ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: ೨೪-೦೧-೨೦೧೨ ರಂದು ೧೪೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕಾಣೆಯಾದವರ ಬಗ್ಗೆ :
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೯-೦೧-೨೦೧೨ ರಂದು ೧೭೦೦ ಗಂಟೆ ಸಮಯದಲ್ಲಿ ಮುಳಬಾಗಿಲು ಪಟ್ಟಣದ ಟೀಚರ್ಸ್ ಕಾಲೋನಿ ವಾಸಿ ರಾಮಕೃಷ್ಣಪ್ಪ ಎಂಬುವರ ತಾಯಿಯಾದ ಆದೆಮ್ಮ(೫೨) ಎಂಬುವರು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ.
ವರದಕ್ಷಿಣೆ ಕಿರುಕುಳ :
ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೧-೦೯-೨೦೧೧ ರಂದು ಮುಳಬಾಗಿಲು ತಾಲೂಕು ಕೆ.ಉಗಿನಿ ಗ್ರಾಮದ ವಾಸಿ ಭಾಗ್ಯ ಎಂಬುವರನ್ನು ಮಾಲೂರು ತಾಲೂಕು ಹುಲಿಮಂಗಲ ಗ್ರಾಮದ ವಾಸಿ ಬಾಬು ಎಂಬುವರಿಗೆ ಮದುವೆ ಮಾಡಿ ಕೊಟ್ಟಿದ್ದರು. ಮದುವೆ ಸಮಯದಲ್ಲಿ ಒಡವೆ, ನಗದು ಮತ್ತು ದ್ವಿಚಕ್ರ ವಾಹನ ನೀಡಿದ್ದರು ಸಹ ಗಂಡ ಬಾಬು ಮತ್ತು ಅವರ ಮನೆಯವರು ಇನ್ನು ಹೆಚ್ಚಿನ ವರದಕ್ಷಿಣೆ ತರುವಂತೆ ಒತ್ತಾಯ ಮಾಡಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ಮನೆಯಿಂದ ಹೊರಗೆ ಹಾಕಿದ್ದು, ನಂತರ ಭಾಗ್ಯ ತವರು ಮನೆಗೆ ಬಂದಿದ್ದರು. ದಿನಾಂಕ: ೧೭-೦೧-೨೦೧೨ ರಂದು ೧೬೩೦ ಗಂಟೆ ಸಮಯದಲ್ಲಿ ಬಾಬು ಮತ್ತು ಅವರ ಸ್ನೇಹಿತ ಭಾಗ್ಯ ರವರ ಮನೆಗೆ ಬಂದು ಅವಾಚ್ಚ ಶಬ್ದಗಳಿಂದ ಬೈದು ಹಲ್ಲೆ ಮಾಡಿ ಇನ್ನು ಹೆಚ್ಚಿನ ರೂ. ೫೦,೦೦೦/- ವರದಕ್ಷಿಣೆ ತರುವಂತೆ ಒತ್ತಾಯ ಮಾಡಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.
ಸಾಮಾನ್ಯ ಅಪಘಾತ :
ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೦೧-೨೦೧೨ ರಂದು ೧೫೦೦ ಗಂಟೆ ಸಮಯದಲ್ಲಿ ಬಂಗಾರುಪೇಟೆ ತಾಲೂಕು ಅತ್ತಿಗಿರಿ ಗ್ರಾಮದ ವಾಸಿ ನಾಗಮಣಿ ಮತ್ತು ಅವರ ಮಗಳಾದ ಪುಷ್ಕರಣಿ ಎಂಬುವರು ಕೋಲಾರ ನಗರದ ಪಲ್ಲವಿ ಮೃತ್ತದ ಬಳಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಆ ಸಮಯದಲ್ಲಿ ಬಂದ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೭-ಆರ್-೨೦೫೫ರ ಸವಾರ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಪುಷ್ಕರಣಿ ರವರಿಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಗಾಯಗಳಾಗಿರುತ್ತದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.