ದಿನದ ಅಪರಾಧಗಳ ಪಕ್ಷಿನೋಟ ೩೧ ನೇ ಆಗಸ್ಟ್ ೨೦೦೯

August 30, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೩೧-೦೮-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ನಗರ ಬ್ರಾಹ್ಮಣರ ಬೀದಿಯ ಶಂಕರ್‍ (೩೫) ಎಂಬುವರ ಅಂಗಡಿಯಲ್ಲಿ ಕಳವು ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೦-೦೮-೨೦೦೯ ರಂದು ರಾತ್ರಿ ಅಂಗಡಿಯ ಶೆಲ್ಟರ್‍ ಮುರಿದು ಒಳ ಪ್ರವೇಶಿಸಿದ ಯಾರೋ ಕಳ್ಳರು ಅಂಗಡಿಯಲ್ಲಿದ್ದ ಐದು ವಿವಿಧ ಕಂಪನಿಯ ಡಿ.ವಿ.ಡಿ ಪ್ಲೇಯರ್‍‌ಗಳು, ಮೊಬೈಲ್ ಕರೆನ್ಸಿ, ಮೂರು ಮೊಬೈಲ್‌ಗಳು, ಒಂದು ಹೋಂ ಥಿಯೇಟರ್‍ ಒಟ್ಟು ೨೩,೫೦೦/ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ೧೦

-ಸ್ಥಳ ದಂಡ ಮೊತ್ತ : ರೂ. ೩೦೫೩/

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ನೇ ಆಗಸ್ಟ್ ೨೦೦೯

August 29, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೩೦-೦೮-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು:  

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣವು ಕೋಲಾರ ತಾಲೂಕು ನೆರ್ನಹಳ್ಳಿ ಗ್ರಾಮದ ವಾಸಿ ಆಶಾ ಎಂಬುವರ ದೂರಿನ ಆಧಾರದ ಮೇರೆಗೆ ದಾಖಲಾಗಿರುತ್ತದೆ.  ಆಶಾ ರವರು ಚೌಡಪ್ಪ ಎಂಬುವರೊಡನೆ ವಿವಾಹವಾಗಿದ್ದು ಇವರಿಗೆ ಒಂದು ಹೆಣ್ಣು ಮಗು ಸಹಾ ಇದ್ದು ಚೌಡಪ್ಪ ರವರು ಪ್ರತಿ ದಿನ  ಕಂಠಪೂರ್ತಿ ಕುಡಿದು ಬಂದು ವಿನಾಕಾರಣ ಜಗಳ ಮಾಡಿ ರೂ. ೨೫,೦೦೦/- ಗಳನ್ನು ತೆಗೆದುಕೊಂಡು ಬರಬೇಕೆಂದು ಒತ್ತಾಯ ಮಾಡಿ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿರುತ್ತಾರೆ ಮತ್ತು ಎರಡನೇ ಮದುವೆ ಮಾಡಿಕೊಳ್ಳಲು ಸಿದ್ದತೆ ಮಾಡಿಕೊಂಡಿದ್ದಾರೆಂದು ಆಶಾ  ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ 

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ.  

ಹಲ್ಲೆ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೪-೦೮-೨೦೦೯ ರಂದು ೨೩೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ನುಕ್ಕನಹಳ್ಳಿ ಗ್ರಾಮದ ವಾಸಿ ಕೃಷ್ಣಪ್ಪ ಎಂಬುವರು ಮನೆಯಲ್ಲಿದ್ದ ಸಮಯದಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಜಗಳ ತೆಗೆದ ಅದೇ ಗ್ರಾಮದ ವಾಸಿಯಾದ ಮಂಜುನಾಥ ಮತ್ತು ಮಹೇಂದ್ರ ಎಂಬುವರು ಮನೆಯೋಳಗೆ ನುಗ್ಗಿ ಅವಾಚ್ಚಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆದಿರುತ್ತಾರೆ.

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :  ೦೯

-ಸ್ಥಳ ದಂಡ ಮೊತ್ತ :  ರೂ.೨,೩೦೦/-

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದ್ವಿಚಕ್ರ ವಾಹನ ಚೋರನ ಬಂದನ: ದ್ವಿಚಕ್ರ ವಾಹನ ವಶ:

August 29, 2009

ದಿನಾಂಕ ೩೦-೦೮-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಮುಳಬಾಗಿಲು ಪೊಲೀಸ್ ಠಾಣೆಯ ಮುಖ್ಯ ಪೇದೆ ನಾಗರಾಜ್ ಎಂಬುವರು  ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮುಳಬಾಗಿಲು ತಾಲೂಕು ಸೀಗೆಹಳ್ಳಿ ಗ್ರಾಮದ ವಾಸಿ ಪಾರ್ಥಸಾರಥಿ @ ಪೆದ್ದೂಡು(೨೮) ಎಂಬವರನ್ನು ವಿಚಾರಣೆ ಮಾಡದ್ದು, ವಿಚಾರಣೆ ವೇಳೆಯಲ್ಲಿ ನಾನು ಕದ್ದಿದ್ದ ಟಿವಿಎಸ್ ವಿಕ್ಟರ್‍ ವಾಹನ ಸಂಖ್ಯೆ ಕೆಎ-೦೨-ಇಕೆ-೫೧೬ ಯನ್ನು ಪೊಲೀಸರ ವಶಕ್ಕೆ ನೀಡಿರುತ್ತಾನೆ.

