ಕೋಲಾರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೧೨-೨೦೦೯ ರಂದು ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧
ನಂಗಲಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ, ಈಗ್ಗೆ ೩ ವರ್ಷಗಳ ಹಿಂದೆ ಸಾವಿತ್ರಮ್ಮ ಎಂಬುವರನ್ನು ಮುಳಬಾಗಿಲು ತಾಲೂಕು ಯಡಹಳ್ಳಿ ಗ್ರಾಮದ ವಾಸಿ ರವಿ ಕುಮಾರ್ ಎಂಬುವರಿಗೆ ಮದುವೆ ಮಾಡಿ ಕೊಟ್ಟಿದ್ದರು. ಈಗ ಸುಮಾರು ೬ ತಿಂಗಳಿನಿಂದ ರವಿಕುಮಾರ್ ಕುಡಿತಕ್ಕಾಗಿ ತವರು ಮನೆಯಿಂದ ಹಣ ತರುವಂತೆ ಒತ್ತಾಯ ಮಾಡುತ್ತಿದ್ದು, ದಿನಾಂಕ ೧೨-೧೨-೨೦೦೯ ರಂದು ೧೯೦೦ ಗಂಟೆ ಸಮಯದಲ್ಲಿ ಹಣ ತರಲಿಲ್ಲ ಎಂದು ಜಗಳ ತೆಗೆದು ಮಚ್ಚಿನಿಂದ ಕೈಗಳ ಮೇಲೆ, ಸೊಂಟಕ್ಕೆ ಮತ್ತು ಕತ್ತಿನ ಹಿಂಬಾಗಕ್ಕೆ ಹೊಡೆದು ಕೊಲೆ ಮಾಡಲು ಪ್ರಯತ್ನ ಪಟ್ಟಿರುತ್ತಾನೆ.
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ೦೧
ಮಾಲೂರು ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೩-೧೨-೨೦೦೯ ರಂದು ೧೯೩೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಕುಡಿಯನೂರು ಗ್ರಾಮದ ವಾಸಿ ಮಂಜುನಾಥ ಎಂಬುವರು ತನ್ನ ಆಟೋ ಸಂಖ್ಯೆ ಕೆಎ-೦೨-ಎ-೧೨೬೪ಅನ್ನು ಚಾಲನೆ ಮಾಡಿಕೊಂಡು ಮಾಲೂರು – ಮಾಸ್ತಿ ರಸ್ತೆಯ ಸಂತಹಳ್ಳಿ ಗೇಟ್ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಖಾಸಗಿ ಬಸ್ ಸಂಖ್ಯೆ ಕೆಎ-೦೧-ಎ-೭೨೮ರ ಚಾಲಕ ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಮಂಜುನಾಥ ರವರಿಗೆ ತೀವ್ರತರವಾದ ಗಾಯಗಳಾಗಿ ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾರೆ.
-ಸಾಧಾರಣ: ೦೧
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೩-೧೨-೨೦೦೯ ರಂದು ೧೫೦೦ ಗಂಟೆ ಸಮಯದಲ್ಲಿ ಕೋಲಾರ ನಗರದ ಮಿಲ್ಲತ್ನಗರ ವಾಸಿ ಅಮೀರ್ಜಾನ್ ಎಂಬುವರು ತನ್ನ ಆಟೋ ಸಂಖ್ಯೆ ಕೆಎ-೦೨-ಎ-೧೨೬೪ಅನ್ನು ಚಾಲನೆ ಮಾಡಿಕೊಂಡು ಕೋಲಾರ ತಾಲೂಕು ರಾಷ್ಟ್ರೀಯ ಹೆದ್ದಾರಿ-೪ ಸೀಸಂದ್ರ ಗೇಟ್ ಬಳಿ ಕೋಲಾರ ಕಡೆ ಬರುತ್ತಿದ್ದರು. ಆ ಸಮಯದಲ್ಲಿ ಬಂದ ಖಾಸಗಿ ಬಸ್ ಸಂಖ್ಯೆ ಎಪಿ-೦೩-ಎನ್ -೭೯೯೭ರ ಚಾಲಕ ತನ್ನ ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆಸಿರುತ್ತಾನೆ. ಪರಿಣಾಮ ಆಟೋ ಜಖಂಗೊಂಡು ಆಟೋನಲ್ಲಿದ್ದವರಿಗೆ ಗಾಯಗಳಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೩
ನಂಗಲಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೧೧-೨೦೦೯ ರಂದು ೦೯೪೫ ಮುಳಬಾಗಿಲು ತಾಲೂಕು ಎನ್.ಯಲುವಹಳ್ಳಿ ಗ್ರಾಮದ ವಾಸಿ ಮಂಜುನಾಥ ಎಂಬುವರು ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿಯಾದ ಹನುಮಂತರೆಡ್ಡಿ ಎಂಬುವರು ಅವಾಚ್ಚ ಶಬ್ದಗಳಿಂದ ಬೈದು ಸೆನಕೆಯಿಂದ ತಲೆಗೆ ಹೊಡೆದು ಪ್ರಾಣ ಬೆದರಿಕೆ ಹಾಕಿರುತ್ತಾರೆ.
ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಎರಡು ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ. ದಿನಾಂಕ: ೧೨-೧೨-೨೦೦೯ ರಂದು ೦೮೩೦ ಗಂಟೆ ಸಮಯದಲ್ಲಿ ಶ್ರೀನಿವಾಸಪುರ ತಾಲ್ಲೂಕು ಬಂಗವಾದಿ ಗ್ರಾಮದ ವಾಸಿಯಾದ ರಾಜೇಶ್ ಮತ್ತು ಮಂಜುನಾಥ ಎಂಬುವರು ಹಳೇ ವೈಷ್ಯಮದ ಹಿನ್ನಲೆಯಲ್ಲಿ ಒಬ್ಬರಿಗೊಬ್ಬರು ದೊಣ್ಡೆ ಮತ್ತು ಕೈಗಳಿಂದ ಹೊಡೆದಾಡಿಕೊಂಡು ಗಾಯಗಳನ್ನುಂಟು ಮಾಡಿಕೊಂಡಿರುತ್ತಾರೆ. ಈ ಬಗ್ಗೆ ದೂರು ಮತ್ತು ಪ್ರತಿದೂರುಗಳು ದಾಖಲಾಗಿರುತ್ತವೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು : ೭
-ಸ್ಥಳ ದಂಡ ಮೊತ್ತ : ರೂ.೯೦೦/-
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೨-೨೪೩೦೬೬ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Posted by kolarpolice
Posted by kolarpolice
Posted by kolarpolice



