ದಿನದ ಅಪರಾಧಗಳ ಪಕ್ಷಿನೋಟ ೦೧ ನೇ ಅಕ್ಟೋಬರ್ ೨೦೦೯

September 30, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೧-೧೦-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೨

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.   ಈ ಕೃತ್ಯವು ಕೋಲಾರ ನಗರದ ವೀರಾಂಜನೇಯ ನಗರದಲ್ಲಿ  ದಿನಾಂಕ: ೩೦-೦೯-೨೦೦೯ ರಂದು ೧೧೦೦ ಗಂಟೆಯಿಂದ ೧೨೦೦ ಗಂಟೆ  ಸಮಯದಲ್ಲಿ ಸಂಭವಿಸಿರುತ್ತದೆ. ವೀರಾಂಜನೇಯ ನಗರದ ವಾಸಿಯಾದ ಅಂಬರೀಶ್ ಎಂಬುವರು ಈಗ್ಗೆ ೧೦ ವರ್ಷಗಳ ಹಿಂದೆ ಮುಳಬಾಗಿಲು ತಾಲ್ಲೂಕು ದುಗ್ಗಸಂದ್ರ ಗ್ರಾಮದ ವಾಸಿಯಾದ ರಾಮಯ್ಯ ಎಂಬುವರ ಮಗಳಾದ ಶಾರದಮ್ಮ ಎಂಬುವರನ್ನು ಮದುವೆ ಮಾಡಿಕೊಂಡಿರುತ್ತಾರೆ. ನಂತರ ಈಗ್ಗೆ ೮ ವರ್ಷಗಳ ಹಿಂದೆ ಶಾರದಮ್ಮ ರವರ ಅಕ್ಕ ಪ್ರಮೀಳಮ್ಮ ಎಂಬುವರನ್ನು ಎರಡನೇ ಮದುವೆ (ಅಕೆಯ ಗಂಡ ತೀರಿಕೊಂಡಿದ್ದ  ಕಾರಣ) ಮಾಡಿಕೊಂಡು ಒಟ್ಟಿಗೆ ಜೀವನ ಸಾಗಿಸುತ್ತಿರುತ್ತಾರೆ.  ಈಗಿರುವಾಗ ೬ ತಿಂಗಳ ಹಿಂದೆ ಅಕ್ಕ ತಂಗಿಯರ ನಡುವೆ ಮನಸ್ಥಾಪಗಳುಂಟಾಗಿ ಬೇರೆ ಬೇರೆ ಮನೆಗಳಲ್ಲಿ ವಾಸವಾಗಿರುತ್ತಾರೆ.  ದಿನಾಂಕ ೨೦-೦೯-೨೦೦೯ ರಂದು ಅಂಬರೀಶ್ ತನ್ನ ಪತ್ನಿ ಶಾರದಮ್ಮ ರವರೊಂದಿಗೆ ಸಂಸಾರದ ವಿಚಾರದಲ್ಲಿ ಜಗಳ ಮಾಡಿಕೊಂಡು ಅಕೆಯ ಕತ್ತನ್ನು ಹಿಸುಕಿ ಕೊಲೆ ಮಾಡಿರುತ್ತಾನೆ.

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೦೧-೧೦-೨೦೦೯ ಕ್ಕೆ ಹಿಂದೆ ಯಾರೋ ದುರಾತ್ಮರು ಸುಮಾರು ೨೫ ವರ್ಷ ವಯಸ್ಸಿನ ಹೆಂಗಸನ್ನು ಮಾಲೂರು ತಾಲ್ಲೂಕು ಕೊಂಡಶೆಟ್ಟಿಹಳ್ಳಿ ಗ್ರಾಮದ ಸಲೀಂ ಎಂಬುವರ ನೀಲಿಗಿರಿ ತೋಪಿನಲ್ಲಿ ಯಾವುದೋ ಉದ್ದೇಶದಿಂದ ಕೊಲೆ ಮಾಡಿ ಶವವನ್ನು ನೀಲಿಗಿರಿ ಸೊಪ್ಪಿನಿಂದ ಸುಟ್ಟು ಹಾಕಿರುತ್ತಾರೆ.  ಈ ಬಗ್ಗೆ ತೋಟದ ಮಾಲೀಕರಾದ ಸಲೀಂ ರವರು ದೂರು ದಾಖಲು ಮಾಡಿರುತ್ತಾರೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ವಿವಿಧ ಶಾಲೆಗಳಲ್ಲಿ ಗ್ಯಾಸ್ ಸಿಲಿಂಡರ್‍ ಕಳ್ಳತನಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೬-೦೯-೨೦೦೯ ರಂದು ರಾತ್ರಿ ಯಾರೋ ಕಳ್ಳರು ಮಾಲೂರು ತಾಲ್ಲೂಕು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಾದ ಚಿನಪಗಾನಹಳ್ಳಿ, ನಕ್ಕನಹಳ್ಳಿ, ಲಕ್ಷ್ಮೀಸಾಗರ, ಆಗಲಕೋಟೆ,  ಬಲ್ಲೇರಿ ಮತ್ತು ಅನಿಗಾನಹಳ್ಳಿ ಕರಡಗುರ್ಕಿ ಮತ್ತು ಪದವಿ ಪೂರ್ವ ಕಾಲೇಜು ಟೇಕಲ್ ಶಾಲೆಗಳ ಬೀಗಗಳನ್ನು ಹೊಡೆದು ಒಳಗೆ ಪ್ರವೇಶ ಮಾಡಿ  ಒಟ್ಟು ೨೦ ಸಾವಿರ ರೂ ಬೆಲೆ ಬಾಳುವ ೨೦ ಗ್ಯಾಸ್ ಸಿಲಿಂಡರ್‍ ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.  ಈ ಬಗ್ಗೆ ವೆಂಕಟರಾಮರೆಡ್ಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಲೂರು ರವರು ದೂರನ್ನು ದಾಖಲಿಸಿರುತ್ತಾರೆ.

ಸಾಧಾರಣ ಕಳ್ಳತನ: ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಟೆಲಿಪೋನ್ ಕೇಬಲ್ ವೈರ್‍ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೩೦-೦೯-೨೦೦೯ ರಂದು ಯಾರೋ ಕಳ್ಳರು ಬೆಸ್ಕಾಂ ಇಲಾಖೆಗೆ ಸಂಬಂದಿಸಿದ ಕೋಡಿಕಣ್ಣೂರು ಕೆರೆಯ ಬಳಿ ಅಳವಡಿಸಿದ್ದ ೧೬ ಮೀಟರ್‍ ಕೇಬಲ್ ವೈರನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.  ಕಳುವಾದ ಮಾಲಿನ ದರ ೫೦೦೦/- ರೂಗಳಾಗಿರುತ್ತದೆ.  ಈ ಬಗ್ಗೆ ರಹಮತ್ತುಲ್ಲಾ ಷರೀಪ್, ಟೆಲಿಪೋನ್ ಮೆಕ್ಯಾನಿಕ್ ರಹಮತ್ ನಗರ ಎಕ್ಸಚೇಂಚ್ ಕೋಲಾರ ರವರು ದೂರನ್ನು ದಾಖಲು ಮಾಡಿರುತ್ತಾರೆ.

ವಾಹನ ಕಳ್ಳತನ : ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೮-೦೯-೨೦೦೯ ರಂದು ರಾತ್ರಿ ೨೩೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ಎಂ.ಬಿ.ರಸ್ತೆಯ ವಾಸಿ ಎಂ.ಈಶ್ವರ ರೆಡ್ಡಿ ಎಂಬುವರು ತನ್ನ ಹೀರೋ ಹೋಂಡಾ ಸ್ಪ್ಲಂಡರ್‍  ಪ್ಲಸ್ ದ್ವಿಚಕ್ರ ವಾಹನ ಸಂ. ಎಪಿ-೦೪-ಎನ್-೫೭೭೬ ಅನ್ನು ತಮ್ಮ ಕಾಂಪೌಡಿನಲ್ಲಿ ನಿಲ್ಲಿಸಿದ್ದರು. ಅ ಸಮಯದಲ್ಲಿ ಯಾರೋ ಕಳ್ಳರು ಅ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.  ಕಳುವಾದ ವಾಹನದ ಬೆಲೆ ತಿಳಿಯಬೇಕಾಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಸಾವಿಗೆ  ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಈ ಕೃತ್ಯವು ದಿನಾಂಕ ೨೯-೦೯-೨೦೦೯ ರಂದು ಕೋಲಾರ ತಾಲ್ಲೂಕು ಲಕ್ಷ್ಮೀಸಾಗರ ಗ್ರಾಮದ ಬಳಿ ಇರುವ ಶ್ರೀ ಲಕ್ಷ್ಮೀ ನರಸಿಂಹ ಜಲ್ಲಿ ಕ್ರಷರ್‍ ನಲ್ಲಿ ಸಂಭವಿಸಿರುತ್ತದೆ.  ಈಗ್ಗೆ ೩ ತಿಂಗಳ ಹಿಂದೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಕೊನನಕಲ್ಲು ಗ್ರಾಮದ ವಾಸಿಯಾದ ನೀಲಕಂಠರಾವ್ ಎಂಬುವರ ಮಗಳಾದ ವರಲಕ್ಷ್ಮೀಬಾಯಿ ಮತ್ತು   ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಹಂದೇನಹಳ್ಳಿ ಗ್ರಾಮದ ವಾಸಿ ಕೃಷ್ಣಪ್ಪ ಎಂಬುವರು ಒಬ್ಬರನ್ನೊಬ್ಬರು  ಪರಸ್ಪರ  ಪ್ರೀತಿಸಿ ಮದುವೆ ಮಾಡಿಕೊಂಡಿರುತ್ತಾರೆ.  ಗಂಡ ಕೃಷ್ಣಪ್ಪ ಪ್ರತಿ ದಿನ ಕುಡಿದು ಬಂದು ತವರು ಮನೆಯಿಂದ ಒಂದು ಲಕ್ಷ ರೂ. ಗಳನ್ನು ತರುವಂತೆ ಹಿಂಸೆ ಮಾಡುತ್ತಿದ್ದು ದಿನಾಂಕ ೨೯-೦೯-೨೦೦೯ ರಂದು ರಾತ್ರಿ ಕೃಷ್ಣಪ್ಪ ಅಕೆಗೆ ಸೀಮೆಎಣ್ಣೆ ಹಾಕಿ ಬೆಂಕಿ ಹಚ್ಚಿದ್ದರಿಂದ ತೀವ್ರವಾದ ಸುಟ್ಟುಗಾಯಗಳಾಗಿ ಚಿಕಿತ್ಸೆಗಾಗಿ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಯಾಗದೆ ಮೃತಪಟ್ಟಿರುತ್ತಾರೆ.