            ಈ ಬಗ್ಗೆ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ವಾಹನ ಕಳುವಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ ನೇ ಆಗಸ್ಟ್ ೨೦೦೯

August 28, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೯-೦೮-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೩

ನಂಗಲಿ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳು ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೭-೦೮-೨೦೦೯ ರಂದು ರಾತ್ರಿ ಯಾರೋ ಕಳ್ಳರು ಮುಳಬಾಗಿಲು ತಾಲೂಕು ಆರ್‍.ಅಗ್ರಹಾರ, ಮುಚ್ಚನಹಳ್ಳಿ ಹಾಗೂ ಪಿಚ್ಚಗುಂಟ್ಲಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಬೀಗವನ್ನು ಮುರಿದು ಒಳಪ್ರವೇಶಿಸಿ ಶಾಲೆಯಲ್ಲಿದ್ದ ಒಟ್ಟು ಐದು ಸಿಲಿಂಡರ್‍ ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಸದರಿ ಶಾಲೆಗಳ ಮುಖ್ಯೋಪಾದ್ಯಾಯರುಗಳು ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ. ಕಳುವಾದ ಸಿಲಿಂಡರ್‍ ಗಳ ಒಟ್ಟು ಬೆಲೆ ರೂ. ೫,೫೦೦/ ಆಗಿರುತ್ತದೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ   

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣವು ಕೋಲಾರ ತಾಲೂಕು ನಡಪಲ್ಲಿ ಗ್ರಾಮದ ವಾಸಿ ವರಲಕ್ಷ್ಮಿ ಎಂಬುವರ ದೂರಿನ ಆಧಾರದ ಮೇರೆಗೆ ದಾಖಲಾಗಿರುತ್ತದೆ. ವರಲಕ್ಷ್ಮಿ ರವರು ನಾಗರಾಜ ಎಂಬುವರೊಡನೆ ವಿವಾಹವಾಗಿದ್ದು ಇವರಿಗೆ ಒಂದು ಗಂಡು ಮಗು ಸಹಾ ಇದ್ದು ಇವರ ಮಾವ ರಾಮಕೃಷ್ಣಪ್ಪ ರವರು ನಾಗರಾಜವನ್ನು ಹಣ ಮತ್ತು ಒಡವೆಗಳೊಡನೆ ತಮ್ಮ ಊರಿಗೆ ಕರೆದುಕೊಂಡು ಹೋಗಿರುವುದಾಗಿ ಈ ಬಗ್ಗೆ ವಿಚಾರಿಸಲು ಹೋದಾಗ ತನ್ನ ಮೇಲೆ ಜಗಳ ತೆಗೆದು ಹಲ್ಲೆ ನಡೆಸಿರುವುದಾಗಿ ವರಲಕ್ಷ್ಮಿ ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ೦೧

 ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೮-೨೦೦೯ ರಂದು ೧೦೨೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಸಂಗಸಂದ್ರ  ಗ್ರಾಮದ ವಾಸಿ ಎಸ್.ಮಹಮದ್ ಎಂಬುವರು    ತನ್ನ ದ್ವಿಚಕ್ರವಾಹನ ಸಂಖ್ಯೆ ಕೆಎ-೦೪-ಇಎಸ್-೪೯೭೦ರಲ್ಲಿ ತನ್ನ ಅಣ್ಣನ ಮಗನಾದ ನೌಷಾದ್‌(೫) ಎಂಬುವನನ್ನು ಹಿಂಬದಿಯಲ್ಲಿ ಕುಳ್ಳರಿಸಿಕೊಂಡು ಮುಳಬಾಗಿಲು – ರಾಮಸಮುದ್ರಂ  ರಸ್ತೆಯ ೧೦ನೇ ನಂಬರ್‍ ಇಟ್ಟಿಗೆ ಫ್ಯಾಕ್ಟರಿ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಟ್ರಾಕ್ಟರ್‍ ಸಂಖ್ಯೆ ಕೆಎ-೦೭-ಟಿ-೯೨೧೫ರ  ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಪರಿಣಾಮ ನೌಷಾದ್(೫) ರವರಿಗೆ ತೀವ್ರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ.

-ಸಾಧಾರಣ: ೦೨

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೮-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಟೇಕಲ್ ಗ್ರಾಮದ ವಾಸಿ ಚಿನ್ನಪ್ಪ ಎಂಬುವರು ಟೇಕಲ್‌ನ ಗಂಗಮ್ಮ ದೇವಾಲಯದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಕೆ.ಜಿ.ಹಳ್ಳಿ ಗ್ರಾಮದ ಕಡೆಯಿಂದ ಬಂದ ಟಿಎನ್-೨೨-ಎಬಿ-೬೪೦೪ ದ್ವಿಚಕ್ರವಾಹನದ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಚಿನ್ನಪ್ಪ ರವರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್‍ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.  

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೮-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಪಿಚ್ಚಗುಟ್ಲಹಳ್ಳಿ  ಗ್ರಾಮದ ವಾಸಿ ಗೋಪಾಲಪ್ಪ ಎಂಬುವರು ನಾಗರಾಜ ಎಂಬುವರ ಬಜಾಜ್ ಪಲ್ಸರ್‍ ದ್ವಿಚಕ್ರವಾಹನದಲ್ಲಿ ಹಿಂಬದಿಯಲ್ಲಿ ಕುಳಿತುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಕೆ.ಬೈಪಲ್ಲಿ ರಸ್ತೆಯ ಗಡ್ಡೂರು ಬಳಿ ದ್ವಿಚಕ್ರವಾಹನದ ಚಾಲಕ ನಾಗರಾಜ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದು ದ್ವಿಚಕ್ರವಾಹನ ಹಳ್ಳವೊಂದರಲ್ಲಿ ಮುಗುಚಿ ಬಿದ್ದಿರುತ್ತದೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಿಗೆ ಗಾಯಗಳುಂಟಾಗಿರುತ್ತದೆ. 

