ದಿನದ ಅಪರಾಧಗಳ ಪಕ್ಷಿನೋಟ ೦೧ ನೇ ಡಿಸೆಂಬರ್ ೨೦೦೯

November 30, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೦೧-೧೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ:  ೦೧

ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಸುಮಾರು ೩೦-೩೫ ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯನ್ನು ಯಾರೋ ದುರಾತ್ಮರು ಕಲ್ಲು ಚಪ್ಪಡಿಯಿಂದ ಹೊಡೆದು ಕೊಲೆಗೈದಿರುವ ಘಟನೆ ಗಲ್ ಪೇಟೆ ಠಾಣಾ ಸರಹದ್ದಿನಲ್ಲಿ ಸಂಭಂವಿಸಿರುತ್ತದೆ.    ಅಪರಿಚಿತ ವ್ಯಕ್ತಿ ದಿನಾಂಕ ೩೦-೧೧-೨೦೦೯ ರಂದು ರಾತ್ರಿ ೧೧೩೦ ಗಂಟೆ ಸಮಯದಲ್ಲಿ ಕೋಲಾರ ನಗರದ ಕಾಳಮ್ಮಗುಡಿ ಬೀದಿ ಯಲ್ಲಿರುವ ಖಾನ್ಸಬಾ ಮಸೀದಿ ಬಳಿ ತೀವ್ರವಾಗಿ ಗಾಯಗೊಂಡಿರುವ ಸ್ಥಿತಿಯಲ್ಲಿ ಕಂಡುಬಂದಿದ್ದು  ರಾತ್ರಿ ಗಸ್ತಿನಲ್ಲಿದ್ದ   ಸಂಚಾರಿ ಪೊಲೀಸ್ ಠಾಣೆಯ ಎ.ಎಸ್.ಐ.  ಶ್ರೀನಿವಾಸ್ ರವರು ಅಪರಿಚಿತ ವ್ಯಕ್ತಿಯನ್ನು ಎಸ್.ಎನ್.ಆರ್‍. ಆಸ್ಪತ್ರೆಗೆ ದಾಖಲಿಸಿದ್ದು ರಾತ್ರಿ ೦೦೩೦ ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾನೆ.

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ೦೨

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೧೧-೨೦೦೯ ರಂದು ೧೫೦೦ ಗಂಟೆಗೆ ಕೋಲಾರ-ಬೆಂಗಳೂರು ಎನ್.ಹೆಚ್ ೪ ರಸ್ತೆಯ ಮಡೇರಹಳ್ಳಿ ಗೇಟ್ ಬಳಿ ನಡೆದುಕೊಂಡು ಹೋಗುತ್ತಿದ್ದ ಮಡೇರಹಳ್ಳಿ ಗ್ರಾಮದ ವಾಸಿ ವೆಂಕಟೇಶಪ್ಪ ಎಂಬುವರಿಗೆ ಕೆಎ-೦೨-ಇಜೆ-೯೭೯೬ ಸಂಖ್ಯೆಯ ಬಜಾಜ್ ಪಲ್ಸರ್‍ ಚಾಲಕ ನನ್ನೆಜಾನ್ ಎಂಬುವರು ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದು ಇದರ ಪರಿಣಾಮ ವೆಂಕಟೇಶಪ್ಪ ರವರಿಗೆ ತೀವ್ರವಾದ ಗಾಯಗಳಾಗಿತ್ತು. ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಇವರು ದಿನಾಂಕ ೩೦-೧೧-೨೦೦೯ ರಂದು ಚಿಕಿತ್ಸೆ ಫಲಕಾರಿಯಾಗದೇ ಮರತಪಟ್ಟಿರುತ್ತಾರೆ.

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೋಲಾರ ತಾಲೂಕು ದಿಂಬ ಚಾಮನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೨-೧೧-೨೦೦೯ ರಂದು ೦೬೦೦ ಗಂಟೆ ಸಮಯದಲ್ಲಿ ದಿಂಬಚಾಮನಹಳ್ಳಿ ಗ್ರಾಮದ ವಾಸಿ ನಾಗಮ್ಮ (೩೨) ಎಂಬುವರ ಮೇಲೆ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ರವಿ. ಅಶೋಕ, ಸರೋಜಮ್ಮ, ಮತ್ತು ಈಶ್ವರಮ್ಮ ಎಂಬುವರು ಇವರ ಸೂರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಕೈಗಳಿಂದ ಹೊಡೆದು ಗಾಯಪಡಿಸಿರುತ್ತಾರೆ.