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೯-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಕಾಮಸಾನಹಳ್ಳಿ ಗ್ರಾಮದ ವಾಸಿ ವೆಂಕಟೇಶ್ ಮತ್ತು ಗುರ್‍ರಪ್ಪ ಎಂಬುವರು ದ್ವಿಚಕ್ರವಾಹನ ಸಂಖ್ಯೆ ಕೆಎ-೦೫-ಎಲ್-೩೧೧೦ ರಲ್ಲಿ ಎನ್.ಹೆಚ್ ೪ ರ ಆರ್‍.ಟಿ.ಒ ಚೆಕ್‌ಪೋಸ್ಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂದುಗಡೆಯಿಂದ ಬಂದ ನೋಂದಣಿ ಸಂಖ್ಯೆ ಇಲ್ಲದ ಟ್ರಾಕ್ಟರ್‍ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ವೆಂಕಟೇಶ್ ರವರ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಾದ ವೆಂಕಟೇಶ್ ಮತ್ತು ಗುರ್‍ರಪ್ಪ ರವರಿಗೆ ಗಾಯಗಳಾಗಿದ್ದು ಈ ಸಂಬಂಧ ಚಿಕಿತ್ಸೆಗಾಗಿ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಇವರ ಪೈಕಿ ಗು‌ರ್‍ರಪ್ಪ ರವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

-ಸಾಧಾರಣ: ೦೩

ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೯-೨೦೦೯ ರಂದು ೧೪೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಎಂ.ವೆಂಕಟಾಪುರ ಗ್ರಾಮದ ವಾಸಿ ಚಿನ್ನಮ್ಮ ಎಂಬುವರು ತಮ್ಮ ಗ್ರಾಮದಿಂದ ಎನ್.ವಡ್ಡಹಳ್ಳಿಗೆ ಹೋಗುವ ಸಲುವಾಗಿ ಎನ್.ಹೆಚ್ ೪ ರಸ್ತೆಯ ಮಾರ್ಗವಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ನಂಗಲಿ ಕಡೆಯಿಂದ ಬಂದ ಕೆಎ-೩೩-ಎಂ-೫೧೦ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಚಿನ್ನಮ್ಮ ರವರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಚಿನ್ನಮ್ಮ ರವರಿಗೆ ಗಾಯಗಳುಂಟಾಗಿರುತ್ತದೆ.

ಮುಳಬಾಗಿಲು  ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೯-೨೦೦೯ ರಂದು ೧೪೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಎಂ.ವೆಂಕಟಾಪುರ ಗ್ರಾಮದ ವಾಸಿ ಚಿನ್ನಮ್ಮ ಎಂಬುವರು ತಮ್ಮ ಗ್ರಾಮದಿಂದ ಎನ್.ವಡ್ಡಹಳ್ಳಿಗೆ ಹೋಗುವ ಸಲುವಾಗಿ ಎನ್.ಹೆಚ್ ೪ ರಸ್ತೆಯ ಮಾರ್ಗವಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ನಂಗಲಿ ಕಡೆಯಿಂದ ಬಂದ ಕೆಎ-೩೩-ಎಂ-೫೧೦ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಚಿನ್ನಮ್ಮ ರವರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಚಿನ್ನಮ್ಮ ರವರಿಗೆ ಗಾಯಗಳುಂಟಾಗಿರುತ್ತದೆ.

ಮುಳಬಾಗಿಲು  ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೯-೨೦೦೯ ರಂದು ೧೧೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಹಿರಣ್ಯಗೌಡನಹಳ್ಳಿ ಗ್ರಾಮದ ವಾಸಿ ಮುನಿವೆಂಕಟಪ್ಪ ಎಂಬುವರು ಮುಳಬಾಗಿಲು ಟೌನ್ ಕ.ಇ.ಬಿ ಕಛೇರು ಮುಂಬಾಗ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಹಿಂಭಾಗದಿಂದ ಬಂದ ಟಾಟಾ ಸುಮೋ ಸಂಖ್ಯೆ ಎಪಿ-೦೩-ಟಿವಿ-೫೭೮೬ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಮುನಿವೆಂಕಟಪ್ಪ ರವರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಮುನಿವೆಂಕಟಪ್ಪ ರವರಿಗೆ ಗಾಯಗಳುಂಟಾಗಿರುತ್ತದೆ.

ಮುಳಬಾಗಿಲು  ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೯-೨೦೦೯ ರಂದು ೧೨೦೦ ಗಂಟೆ ಸಮಯದಲ್ಲಿ ತಮಿಳುನಾಡಿನ ರಾಜು ಮತ್ತು ರಾಜೇಂದ್ರ ಎಂಬುವರು ತಮ್ಮ ದ್ವಿಚಕ್ರವಾಹನ ಹೀರೋಹೋಂಡ ಸಂಖ್ಯೆ ಟಿಎನ್-೨೯-ಎಜಡ್-೫೧೫೨ ರಲ್ಲಿ ಮುಳಬಾಗಿಲು ತಾಲೂಕು ಕೊಂಡೇನಹಳ್ಳಿ ಕೆರೆಯ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಹೀರೋಹೋಂಡಾ ಸ್ಪ್ಲೆಂಡರ್‍ ಸಂಖ್ಯೆ ಕೆಎ-೦೭-ಕ್ಯೂ-೭೪೯೨ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಹಿಂಬದಿಯಲ್ಲಿದ್ದ ರಾಜೇಂದ್ರ ರವರಿಗೆ ಗಾಯಗಳುಂಟಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೩೦-೦೯-೨೦೦೯ ರಂದು ೧೧೩೦ ಗಂಟೆ ಸಮಯದಲ್ಲಿ ಮಾಲೂರು ತಾಲ್ಲೂಕು ಬೆಟ್ಟಹಳ್ಳಿ ಗ್ರಾಮದ ವಾಸಿ ನಾರಾಯಣಸ್ವಾಮಿ ಮತ್ತು ಅವರ ಮನೆಯವರು ತಮ್ಮ ತೋಟದಲ್ಲಿ ಟಮಾಟೋ ಬಿಡುಸುತ್ತಿದ್ದರು.  ಅ ಸಮಯದಲ್ಲಿ ಅದೆ ಗ್ರಾಮದ ವಾಸಿಗಳಾದ ಸುರೇಶ್ ಮತ್ತು ಇತರೆ ೩ ಜನರು ಜಗಳ ಮಾಡುವ ಉದ್ದೇಶದಿಂದ ನಾರಾಯಣಸ್ವಾಮಿ ಮತ್ತು ಅವರ ಮಗನಿಗೆ ಗಡಾರಿ ಮತ್ತು ಚನಿಕೆಯಿಂದ ಹೊಡೆದು ಗಾಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ ನೇ ಸೆಪ್ಟೆಂಬರ್ ೨೦೦೯

September 30, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೯-೦೯-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ೦೧

ವೈಯಕ್ತಿಕ ವೈಷಮ್ಯದಿಂದ ತನ್ನ ಅತ್ತೆಯನ್ನು ಸೊಸೆಯೇ ಕೊಲೆ ಮಾಡಿದ ಬಗ್ಗೆ ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ಬೊನೇಪಲ್ಲಿ ಗ್ರಾಮದ ರಾಮಚಂದ್ರ ಎಂಬುವರ ಮನೆಯಲ್ಲಿ ಕೃತ್ಯ ಸಂಭವಿಸಿರುತ್ತದೆ.  ದಿನಾಂಕ : ೨೭-೦೯-೨೦೦೯ ರಂದು ರಾತ್ರಿ ಶ್ರೀನಿವಾಸಪುರ ತಾಲ್ಲೂಕು ಬೋನೇಪಲ್ಲಿ ಗ್ರಾಮದ ವಾಸಿಯಾದ ರೆಡ್ಡಿಮ್ಮ ಎಂಬುವರು ತಮ್ಮ ಮನೆಯಲ್ಲಿ ಮಲಗಿದ್ದರು.  ಅ ಸಮಯದಲ್ಲಿ ಅಕೆಯ ಸೊಸೆಯಾದ ಲಕ್ಷ್ಮೀದೇವಿ ಮತ್ತು ಅಕೆಯ ತಂದೆಯಾದ ನಾರಾಯಣಸ್ವಾಮಿ ರವರು ರೆಡ್ಡೆಮ್ಮನ ಕತ್ತು ಹಿಸುಕಿ ಕೈಗಳಿಂದ ಪರಚಿ ಸಾಯಿಸಿರುತ್ತಾರೆ. ಈ ಬಗ್ಗೆ ಮೃತ ರೆಡ್ಡೆಮ್ಮ ರವರ ಮಗನಾದ ವಿ.ರಾಮಚಂದ್ರ ರವರು ದೂರನ್ನು ದಾಖಲಿಸಿರುತ್ತಾರೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೫