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ತೆರ್‍ನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೮-೦೯-೨೦೦೮ ರಂದು ೧೮೦೦ ಗಂಟೆ ಸಮಯದಲ್ಲಿ ತೆರ್‍ನಹಳ್ಳಿ ಗ್ರಾಮದ ವಾಸಿ ಭಾಗ್ಯಮ್ಮ ಎಂಬುವರು ತಮ್ಮ ಹೊಲದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಜಮೀನಿಗೆ ಹಾಗಿದ್ದ ಬೇಲಿ ವಿಚಾರದಲ್ಲಿ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಸೀನಪ್ಪ ಮತ್ತು ಇತರೇ ೯ ಜನರು ಅವಾಚ್ಯ ಶಬ್ದಗಳಿಂದ ಬೈದು ಗಡಾರಿಯಿಂದ ಹೊಡೆದು ರಕ್ತಗಾಯ ಪಡಿಸಿರುತ್ತಾರೆ.  

ಹಲ್ಲೆ: ಇಲ್ಲ

ಇತರೆ: ೦೨

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೭-೦೮-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಬೆಂಗಳೂರು ನಗರದ ಕೋರಮಂಗಲದಲ್ಲಿ ವಾಸವಾಗಿರುವ ಮಂಜುನಾಥ ಮತ್ತು ರಾಣಿ ಎಂಬುವರು ಕೋಲಾರ ಪಟ್ಟಣದ ಪಲ್ಲವಿ ಸರ್ಕಲ್ ಬಳಿ ಇದ್ದರು. ಆ ಸಮಯದಲ್ಲಿ ಬಂದ ರಾಣಿಯವರ ತಂದೆಯಾದ ಸ್ಟೀಫನ್ ಅವರ ಹೆಂಡತಿ ಮತ್ತು ಮಗ ಸೇರಿಕೊಂಡು ಮಂಜುನಾಥ ರವರ ಮೇಲೆ ಜಗಳ ತೆಗೆದು ಅವರನ್ನು ಬಲವಂತವಾಗಿ ಟಾಟಾಸುಮೋವೊಂದರಲ್ಲಿ ಅಪಹರಿಸಿಕೊಂಡು ಹೋಗಿರುತ್ತಾರೆ.

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಒಂದೂವರೆ ತಿಂಗಳು ವಯಸ್ಸಿನ ಗಂಡು ಮಗುವನ್ನು ಅಪಹರಿಸಿಕೊಂಡು ಹೋಗಿರುವಂತಹ ಕೃತ್ಯ ಕೋಲಾರ ನಗರದ ಎಸ್.ಎನ್.ಆರ್‍ ಆಸ್ಪತ್ರೆಯಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೮-೦೮-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಗೊಲ್ಲಹಳ್ಳಿ ಗ್ರಾಮದ ವಾಸಿ ಮಂಜುನಾಥ ಎಂಬುವರ ಪತ್ನಿಯಾದ ಭಾರತಮ್ಮ ಎಂಬುವರು ತಮ್ಮ ಒಂದೂವರೆ ತಿಂಗಳಿನ ಗಂಡು ಮಗುವನ್ನು ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್‍ ಆಸ್ಪತ್ರೆಗೆ ಕರೆತಂದಿದ್ದರು. ವೈದ್ಯರ ಕೋಣೆ ಮುಂಭಾಗ ಕುಳಿತಿದ್ದಾಗ ಮಗು ಮೂತ್ರ ಮಾಡಿಕೊಂಡಿದ್ದು ಇದರ ಬಟ್ಟೆಯನ್ನು ಶುದ್ದಗೊಳಿಸುವ ಸಲುವಾಗಿ ಮಗುವನ್ನು ಪಕ್ಕದಲ್ಲೇ ಕುಳಿತಿದ್ದ ೩೦-೩೫ ವರ್ಷ ವಯಸ್ಸಿನ ಮಹಿಳೆಯೊಬ್ಬರಿಗೆ ನಿಡಿರುತ್ತಾರೆ. ಪುನಃ ಬಂದು ನೋಡಿದಾಗ ಅಪರಿಚಿತ ಮಹಿಳೆ ಮಗುವಿನೊಂದಿಗೆ ಪರಾರಿಯಾಗಿರುವುದು ಬೆಳಕಿಗೆ ಬಂದಿರುತ್ತದೆ.

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಠ ಪಂಗಡ (ದೌರ್ಜನ್ಯತಡೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಕಲ್ಲೂರು ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೮-೦೮-೨೦೦೯ ರಂದು ೦೭೩೦ ಗಂಟೆ ಸಮಯದಲ್ಲಿ ಕಲ್ಲೂರು ಗ್ರಾಮದ ವಾಸಿ ಮುನಿಯಪ್ಪ ಎಂಬುವರು ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ಅದೇ ಗ್ರಾಮದ ವಾಸಿಗಳಾದ ಕೃಷ್ಣಪ್ಪ ಮತ್ತಿತರೇ ೪ ಜನರು ತಮ್ಮೊಡನೆ ಮಾರಕಾಯುಧಗಳನ್ನು ಇಟ್ಟುಕೊಂಡು ಅಕ್ರಮಗುಂಪು ಕಟ್ಟಿಕೊಂಡು ಮುನಿಯಪ್ಪ ಮತ್ತವರ ಹೆಂಡತಿ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ದೊಣ್ಣೆ ಮತ್ತು ರಾಡುಗಳಿಂದ ಹೊಡೆದು ಪ್ರಾಣಬೆದರಿಕೆ ಹಾಕಿರುತ್ತಾರೆ.

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಗುರುವಗೊಲ್ಲಹಳ್ಳಿ ಗ್ರಾಮದ ವಾಸಿ ವಿ.ರಾಧಿಕ (೧೬) ಎಂಬ ಹುಡುಗಿ ಕಾಣೆಯಾಗಿರುತ್ತಾಳೆ. ದಿನಾಂಕ ೨೬-೦೮-೨೦೦೯ ರಂದು ತನ್ನ ಮನೆಯಿಂದ ಹೊರಟ ರಾಧಿಕಾ ಹಿಂತಿರುಗಿ ಬಾರದೇ ಕಾಣೆಯಾಗಿರುತ್ತಾಳೆ.  