ಅಸ್ವಾಭಾವಿಕ ಮರಣದ ಪ್ರಕರಣಗಳು:  ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೩೦ ನೇ ನವಂಬರ್ ೨೦೦೯

November 29, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೩೦-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ೦೧

ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೨-೦೮-೨೦೦೯ ರಂದು ಸಂಜೆ ಕೋಲಾರ ನಗರದ ಕಠಾರಿಪಾಳ್ಯ ವಾಸಿ ಡಿ.ಎಂ.ಚಂದ್ರಪ್ಪ ಎಂಬುವರು ತನ್ನ ಟಿವಿಎಸ್ ಎಕ್ಸ್‌‌ಎಲ್ ಹೆವಿ ಡ್ಯೂಟಿ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಎಲ್-೬೬೯೭ಅನ್ನು ಕೋಲಾರದ ಎಸ್.ಎನ್.ಆರ್‍.ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿ ಒಳಗೆ ಹೋಗಿ ಬರುವಷ್ಠರಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಳುವಾದ ದ್ವಿಚಕ್ರ ವಾಹನದ ಬೆಲೆ ರೂ. ೧೫,೦೦೦/-.  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೧೧-೨೦೦೯ ರಂದು ೧೮೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ದ್ಯಾಪಸಂದ್ರ ಗ್ರಾಮದ ವಾಸಿ ಮಂಡ್ಯಪ್ಪ ಮತ್ತು ಇವರ ಸ್ನೇಹಿತ ಶಿವಕುಮಾರ್‍ ಎಂಬುವರು ಕೆಎ-೦೫-ಇಕೆ-೭೨೮೩ ದ್ವಿಚಕ್ರವಾಹನದಲ್ಲಿ ಮಾಲೂರು ತಾಲೂಕು ಸಂತಹಳ್ಳಿ ಗೇಟ್ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಟಾಟಾ ಇಂಡಿಕಾ ಕಾರ್‍ ಸಂಖ್ಯೆ ಕೆಎ-೦೨-ಸಿ-೯೬೬೨ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ದ್ವಿಚಕ್ರವಾಹನ ಸವಾರರಿಗೆ ಗಾಯಗಳುಂಟಾಗಿರುತ್ತದೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೧೧-೨೦೦೯ ರಂದು ೨೦೧೫ ಗಂಟೆ ಸಮಯದಲ್ಲಿ ಕೆ.ಎಸ್.ಆರ್‍.ಟಿ.ಸಿ ಬಸ್ ಚಾಲಕರಾದ ಈರಪ್ಪ ಎಂಬುವರು ತಮ್ಮ ಬಸ್ ಸಂಖ್ಯೆ ಕೆಎ-೧೯-ಎಫ್-೨೬೩೭ ಅನ್ನು ಚಾಲನೆ ಮಾಡಿಕೊಂಡು ಬೆಂಗಳೂರಿನಿಂದ ಕೋಲಾರಕ್ಕೆ ಹೋಗಲು ಎನ್.ಹೆಚ್ ೪ ರಸ್ತೆಯ ಮಡೇರಹಳ್ಳಿ ಗ್ರಾಮದ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಕೋಲಾರ ಕಡೆಯಿಂದ ಬಂದ ಕಾರ್‍ ಸಂಖ್ಯೆ ಕೆಎ-೦೩-ಪಿಒ-೩೯೩೨ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬಸ್ಸಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಕಾರ್‍ ಚಾಲಕನಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ೦೧

ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಅಡ್ಡಗಲ್ ಗ್ರಾಮದ ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ ಕಳವು ಯತ್ನ ಸಂಭವಿಸಿರುತ್ತದೆ. ದಿನಾಂಕ ೨೮-೧೧-೨೦೦೯ ರಂದು ರಾತ್ರಿ ಯಾರೋ ಕಳ್ಳರು ಬ್ಯಾಂಕಿನ ಬಾಗಿಲು ಕಿತ್ತು ಒಳಗೆ ಪ್ರವೇಶ ಮಾಡಿದ  ಯಾರೋ ಕಳ್ಳರು ಬ್ಯಾಂಕ್ ಲಾಕರ್‍ ಮತ್ತು ಅಲ್ಮೇರಾಗಳನ್ನು ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುತ್ತಾರೆ. ಈ ಬಗ್ಗೆ ಬ್ಯಾಂಕಿನ ಮ್ಯಾನೇಜರ್‍ ಸಿ.ಎ.ಪ್ರಸಾದ್ ರವರು ದೂರು ನೀಡಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಚಿಕ್ಕನಗವಾರ ಗ್ರಾಮದ ವಾಸಿ ನಾಗರಾಜ (೩೫) ಎಂಬುವರು ಮೃತಪಟ್ಟಿರುತ್ತಾರೆ. ದಿನಾಂಕ ೨೯-೧೧-೨೦೦೯ ರಂದು ರಾತ್ರಿ ನಾಗರಾಜ ರವರು ಯಾವುದೋ ವಿಷಸೇವನೆ ಮಾಡಿ ಪ್ರಾಣ ಕಳೆದುಕೊಂಡಿರುತ್ತಾರೆ. ಈ ಬಗ್ಗೆ ಇವರ ಅಣ್ಣ ಸುಬ್ರಮಣಿ ಎಂಬುವರು ದೂರು ನೀಡಿದ್ದು ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಅಕ್ರಮ ಗಾಂಜಾ ಮಾರಾಟ: ಒಬ್ಬನ ಬಂಧನ, ಗಾಂಜಾ ವಶ

