ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: ೨೧-೦೧-೨೦೧೨ ರಂದು ೧೪೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ದೊಂಬಿ :
ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೯-೦೧-೨೦೧೨ ರಂದು ೦೯೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ದೇವರಹಳ್ಳಿ ಗ್ರಾಮದ ವಾಸಿ ನಾಗರಾಜ ಎಂಬುವರು ಗ್ರಾಮದಲ್ಲಿ ಚಂರಡಿ ಕೆಲಸಗಳನ್ನು ಮಾಡಿಸುತ್ತಿದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ಸಿ.ಮುನಿಯಪ್ಪ ಮತ್ತು ಇತರೆ ೭ ಜನರು ಅಕ್ರಮ ಗುಂಪು ಕಟ್ಟಿಕೊಂಡು ಬಂದು ಚಾಕಿವಿನಿಂದ ಹೊಡೆದು ಅವಾಚ್ಚಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ. ಈ ಬಗ್ಗೆ ದೂರು ಮತ್ತು ಪ್ರತಿದೂರುಗಳು ದಾಖಲಾಗಿರುತ್ತದೆ.
ಹುಡುಗಿ ಅಪಹರಣ :
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹುಡುಗಿ ಅಪಹರಣದ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೯-೦೧-೨೦೧೨ ರಂದು ೦೯೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಕುಂಬಾರಹಳ್ಳಿ ಗ್ರಾಮದ ವಾಸಿಯಾದ ನಾರಾಯಣಮ್ಮ ಎಂಬುವರ ಮೈದನ ಮಗಳಾದ ಕು. ವಿ.ರಮ್ಯ ಎಂಬುವರನ್ನು ಹೆಚ್.ಮಲ್ಲಾಂಡಹಳ್ಳಿ ಗ್ರಾಮದ ವಾಸಿಯಾದ ಸಂತೋಷ್ ಕುಮಾರ್ ಮತ್ತು ಇತರೆ ೯ ಜನರು ಅಪಹರಣ ಮಾಡಿಕೊಂಡು ಹೋಗಿರುತ್ತಾರೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹುಡುಗಿ ಅಪಹರಣದ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೬-೦೧-೨೦೧೨ ರಂದು ೧೦೦೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಯಳಚೀಪುರ ಗ್ರಾಮದ ವಾಸಿಯಾದ ನಾರಾಯಸ್ವಾಮಿ ಎಂಬುವರ ಮಗಳಾದ ಕು. ವಿ.ಶ್ವೇತ(೧೭) ಎಂಬುವರನ್ನು ಅದೇ ಗ್ರಾಮದ ವಾಸಿಯಾದ ನಾರಾಯಣಸ್ವಾಮಿ ಎಂಬುವರು ಇತರೆ ೯ ಜನರ ಕುಮ್ಮಕ್ಕಿನಿಂದ ಅಪಹರಣ ಮಾಡಿಕೊಂಡು ಹೋಗಿರುತ್ತಾರೆ.
ಹಲ್ಲೆ :
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೦೧-೨೦೧೨ ರಂದು ಕೋಲಾರ ತಾಲೂಕು ಐತರಾಸನಹಳ್ಳಿ ಗ್ರಾಮದಲ್ಲಿ ಸಾಮಾನ್ಯ ಸಭೆ ನಡೆಯುತ್ತಿದ್ದು, ಆ ಸಮಯದಲ್ಲಿ ಅದೇ ಗ್ರಾಮದ ವಾಸಿಯಾದ ಮಂಜುನಾಥ ಎಂಬುವರು ಗ್ರಾಮ ಪಂಚಾಯಿತಿ ಸಭೆ ನಡೆಸದಂತೆ ತೊಂದರೆ ನೀಡಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮತ್ತು ಕಾರ್ಯದರ್ಶಿ ರವರನ್ನು ಅವಾಚ್ಚಶಬ್ದಗಳಿಂದ ಬೈದು ದೊಣ್ಣೆಯಿಂದ ಹೊಡೆಯಲು ಪ್ರಯತ್ನ ಪಟ್ಟು ಪ್ರಾಣ ಬೆದರಿಕೆ ಹಾಕಿರುತ್ತಾರೆ.
ಕಾಣೆಯಾದವರ ಬಗ್ಗೆ :
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೭-೦೧-೨೦೧೨ ರಂದು ೨೨೩೦ ಗಂಟೆ ಸಮಯದಲ್ಲಿ ಕೋಲಾರ ತಾಲೂಕು ಬೆಳಗಾನಹಳ್ಳಿ ಗ್ರಾಮದ ವಾಸಿಯಾದ ಅಮರೇಶ ಎಂಬುವರ ತಂಗಿಯಾದ ಸೌಭಾಗ್ಯ(೨೨) ಎಂಬುವರು ಮನೆಯಿಂದ ಹೊರಗೆ ಹೋದವರು ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.