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :೧೨

-ಸ್ಥಳ ದಂಡ ಮೊತ್ತ :  ರೂ.೧೩೦೦

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ ನೇ ಆಗಸ್ಟ್ ೨೦೦೯

August 27, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೮-೦೮-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೮-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ಪಟ್ಟಣದ ವಿನೋಭನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾರ್ಥಮಿಕ ಶಾಲೆಯ ಅಡುಗೆ ಕೋಣೆಗೆ ಹಾಕಿದ್ದ ಬೀಗವನ್ನು ಕಿತ್ತು ಒಳಗೆ ಪ್ರವೇಶ ಮಾಡಿ ಒಂದು ಗ್ಯಾಸ್ ಸಿಲಿಂಡರ್‌ನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಶ್ರೀಮತಿ ಸೌಭಾಗ್ಯ, ಶಿಕ್ಷಕರು ದೂರುನ್ನು  ನೀಡಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೨

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರದ ನೂರ್‍ ನಗರದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೦೯-೦೮-೨೦೦೯ ರಂದು ೨೩೩೦ ಗಂಟೆ ಸಮಯದಲ್ಲಿ ನೂರ್‍ ನಗರದ ವಾಸಿ ಶಬ್ಬೀರುಲ್ಲಾ ಎಂಬುವರ ಮೇಲೆ ಜಗಳ ತೆಗೆದ ಜುಬೇರುಲ್ಲಾ ಮತ್ತಿತರರು ಅಕ್ರಮ ಗುಂಪು ಕಟ್ಟಿಕೊಂಡು ಕೈಗಳಿಂದ ಹೊಡೆದು ಚಾಕುವಿನಿಂದ ತಿವಿದು ಗಾಯಪಡಿಸಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ತೇರಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೮-೦೮-೨೦೦೯ ರಂದು ೦೮೦೦ ಗಂಟೆ ಸಮಯದಲ್ಲಿ ತೇರಹಳ್ಳಿ ಗ್ರಾಮದ ವಾಸಿ ಸೀನಪ್ಪ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಭಾಗ್ಯಮ್ಮ ಕೃಷ್ಣಪ್ಪ ಇನ್ನಿತರರು ಅಕ್ರಮಗುಂಪು ಕಟ್ಟಿಕೊಂಡು ಬಂದು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ೦೮

-ಸ್ಥಳ ದಂಡ ಮೊತ್ತ : ರೂ. ೨೪೦೦/

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ ನೇ ಆಗಸ್ಟ್ ೨೦೦೯

August 26, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೭-೦೮-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

ಅಕ್ರಮಪ್ರವೇಶ ಮಾಡಿ ಜಮೀನಿನಲ್ಲಿದ್ದ ನೀಲಗಿರಿ ಮರಗಳನ್ನು ಕಠಾವು ಮಾಡಿ ಕಳವು ಮಾಡಿರುವ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಮೈಲಾಂಡಹಳ್ಳಿ ಗ್ರಾಮದ ವಾಸಿ ಸಿದ್ದಪ್ಪ (೭೦) ಎಂಬುವರಿಗೆ ಸೇರಿದ ಜಮೀನಿನೊಳಗೆ ಅಕ್ರಮವಾಗಿ ಪ್ರವೇಶಿದ ಅದೇ ಗ್ರಾಮದ ವಾಸಿ ಚಿಕ್ಕ ಅಬ್ಬಯ್ಯ @ ಚಿಕ್ಕ ಅಪ್ಪಯ್ಯ ಮತ್ತಿತರರು ಜಮೀನಿನಲ್ಲಿ ಬೆಳೆಸಲಾಗಿದ್ದ ನೀಲಗಿರಿ ಮರಗಳನ್ನು ಕಠಾವು ಮಾಡಿರುತ್ತಾರೆ. ಕಠಾವಾದ ನೀಲಗಿರಿ ಮರಗಳ ಬೆಲೆ ರೂ. ೭೦,೦೦೦/ ಆಗಿರುತ್ತದೆ.

ವಾಹನ ಕಳ್ಳತನ : ಇಲ್ಲ   

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಕೊಲೆಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ಟೌನ್ ಕೋಲಾರ ರಸ್ತೆಯ ಕೋಲಾರಮ್ಮ ಬಾರ್‍ ಸಮೀಪ ಕೃತ್ಯ ಸಂಭವಿಸಿರುತ್ತದೆ. ಯಾರೋ ಅಪರಿಚಿತರು ಸುಮಾರು ೨೫ ರಿಂದ ೩೦ ವರ್ಷ ವಯಸ್ಸಿನ ಅಪರಿಚಿತ ವ್ಯಕ್ತೊಯೊಬ್ಬರ ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಮಾಡುವ ಪ್ರಯತ್ನ ಮಾಡಿರುತ್ತಾರೆ. ಈ ಬಗ್ಗೆ ಬಾರಿನ ಕ್ಯಾಷಿಯರ್‍ ಬಸವರಾಜು ಎಂಬುವರು ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ದೊಂಬಿ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ದೊಡ್ಡಕಲ್ಲಹಳ್ಳಿ ಗ್ರಾಮದ ಸಮೀಪ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೮-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ದೊಡ್ಡಕಲ್ಲಹಳ್ಳಿ ಗ್ರಾಮದ ವಾಸಿ ಮುನಿಯಪ್ಪ (೪೫) ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿ ಸುನಿಲ್ ಕುಮಾರ್‍ ಮತ್ತಿತರರು ಅಕ್ರಮಗುಂಪು ಕಟ್ಟಿಕೊಂಡು ಕೈಗಳಿಂದ ದೊಣ್ಣೆಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾರೆ. ಜಮೀನಿನ ವಿವಾದದ ಹಿನ್ನಲೆ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.  