November 28, 2009

ದಿನಾಂಕ ೨೯-೧೧-೨೦೦೯ ರಂದು ಮಾಲೂರು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಶ್ರೀ ಸಲೀಂ ಸಿ ನದಾಫ್ ರವರು ತಮಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ವಾಸದಮನೆಯ ಮುಂದೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಮಾಲೂರು ತಾಲೂಕು ಜೋಡಿಪುರ ಗ್ರಾಮದ ವಾಸಿ ನಂಜಮ್ಮ (೭೫) ಎಂಬುವರನ್ನು ಬಂಧಿಸಿ ಮಾರಾಟಕ್ಕೆ ಇಡಲಾಗಿದ್ದ ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ.

ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ ನೇ ನವಂಬರ್ ೨೦೦೯

November 28, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೯-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೧೧-೨೦೦೯ ರಂದು ೧೯೧೦ ಗಂಟೆ ಸಮಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚಂದೇನಹಳ್ಳಿ ವಾಸಿ ದಾಸಮ್ಮ ಮತ್ತು ಇತರರು ೪೦೭ ಗೂಡ್ಸ್  ಟೆಂಪೋ ಸಂಖ್ಯೆ ಕೆಎ-೧೩-೧೬೭೯ ರಲ್ಲಿ ರಾಷ್ಟ್ರೀಯ ಹೆದ್ದಾರಿ-೪ ರಾಮಸಂದ್ರ ಗೇಟ್ ಬಳಿ ಕೋಲಾರ ಕಡೆ ಬರುತ್ತಿದ್ದರು. ಆ ಸಮಯದಲ್ಲಿ ಕೋಲಾರ ಕಡೆಯಿಂದ ಬಂದ ಎ.ಪಿ.ಎಸ್.ಆರ್‍.ಟಿ.ಸಿ ಬಸ್ ಸಂಖ್ಯೆ ಎಪಿ-೨೮-ಝಡ್-೧೬೩೫ ರ ಚಾಲಕ   ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಟೆಂಪೋಗೆ ಡಿಕ್ಕಿ ಹೊಡೆದಿರುತ್ತಾನೆ.   ಇದರ ಪರಿಣಾಮ ಟೆಂಪೋನಲ್ಲಿದ್ದ ದಾಸಮ್ಮ ಮತ್ತು ಇತರಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ದ್ವಾರಸಂದ್ರ  ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೩-೧೧-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ದ್ವಾರಸಂದ್ರ ಗ್ರಾಮದ ವಾಸಿ ರಾಜಾರೆಡ್ಡಿ ಎಂಬುವರ ಮೇಲೆ ಜಗಳ ತೆಗೆದ ಶ್ರೀನಿವಾಸಮೂರ್ತಿ ಮತ್ತು ಇತರರು ಅವಾಚ್ಯ ಶಬ್ದಗಳಿಂದ ಬೈದು ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಹಳೇ ದ್ವೇಷ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೯ ನೇ ನವಂಬರ್ ೨೦೦೯

November 28, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೯-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೧೧-೨೦೦೯ ರಂದು ೧೯೧೦ ಗಂಟೆ ಸಮಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚಂದೇನಹಳ್ಳಿ ವಾಸಿ ದಾಸಮ್ಮ ಮತ್ತು ಇತರರು ೪೦೭ ಗೂಡ್ಸ್  ಟೆಂಪೋ ಸಂಖ್ಯೆ ಕೆಎ-೧೩-೧೬೭೯ ರಲ್ಲಿ ರಾಷ್ಟ್ರೀಯ ಹೆದ್ದಾರಿ-೪ ರಾಮಸಂದ್ರ ಗೇಟ್ ಬಳಿ ಕೋಲಾರ ಕಡೆ ಬರುತ್ತಿದ್ದರು. ಆ ಸಮಯದಲ್ಲಿ ಕೋಲಾರ ಕಡೆಯಿಂದ ಬಂದ ಎ.ಪಿ.ಎಸ್.ಆರ್‍.ಟಿ.ಸಿ ಬಸ್ ಸಂಖ್ಯೆ ಎಪಿ-೨೮-ಝಡ್-೧೬೩೫ ರ ಚಾಲಕ   ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಟೆಂಪೋಗೆ ಡಿಕ್ಕಿ ಹೊಡೆದಿರುತ್ತಾನೆ.   ಇದರ ಪರಿಣಾಮ ಟೆಂಪೋನಲ್ಲಿದ್ದ ದಾಸಮ್ಮ ಮತ್ತು ಇತರಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ತಾಲೂಕು ದ್ವಾರಸಂದ್ರ  ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೩-೧೧-೨೦೦೯ ರಂದು ೨೧೦೦ ಗಂಟೆ ಸಮಯದಲ್ಲಿ ದ್ವಾರಸಂದ್ರ ಗ್ರಾಮದ ವಾಸಿ ರಾಜಾರೆಡ್ಡಿ ಎಂಬುವರ ಮೇಲೆ ಜಗಳ ತೆಗೆದ ಶ್ರೀನಿವಾಸಮೂರ್ತಿ ಮತ್ತು ಇತರರು ಅವಾಚ್ಯ ಶಬ್ದಗಳಿಂದ ಬೈದು ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಹಳೇ ದ್ವೇಷ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೮ ನೇ ನವಂಬರ್ ೨೦೦೯

