೦೦೯

July 20, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೧-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಸುಲಿಗೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೦-೦೭-೨೦೦೯ ರಂದು ೧೨೧೦ ಗಂಟೆ ಸಮಯದಲ್ಲಿ ಜಿ,ನಾಗರಾಮಮೋಹನ್, ಮ್ಯಾನೇಜರ್‍, ವಿಜಯ ಬ್ಯಾಂಕ್, ಚಿಕ್ಕಕುಂತೂರು ಶಾಖೆ, ರವರು ಬ್ಯಾಂಕಿನ ಗ್ರಾಹಕರಿಂದ ರೂ. ೫,೫೩,೮೨೫/- ಗಳನ್ನು ವಸೂಲಿ ಮಾಡಿಕೊಂಡು ತನ್ನ ವಾಹನದಲ್ಲಿ ವಾಪಸ್ಸು ಸೊಣ್ಣಹಳ್ಳಿ ಗೇಟ್ ಬಳಿ ಹೋಗುತ್ತದ್ದರು. ಆ ಸಮಯದಲ್ಲಿ ಪಲ್ಸ್‌ರ್‍ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದ ೩ ಜನ ಅಪರಿಚಿತರು ನಾಗರಾಮಮೋಹನ್ ರವರನ್ನು ವಾಹನದಿಂದ ಕೆಳಗೆ ತಳ್ಳಿ ಅವರ ಬಳಿ ಇದ್ದ ಹಣದ ಚೀಲವನ್ನು ಕಿತ್ತುಕೊಂಡು ಕಣ್ಣುಗಳಿಗೆ ಕಾರದ ಪುಡಿ ಎರಚಿ ಪರಾರಿಯಾಗಿರುತ್ತಾರೆ.

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ:

-ಸಾಧಾರಣ: ೦೨

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೦-೦೭-೨೦೦೯ ರಂದು ೧೦೪೫ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ಅಂಚೇಪಾಳ್ಯ ವಾಸಿಯಾದ  ಟಿ.ಕೃಷ್ಣಪ್ಪ ಎಂಬುವರು ತನ್ನ ಕುಟುಂಬ ಸಮೇತ ಮಾರುತಿ ಓಮ್ನಿ ಕಾರು ಸಂಖ್ಯೆ ಕೆಎ-೦೨-ಎಂಬಿ-೫೭೦೧ರಲ್ಲಿ ರಾಷ್ಷ್ರೀಯ ಹೆದ್ದಾರಿ-೪ ರ ನರಸಿಂಹತೀರ್ಥದ ಬಳಿ ಹೋಗುತ್ತಿದ್ದರು.  ಅ ಸಮಯದಲ್ಲಿ ಎದುರುಗಡೆಯಿಂದ ಬಂದ ಗೂಡ್ಸ್‌ ಟೆಂಪೋ ಸಂಖ್ಯೆ ಕೆಎ-೦೭-೫೯೬೦ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಮಾರುತಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆಸಿದ ಪರಿಣಾಮವಾಗಿ ಕಾರಿನಲ್ಲಿದ ಕೃಷ್ಣಪ್ಪ ರವರ ಮಗಳಾದ ರಷ್ಮಿರವರಿಗೆ  ರಕ್ತಗಾಯಗಳಾಗಿರುತ್ತವೆ.

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೧-೦೭-೨೦೦೯ ರಂದು ೦೬೦೦ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ಕಸ್ತೂರಿಬಾ ನಗರದ ವಾಸಿಯಾದ  ಶ್ರೀಧರ ಎಂಬುವರು ‌ಬೆಂಗಳುರಿಗೆ ಹೋಗುವ ಸಲುವಾಗಿ ತನ್ನ ಕುಟುಂಬ ಸಮೇತ ಕ್ವಾಲೀಸ್ ವಾಹನ ಸಂಖ್ಯೆ ಕೆಎ-೨೩-ಎಂಸಿ-೮೧೮೧ ರಲ್ಲಿ ರಾಷ್ಷ್ರೀಯ ಹೆದ್ದಾರಿ-೪ ರ ಆರ್‍.ಎಂ.ಸಿ ಯಾರ್ಡ್ ಬಳಿ ಹೋಗುತ್ತಿದ್ದರು.  ಅ ಸಮಯದಲ್ಲಿ ಎದುರುಗಡೆಯಿಂದ ಬಂದ ಲಾರಿ ಸಂಖ್ಯೆ ಕೆಎ-೨೦-೪೪೯೧ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಮಾರುತಿ ಕ್ವಾಲೀಸ್ ವಾಹನಕ್ಕೆ ಡಿಕ್ಕಿ ಹೊಡೆಸಿದ ಪರಿಣಾಮವಾಗಿ ಕ್ವಾಲೀಸ್ ವಾಹನದಲ್ಲಿದ್ದ ಮಿಲ್ಲಾ (೧೩) ಮತ್ತು ರಶೀದಾ (೩೭) ಎಂಬುವರಿಗೆ ಗಾಯಗಳುಂಟಗಿದ್ದು ಪ್ರಸ್ತುತ ಎಸ್.ಎನ್.ಅರ್‍ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಕೋಳಿ ಪಂದ್ಯ ದಾಳಿ: ಇಬ್ಬರ ಬಂದನ, ೫ ದ್ವಿಚಕ್ರವಾಹನ ಮತ್ತು ರೂ. ೧೫೦/- ವಶ.