ಹಲ್ಲೆ: ೦೨

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ಮಾಲೂರು ತಾಲೂಕು ಬಂಡೂರು ಅಗ್ರಹಾರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೮-೨೦೦೯ ರಂದು ೧೨೦೦ ಗಂಟೆ ಸಮಯದಲ್ಲಿ ಬಂಡೂರು ಅಗ್ರಹಾರ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರ ಜಮೀನಿನಲ್ಲಿ ಅಕ್ರಮಪ್ರವೇಶ ಮಾಡಿದ ಅದೇ ಗ್ರಾಮದ ವಾಸಿಗಳಾದ ಕೃಷ್ಣಪ್ಪ ಮತ್ತು ವೆಂಕಟಮ್ಮ ಎಂಬುವರು ಜಮೀನಿನಲ್ಲಿ ಉಳುಮೆ ಮಾಡಿ ಬಿತ್ತನೆ ಮಾಡಿರುತ್ತಾರೆ. ಇದನ್ನು ಪ್ರಶ್ನಿಸಿದಾಗ ನಾರಾಯಣಸ್ವಾಮಿ ರವರ ಮೇಲೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದು ಪ್ರಾಣಬೆದರಿಕೆ ಹಾಕಿರುತ್ತಾರೆ.  

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಬಂಡೂರು ಅಗ್ರಗಾರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೬-೦೮-೨೦೦೯ ರಂದು ೧೨೦೦ ಗಂಟೆ ಸಮಯದಲ್ಲಿ ದೊಡ್ಡಕಲ್ಲಹಳ್ಳಿ ಗ್ರಾಮದ ವಾಸಿ ಸುನಿಲ್ ಕುಮಾರ್‍ (೧೯) ಎಂಬುವರ ಮೇಲೆ ಜಗಳ ತೆಗೆದ ದೊಡ್ಡಕಲ್ಲಹಳ್ಳಿ ಗ್ರಾಮದ ವಾಸಿಗಳಾದ ಚಿಕ್ಕರಾಮಯ್ಯ ಮತ್ತಿತರರು ಕೈಗಳಿಂದ ಹೊಡೆದು ಗಾಯಪಡಿಸಿ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣಬೆದರಿಕೆ ಹಾಕಿರುತ್ತಾರೆ. ಜಮೀನಿನ ವಿವಾದ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ  

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :  

-ಸ್ಥಳ ದಂಡ ಮೊತ್ತ :  ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ ನೇ ಆಗಸ್ಟ್ ೨೦೦೯

August 26, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೬-೦೮-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಗೋಪಸಂದ್ರ ಗ್ರಾಮದಲ್ಲಿ ಗ್ರಾಮದ ವಾಸಿ ಕೆ.ನಾರಾಯಣಸ್ವಾಮಿ ಎಂಬುವರ ವಾಸದ ಮನೆಯಲ್ಲಿ ಕಳವು ಕೃತ್ಯ ಸಂಭವಿಸಿರುತ್ತದೆ. ಮನೆಯಲ್ಲಿ ಯಾರೂ ಇರದ ಸಮಯವನ್ನು ನೋಡಿಕೊಂಡು ದಿನಾಂಕ ೨೫-೦೮-೨೦೦೯ ರಂದು ೧೨೦೦ ಗಂಟೆ ಸಮಯದಲ್ಲಿ ಮನೆಯೊಳಗೆ ನುಗ್ಗಿದ ಯಾರೋ ಕಳ್ಳರು ಮನೆಯಲ್ಲಿನ ಫೊಟೋಸ್ಟಾಂಡಿನಲ್ಲಿದ್ದ ಬೀರು ಬೀಗವನ್ನು ತೆಗೆದುಕೊಂಡು ಬೀರು ತೆಗೆದು ಅದರಲ್ಲಿದ್ದ ರೂ. ೮,೫೦೦/ ನಗದು ಹಾಗೂ ರೂ. ೯೮,೦೦೦/ ರೂ ಬೆಲೆ ಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮಾಲೂರು ತಾಲೂಕು ಮಾಸ್ತಿ ಗ್ರಾಮದ ವಾಸಿ ಸುರೇಂದ್ರನಾಥ ಎಂಬುವರಿಗೆ ಸೇರಿದ ಟಿಎನ್-೨೪-ಎಕ್ಸ್-೦೭೬೭ ದ್ವಿಚಕ್ರವಾಹನ ಕಳುವಾಗಿರುತ್ತದೆ. ದಿನಾಂಕ ೦೭-೦೮-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಸುರೇಂದ್ರನಾಥ ರವರು ತಮ್ಮ ವಾಹನವನ್ನು ಅನ್ನಪೂರ್ಣೇಶ್ವರಿ ವೈನ್ಸ್ ಮುಂಬಾಗ ನಿಲ್ಲಿಸಿದ್ದ ಸಮಯದಲ್ಲಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೮-೨೦೦೯ ರಂದು ೨೨೦೦ ಗಂಟೆ ಸಮಯದಲ್ಲಿ ಆಂದ್ರಪ್ರದೇಶ ವಾಸಿಯಾದ ಸತ್ಯನಾರಾಯಣರಾಜು ಎಂಬುವರು ಕೆಎ-೪೦-೩೬೨೩ ಸಂಖ್ಯೆ ಟಾಟಾ ಐ.ಎಸ್ ಮಿನಿ ಟೆಂಪೋ ವಾಹನದಲ್ಲಿ ಕೋಲಾರದಿಂದ ಹೊಸಕೋಟೆಗೆ ಹೋಗುವ ಎನ್.ಹೆಚ್ ೪ ರಸ್ತೆಯ ಬೆತ್ತನಿ ಗ್ರಾಮದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಯಾವುದೋ ಅಪರಿಚಿತ ವಾಹನವೊಂದರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದು ಹೊರಟು ಹೋಗಿರುತ್ತಾನೆ. ಇದರ ಪರಿಣಾಮ ಸತ್ಯನಾನಾರಾಯಣರಾಜು ರವರಿಗೆ ತೀವ್ರವಾದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.