November 27, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೮-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೩

-ಮಾರಣಾಂತಿಕ: ೦೧

ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೧೧-೨೦೦೯ ರಂದು ೧೬೦೦ ಗಂಟೆ ಸಮಯದಲ್ಲಿ ಮಾಲೂರು ನಗರದ ವಾಸಿ ಮುನಿಸ್ವಾಮಿ ಎಂಬುವರು ಹೊಸೂರು ರಸ್ತೆಯ ಕೈಗಾರಿಕಾ ಪ್ರದೇಶದ ಆಂಜನೇಯ ಸ್ವಾಮಿ ದೇವಾಲಯದ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಮಾಲೂರು ಕಡೆಯಿಂದ ಬಂದ ಹೀರೋಹೋಂಡಾ ದ್ವಿಚಕ್ರವಾಹನ ಸಂಖ್ಯೆ ಕೆಎ-೫೩-ಜೆ-೮೨೨೫ ರ ಚಾಲಕ ವೆಂಕಟೇಶ್ ಎಂಬುವರು ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ನಡೆದುಕೊಂಡು ಹೋಗುತ್ತಿದ್ದ ಮುನಿಸ್ವಾಮಿ ರವರಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಮುನಿಸ್ವಾಮಿ ರವರಿಗೆ ತೀವ್ರವಾದ ಗಾಯಗಳಾಗಿದ್ದು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

-ಸಾಧಾರಣ: ೦೨

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೭-೧೧-೨೦೦೯ ರಂದು ೦೩೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಸೊನ್ನೇನಹಳ್ಳಿ ಗ್ರಾಮದ ವಾಸಿ ಕೆ.ಸಿ.ಕೃಷ್ಣಪ್ಪ (೪೦)  ಎಂಬುವರು   ಕ್ಯಾಂಟರ್‍ ವಾಹನ  ಸಂಖ್ಯೆ ಕೆಎ-೦೮-೫೬೯೧ ರಲ್ಲಿ  ಇಟ್ಟಿಗೆ ಅನ್‌ಲೋಡ್ ಮಾಡಿಕೊಂಡು ವಾಪಸಸ್ ಹೋಗುತ್ತಿದ್ದರು. ಆ ಸಮಯದಲ್ಲಿ ಕ್ಯಾಂಟರ್‍ ಚಾಲಕ ತನ್ನ ವಾಹನವನ್ನು   ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಇದರ ಪರಿಣಾಮ ಕೃಷ್ಣಪ್ಪರವರಿಗೆ ಗಾಯಗಳಾಗಿರುತ್ತದೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೧೧-೨೦೦೯ ರಂದು ೧೯೧೫ ಗಂಟೆ ಸಮಯದಲ್ಲಿ ಕೆ.ಎಸ್.ಆರ್‍.ಟಿ.ಸಿ ಬಸ್ ಸಂಖ್ಯೆ ಕೆಎ-೦೯-ಎಫ್-೪೧೦೯ ರ ಚಾಲಕ ನಾಗರಾಜ ಎಂಬುವರು ತಮ್ಮ ಬಸ್ಸನ್ನು ಚಾಲನೆ ಮಾಡಿಕೊಂಡು ಚಾಮರಾಜನಗರದಿಂದ ತಿರುಪತಿಗೆ ಹೋಗುವ ಸಲುವಾಗಿ ಎನ್.ಹೆಚ್  ೪ ರಸ್ತೆಯ ವೆಂಕಟಾಪುರ ಗ್ರಾಮದ ಗೇಟ್ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ರಾಕ್ಟರ್‍ ಸಂಖ್ಯೆ ಎಪಿ-೦೭-೫೦೩೩ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬಸ್ಸಿಗೆ ಡಿಕ್ಕಿ ಹೊಡೆದಿರುತ್ತಾನೆ. ಬಸ್ಸಿನ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಮರಕ್ಕೆ ಡಿಕ್ಕಿ ಹೊಡೆದಿರುತ್ತದೆ. ಇದರ ಪರಿಣಾಮ ಬಸ್ಸಿನಲ್ಲಿದ್ದ ಕೆಲವರಿಗೆ ಗಾಯಗಳಾಗಿದ್ದು ಬಸ್ ಜಖಂಗೊಂಡಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ತಾಲೂಕು ಚೌಡೇನಹಳ್ಳಿ ಗ್ರಾಮದಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೦-೧೧-೨೦೦೯ ರಂದು ೧೪೪೫ ಗಂಟೆ ಸಮಯದಲ್ಲಿ ಚೌಡೇನಹಳ್ಳಿ ಗ್ರಾಮದ ವಾಸಿ ಶ್ರೀನಿವಾಸ್ ಎಂಬುವರ ಮೇಲೆ ಜಗಳ ತೆಗೆದ ಮುನಿಸ್ವಾಮಿರೆಡ್ಡಿ, ರಮಣಾರೆಡ್ಡಿ, ವೆಂಕಟೇಶರೆಡ್ಡಿ ಮತ್ತಿತರರು ಅವಾಚ್ಯ ಶಬ್ದಗಳಿಂದ ಬೈದು ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಗಾಯಪಡಿಸಿರುತ್ತಾರೆ. ಹಳೇ ದ್ವೇಷ ಈ ಕೃತ್ಯಕ್ಕೆ ಕಾರಣವಾಗಿರುತ್ತದೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೭ ನೇ ನವಂಬರ್ ೨೦೦೯