-ಮಾರಣಾಂತಿಕ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೯-೦೯-೨೦೦೯ ರಂದು ೧೩೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ಜಯನಗರದ ವಾಸಿಗಳಾದ ರಾಘವೇಂದ್ರ ಪ್ರಸಾದ್ ಮತ್ತು ಅವರ ಸ್ನೇತನಾದ ಶ್ರೀನಿವಾಸ ಎಂಬುವರು ತನ್ನ ಬಜಾಜ್ ಪ್ಲಾಟೀನಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೪-ಇಎಸ್-೩೦೧೧ ರಲ್ಲಿ ಕೋಲಾರ – ಶ್ರೀನಿವಾಸಪುರ ರಸ್ತೆಯ ಪಾಳ್ಯ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಶ್ರೀನಿವಾಸಪುರ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಸಂಖ್ಯೆ ಕೆಎ-೦೭-೪೦೪೬ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ರಾಘವೇಂದ್ರ ಪ್ರಸಾದ್ ಮತ್ತು ಶ್ರೀನಿವಾಸ ರವರಿಗೆ ತೀವ್ರತರವಾದ ಗಾಯಗಳಾಗಿ ಚಿಕಿತ್ಸೆಗಾಗಿ ಕೋಲಾರದ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ರಾಘವೇಂದ್ರ ಪ್ರಸಾದ್ ೧೯೧೫ ಗಂಟೆ ಸಮಯದಲ್ಲಿ ಮೃತ ಪಟ್ಟಿರುತ್ತಾರೆ.

-ಸಾಧಾರಣ: ೦೪

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೯-೦೯-೨೦೦೯ ರಂದು ೧೨೩೦ ಗಂಟೆ ಸಮಯದಲ್ಲಿ ಚಿತ್ತೂರು ಜಿಲ್ಲೆ ಬುಚ್ಚಿರೆಡ್ಡಿ ಖಂಡಿಗಾ ಗ್ರಾಮದ ವಾಸಿಗಳಾದ  ಜಗನ್ನಾಥ ರೆಡ್ಡಿ    ಎಂಬುವರು  ಎಪಿಎಸ್‌ಆರ್‌ಟಿ ಬಸ್ ಸಂಖ್ಯೆ ಎಪಿ-೦೩-ವೈ-೨೫೪೬ರಲ್ಲಿ ಕೋಲಾರ ತಾಲೂಕು ರಾಷ್ಟ್ರೀಯ ಹೆದ್ದಾರಿ-೪ ಕೆಂದಟ್ಟಿ ಗೇಟ್ ಬಳಿ ಹೋಗುತ್ತಿದ್ದರು.   ಆ ಸಮಯದಲ್ಲಿ  ಬಸ್ಸಿನ  ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಎದುರುಗಡೆಯಿಂದ ಬಂದ ಈಚರ್‍ ವಾಹನ ಸಂಖ್ಯೆ ಎಪಿ-೦೭-ಟಿಯು-೬೧೨೩ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ  ಬಸ್ಸಿನಲ್ಲಿದ್ದ ಜಗನ್ನಾಥರೆಡ್ಡಿ  ಮತ್ತು ಅವರ ಪತ್ನಿಗೆ   ತೀವ್ರತರವಾದ ಗಾಯಗಳಾಗಿರುತ್ತದೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೯-೦೯-೨೦೦೯ ರಂದು ೦೧೨೦ ಗಂಟೆ ಸಮಯದಲ್ಲಿ  ಕೆಎಸ್‌ಆರ್‌ಟಿಸಿ ಬಸ್ ಸಂಖ್ಯೆ ಕೆಎ-೦೧-ಎಫ್-೮೨೫೮ ರ ಚಾಲಕನಾದ ಗಣೇಶ    ಎಂಬುವರು   ಬಸ್‌ನ್ನು ಚಾಲನೆ ಮಾಡಿಕೊಂಡು   ಕೋಲಾರ ತಾಲೂಕು ರಾಷ್ಟ್ರೀಯ ಹೆದ್ದಾರಿ-೪ ಚುಂಚದೇನಹಳ್ಳಿ ಗೇಟ್ ಬಳಿ ಹೋಗುತ್ತಿದ್ದರು. ಅ ಸಮಯದಲ್ಲಿ ಹಿಂದುಗಡೆಯಿಂದ ಬಂದ ಎಪಿಎಸ್‌ಆರ್‌ಟಿ ಬಸ್ ಸಂಖ್ಯೆ ಎಪಿ-೨೮-ಝಡ್-೧೩೬೯ರ ಬಸ್ಸಿನ  ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು   ಡಿಕ್ಕಿ ಹೊಡೆದ ಪರಿಣಾಮ   ಎರೆಡು ಬಸ್ಸಿನಲ್ಲಿದ್ದವರಿಗೆ  ಗಾಯಗಳಾಗಿರುತ್ತದೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೭-೦೯-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ  ಕೋಲಾರ ತಾಲೂಕು ಕ್ಯಾಲನೂರು ಗ್ರಾಮದ ವಾಸಿ ರಾಜು ಎಂಬುವರು ತನ್ನ ಕಾರು ಸಂಖ್ಯೆ ಕೆಎ-೦೭-ಎಂ-೨೩೭೧ಅನ್ನು   ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಕೋಲಾರ ತಾಲೂಕು ಚಲ್ಡಿಗಾನಹಳ್ಳಿ ಗ್ರಾಮದ ಬಳಿ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಶೋಭಾ ರವರಿಗೆ ಗಾಯಗಳಾಗಿರುತ್ತದೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೯-೦೯-೨೦೦೯ ರಂದು ೦೯೩೦ ಗಂಟೆ ಸಮಯದಲ್ಲಿ  ಕೋಲಾರ ತಾಲೂಕು ಲಕ್ಷ್ಮೀಸಾಗರ  ಗ್ರಾಮದ ವಾಸಿಗಳಾದ ಲೋಕೆಶ್ ಮತ್ತು ಚೇತನ್ ಎಂಬುವರು ಬಸ್ಸಿಗಾಗಿ ಗೇಟ್ ನಲ್ಲಿ ಕಾಯುತ್ತಿದ್ದರು. ಆ ಸಮಯದಲ್ಲಿ ಬಂದ ಕಾರು ಸಂಖ್ಯೆ ಕೆಎ-೦೧-ಎಂಡಿ-೪೯೦೮ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಚೇತನ್ ರವರಿಗೆ ಡಿಕ್ಕಿ ಹೊಡೆದ ಪರಿಣಾಮ   ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಮಾಲೂರು ಪೊಲೀಸ್ ಠಾಣೆಯಿಂದ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೯-೦೯-೨೦೦೯ ರಂದು ೧೮೩೦ ಗಂಟೆ ಸಮಯದಲ್ಲಿ ಮಾಲೂರು ತಾಲ್ಲೂಕು ಅರಳೇರಿ ಗ್ರಾಮದ ವಾಸಿಯಾದ ಲಕ್ಷ್ಮಮ್ಮ ಎಂಬುವರು ತಮ್ಮ ಮನೆಯ ಬಳಿ ಇದ್ದಾಗ ಅದೇ ಗ್ರಾಮದ ವಾಸಿಗಳಾದ ಪೆರುಮಾಳ್ ಮತ್ತು ಇತರೆ ೨ ಜನರು ಬಂದು ಸೈಟ ವಿಚಾರದಲ್ಲಿ ಜಗಳ ಮಾಡಿ ಕೈಗಳಿಂದ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :    ೦೬

-ಸ್ಥಳ ದಂಡ ಮೊತ್ತ : ರೂ. ೬೦೦/-

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ನೇ ಸೆಪ್ಟೆಂಬರ್ ೨೦೦೯

September 28, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೯-೦೯-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

 ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ೦೨

ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೯-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಚಾಪಾರ್‍ಲಹಳ್ಳಿ ಗ್ರಾಮದ ವಾಸಿ ಶ್ರೀರಾಮಪ್ಪ ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಶಂಕರಪ್ಪ ಮತ್ತು ಇತರರು ಅವಾಚ್ಚಶಬ್ದಗಳಿಂದ ಬೈದು ದೊಣ್ಣೆಯಿಂದ ತಲೆಗೆ ಹೊಡೆದು ಗಾಯ ಪಡಿಸಿರುತ್ತಾರೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೯-೨೦೦೯ ರಂದು ೧೬೦೦ ಗಂಟೆ ಸಮಯದಲ್ಲಿ ಪಲಮನೇರು ತಾಲೂಕು ಬೈರಡ್ಡಪಲ್ಲಿ ಗ್ರಾಮದ ವಾಸಿ ರಾಮಕೃಷ್ಣರೆಡ್ಡಿ ಎಂಬುವರ ಮಗಳನ್ನು  ಮುಳಬಾಗಿಲು ತಾಲೂಕು ನೆರ್ನಹಳ್ಳಿ ಗ್ರಾಮದ ವಾಸಿ ರವಣಾರೆಡ್ಡಿ ಎಂಬುವರಿಗೆ ಕೊಟ್ಟು ೧ ವರ್ಷದ ಹಿಂದೆ ಮದುವೆ ಮಾಡಿ ಕೊಟ್ಟಿದ್ದರು. ಹೆರಿಗೆಗೆಂದು ಮಗಳನ್ನು ಮನೆಗೆ ಕರೆದುಕೊಂಡು ಬಂದಿದ್ದು, ಒಂದು ವರ್ಷವಾದರು ಅಳಿಯ ರವಣಾರೆಡ್ಡಿ ಮನೆಗೆ ಬಾರದ ಕಾರಣ ರಾಮಕೃಷ್ಣಪ್ಪ ರವರು ಕರೆಯಲು ಬಂದಿದ್ದ ಸಮಯದಲ್ಲಿ ಜಗಳ ತೆಗೆದ ರವಣಾರೆಡ್ಡಿ  ಅವಾಚ್ಚಶಬ್ದಗಳಿಂದ ಬೈದು ಹೊಡೆದು ಗಾಯ ಪಡಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೦೧

ರಾಯಲ್ಪಾಡ್ ಪೊಲೀಸ್ ಠಾಣೆಯಲ್ಲಿ ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೫-೦೯-೨೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ರಾಯಲ್ಪಾಡ್ ಗ್ರಾಮದ ವಾಸಿ ವೇಣುಗೋಪಾಲ ಎಂಬುವರ ಮಗನಾದ ಶ್ರೀನಿವಾಸ(೧೪) ಎಂಬುವನು ಗ್ರಾಮದ ಬಳಿ ಇರುವ ಸೌಂಟ್‌ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತ ಪಟ್ಟಿರುತ್ತಾನೆ.   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :    

-ಸ್ಥಳ ದಂಡ ಮೊತ್ತ : ರೂ.        

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಜೂಜಾಟ ದಾಳಿ: ೫ ಜನರ ಬಂಧನ: ರೂ. ೪೦೦/- ವಶ.

September 28, 2009

ಮಾಲೂರು ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀ ಸಂಪತ್‌ ಕುಮಾರ್‍ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಪಟ್ಟಣದ ದ್ಯಾಪಸಂದ್ರ ಸೊಸೈಟಿ ಬಳಿ ಹಣವನ್ನು ಪಣವಾಗಿಟ್ಟು ಅಂದರ್‍ ಬಾಹರ್‍ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ ಮಾಡಿ ಈ ಕೆಳಕಂಡವರನ್ನು ಬಂದಿಸಿ ಪಣವಾಗಿಟ್ಟಿದ್ದ ರೂ. ೪೦೦/- ಗಳನ್ನು ವಶ ಪಡಿಸಿಕೊಂಡಿರುತ್ತಾರೆ.

  • ವೆಂಕಟೇಶ ಬಿನ್ ಚಂದ್ರಶೇಖರ, ೨೪ ವರ್ಷ, ಬಾಬುರಾವ್ ಸ್ಟ್ರೀಟ್, ಮಾಲೂರು ಪುರ.
  • ಬಾಬನ್ನ ಬಿನ್ ಗಾರುಡಿ ಮುನಿಶಾಮಪ್ಪ, ೬೦ ವರ್ಷ, ಬಾಬುರಾವ್ ಸ್ಟ್ರೀಟ್, ಮಾಲೂರು ಪುರ.
  • ಮಂಜುನಾಥ ಬಿನ್ ಚಂದ್ರಪ್ಪ, ೨೫ ವರ್ಷ, ತಿಮ್ಮನಕುಂಟೆ, ಚಿಂತಾಮಣಿ ತಾಲೂಕು.
  • ಗಂಗಾಧರ ಬಿನ್ ರಾಮಚಂದ್ರಪ್ಪ, ೩೫ ವರ್ಷ, ೨೪ ವರ್ಷ, ಬಾಬುರಾವ್ ಸ್ಟ್ರೀಟ್, ಮಾಲೂರು ಪುರ.
  • ಫಕೀರಮ್ಮ ಬಿನ್ ನೆಲ್ಲಪ್ಪ, ೩೫ ವರ್ಷ, ೨೪ ವರ್ಷ, ಬಾಬುರಾವ್ ಸ್ಟ್ರೀಟ್, ಮಾಲೂರು ಪುರ.

ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ನೇ ಸೆಪ್ಟೆಂಬರ್ ೨೦೦೯

September 28, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೮-೦೯-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

 ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ೦೧  

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೭-೦೯-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ವೀರಾಪುರ  ಗ್ರಾಮದ ವಾಸಿಗಳಾದ ನಾರಾಯಣಸ್ವಾಮಿ ಮತ್ತು ಅವರ ಕಡೆಯವರು, ಶ್ರೀನಿವಾಸ ಮತ್ತು ಅವರ ಕಡೆಯವರು  ಹಳೆಯ ದ್ವೇಷದ ಹಿನ್ನೆಲೆಯಲ್ಲಿ  ಅಕ್ರಮ ಗುಂಪು ಕಟ್ಟಿಕೊಂಡು ಕೈಗಳಲ್ಲಿ ಮಾರಕಾಯುಧಗಳನ್ನು ಹಿಡಿದುಕೊಂಡು ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಅವಾಚ್ಚಶಬ್ದಗಳಿಂದ ಬೈದು ಪ್ರಾಬೆದರಿಕೆ ಹಾಕಿ ಕೊಂಡಿರುತ್ತಾರೆ. ಈ ಬಗ್ಗೆ ದೂರು ಮತ್ತು ಪ್ರತಿ ದೂರುಗಳು ದಾಖಲಾಗಿರುತ್ತದೆ.

 

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೦೧

ರಾಯಲ್ಪಾಡ್ ಪೊಲೀಸ್ ಠಾಣೆಯಲ್ಲಿ ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೫-೦೯-೨೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ರಾಯಲ್ಪಾಡ್ ಗ್ರಾಮದ ವಾಸಿ ವೇಣುಗೋಪಾಲ ಎಂಬುವರ ಮಗನಾದ ಶ್ರೀನಿವಾಸ(೧೪) ಎಂಬುವನು ಗ್ರಾಮದ ಬಳಿ ಇರುವ ಸೌಂಟ್‌ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತ ಪಟ್ಟಿರುತ್ತಾನೆ.   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :    

-ಸ್ಥಳ ದಂಡ ಮೊತ್ತ : ರೂ.        

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ನೇ ಸೆಪ್ಟೆಂಬರ್ ೨೦೦೯

September 27, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೭-೦೯-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೨

ಮಾಸ್ತಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ  ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೯-೨೦೦೯ ಕ್ಕೆ ಹಿಂದಿನಿಂದಲೂ  ಮಾಲೂರು ತಾಲೂಕು ದೊಡ್ಡಕಲ್ಲಹಳ್ಳಿ ಗ್ರಾಮದ ವಾಸಿ ನಾಗಮಣಿ ಎಂಬುವರ ಮೇಲೆ ವರದಕ್ಷಿಣೆ ವಿಚಾರವಾಗಿ ಜಗಳ ತೆಗೆದ ಗಂಡನಾದ ಶಂಕರಪ್ಪ ಮತ್ತು ಅವರ ಮನೆಯವರು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ಇಲ್ಲ ಸಲ್ಲದ ಆರೋಪ ಹೊರೆಸಿ ಸೀಮೆ ಎಣ್ಣೆ ಹಾಕಿ ಸುಡುವುದಾಗಿ ಬೆದರಿಕೆ ಹಾಕಿರುತ್ತಾರೆ ಎಂದು ನಾಗಮಣಿ ತನ್ನ ದೂರಿನಲ್ಲಿ ತಿಳಿಸಿರುತ್ತಾರೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದಿಂದ ಮೃತ ಪಟ್ಟಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈಗ್ಗೆ ಸುಮಾರು ೬ ತಿಂಗಳ ಹಿಂದೆ ಹೊಸಕೋಟೆ ತಾಲೂಕು ಕಟ್ಟಿಗೇನಹಳ್ಳಿ ಗ್ರಾಮದ ವಾಸಿ ಸೈಯದ್ ಇಸಾಕ್ ಎಂಬವರ ಮಗಳಾದ ಹಸೀನಾ ತಾಜ್ ಎಂಬುವರನ್ನು ಮಾಲೂರು ತಾಲೂಕು ಅಬ್ಬೇನಹಳ್ಳಿ ಗ್ರಾಮದ ವಾಸಿ ಮಹಮದ್ ಸುಹೇಲ್ ಎಂಬುವರಿಗೆ ಮದುವೆ ಮಾಡಿಕೊಟ್ಟಿದ್ದರು.  ಮದುವೆ ಸಮಯದಲ್ಲಿ ವರದಕ್ಷಿಣೆ ನೀಡಿದ್ದು, ಇನ್ನು ಹೆಚ್ಚಿನ ವರದಕ್ಷಿಣೆ ತರುವಂತೆ ಗಂಡ ಮಹಮದ್ ಸುಹೇಲ್, ಮಾವ ಅಮೀರ್‍ ಸಾಬ್, ಅತ್ತೆ ವಾಜೀದುನ್ನೀಸಾ ರವರು   ಹಸೀನಾ ತಾಜ್ ರವರನ್ನು ಹೊಡೆದು ಬೈದು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ ಕಾರಣಕ್ಕಾಗಿ  ಮನೆಯಲ್ಲಿ ನೇಣು ಹಾಕಿಕೊಂಡು ಮೃತ ಪಟ್ಟಿರುತ್ತಾರೆ ಎಂದು ಮೃತ ಹಸೀನಾ ತಾಜ್ ರವರ ತಂದೆ ತನ್ನ ದೂರಿನಲ್ಲಿ ತಿಳಿಸಿರುತ್ತಾರೆ.

 ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೪-೦೯-೦೯ ರಂದು ೦೭೪೫ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ ವಾಸಿ  ವಿಜಯಕುಮಾರ್‍ ಎಂಬುವರು ತನ್ನ ಟಿವಿಎಸ್‌ ಸ್ಟಾರ್‌ ಸಿಟಿ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೩-ಇಡಿ-೮೮೩೮ ರಲ್ಲಿ ಮುಳಬಾಗಿಲು ಪಟ್ಟಣದ ಅಂಬೇಡ್ಕರ್‍ ವೃತ್ತದ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಹಿಂದಿನಿಂದ ಬಂದ ಮಾರುತಿ ಝನ್ ಕಾರು ಸಂಖ್ಯೆ ಕೆಎ-೦೩-ಪಿ-೩೩೦೯ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮವಾಗಿ  ವಿಜಯಕುಮಾರ್‍ ರವರಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ೦೩  

ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೫-೦೯-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ರಾಮಸಂದ್ರ ಗ್ರಾಮದ ವಾಸಿ ಮೊಟಪ್ಪ ಎಂಬುವರು ತನ್ನ ತೋಟದಿಂದ ಮನೆಗೆ ಬರುತ್ತಿದ್ದರು. ಆ ಸಮಯದಲ್ಲಿ ದಾರಿ ಮದ್ಯದಲ್ಲಿ ಆದೇ ಗ್ರಾಮದ ವಾಸಿಗಳಾದ ಕ್ರಿಷ್ಣಪ್ಪ ಮತ್ತು ಇತರೆ ೮ ಜನರು ಅಕ್ರಮ ಗುಂಪುಕಟ್ಟಿಕೊಂಡು ಬಂದು ಮಚ್ಚಿನಿಂದ ತಲೆಗೆ ಹೊಡೆದು ಗಾಯಪಡಿಸಿರುತ್ತಾರೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೬-೦೯-೨೦೦೯ ರಂದು ಬೆಳಿಗ್ಗೆ ಮಾಲೂರು ತಾಲೂಕು ಹೆಡಗಿನಬೆಲೆ ಗ್ರಾಮದ ವಾಸಿ  ಮುನಿಈರಪ್ಪ ಮತ್ತು ಅವರ ಮನೆಯವರು   ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ   ಆದೇ ಗ್ರಾಮದ ವಾಸಿಗಳಾದ ಮುನಿಯಪ್ಪ ಮತ್ತು ಇತರೆ ೫ ಜನರು ಅಕ್ರಮ ಗುಂಪುಕಟ್ಟಿಕೊಂಡು ಬಂದು ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ  ಅವಾಚ್ಚಶಬ್ದಗಳಿಂದ ಬೈದು ಪ್ರಾಬೆದರಿಕೆ ಹಾಕಿರುತ್ತಾರೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೧೪-೦೯-೨೦೦೯ ರಂದು ೦೬೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ರಾಮಪುರ  ಗ್ರಾಮದ ವಾಸಿಗಳಾದ ವೆಂಕಟಪ್ಪ ಮತ್ತು ಅವರ ಕಡೆಯವರು, ಜಯರಾಮಪ್ಪ ಮತ್ತು ಅವರ ಕಡೆಯವರು  ಖಾಲಿ ನಿವೇಶನದ ವಿಚಾರದಲ್ಲಿ ಅಕ್ರಮ ಗುಂಪು ಕಟ್ಟಿಕೊಂಡು ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಅವಾಚ್ಚಶಬ್ದಗಳಿಂದ ಬೈದು ಪ್ರಾಬೆದರಿಕೆ ಹಾಕಿ ಕೊಂಡಿರುತ್ತಾರೆ. ಈ ಬಗ್ಗೆ ದೂರು ಮತ್ತು ಪ್ರತಿ ದೂರುಗಳು ದಾಖಲಾಗಿರುತ್ತದೆ.

 

ಹಲ್ಲೆ: ೦೧

ಕೋಲಾರ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೯-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ವಕ್ಕಲೇರಿ ಗ್ರಾಮದ ವಾಸಿ ಟಿ.ರಾಮಣ್ಣ ಎಂಬುವರ  ಖಾಲಿ ನಿವೇಶನದಲ್ಲಿದ್ದ ಸೌದೆ ಮತ್ತು ಕಲ್ಲುಗಳನ್ನು ಅದೇ ಗ್ರಾಮದ ವಾಸಿಗಳಾದ ದೊಡ್ಡಣ್ಣ ಮತ್ತು ಇತರರು ಎತ್ತಿ ಬೇರೆ ಕಡೆ ಹಾಕುತ್ತಿದ್ದರು. ಇದನ್ನು ಪ್ರಶ್ನಿಸಿದ ರಾಮಣ್ಣ ರವರಿಗೆ ಅವಾಚ್ಚಶಬ್ದಗಳಿಂದ ಬೈದು ಚಾಕುವಿನಿಂದ ಗೀಚಿ ರಕ್ತಗಾಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ. 

ಇತರೆ: ೦೧

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಾಣ ಬೆದರಿಕೆ ಹಾಕಿದ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀಮತಿ ಪೆನಿಸೆಲ್ವಿ ಎಂಬುವರು ಆರ್‍.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಈಗ್ಗೆ ಸುಮಾರು ೫ – ೬ ತಿಂಗಳಿನಿಂದ ಕೆಲಸಕ್ಕೆ ಗೈರು ಹಾಜರಾಗಿದ್ದರು. ಈ ಬಗ್ಗೆ ದಿನಾಂಕ ೨೬-೦೯-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಚಾರ್ಜ ಕೊಡಲು ತನ್ನ ಗಂಡನಾದ ಮೊಹನ್ ಕುಮಾರ್‍ ರವರೊಂದಿಗೆ ಬಂದು ಪೆನಿಸೆಲ್ವಿ ಕಛೇರಿಯಲ್ಲಿದ್ದ ದಾಖಲಾತಿಗಳು  ಮತ್ತು ಅಮೂಲ್ಯವಾದ ಸಿಡಿಗಳನ್ನು ಕದ್ದು ತೆಗೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಭದ್ರತಾ ಸಿಬ್ಬಂದಿ ಅದನ್ನು ಪರಿಶೀಲಿಸಿ ವಶ ಪಡಿಸಿಕೊಂಡಿದ್ದು, ಈ ಬಗ್ಗೆ ಪೆನಿಸೆಲ್ವಿ ರವರು ಆರ್‍.ಎಲ್.ಜಾಲಪ್ಪ ಆಸ್ಪತ್ರೆಯ ವೈಧ್ಯಕೀಯ ಅಧೀಕ್ಷಕರಾದ ಎನ್.ನಾರಾಯಣ ಎಂಬುವರಿಗೆ ದೂರವಾಣಿ ಮುಖಾಂತರ ಕೆರೆ ಮಾಡಿ ಏಕೆ ನನ್ನ ಬ್ಯಾಗ್‌ ಕಿತ್ತುಕೊಂಡಿರುವುದು ಎಂದು ಅವಾಚ್ಚಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :    

-ಸ್ಥಳ ದಂಡ ಮೊತ್ತ : ರೂ.        

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ನೇ ಸೆಪ್ಟೆಂಬರ್ ೨೦೦೯

September 26, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೬-೦೯-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಸಾವಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೯-೨೦೦೯ ರಂದು ರಾತ್ರಿ ಶ್ರೀನಿವಾಸಪುರ ತಾಲೂಕು ದುಗ್ಗನಕುಂಟೆ ಗ್ರಾಮದ ವಾಸಿ ರುಕ್ಮಿಣಿ ಎಂಬುವರ ಮೇಲೆ ವರದಕ್ಷಿಣೆ ವಿಚಾರವಾಗಿ ಜಗಳ ತೆಗೆದ ಗಂಡನಾದ ಮಂಜುನಾಥ ಮತ್ತು ಅವರ ಮನೆಯವರು ಮದುವೆ ಕಾಲದಲ್ಲಿ ನೀಡಿರುವ ವರದಕ್ಷಿಣೆ ಸಾಲದೆಂದು ಮತ್ತು ಇನ್ನು ಹೆಚ್ಚಿನ ವರದಕ್ಷಿಣೆ ತರಬೇಕೆಂದು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ರುಕ್ಮಿಣಿಯ ಗಂಡನಾದ ಮಂಜುನಾಥ, ಮಾವ ಪಾಲೇಟಿ ವೆಂಕಟಸ್ವಾಮಿ, ಅತ್ತೆ ಮುನಿಯಮ್ಮ, ಮೈದನಾದ ವೆಂಕಟರವಣ ಎಂಬುವರು ಸೇರಿಕೊಂಡು ರುಕ್ಮಿಣಿಯನ್ನು ಕೊಲೆ ಮಾಡಿ ಮೃತ ದೇಹವನ್ನು ದುಗ್ಗನಕುಂಟೆ ಕೆರೆಯಲ್ಲಿ ಬಿಸಾಡಿರುತ್ತಾರೆ. ಈ ಬಗ್ಗೆ ಮೃತ ರುಕ್ಮಿಣಿಯ ತಾಯಿ ಜಯಮ್ಮ ಎಂಬುವರು ದೂರನ್ನು ನೀಡಿರುತ್ತಾರೆ.     

 ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೫-೦೯-೦೯ ರಂದು ೧೫೪೫ ಗಂಟೆ ಸಮಯದಲ್ಲಿ ಕೋಲಾರ ನಗರದ  ಪೂಲ್‌ಷಾ ಮೊಹಲ್ಲಾ ವಾಸಿಗಳಾದ ಸುಹೇಲ್ ಪಾಷಾ ಮತ್ತು ತಬರೇಜ್ ಪಾಷ ಎಂಬುವರು ಟಿವಿಎಸ್‌ ಸ್ಟಾರ್‌ ಸಿಟಿ ದ್ವಿಚಕ್ರ ವಾಹನ ಸಂಖ್ಯೆ ಕೆಎ-೪೦-ಕೆ-೮೭೮೦ರಲ್ಲಿ ಅರಹಳ್ಳಿ ಗೇಟ್ ಬಳಿ ಬರುತ್ತಿದ್ದ ಸಮಯದಲ್ಲಿ ವಾಹನ ಸವಾರನಾದ ಸುಹೇಲ್ ಪಾಷ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ನಡೆದುಕೊಂಡು ಹೋಗುತ್ತಿದ್ದ ಒರಿಸ್ಸಾ ರಾಜ್ಯದ ವಾಸಿ ಜಗನ್‌ರಾಮ್ ರವರಿಗೆ  ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮವಾಗಿ ವಾಹನದ ಹಿಂಬದಿಯಲ್ಲಿದ್ದ ತಬರೇಜ್ ಪಾಷ ಮತ್ತು ಜಗನ್‌ರಾಮ್ ರವರಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ 

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :   ೧೫

-ಸ್ಥಳ ದಂಡ ಮೊತ್ತ : ರೂ. ೧,೯೦೦/-      

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ನೇ ಸೆಪ್ಟೆಂಬರ್ ೨೦೦೯

September 24, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೫-೦೯-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೨

ನಂಗಲಿ ಪೊಲೀಸ್ ಠಾಣೆಯಲ್ಲಿ ತಾಮ್ರದ ತಂತಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೮-೨೦೦೯ ರಂದು ರಾತ್ರಿ ಯಾರೋ ಕಳ್ಳರು ಮುಳಬಾಗಿಲು ತಾಲೂಕು ಲಕ್ಕಶೆಟ್ಟಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸರಬರಾಜಿಗಾಗಿ ಅಳವಡಿಸಿದ್ದ ೧/೧೫ ಕೆವಿಎ ಟಿಸಿಯನ್ನು ಕಂಬದಿಂದ ಕೆಳಕ್ಕೆ ತಳ್ಳಿ ಅದರಲ್ಲಿದ್ದ ತೈಲವನ್ನು ಹೊರಚಲ್ಲಿ ಅದರಲ್ಲಿ ಅಳವಡಿಸಿದ್ದ ರೂ. ೪೪,೪೭೫/- ಬೆಲೆ ಬಾಳುವ ತಾಮ್ರದ ತಂತಿಯನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಕೆ.ದೊಡ್ಡೇಗೌಡ, ಜೆ.ಇ.,ಬೆಸ್ಕಾಂ,  ಎಂ.ಎನ್.ಹಳ್ಳಿ ಶಾಖೆ, ಮುಳಬಾಗಿಲು ತಾಲೂಕು ರವರು ದೂರನ್ನು ದಾಖಲಿಸಿರುತ್ತಾರೆ.  

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ನೀಲಗಿರಿ ಮರ  ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೩-೦೯-೨೦೦೯ ರಂದು ರಾತ್ರಿ ಯಾರೋ ಕಳ್ಳರು ಮುಳಬಾಗಿಲು ತಾಲೂಕು ವಿ.ನಾಗಿರೆಡ್ಡಿಹಳ್ಳಿ ಗ್ರಾಮದಲ್ಲಿ ಶ್ರೀಮತಿ ಚೌಡಮ್ಮ ಎಂಬುವರ ಜಮೀನಿನಲ್ಲಿ  ಬೆಳೆದಿದ್ದ ೧ ಎಕರೆ ನೀಲಗಿರಿ ಮರಗಳನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ನೀಲಗಿರಿ ಮರಗಳ ಬೆಲೆ ರೂ. ೩೫,೦೦೦/- ಗಳಾಗಿರುತ್ತದೆ. 

ವಾಹನ ಕಳ್ಳತನ : ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ 

 ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೧೯-೦೯-೦೯ ರಂದು ೧೭೩೦ ಗಂಟೆ ಸಮಯದಲ್ಲಿ ಕೋಲಾರ ನಗರದ  ಕಾರಂಜಿಕಟ್ಟೆ ವಾಸಿ  ಹರಿನಾಥಗುಪ್ತಾ ಎಂಬುವರು ನಡೆದುಕೊಂಡು ಖಾದ್ರಿಪುರ ರಸ್ತೆಯಲ್ಲಿ ಹೋಗುತ್ತಿದ್ದರು. ಅ ಸಮಯದಲ್ಲಿ ಬಸ್ ನಿಲ್ದಾಣದ ಕಡೆಯಿಂದ ಬಂದ ಹೀರೋ ಹೋಂಡಾ ದ್ವಿಚಕ್ರ ವಾಹನ ಸಂ. ಕೆಎ -೦೮-ಜೆ-೯೩೮೭ ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಹರಿನಾಥಗುಪ್ತಾ ರವರಿಗೆ  ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮವಾಗಿ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನದ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೩-೦೯-೨೦೦೯ ರಂದು ೨೨೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕೋಲುತಮ್ಮನಹಳ್ಳಿ ಗ್ರಾಮದ ವಾಸಿ ಕೃಷ್ಣಮೂರ್ತಿ ಎಂಬುವರ ಮನೆಗೆ ಅಕ್ರಮ ಪ್ರವೇಶ ಮಾಡಿದ ಅದೇ ಗ್ರಾಮದ ವಾಸಿಗಳಾದ ಮುನಿಯಪ್ಪ ಮತ್ತು ಇತರೆ ೨ ಮನೆಯಲ್ಲಿ ಮಲಗಿದ್ದ ಕೃಷ್ಣಮೂರ್ತಿ ರವರ ಅಣ್ಣ ಮುರಳಿಕೃಷ್ಣ ರವರನ್ನು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಪ್ರಯತ್ನ ಮಾಡಿರುತ್ತಾರೆ. ಗ್ರಾಮದಲ್ಲಿ ವಿಧ್ಯುತ್ ಸರಬರಾಜಿಗಾಗಿ ಮುನಿಯಪ್ಪ ರವರ ಮನೆಯ ಮುಂದೆ ಕಂಬವನ್ನು ಹಾಕಿರುವುದು ಕಾರಣವಾಗಿರುತ್ತದೆ. 

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ನೀರಿನಲ್ಲಿ ಮುಳಗಿ ಮೃತಪಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೯-೨೦೦೯ ರಂದು ೦೯೦೦ ಗಂಟೆ ಸಮಯದಲ್ಲಿ ಮಾಲೂರು ಪಟ್ಟಣದ ಅಂಬೇಡ್ಕರ್‍ನಗರದ ವಾಸಿ ಜಯಮ್ಮ ರವರು ಕೂಲಿ ಕೆಲಸಕ್ಕೆಂದು ನಡೆದುಕೊಂಡು ಕೆರೆಯ ಅಂಗಳದಲ್ಲಿ ಹೋಗುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಬಿದ್ದು ಮೃತಪಟ್ಟಿರುತ್ತಾರೆ.   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :  ೧೪

-ಸ್ಥಳ ದಂಡ ಮೊತ್ತ : ರೂ. ೨,೧೦೦/-     

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೪ ನೇ ಸೆಪ್ಟೆಂಬರ್ ೨೦೦೯

September 24, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೪-೦೯-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಕಳ್ಳತನಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೩-೦೯-೨೦೦೯ ರಂದು ರಾತ್ರಿ ಯಾರೋ ಕಳ್ಳರು ಮಾಲೂರು ತಾಲೂಕು ಕೆ.ಜಿ.ಹಳ್ಳಿ ಸರ್ಕಲ್ ನಲ್ಲಿರುವ ಪ್ರಕಾಶ್ ಎಂಬುವರ ಮೊಬೈಲ್ ಅಂಗಡಿಯ ಗೊಡೆಯನ್ನು ಒಡೆದು ಒಳಗೆ ಪ್ರವೇಶ ಮಾಡಿ ಅಂಗಡಿಯಲ್ಲಿದ್ದ ೧೬ ನೋಕಿಯಾ ಮೊಬೈಲ್ ಮತ್ತು ೬ ಮೈಕ್ರೋಮಾಕ್ಸ್ ಮೊಬೈಲ್‌ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ಮಾಲಿನ ಬೆಲೆ ರೂ. ೧೫,೦೦೦/- ಗಳಾಗಿರುತ್ತದೆ.