-ಸಾಧಾರಣ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೮-೨೦೦೯ ರಂದು ೧೯೧೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಮುತ್ತುಕದಹಳ್ಳಿ ಗ್ರಾಮದ ವಾಸಿ ಮಾರ್ಕೊಂಡ ಎಂಬುವರು ತಮ್ಮ ಅಣ್ಣನೊಡನೆ ದ್ವಿಚಕ್ರವಾಹನದಲ್ಲಿ ಹುಂಗೇನಹಳ್ಳಿ ಕೆರೆ ಕೋಡಿ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಆಟೋ ಸಂಖ್ಯೆ ಕೆಎ-೦೭-೮೩೫೭ ರ ಚಾಲಕ ತನ್ನ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನದಲ್ಲಿದ್ದವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಅಗ್ರಹಾರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೪-೦೮-೨೦೦೮ ರಂದು ೧೫೩೦ ಗಂಟೆ ಸಮಯದಲ್ಲಿ ಅಗ್ರಹಾರ ಗ್ರಾಮದ ವಾಸಿ ಪೆದ್ದನರಸಿಂಹಪ್ಪ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಚಂದ್ರಪ್ಪ ಹಾಗೂ ಇನ್ನಿತರೇ ೭ ಜನರು ಅಕ್ರಮಗುಂಪು ಕಟ್ಟಿಕೊಂಡು ಕೈಗಳಿಂದ ದೊಣ್ಣೆಯಿಂದ ಮತ್ತು ಇಟ್ಟಿಗೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಜಮೀನಿನ ವಿವಾದದ ಹಿನ್ನಲೆ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ. ಈ ಬಗ್ಗೆ ಎರಡೂ ಗುಂಪಿನವರು ಹೊಡೆದಾಡಿಕೊಂಡಿದ್ದು ದೂರು ಮತ್ತು ಪ್ರತಿದೂರು ಬಂದ ಹಿನ್ನೆಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಹಲ್ಲೆ: ೦೧

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಅಗ್ರಹಾರ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೪-೦೮-೨೦೦೮ ರಂದು ೧೫೩೦ ಗಂಟೆ ಸಮಯದಲ್ಲಿ ಅಗ್ರಹಾರ ಗ್ರಾಮದ ವಾಸಿ ಚಂದ್ರಪ್ಪ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಪೆದ್ದನರಸಿಂಹಪ್ಪ ಹಾಗೂ ಇನ್ನಿತರೇ ಜನರು ಕೈಗಳಿಂದ ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ. ಜಮೀನಿನ ವಿವಾದದ ಹಿನ್ನಲೆ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ. ಈ ಬಗ್ಗೆ ಎರಡೂ ಗುಂಪಿನವರು ಹೊಡೆದಾಡಿಕೊಂಡಿದ್ದು ದೂರು ಮತ್ತು ಪ್ರತಿದೂರು ಬಂದ ಹಿನ್ನೆಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ ನೇ ಆಗಸ್ಟ್ ೨೦೦೯

August 25, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೫-೦೮-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೦೭-೦೮-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಮಾಸ್ತಿ ಗ್ರಾಮದ ವಾಸಿ ಜಿ.ವಿ.ಸುರೇಂದ್ರ ಎಂಬುವರು ತನ್ನ ದ್ವಿಚಕ್ರ ವಾಹನ ಸಂಕ್ಯೆ ಟಿಎನ್-೨೪-ಎಕ್ಸ್-೦೭೬೭ನ್ನು ಅನ್ನಪೂರ್ಣೇಶ್ವರಿ ವೈನ್ಸ್ ಮುಂಬಾಗ ನಿಲ್ಲಿಸಿದ್ದನ್ನು ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿರುತ್ತಾರೆ,

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೩

ವೇಮಗಲ್ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಉರಿಗಿಲಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೪-೦೮-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಉರಿಗಿಲಿ ಗ್ರಾಮದ ವಾಸಿ ಈರಣ್ಣ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಯಾದ ವೆಂಕಟೇಶ ಮತ್ತಿತರು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಜಮೀನಿನ ವಿವಾದ ಜಗಳಕ್ಕೆ ಕಾರಣವಾಗಿದ್ದು ಈ ಬಗ್ಗೆ ಎರಡೂ ಗುಂಪಿನವರು ಹೊಡೆದಾಡಿಕೊಂಡಿರುತ್ತಾರೆ. ದೂರು ಮತ್ತು ಪ್ರತಿದೂರು ಬಂದ ಹಿನ್ನಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಓಬೇನಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೪-೦೮-೨೦೦೯ ರಂದು ೦೭೦೦ ಗಂಟೆ ಸಮಯದಲ್ಲಿ ಓಬೇನಳ್ಳಿ ಗ್ರಾಮದ ವಾಸಿಗಳಾದ ಮುಳಬಾಗಿಲಪ್ಪ ಮತ್ತಿತರರು ಹಾಗೂ ಅದೇ ಗ್ರಾಮದ ವಾಸಿ ಹನುಮಪ್ಪ ಮತ್ತಿತರರ ಎರಡೂ ಗುಂಪಿನವರು ಪರಸ್ಪರ ಜಗಳ ಮಾಡಿಕೊಂಡು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಅಕ್ರಮಗುಂಪು ಕಟ್ಟಿಕೊಂಡು ದೊಣ್ಣೆಗಳಿಂದ ಕೈಗಳಿಂದ ಹೊಡೆದಾಡಿಕೊಂಡಿರುತ್ತಾರೆ. ಈ ಬಗ್ಗೆ ದೂರು ಮತ್ತು ಪ್ರತಿದೂರು ಬಂದ ಹಿನ್ನಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ಉರಿಗಿಲಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೪-೦೮-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಉರಿಗಿಲಿ ಗ್ರಾಮದ ವಾಸಿ ನಾರಾಯಣಸ್ವಾಮಿ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಯಾದ ಈರಣ್ಣ ಮತ್ತಿತರು ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿ ಕೈಗಳಿಂದ ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಜಮೀನಿನ ವಿವಾದ ಜಗಳಕ್ಕೆ ಕಾರಣವಾಗಿದ್ದು ಈ ಬಗ್ಗೆ ಎರಡೂ ಗುಂಪಿನವರು ಹೊಡೆದಾಡಿಕೊಂಡಿರುತ್ತಾರೆ. ದೂರು ಮತ್ತು ಪ್ರತಿದೂರು ಬಂದ ಹಿನ್ನಲೆಯಲ್ಲಿ ಕೇಸು ಮತ್ತು ಪ್ರತಿಕೇಸು ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ ನೇ ಆಗಸ್ಟ್ ೨೦೦೯