November 27, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೭-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೬

-ಮಾರಣಾಂತಿಕ: ೦೩

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೫-೧೧-೨೦೦೯ ರಂದು ೧೨೦೦ ಗಂಟೆ ಸಮಯದಲ್ಲಿ  ಕೋಲಾರ ತಾಲೂಕು ಕೋಡಿಕಣ್ಣೂರು ಗ್ರಾಮದ ವಾಸಿ  ರಾಮಪ್ಪ ಎಂಬುವರು  ತಮ್ಮ ಗ್ರಾಮದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ   ಬಂದ  ಕೆ.ಎಸ್.ಆರ್‍.ಟಿ.ಸಿ ಬಸ್ ಸಂಖ್ಯೆ ಕೆಎ-೦೭-ಎಫ್-೧೨೫೮ ರ ಚಾಲಕ ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ರಾಮಪ್ಪ ರವರಿಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ತೀವ್ರತರವಾದ ಗಾಯಗಳಾಗಿ ಮೃತ ಪಟ್ಟಿರುತ್ತಾರೆ.

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೬-೧೧-೨೦೦೯ ರಂದು ೧೯೧೫ ಗಂಟೆ ಸಮಯದಲ್ಲಿ  ಬೆಂಗಳೂರು ನಗರದ ಮಾರತ್‌ಹಳ್ಳಿ  ವಾಸಿಗಳಾದ   ಆರ್‍,ಡೇವಿಡ್ ಕುಮಾರ್‍ ಮತ್ತು ತಿಮ್ಮರಾಯಪ್ಪ ಎಂಬುವರು  ತಮ್ಮ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೩-ಹೆಚ್‌‌ಎ-೪೪೬೨ರಲ್ಲಿ ಮಾಲೂರು ತಾಲೂಕು ಕೂರ್‌ನಹೊಸಹಳ್ಳಿ ಗ್ರಾಮದ ಬಳಿ ಬಂಗಾರುಪೇಟೆ ಕಡೆ   ಹೋಗುತ್ತಿದ್ದರು. ಆ ಸಮಯದಲ್ಲಿ   ಬಂದ  ಟ್ರಾಕ್ಟರ್‍  ಸಂಖ್ಯೆ ಟಿಎನ್-೨೩-ಎಡಬ್ಲ್ಯೂ- ೭೩೮೭ ರ ಚಾಲಕ ತನ್ನ ಟ್ರಾಕ್ಟರ್‌ನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಡೇವಿಡ್  ಕುಮಾರ್‍ ರವರಿಗೆ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ತಿಮ್ಮರಾಯಪ್ಪ ರವರಿಗೆ ಗಾಯಗಳಾಗಿತ್ತದೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೬-೧೧-೨೦೦೯ ರಂದು  ೨೩೦೦ ಗಂಟೆ ಸಮಯದಲ್ಲಿ  ಚಿಂತಾಮಣಿ ಪಟ್ಣಣದ ಗಾಂಧೀನಗರದ ಗ್ರಾಮದ ವಾಸಿ  ನಜೀರ್‍ ಮತ್ತು ಬಾಲಾಜಿಸಿಂಗ್ ಎಂಬುವರು  ತಮ್ಮ ದ್ವಿಚಕ್ರ ವಾಹನ ಸಂಖ್ಯೆ ಕೆಎ-೪೦-ಕೆ-೪೫೭೨ರಲ್ಲಿ ಶ್ರೀನಿವಾಸಪುರ ತಾಲೂಕು ಹೊದಲಿ ಗ್ರಾಮದ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ   ದ್ವಿಚಕ್ರ ವಾಹನದ ಸವಾರ  ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ನಜೀರ್‍ ರವರಿಗೆ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಬಾಲಾಜಿ ಸಿಂಗ್ ರವರಿಗೆ ಗಾಯಗಳಾಗಿರುತ್ತದೆ.