ಸಾಧಾರಣ ಕಳ್ಳತನ: ಇಲ್ಲ  

ವಾಹನ ಕಳ್ಳತನ : ೦೧

ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಪ್ರಯತ್ನ ಪಟ್ಟಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೩-೦೯-೨೦೦೯ ರಂದು ರಾತ್ರಿ ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಕೋಲಾರ ಉಪ-ವಿಬಾಗ ಇವರಿಗೆ  ಸೇರಿದ ಸ್ಕಾರ್ಫಿಯೋ ಕಾರು ಸಂಖ್ಯೆ ಕೆಎ-೦೭-ಎಂ-೨೫೭೫ ಅನ್ನು ಕೋಲಾರ ನಗರದ ಎಂ.ಜಿ.ರಸ್ತೆಯಲ್ಲಿರುವ ಬಿಜೆಪಿ ಕಾರ್ಯಾಲಯದ ಹಿಂಭಾಗ ನಿಲ್ಲಿಸಿದ್ದರು.   ಆ ಸಮಯದಲ್ಲಿ ಯಾರೋ ಕಳ್ಳರು ವಾಹನದ ಕಿಟಕಿ ಗಾಜುಗಳನ್ನು ಒಡೆದು ಹಾಕಿ ಒಳಗೆ ಪ್ರವೇಶ ಮಾಡಿ ನಕಲಿ ಬೀಗದ ಕೈಗಳನ್ನು ಬಳಸಿ ವಾಹನವನ್ನು ಕಳುವು ಮಾಡಲು ಪ್ರಯತ್ನ ಪಟ್ಟಿರುತ್ತಾರೆ ಹಾಗು ವಾಹನದ ಗಾಜುಗಳನ್ನು ಒಡೆದು ರೂ. ೧೫,೦೦೦/-ಗಳಷ್ಟು ನಷ್ಟಮಾಡಿರುತ್ತಾರೆ.  ಈ ಬಗ್ಗೆ ವಿ.ಎನ್.ವೆಂಕಟೇಶ್. ಕಾರ್ಯಾಪಾಲಕ ಅಭಿಯಂತರರು ದೂರನ್ನು ದಾಖಲಿಸಿರುತ್ತಾರೆ. 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಮಾಡಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೩-೦೯-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಕೋಲಾರ ನಗರದ ಷಾಹೀನ್‌ಷಾ ನಗರದ ವಾಸಿ ಮುನ್ನಾ ಎಂಬುವರ ಪತ್ನಿ ಷಹನಾಜ್ ಎಂಬುವರು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಆತ್ಮಹತ್ಯೆಗೆ ಗಂಡ ಮುನ್ನಾ ನೀಡುತ್ತಿದ್ದ ಮಾನಸಿಕ ಮತ್ತು ದೈಹಿಕ ಹಿಂಸೆ ಕಾರಣವಾಗಿರುತ್ತದೆ. 

 ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ  ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೪-೦೯-೦೯ ರಂದು ೧೪೦೦ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ  ವಾಸಿ  ಅಬ್ದುಲ ಬಷೀರ್‍ ಎಂಬುವರು ತನ್ನ ಟಿವಿಎಸ್ ಎಕ್ಸ್‌‌ಎಲ್ ಮೊಪೆಡ್ ಸಂಖ್ಯೆ ಕೆಎ-೦೭-ಇ-೫೩೨೨ ರಲ್ಲಿ ಸೋಮೇಶ್ವರ ಪಾಳ್ಯ ಕಡೆ ಹೋಗುತ್ತಿದ್ದರು. ಅ ಸಮಯದಲ್ಲಿ ಕೋಲಾರ ಕಡೆಯಿಂದ ಬಂದ ಎಂಬಿಎಸ್ ಖಾಸಗಿ ಬಸ್ ಸಂ. ಕೆಎ-೦೭- ೬೦೯೩ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮವಾಗಿ  ಅಬ್ದುಲ್ ಬಷೀರ್‍ ರವರ ತಲೆಗೆ ತೀವ್ರತರವಾದ  ಗಾಯಗಳಾಗಿ ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾನೆ.

-ಸಾಧಾರಣ: ೦೨

ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೩-೦೯-೦೯ ರಂದು ೦೫೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲ್ಲೂಕು ನಂಗಲಿ  ಗ್ರಾಮದ ವಾಸಿಗಳಾದ ಶ್ರೀಮತಿ ರತ್ನಮ್ಮ ಮತ್ತು ಅವರ ಗಂಡ ಎಂ.ಪಿಳ್ಳಪ್ಪ  ಎಂಬುವರು  ವಾಯುವಿಹಾರಕ್ಕೆಂದು ಎನ್.ಕರುಬರಹಳ್ಳಿ ಗ್ರಾಮದ ಕಡೆ ನಡೆದುಕೊಂಡು ಹೋಗುತ್ತಿದ್ದರು. ಅ ಸಮಯದಲ್ಲಿ ಪಲಮನೇರು ಕಡೆಯಿಂದ ಬಂದ ಜೆಸಿಬಿ ಯಂತ್ರದ ಸಂ. ಕೆಎಲ್-೧೦-ಎಂ-೨೮೩೦ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಪಿಳ್ಳಪ್ಪ ರವರಿಗೆ ಹಿಂದುಗಡೆಯಿಂದ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮವಾಗಿ  ಪಿಳ್ಳಪ್ಪರವರ ಕಾಲಿಗೆ ತೀವ್ರತರವಾದ  ಗಾಯಗಳಾಗಿ ಚಿಕಿತ್ಸೆಗಾಗಿ ಆರ್‍.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಗಿರುತ್ತಾರೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೪-೦೯-೦೯ ರಂದು ೧೨೩೦ ಗಂಟೆ ಸಮಯದಲ್ಲಿ ಮಾಲೂರು  ಪಟ್ಟಣದ  ವಾಸಿ  ಶ್ರೀಮತಿ ಸೌಂದರಿ ಎಂಬುವರು   ಮಾಲೂರು ಪೊಲೀಸ್ ಠಾಣೆಯ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಅ ಸಮಯದಲ್ಲಿ ಬಸ್ ನಿಲ್ದಾಣದ ಕಡೆಯಿಂದ ಬಂದ ಟ್ರಾಕ್ಟರ್‍ ಸಂ. ಕೆಎ -೦೭-ಟಿ-೩೦೦ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಸೌಂದರಿ ರವರಿಗೆ  ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮವಾಗಿ  ಸೌಂದರಿ ರವರ ತಲೆಗೆ ತೀವ್ರತರವಾದ  ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಗಿರುತ್ತಾರೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೪-೦೯-೨೦೦೯ ರಂದು ೦೮೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಗೌಡಹಳ್ಳಿ ಗ್ರಾಮದ ವಾಸಿ ರಾಜಣ್ಣ ಎಂಬುವರ ಮೇಲೆ ಮನೆಯ ಮುಂದೆ ದಾರಿ ವಿಚಾರದಲ್ಲಿ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಈಶ್ವರಪ್ಪ ಮತ್ತು ಇತರೆ ೫ ಜನರು ಅಕ್ರಮ ಗುಂಪು ಕಟ್ಟಿಕೊಂಡು ಕೈಗಳಲ್ಲಿ ದೊಣ್ಣೆಗಳನ್ನು ಹಿಡಿದುಕೊಂಡು ಬಂದು  ಅವಾಚ್ಚ ಶಬ್ದಗಳಿಂದ ರಾಜಣ್ಣ ರವರನ್ನು ಬೈದು ಹೊಡೆದು ಗಾಯಪಡಿಸಿರುತ್ತಾರೆ.

ಹಲ್ಲೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ ೨೩-೦೯-೨೦೦೯ ರಂದು ರಾತ್ರಿ ಮುಳಬಾಗಿಲು ತಾಲೂಕು ನೂಗಲಬಂಡೆ  ಗ್ರಾಮದ ವಾಸಿ ಚೋಟೂಸಾಬ್ ಎಂಬುವರು ಅವರ ಮನೆಯ ಮುಂದೆ  ಮಲಗಿದ್ದ ಸಮಯದಲ್ಲಿ ಯಾರೋ ಅಪರಿಚಿತರು ಚೋಟೂಸಾಬ್ ರವರನ್ನು ದೊಣ್ಣೆಯಿಂದ ತಲೆಗೆ ಮತ್ತು ಇತರೆ ಕಡೆ ಹೊಡೆದು ಗಾಯಪಡಿಸಿರುತ್ತಾರೆ. ಈ ಬಗ್ಗೆ ಸಮೀಉಲ್ಲಾ ಎಂಬುವರು ದೂರನ್ನು ದಾಖಲಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ೨೦

-ಸ್ಥಳ ದಂಡ ಮೊತ್ತ : ರೂ. ೨,೭೦೦/-   

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೩ ನೇ ಸೆಪ್ಟೆಂಬರ್ ೨೦೦೯

September 23, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೩-೦೯-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೩

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೨-೦೯-೩೦೦೯ ರಂದು ರಾತ್ರಿ  ಯಾರೋ ಕಳ್ಳರು ಕೋಲಾರ ತಾಲೂಕು ಅಬ್ಬಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೀಗವನ್ನು  ಹೊಡೆದು   ಒಳಗೆ ಪ್ರವೇಶ ಮಾಡಿ ಶಾಲೆಯಲ್ಲಿದ್ದ ೨ ಗ್ಯಾಸ್ ಸಿಲಿಂಡರ್‍ ಮತ್ತು ೧೦೦ ಕೆ.ಜಿ. ಅಕ್ಕಿಯನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.  ಈ ಬಗ್ಗೆ ಶಾಲೆಯ ಶಿಕ್ಷಕರಾದ ಸೌಭಾಗ್ಯ ಎಂಬುವರು ದೂರು ದಾಖಲು ಮಾಡಿರುತ್ತಾರೆ.    