August 23, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೪-೦೮-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೮-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಮೂರಾಂಡಹಳ್ಳಿ ಗ್ರಾಮದ ವಾಸಿ ವೆಂಕಟರಾಮಪ್ಪ ಎಂಬುವರು ತನ್ನ ಸೈಕಲ್‌ನಲ್ಲಿ  ಮೂರಾಂಡಹಳ್ಳಿ ಕ್ರಾಸ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಶ್ರೀನಿವಾಸಪುರ ಕಡೆಯಿಂದ ಬಂದ  ಖಾಸಗಿ ಬಸ್ ಸಂಖ್ಯೆ ಕೆಎ-೦೭-ಡಿ-೭೬೦೦ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ವೆಂಕಟರಾಮಪ್ಪ ರವರಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರದ ಎಸ್‌.ಎನ್.ಅರ್‍.ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ೧೬೦೦ ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾರೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೮-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕೊಂಡರಾಜನಹಳ್ಳಿ ಗ್ರಾಮದ ವಾಸಿ ಗೋಪಾಲಪ್ಪ ಎಂಬುವರು ತನ್ನ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೩-ಇಹೆಚ್-೧೭೩೮ರಲ್ಲಿ ಮಕ್ಕಳಾದ ಪ್ರವೀಣ್ ಕುಮಾರ್‍, ಪವನ್ ಕುಮಾರ್‍ ಮತ್ತು ಪ್ರಜ್ವಲ್ ಕುಮಾರ್‍ ಎಂಬುವರ ಕುಳ್ಳಿರಿಸಿಕೊಂಡು ರಾಷ್ಟ್ರೀಯ ಹೆದ್ದಾರಿ-೪ರ ಚಲುವನಹಳ್ಳಿ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಕೋಲಾರ ಕಡೆಯಿಂದ ಬಂದ  ಗೂಡ್ಸ್ ಟೆಂಪೋ ಸಂಖ್ಯೆ ಕೆಎ-೦೪-೨೭೨೩ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ  ದ್ವಿಚಕ್ರ ವಾಹನದಲ್ಲಿದ್ದವರಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರದ  ಅರ್‍.ಎಲ್.ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ಕುಮಾರ್‍ ಎಂಬುವರು  ಮೃತಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ಇಲ್ಲ 

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೬-೦೮-೨೦೦೯ ರಂದು ೦೬೩೦ ಗಂಟೆ ಸಮಯದಲ್ಲಿ ಬಂಗಾರುಪೇಟೆ ತಾಲೂಕು ದೋಣಿಮಡಗು ಗ್ರಾಮದ ವಾಸಿ ಎನ್.ವಡಿವೇಲನ್ ಎಂಬುವರ ಪತ್ನಿ ಶ್ರಿಮತಿ ಸುಮತಿ(೨೬) ಎಂಬುವರು ಕೋಲಾರದ ಮೆಡಿಕಲ್ ಕಾಲೇಜಿನಿಂದ ನೀರು ತರುವುದಾಗಿ ಹೇಳಿ ಹೋದವರು ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :  ೨೫

-ಸ್ಥಳ ದಂಡ ಮೊತ್ತ :  ರೂ. ೩,೯೦೦/-

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೩ ನೇ ಆಗಸ್ಟ್ ೨೦೦೯

August 22, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೩-೦೮-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೨-೦೮-೨೦೦೯ ರಂದು ೨೦೧೫ ಗಂಟೆ ಸಮಯದಲ್ಲಿ ಮಾಲೂರು ಪಟ್ಟಣದ ಮಾರುತಿ ಬಡಾವಣೆ ವಾಸಿ ಸುಗುಣಮ್ಮ ಎಂಬುವರು ಪಟ್ಟಣದ ಪೊಲೀಸ್ ಆಚಾರಿ ರವರ ಮನೆಯ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ ಇಬ್ಬರು ಅಪರಿಚಿತ ವ್ಯೆಕ್ತಿಗಳು ಸುಗುಣಮ್ಮ ರವರ ಕತ್ತಿನಲ್ಲಿದ್ದ ರೂ. ೧,೪೦,೦೦೦/- ಬೆಲೆ ಬಾಳುವ ೧೦೦ ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುತ್ತಾರೆ,

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೮-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಕೋಲಾರ ನಗರದ   ವಾಸಿ ರಿಯಾಜ್ ಎಂಬುವರು ತನ್ನ ಬಜಾಜ್ ಸ್ಕೂಟರ್‌ನಲ್ಲಿ  ಕೆ‌ಎಸ್‌ಆರ್‌ಟಿಸಿ ಡಿಪೋ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಬಂದ  ಕೆಎಸ್‌ಆರ್‌ಟಿಸಿ ಬಸ್ ಸಂಖ್ಯೆ ಕೆಎ-೦೭-ಎಫ್-೧೩೨೭ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ರಿಯಾಜ್ ರವರಿಗೆ ಗಾಯಗಳಾಗಿರುತ್ತದೆ..