-ಸಾಧಾರಣ: ೦೩

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೧೧-೨೦೦೯ ರಂದು ೧೫೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಮಡೇರಹಳ್ಳಿ   ಗ್ರಾಮದ ವಾಸಿ   ರಮೇಶ್  ಎಂಬುವರು  ತಮ್ಮ ಗ್ರಾಮದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ   ಬಂದ  ದ್ವಿಚಕ್ರ ವಾಹನ  ಸಂಖ್ಯೆ ಕೆಎ-೦೨-ಇಜೆ-೯೭೯೬ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ರಮೇಶ್ ರವರಿಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಗಾಯಗಳಾಗಿರುತ್ತದೆ.

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೬-೧೧-೨೦೦೯ ರಂದು ೧೩೩೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಬೆಸ್ತರಹಳ್ಳಿ ಗ್ರಾಮದ ವಾಸಿ ಶಂಕರಪ್ಪ ಎಂಬುವರು  ತಮ್ಮ ತನ್ನ ಬಜಾಜ್ ಸಿಟಿ ೧೦೦ ದ್ವಿಚಕ್ರ ವಾಹನ ಸಂಖ್ಯೆ ಕೆಎ-೪೨-ಇ-೨೮೨೯ರಲ್ಲಿ ಚಿಕ್ಕನಹಳ್ಳಿ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ   ಬಂದ  ಗೂಡ್ಸ್ ಟೆಂಪೋ ಸಂಖ್ಯೆ ಕೆಎ-೦೭-ಎ-೫೮೮೪ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಶಂಕರಪ್ಪ ರವರಿಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಗಾಯಗಳಾಗಿರುತ್ತದೆ.

ಮಾಲೂರು ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೫-೧೧-೨೦೦೯ ರಂದು ೨೦೦೦ ಗಂಟೆ ಸಮಯದಲ್ಲಿ ಮಾಲೂರು ಪಟ್ಟಣದ ಹನುಮಂತನಗರದ ವಾಸಿಗಳಾದ ಜಯಮ್ಮ ಮತ್ತು ರಮೇಶ ಎಂಬುವರು   ಆಟೋ  ಸಂಖ್ಯೆ ಕೆಎ-೦೨-೩೩೪೮ರಲ್ಲಿ  ಹೋಗುತ್ತಿದ್ದರು. ಆ ಸಮಯದಲ್ಲಿ ಮಾಲೂರು ಕಡೆಯಿಂದ   ಬಂದ  ಕಾರ್‍ ಸಂಖ್ಯೆ ಕೆಎ-೦೭-ಎಂ-೨೯೯೨ ರ ಚಾಲಕ ತನ್ನ ಕಾರನ್ನು   ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಹಿಂಬದಿಯಿಂದ ಆಟೋಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಆಟೋ ಉರುಳಿ ಬಿದ್ದು ಜಯಮ್ಮ ಮತ್ತು ರಮೇಶ ರವರಿಗೆ ಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು :

-ಸ್ಥಳ ದಂಡ ಮೊತ್ತ : ರೂ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೬ ನೇ ನವಂಬರ್ ೨೦೦೯

November 25, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೬-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ    

ಸಾಧಾರಣ  ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

ಮಾಸ್ತಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೫-೧೧-೨೦೦೯ ರಂದು ೧೬೦೦ ಗಂಟೆ ಸಮಯದಲ್ಲಿ   ಕ್ರಿಷ್ಣಗಿರಿ ಜಿಲ್ಲೆ ಮಲಿಯಂಡಹಳ್ಳಿ   ಗ್ರಾಮದ ವಾಸಿ  ಮಾರಿಯಪ್ಪನ್ ಎಂಬುವರು ಮಾಸ್ತಿ ಗ್ರಾಮದ ಮಾಸ್ತಿ ವೆಂಕಟೇಶ್ ಐಯ್ಯಂಗಾರ್‍ ವೃತ್ತದದಲ್ಲಿ ತೆಂಗಿನ ಸಸಿಗಳನ್ನು ಮಾರುತ್ತಿದ್ದರು. ಆ ಸಮಯದಲ್ಲಿ ಹಸಾಂಡಹಳ್ಳಿ ಕಡೆಯಿಂದ ಬಂದ   ಗೂಡ್ಸ್ ೪೦೭ ಟೆಂಪೋ ಸಂಖ್ಯೆ ಕೆಎ-೦೪-ಸಿ-೬೨೨೯ ರ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು  ಮಾರಿಯಪ್ಪನ್ ರವರ ಎಡಕಾಲಿನ ಪಾದದ ಮೇಲೆ ಬಿಟ್ಟಿರುತ್ತಾನೆ. ಪರಿಣಾಮ ಗಾಯಗಳಾಗಿರುತ್ತದೆ.

 ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೧೦-೨೦೦೯ ರಂದು ಮುಳಬಾಗಿಲು ತಾಲೂಕು ಮಲ್ಲಕಚ್ಚನಹಳ್ಳಿ ಗ್ರಾಮದ ವಾಸಿ ವಿ.ಕೆ.ರಾಜು ಎಂಬುವರ ಮೇಲೆ ಜಮೀನು ವಿಚಾರದಲ್ಲಿ ಜಗಳ ತೆಗೆದ ಅದೇ ಗ್ರಾಮದ ವಾಸಿಗಳಾದ ಬಾಷಾ ಮತ್ತು ಇತರೆ ೩ ಜನರು ಜಗಳ ತೆಗೆದು ಅವಾಚ್ಚಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿರುತ್ತಾರೆ.