July 20, 2009

ನಂಗಲಿ ಪೊಲೀಸ್ ಠಾಣೆಯ ಆರಕ್ಷಕ ಉಪ-ನಿರೀಕ್ಷಕರಾದ ಶ್ರೀ ನಂಜಪ್ಪ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಮುಳಬಾಗಿಲು ತಾಲೂಕು ಪೂಜಾರಹಳ್ಳಿ ಗ್ರಾಮದ ಕೆರೆಯಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಪಂದ್ಯದ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ಮಾಡಿ ೫ ದ್ವಿಚಕ್ರ ವಾಹನಗಳು, ೨ ಕೋಳಿಗಳು ಮತ್ತು ರೂ ೧೫೦/- ವಶಪಡಿಸಿಕೊಂಡು ಇಬ್ಬರನ್ನು ಬಂದಿಸಿರುತ್ತಾರೆ.

ಬಂದಿತರ ವಿವರಗಳು.

  • ಆರ್‍.ನಾರಾಯಣಸ್ವಾಮಿ ಬಿನ್ ಲೇಟ್ ರಾಮಯ್ಯ, ಕುಂಬಾರಪಾಳ್ಯ, ಮುಳಬಾಗಿಲು ಟೌನ್.
  • ಆರ್‍.ರಾಮಚಂದ್ರನಾಯ್ಡು ಬಿನ್ ಲೇಟ್ ಮುನಿಸ್ವಾಮಿನಾಯ್ಡು, ಮ್ಯಾಕಲಜಾಮಲಪಲ್ಲಿ, ಪುಂಗನೂರು ತಾ.

ಈ ಬಗ್ಗೆ ನಂಗಲಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ,


ದಿನದ ಅಪರಾಧಗಳ ಪಕ್ಷಿನೋಟ ೨೦ ನೇ ಜುಲೈ ೨೦೦೯

July 20, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೦-೦೭-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೯-೦೭-೨೦೦೯ ರಂದು ೧೪೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಹುಣಸನಹಳ್ಳಿ ಗ್ರಾಮದ ವಾಸಿಗಳಾದ ರಮೇಶ ಮತ್ತು ಬೈರೇಗೌಡ ಎಂಬುವರು ತನ್ನ ಬಜಾಜ್ ಸಿಟಿ ೧೦೦ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೪-ಇಜೆ-೨೯೮೮ರಲ್ಲಿ ಮುಳಬಾಗಿಲು ತಾಲೂಕು ತಾಯ್ಲೂರು ಗ್ರಾಮದ ಸಮೀಪ ಹೋಗುತ್ತಿದ್ದರು. ಆ ಸಮಯದಲ್ಲಿ ದ್ವಿಚಕ್ರವಾಹನವನ್ನು ಚಾಲನೆ ಮಾಡುತ್ತಿದ್ದ ಬೈರೇಗೌಡ ರವರು ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದು ವಾಹನ ಉರುಳಿ ಬಿದ್ದು ಇಬನ್ನರು ಸವಾರರಿಗೂ ಗಾಯಗಳುಂಟಾಗಿರುತ್ತದೆ. ಈ ಬಗ್ಗೆ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿತ್ತು. ಗಾಯಾಳು ಬೈರೇಗೌಡ ಎಸ್.ಎ‌ನ್.ಆರ್‍ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ ೨೦-೦೭-೨೦೦೯ ರಂದು ೦೭೦೦ ಗಂಟೆ ಮರತಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು:

-ಸ್ಥಳ ದಂಡ ಮೊತ್ತ: ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.