ಮೋಸ / ವಂಚನೆ ಪ್ರಕರಣಗಳು: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ,  ದಿನಾಂಕ ೧೮-೦೯-೨೦೦೮ ಮತ್ತು ೨೬-೦೯-೨೦೦೮ ರ ಮಧ್ಯೆ ೧. ಎಂ.ವೆಂಕಟೇಶಪ್ಪ, ಸಹಕಾರ ಸಂಘದ ಕಾರ್ಯದರ್ಶಿ. ೨. ಎಂ.ಶ್ರೀನಿವಾಸಪ್ಪ, ಮಾಜಿ ಅಧ್ಯಕ್ಷರು, ೩. ಹುಸೇನ್ ಸಾಬ್ ದೊಡ್ಡಮುನಿ, ಶಾಖಾ ವ್ಯವಸ್ಥಾಪಕರು, ಡಿ.ಸಿ.ಸಿ.ಬ್ಯಾಂಕ್, ೪. ಕೆ.ಎಂ.ಜಗದೀಶ್, ಮಾಜಿ ಕಾರ್ಯಾದರ್ಶಿ ಎಂಬುವರು ಕೆ.ಎಸ್.ಎಸ್.ಸಿ.ಎಫ್.ಸಿ.ಬ್ಯಾಂಕ್ ನಿಂದ ಯಶಸ್ವಿನಿ ಬಾಬ್ತು ರೂ. ೨,೮೯,೦೦೦/- ಗಳನ್ನು ದುರುಪಯೋಗ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಜಿ.ಪ್ರಕಾಶ್, ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಕೋಲಾರ ವಿಭಾಗ ರವರು ದೂರನ್ನು ದಾಖಲಿಸಿರುತ್ತಾರೆ.   

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ೦೩

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೮-೦೮-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ ಪಳ್ಳಿಗರಪಾಳ್ಯ ವಾಸಿ ವಿವೇಕಾನಂದ ಮತ್ತು ಅವರ ಪತ್ನಿಯ ಮೇಲೆ ಜಗಳ ತೆಗೆದ ಕುರುಬರಪಾಳ್ಯ ವಾಸಿ ಶಂಕರ್‍ ಎಂಬುವರು ಜಗಳ ತೆಗೆದು ಅವಾಚ್ಚಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ.  

ಗಲ್‌‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೨-೦೮-೨೦೦೯ ರಂದು ೧೩೩೦ ಗಂಟೆ ಸಮಯದಲ್ಲಿ ಕೋಲಾರ ಪಟ್ಟಣದ ಟಮಕ ವಾಸಿ ವೆಂಕಟೇಶಪ್ಪ ಎಂಬುವರ ನಿವೇಶನದಲ್ಲಿ ಗೋವಿಂದಪ್ಪ, ಪ್ರಮೀಳಮ್ಮ ಮತ್ತು ವೆಂಕಟರಾಮ ಎಂಬುವರು ಕಲ್ಲು ಚಪ್ಪಡಿಗಳನ್ನು ಹಾಕುತ್ತಿದ್ದರು. ಇದನ್ನು ಪ್ರಶ್ನಿಸಿದ ವೆಂಕಟೇಶಪ್ಪ ರವರಿಗೆ  ಅವಾಚ್ಚಶಬ್ದಗಳಿಂದ ಬೈದು ಕೈಗಳಿಂದ ಹೊಡೆದು   ಗಾಯಪಡಿಸಿರುತ್ತಾರೆ. 

ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೧-೦೮-೨೦೦೯ ರಂದು ೧೭೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಹೆಬ್ಬಣಿ ಗ್ರಾಮದ  ವಾಸಿ ಕೆ.ಎನ್.ಶ್ರೀರಾಮಪ್ಪ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಶಂಕರಪ್ಪ ಮತ್ತು ಇತರೆ ೩ ಜನರು ಮಳೆಯ ನೀರು ಮೊಲ್ಡ್ ಮೇಲೆ ಬಿಟ್ಟ ವಿಚಾರದಲ್ಲಿ  ಜಗಳ ತೆಗೆದು ಅವಾಚ್ಚಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆದು ಗಾಯಪಡಿಸಿರುತ್ತಾರೆ. 

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ವಿಧ್ಯುತ್ ತಂತಿ ಸ್ಪರ್ಶದಿಂದ ಸಾವಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೨-೦೮-೨೦೦೯ ರಂದು ಬೆಳಿಗ್ಗೆ ಮುಳಬಾಗಿಲು ತಾಲೂಕು ಕೆ.ಬಿ.ಕೊತ್ತೂರು ಗ್ರಾಮದ ವಾಸಿ ರಾಮಚಂದ್ರಪ್ಪ  ರವರಿಗೆ ಅವರ ತೋಟದಲ್ಲಿ ವಿಧ್ಯುತ್ ತಂತಿ ಸ್ಪರ್ಶವಾದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೦-೦೮-೨೦೦೯ ರಂದು ಶ್ರೀನಿವಾಸಪುರ ತಾಲೂಕು ವೆಂಕಟೇಶನಗರ ಗ್ರಾಮದ ವಾಸಿ ಆರ್‍.ಗೋಪಾಲಕೃಷ್ಣ ಎಂಬುವರ ಮಗಳಾದ ಸುಮಾ ಎಂಬುವರು ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ೦೯

-ಸ್ಥಳ ದಂಡ ಮೊತ್ತ :  ರೂ. ೯೦೦

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.