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ೦೯   

-ಸ್ಥಳ ದಂಡ ಮೊತ್ತ : ರೂ.೯೦೦/-     

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


ಜೂಜಾಟ ದಾಳಿ: ೮ ಜನರ ಬಂಧನ: ರೂ. ೭೪೦/- ವಶ:

November 25, 2009

ದಿನಾಂಕ ೨೫-೧೧-೨೦೦೯ ರಂದು ೧೫೩೦ ಗಂಟೆ ಸಮಯದಲ್ಲಿ ಕೋಲಾರ ನಗರ ಠಾಣೆಯ ಆರಕ್ಷಕ ಉಪ-ನಿರೀಕ್ಷಕರಾದ ಶ್ರೀ ಎಸ್.ವೈ.ಮೋಹನ್ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಕೋಲಾರ ನಗರದ ಟೇಕಲ್ ರಸ್ತೆಯಲ್ಲಿರುವ ಆಗ್ರೋ ಕಛೇರಿಯ ಹಿಂಬಾಗ ಹಣವನ್ನು ಪಣವಾಗಿಟ್ಟು ಅಂದರ್‍ ಬಾಹರ್‍ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ ಮಾಡಿ ೮ ಜನರನ್ನು ಬಂದಿಸಿ ಪಣವಾಗಿಟ್ಟಿದ್ದ ರೂ. ೭೪೦/- ಗಳನ್ನು ವಶಪಡಿಸಿಕೊಂಡಿರುತ್ತಾರೆ.

ಬಂದಿತರ ವಿವರಗಳು:

  • ಸುಕುಮಾರ್‍ ಬಿನ್ ನಾರಾಯಣಪ್ಪ, ೩೦ ವರ್ಷ, ಕುರುಬರು, ಆಟೋ ಚಾಲಕ, ಶಾರದ ಟಾಕೀಸ್ ರಸ್ತೆ, ಕೋಲಾರ ನಗರ.
  • ಚಂದ್ರಶೇಖರ್‍ ಬಿನ್ ವೆಂಕಟರಾಮಯ್ಯ, ೨೮ ವರ್ಷ, ಕುರುಬರು, ವ್ಯಾಪಾರ, ಹಾರೋಹಳ್ಳಿ, ಕೋಲಾರ ನಗರ.
  • ಮಂಜುನಾಥ ಬಿನ್ ವೆಂಕಟರಾಮಯ್ಯ, ೨೫ ವರ್ಷ, ಕುರುಬರು, ವೀರಾಂಜನೇಯನಗರ, ಕೋಲಾರ.
  • ಮುರಳಿಕೃಷ್ಣ ಬಿನ್ ನಾರಾಯಣಪ್ಪ, ೩೦ ವರ್ಷ, ಕುರುಬರು, ಬಾರ್‌ನಲ್ಲ ಕೆಲಸ, ಶ್ರೀನಿವಾಸಪುರ.
  • ಬಾಬು ಬಿನ್ ನಂಜಪ್ಪ, ಕುರುಬರು,   ಹಾರೋಹಳ್ಳಿ, ಕೋಲಾರ ನಗರ.
  • ಸೀನಪ್ಪ ಮುನಿಶಾಮಪ್ಪ, ೫೬ ವರ್ಷ, ಪರಿಶಿಷ್ಟ ಜಾತಿ, ಗಾರೆಕೆಲಸ, ಪಿ.ಸಿ.ಬಡಾವಣೆ, ಕೋಲಾರ ನಗರ.
  • ಮಂಜುನಾಥ ಬಿನ್  ಮುನಿವೆಂಕಟಪ್ಪ, ೩೦ ವರ್ಷ, ಕುರುಬರು, ಡೂಂ ಲೈಟ್ ಸರ್ಕಲ್, ಕೋಲಾರ.
  • ಮಂಜುನಾಥ ಬಿನ್ ಮುನಿಯಪ್ಪ,  ವ್ಯಾಪಾರ, ಕಠಾರಿಪಾಳ್ಯ, ಕೋಲಾರ.