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೨-೦೯-೨೦೦೯ ರಂದು ರಾತ್ರಿ ಕೋಲಾರ ತಾಲೂಕು ಮಲ್ಲೇಶ್ವರ ನಗರ  ಗ್ರಾಮದ ವಾಸಿಯಾದ ವೆಂಕಟಪ್ಪರವರ ಮಗಳ ಮನೆಯ  ಬೀಗವನ್ನು ಯಾರೋ ಕಳ್ಳರು  ಹೊಡೆದು   ಒಳಗೆ ಪ್ರವೇಶ ಮಾಡಿ ಅಲ್ಮೀರಾದಲ್ಲಿದ್ದ  ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.   

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೨-೦೯-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ವಕ್ಕಲೇರಿ ಗ್ರಾಮದ ವಾಸಿಗಳಾದ ಸರ್ದಾರ್‍ ಪಾಷ ರವರ ಮನೆಯ  ಬೀಗವನ್ನು  ಹೊಡೆದು   ಒಳಗೆ ಪ್ರವೇಶ ಮಾಡಿ ಅಲ್ಮೀರಾದಲ್ಲಿದ್ದ  ೫೦ ಸಾವಿರ ರೂ ಬೆಲೆ ಬಾಳುವ ಬಂಗಾರದ ಒಡವೆಗಳು ಮತ್ತು ೪೦ ಸಾವಿರ ನಗದನ್ನು ಮತ್ತು ಅದೇ ಗ್ರಾಮದ ವಾಸಿಗಳಾದ ಮುನಿರಾಜು ರವರ ಅಂಗಡಿಗೆ ಪ್ರವೇಶ ಮಾಡಿ ೨೪,೫೦೦/- ರೂ ಬೆಲೆ ಬಾಳುವ ನಗದು ಮತ್ತು ಒಡವೆಗಳನ್ನು  ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.   

ಸಾಧಾರಣ ಕಳ್ಳತನ: ಇಲ್ಲ  

ವಾಹನ ಕಳ್ಳತನ : ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ : ೨೨-೦೯-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಕೋಲಾರ ತಾಲ್ಲೂಕು ವರದೇನಹಳ್ಳಿ ಗ್ರಾಮದ ವಾಸಿಯಾದ ವೆಂಕಟೇಶಪ್ಪ ಎಂಬುವರು ಕೋಲಾರ ನಗರ ಕೆ.ಇ.ಬಿ. ಕಚೇರಿ ಹಿಂಭಾಗದಲ್ಲಿರುವ ಬಿಸಪ್ಪಗೌಡ ರವರ ಮನೆಯ ಮುಂದೆ ತಮಗೆ ಸೇರಿದ ಟಿ.ವಿ.ಎಸ್. ಹೆವಿಡ್ಯೂಟಿ ದ್ವಿಚಕ್ರ ವಾಹನ ಸಂ. ಕೆಎ-೦೭-ಕ್ಯೂ-೮೦೬೫ ಅನ್ನು ನಿಲ್ಲಿಸಿ ಅವರ ಮನೆಗೆ ಹೋಗಿ ವಾಪಸ್ಸು ಬರುವಷ್ಟರಲ್ಲಿ ಯಾರೋ ಕಳ್ಳರು ಸದರಿ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ವಾಹನದ ಬೆಲೆ ರೂ.೨೧,೯೦೦/- ಆಗಿರುತ್ತದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

 ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೨-೦೯-೦೯ ರಂದು ೦೫೦೦ ಗಂಟೆ ಸಮಯದಲ್ಲಿ ಕೋಲಾರ ತಾಲ್ಲೂಕು ದಿನ್ನೆಹೊಸಹಳ್ಳಿ ಗ್ರಾಮದ ವಾಸಿಯಾದ ಚೌಡರೆಡ್ಡಿ ಎಂಬುವರು  ತಮ್ಮ ಅಟೋ ಸಂ. ಕೆಎ-೦೭-೭೧೫೪ ರಲ್ಲಿ ರಾಷ್ಟ್ರೀಯ ಹೆದ್ದಾರಿ-೪ ರ ಮಡೇರಹಳ್ಳಿ ಗೇಟ್ ಬಳಿ ನರಸಾಪುರದಿಂದ ಕೋಲಾರ ಕಡೆ ಬರುತ್ತಿದ್ದರು.  ಅ ಸಮಯದಲ್ಲಿ ಬೆಂಗಳೂರು ಕಡೆ ಹೋಗುತ್ತಿದ್ದ ಟೆಂಪೋ ಸಂ. ಸಿ.ಎನ್.ಅರ್‍.೪೯೪೯ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮವಾಗಿ ಆಟೋದಲ್ಲಿ ಪ್ರಯಾಣಸುತ್ತಿದ್ದ ಮುನಿಚೌಡಪ್ಪ ಎಂಬುವರಿಗೆ ಗಾಯಗಳಾಗಿರುತ್ತವೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೨೨-೦೯-೦೯ ರಂದು ೧೫೦೦ ಗಂಟೆ ಸಮಯದಲ್ಲಿ ಕೋಲಾರ ತಾಲ್ಲೂಕು ತಿಮ್ಮಸಂದ್ರ  ಗ್ರಾಮದ ವಾಸಿಯಾದ  ಎಂಬುವರು   ರಮೇಶ್ ಮತ್ತು ವೆಂಕಟರಾಮಪ್ಪ ಎಂಬುವರು ತಮ್ಮ ದ್ವಿಚಕ್ರ ವಾಹನ ಸಂ. ಕೆಎ-೦೭-ಜೆ-೧೪೩ ರಲ್ಲಿ ರಾಷ್ಟ್ರೀಯ ಹೆದ್ದಾರಿ ೪ ರ ಕೋರ-ಇನ್  ಶಾಲೆಯ ಬಳಿ ಹೋಗುತ್ತಿದ್ದರು. ಅ ಸಮಯದಲ್ಲಿ ಎದುರುಗಡೆಯಿಂದ ಬಂದ ಓಮನಿ ಕಾರ್‍ ಸಂ. ಕೆಎ-೦೪-ಎನ್-೯೭೦೭ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ.  ಇದರ ಪರಿಣಾಮವಾಗಿ ದ್ವಿಚಕ್ರ ವಾಹನದಲ್ಲಿ ಸವಾರರಿಬ್ಬರಿಗೂ ಗಾಯಗಳಾಗಿರುತ್ತವೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೨೨-೦೯-೨೦೦೯ ರಂದು ೧೦೪೫ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲ್ಲೂಕು ಅಂಗಂಡಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ ನಡೆಯುತ್ತಿತ್ತು.  ಅ ಸಮಯದಲ್ಲಿ ಅಂಗಂಡಹಳ್ಳಿ ಗ್ರಾಮದ ವಾಸಿಯಾದ ವೆಂಕಟೇಶಗೌಡ ಮತ್ತು ಕಗ್ಗನಹಳ್ಳಿ ವಾಸಿಯಾದ ತಿಪ್ಪಾರೆಡ್ಡಿ ಮತ್ತು ಇತರೆ ಸದಸ್ಯರು ಗ್ರಾಮ ಪಂಚಾಯಿತಿ ಬಳಿ ಇದ್ದಾಗ ಮುಳಬಾಗಿಲು ಪುರದ ವಾಸಿಯಾದ ಕೋಳಿ ಶ್ರೀನಿವಾಸ, ಕೋಳಿ ನಾಗರಾಜ ಮತ್ತು ಚಿನ್ನಾಪುರ ವಾಸಿಗಳಾದ ನಾರಾಯಣಗೌಡ ಮತ್ತು ರಾಜಪ್ಪ ಎಂಬುವರು ಬಂದು ಚುನಾವಣೆ ವಿಷಯದಲ್ಲಿ ಜಗಳ ಮಾಡಿ ವೆಂಕಟೇಶಗೌಡ ಮತ್ತು ತಿಪ್ಪಾರೆಡ್ಡಿ ರವರನ್ನು ಅವಾಚ್ಯ ಶಬ್ದಗಳಿಂದ ಬೈದು ಕೈಗಳಿಂದ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ   

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ೧೨

-ಸ್ಥಳ ದಂಡ ಮೊತ್ತ : ೧,೫೦೦/-

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.