ಈ ಬಗ್ಗೆ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ದಿನದ ಅಪರಾಧಗಳ ಪಕ್ಷಿನೋಟ ೨೫ ನೇ ನವಂಬರ್ ೨೦೦೯

November 24, 2009

ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ  ೨೫-೧೧-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ೦೧

ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಸುಲಿಗೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೧೧-೨೦೦೯ ರಂದು ೧೫೦೦ ಗಂಟೆ ಸಮಯದಲ್ಲಿ ಮುಳಬಾಗಿಲು ತಾಲೂಕು ಬಲ್ಲ ಗ್ರಾಮದ ಅಂಚೆ ಕಛೇರಿ ನೌಕರರಾದ ಶ್ರೀ ಎಂ.ಹನುಮಪ್ಪ ರವರು ಮುಳಬಾಗಿಲು ಅಂಚೆ ಕಛೇರಿಯಿಂದ ರೂ. ೪,೬೫,೦೦೦/- ಗಳನ್ನು ಡ್ರಾ ಮಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಬಲ್ಲಾ ಗ್ರಾಮಕ್ಕೆ ಹೋಗಲು ಕುಮ್ಮದೇನಹಳ್ಳಿ ಗೇಟ್ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಎರೆಡು ದ್ವಿಚಕ್ರ ವಾಹನಗಳಲ್ಲಿ ಬಂದ ೪ ಜನ ಅಪರಿಚಿತರು ಹನುಮಪ್ಪ ರವರ ತಲೆಗೆ ರಾಡ್‌ನಿಂದ ಹೊಡೆದು ಗಾಯಪಡಿಸಿ ಹಣವಿದ್ದ ಬ್ಯಾಗನ್ನು ತೆಗೆದು ಕೊಂಡು ಹೋಗಿರುತ್ತಾರೆ.

ಮನೆಗಳ್ಳತನ: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಾಲೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೧೧-೨೦೦೯ ರಂದು ರಾತ್ರಿ ಯಾರೋ ಕಳ್ಳರು ಕೋಲಾರ ತಾಲೂಕು ಹುತ್ತೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಬಾಗಿಲನ್ನು ಮುರಿದು ಒಳಗೆ ಪ್ರವೇಶ ಮಾಡಿ  ರೂ. ೪,೪೫೦/- ಬೆಲೆ ಬಾಳುವ ೩ ಗ್ಯಾಸ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರುಕ್ಮಿಣಿ ರವರು ದೂರನ್ನು ನೀಡಿರುತ್ತಾರೆ.    

ಸಾಧಾರಣ  ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ  

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

ವೇಮಗಲ್ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೧೧-೨೦೦೯ ರಂದು ೧೭೦೦ ಗಂಟೆ ಸಮಯದಲ್ಲಿ   ಕೋಲಾರ ತಾಲೂಕು ಮೇಡಿಹಾಳ ಗ್ರಾಮದ ವಾಸಿ ಮುನಿರೆಡ್ಡಿ ಎಂಬುವರು ವೇಮಗಲ್ ಬಸ್ಸು ನಿಲ್ದಾಣದಲ್ಲಿ ನಿಂತ್ತಿದ್ದರು. ಆ ಸಮಯದಲ್ಲಿ ಬಂದ  ಹೀರೋ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಎಲ್ -೬೧೪೫ ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಗಾಯಗಳಾಗಿರುತ್ತದೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೧೧-೨೦೦೯ ರಂದು ೧೬೧೬ರ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲೂಕು ಬಂಡಪಲ್ಲಿ ಗ್ರಾಮದ ವಾಸಿ ನೇತ್ರಾವತಿ ಎಂಬುವರು ತಮ್ಮ  ಬಲೇರೂ ಜೀಪ್ ವಾಹನ ಸಂಖ್ಯೆ ಕೆಎ- ೦೭-೮೯೦೬ರಲ್ಲಿ ಚಿಂತಾಮಣಿ – ಮದನಪಲ್ಲಿ ರಸ್ತೆಯ ಗೋಪಲ್ಲಿ ಬಳಿ ಹೋಗುತ್ತಿದ್ದರು. ಆ ಸಮಯದಲ್ಲಿ ಬಲೇರೂ ಜೀಪ್ ವಾಹನ ಚಾಲಕ ತನ್ನ ಜೀಪನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ರಸ್ತೆಯ ಪಕ್ಕಕ್ಕೆಉರುಳಿಸಿರುತ್ತಾನೆ. ಇದರ ಪರಿಣಾಮ ನೇತ್ರಾವತಿ ಮತ್ತು  ಇತರರಿಗೆ ಗಾಯಗಳಾಗಿರುತ್ತದೆ.  

 ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ  ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ  ಹಾಗೂ  ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ  ಮರಣದ  ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾಗಿರುವ ಬಗ್ಗೆ  ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೮-೨೦೦೯ ರಂದು ಕೋಲಾರ ತಾಲೂಕು ಗೌಡಹಳ್ಳಿ ಗ್ರಾಮದ ವಾಸಿ ಮುನಿಯಪ್ಪ ಎಂಬುವರ ಮಗನಾದ ಆನಂದ ಕುಮಾರ್‍ ಜಿ.ಎಂ(೨೦) ಎಂಬುವನು ಮನೆಯಿಂದ ಹೊರಗೆ ಹೋದವನು ವಾಪಸ್ಸು ಬಾರದೆ ಕಾಣೆಯಾಗಿರುತ್ತಾನೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರು  ವಾಹನ  ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು : ೦೯   

-ಸ್ಥಳ ದಂಡ ಮೊತ್ತ : ರೂ.೯೦೦/-     

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.